ಮಕ್ಕಳು ವಿಜ್ಞಾನದ ಆಸಕ್ತಿ ಹೆಚ್ಚಾಗಿ ಬೆಳೆಸಿಕೊಳ್ಳಬೇಕು: ಸಿದ್ದಲಿಂಗ ಸ್ವಾಮಿಜಿ

ಚಿತ್ತಾಪುರ: 21ನೇ ಶತಮಾನದ ವಿಜ್ಞಾನ ತಂತ್ರಜ್ಞಾನದ ಕಾಲವು ಅನೇಕ ಆವಿಷ್ಕಾರ ನಡೆಯುತ್ತಿರುವ ಸಮಯದಲ್ಲಿ ಪ್ರತಿಯೊಬ್ಬರು ವಿಜ್ಞಾನದ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಕ್ರಿಯಾಶೀಲತೆ ಹಾಗೂ ಸೃಜನಶಿಲತೆ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ ಪೂರಕವಾಗಿ ಕೆಲಸಮಾಡುತ್ತದೆ. ಆಸಕ್ತಿ ಇದ್ದಾಗ ಮಾತ್ರ ಏನಾದರೊಂದು […]

Continue Reading

ಪರೋಪಕಾರ ಕಾರ್ಯ ಕೈಗೊಳ್ಳಿ: ತೆಂಗಳಿ ಶ್ರೀ

ಚಿತ್ತಾಪುರ: ಭಗವಂತ ಕರುಣಿಸಿದ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಲು ಪ್ರತಿಯೊಬ್ಬರೂ ಕೈಲಾದಷ್ಟು ಸಮಾಜೋಪಯೋಗಿ, ಪರೋಪಕಾರಿ ಕಾರ್ಯ ಮಾಡಬೇಕು’ ಎಂದು ತೆಂಗಳಿ – ಮಂಗಲಗಿಯ ಡಾ. ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಶುಕ್ರವಾರ ರಾತ್ರಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆತ್ತವರ ಸೇವೆ ಮಾಡುವುದು ದೇವರ ಪೂಜೆಗಿಂತ ಶ್ರೇಷ್ಠ ಎಂದರು. ಅನಿಶ್ಚಿತ ಬದುಕಿನಲ್ಲಿ ಶಾಶ್ವತವಾಗಿ ಉಳಿಯಲು ಎಲ್ಲರೂ ಸದ್ಗುಣ, ಸತ್ಯ, ಪ್ರಾಮಾಣಿಕತೆ, ಸಮಾನ […]

Continue Reading

ಸರ್ ಸಿ.ವಿ ರಾಮನ್ ಪ್ರತಿಯೊಬ್ಬ ಭಾರತೀಯರ ಹೆಮ್ಮೆಯ ಪ್ರತೀಕ: ಸುಗುಣಾ ಕೊಳಕೂರ

ಚಿತ್ತಾಪುರ: ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು ಸರ್ ಸಿ.ವಿ ರಾಮನ್. ಇವರು ಪ್ರತಿಯೊಬ್ಬ ಭಾರತೀಯರ ಹೆಮ್ಮೆ ಎಂದು ವಿಜ್ಞಾನ ಶಿಕ್ಷಕಿ ಸುಗುಣಾ ಕೊಳಕೂರ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 28 ಫೆಬ್ರುವರಿ 1928 ರಂದು ಭೌತಶಾಸ್ತ್ರದ ಅತಿದೊಡ್ಡ ಆವಿಷ್ಕಾರವಾದ ರಾಮನ್ ಪರಿಣಾಮ ಜಗತ್ತಿಗೆ ಪರಿಚಯಿಸಿದ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. […]

Continue Reading

ಕೋರವಾರ ಅಣಿವೀರಭದ್ರೇಶ್ವರ ಜಾತ್ರಾ ಮಹೋತ್ಸವ: ಇಂದು ಅಗ್ನಿ ಪ್ರವೇಶ, ನಾಳೆ ಭವ್ಯ ರಥೋತ್ಸವ

ಕಾಳಗಿ: ಕಲ್ಯಾಣ ಕರ್ನಾಟಕದ ಸುಪ್ರಸಿದ್ದ ಧಾರ್ಮಿಕ ದತ್ತಿ ಇಲಾಖೆಯ ಸುಕ್ಷೇತ್ರ ಕೋರವಾರ ಅಣಿವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.27 ಗುರುವಾರ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವದವರೆಗೆ ಅಗ್ನಿಪ್ರವೇಶ ಹಾಗೂ ಫೆ.28 ಶುಕ್ರವಾರ ರಾತ್ರಿ 8 ಗಂಟೆಗೆ ಅಣಿವೀರಭದ್ರೇಶ್ವರ ಭವ್ಯ ರಥೋತ್ಸವ ಜರುಗಲಿದೆ ಎಂದು ಕಾಳಗಿ ತಾಲೂಕು ಗ್ರೇಡ್-1 ತಹಸೀಲ್ದಾರ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷೆ ಘಮಾವತಿ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಜರಾಯಿ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಗೆ ಒಳಪಟ್ಟಿರುವ ಈ ದೇವಸ್ಥಾನಕ್ಕೆ ರಾಜ್ಯ ಸೇರಿದಂತೆ ಅಂತರಾಜ್ಯಗಳಿಂದ […]

Continue Reading

ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅವಿಸ್ಮರಣಿಯ

ಚಿತ್ತಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅವಿಸ್ಮರಣಿಯ ಎಂದು ಪ್ರೌಢ ಶಾಲೆಯ ಮುಖ್ಯಗುರು ಷಣ್ಮುಖಯ್ಯ ಹಿರೇಮಠ ಅಭಿಪ್ರಾಯಪಟ್ಟರು.‌ ತಾಲೂಕಿನ ದಂಡೋತಿ ಗ್ರಾಮದ ಪ್ರೌಢ ಶಾಲೆಯಲ್ಲಿ ಎಸ್‌‌.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆಯೋಜಿಸಿದ್ದ 3 ತಿಂಗಳ ಟ್ಯೂಷನ್ ಕ್ಲಾಸ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಶಿಕ್ಷಕರ ಷಣ್ಮುಖಯ್ಯ ಹಿರೇಮಠ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳದಿಂದ ಅತಿಥಿ ಶಿಕ್ಷಕರ ನೇಮಕ, ಶಿಷ್ಯವೇತನ, ಬೆಂಚ್ ಓದಗಣೆ, ಕ್ರೀಡಾ ಉಪಕರಣ ಒದಗಣೆ ಕಾರ್ಯಕ್ರಮ ವೀರೇಂದ್ರ ಹೆಗ್ಗಡೆ […]

Continue Reading

ಮಲಘಾಣ ಶಾಲೆಯ 21 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕಾಳಗಿ: ತಾಲೂಕಿನ ಮಲಘಾಣ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಜೆ 5 ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ಕಸಿವಿಸಿ, ತಲೆಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು, ಕಾಳಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಶಾಲೆಗೆ ಬಂದಿರುವ 16 ವಿದ್ಯಾರ್ಥಿಗಳಿಗೆ ಪುನ: ಅದೆ ತರಹದ ಹೊಟ್ಟೆ ನೋವು, ಕಸಿವಿಸಿ, ತಲೆಸುತ್ತು ಈ ಲಕ್ಷಣಗಳು ಕಾಣಿಸಿಕೊಂಡು ಅಸ್ವಸ್ಥರಾಗಿದ್ದು, ತಕ್ಷಣ ಮುಖ್ಯಗುರುಗಳು, ಶಿಕ್ಷಕರು. ಪಾಲಕರು ಮಕ್ಕಳಿಗೆ ಕಾಳಗಿ ಸಮೂದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ […]

Continue Reading

ಆಟಗಳು ಮಕ್ಕಳ ಕ್ರಿಯಾಶೀಲತೆ ಹೆಚ್ಚಿಸುತ್ತವೆ: ಸಿದ್ದಲಿಂಗ ಬಾಳಿ

ಚಿತ್ತಾಪುರ: ಆಟಗಳು ಎಂದರೆ ಉತ್ಸಾಹದಿಂದ ಕುಣಿಯುವ ಮಕ್ಕಳು ಇಂದು ಆರೋಗ್ಯ ಹಾಗೂ ಅಪೌಷ್ಟಿಕತೆಯ ಕಾರಣದಿಂದ ಮತ್ತು ಮೊಬೈಲ್’ಗಳಿಂದ ಆಟವಾಡುವ ಆಸಕ್ತಿ ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ಖೇದದ ಸಂಗತಿ. ಆಟಗಳು ಮಕ್ಕಳನ್ನು ಕ್ರಿಯಾಶಿಲಗೊಳಿಸುತ್ತವೆ ಎಂದು ಶಿಕ್ಷಕ ಸಿದ್ದಲಿಂಗ ಬಾಳಿ ಅಭಿಪ್ರಾಯಪಟ್ಟರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ನೆಹರು ಯುವ ಕೇಂದ್ರ, ಶ್ಯಾಮಸುಂದರ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸಮೃದ್ಧಿ ಯುವತಿಯರ ಸ್ವಸಹಾಯ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಠಗಳ […]

Continue Reading

ಶಿಕ್ಷಣ ಕ್ರೇತ್ರದಲ್ಲಿ ಸಿದ್ದಲಿಂಗ ಶ್ರೀಗಳ ಸೇವೆ ಸ್ಮರಣೀಯ

ಚಿತ್ತಾಪುರ: ಗ್ರಾಮೀಣ ಗಣಿಗಾರಿಕೆ ಪ್ರದೇಶದಲ್ಲಿ ಶಿಕ್ಷಣ ಕ್ರಾಂತಿ ಮಾಡುವ ಮೂಲಕ ನೂರಾರು ಮಕ್ಕಳ ಬಾಳು ಬೆಳಗಿದ ಲಿo. ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಶೈಕ್ಷಣಿಕ ಸೇವೆ ಸದಾ ಸ್ಮರಣಿಯ ಎಂದು ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಲಿo. ಸಿದ್ದಲಿಂಗ ಮಹಾಸ್ವಾಮಿಗಳ ಐದನೇ ಪುಣ್ಯಸ್ಮರಣೆ ನಿಮಿತ್ಯ ಎನ್.ಜಿ.ಎನ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಉದ್ದೇಶಿಸಿ ಮಾತನಾಡಿದ ಅವರು, ಅನ್ನ. ಆಶ್ರಯ, ಅಕ್ಷರ ದಾಸೋಹದ ಮೂಲಕ […]

Continue Reading

ವಾಡಿ: ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಲತವಾಡ ವೀರೇಶ ಶರಣರ ಪುರಾಣ ಪ್ರಾರಂಭ

ವಾಡಿ: ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿನಾಲತವಾಡ ವೀರೇಶ ಶರಣರ ಪುರಾಣ ಫೆ.12 ರಿಂದ 26 ರವರೆಗೆ ನೆರವೆರುವುದು ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ ಹೇಳಿದ್ದಾರೆ. ಈ ಪುರಾಣ ಕಾರ್ಯಕ್ರಮದಲ್ಲಿ ರಾವೂರಿನ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಪುರಾಣ, ಪ್ರವಚನಕಾರ ಶಿವಪೂರದ, ಶಿವಲಿಂಗೇಶ್ವರ ಸಂಸ್ಥಾನ ಮಠದ ಶಿವಲಿಂಗ ಮಹಾಸ್ವಾಮಿಗಳು, ಸಂಗೀತಕಾರ ಮಹೇಶ ನರಬೋಳ, ತಬಲಾವಾದಕ ತೋಟೇಂದ್ರ ಕರದಾಳ ಕಲ್ಲಾ ಭಾಗವಹಿಸುವರು. ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆವರೆಗೆ […]

Continue Reading

ರಾವೂರ: ಸಿದ್ದಲಿಂಗೇಶ್ವರ ಮಠದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ

ರಾವೂರ: ಸಿದ್ದಲಿಂಗೇಶ್ವರ ಸಂಸ್ಥಾನ ಮಠದ 12ನೇ ಪೀಠಾಧಿಪತಿ ತ್ರಿವಿಧ ದಾಸೋಹಿ ಲಿಂಗೈಕ್ಯ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಐದನೇ ಪುಣ್ಯಸ್ಮರಣೋತ್ಸವ ಅಂಗವಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ತಿಳಿಸಿದ್ದಾರೆ. ನೂತನ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ದಿ.12 ರಂದು ಬುಧವಾರ ಬೆಳಿಗ್ಗೆ ಲಿಂಗೈಕ್ಯ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ನಡೆಯುವುದು. ನಂತರ ಏನ್.ಜಿ.ಏನ್ ಫೌಂಡೇಶನ್ ಸಹಯೋಗದಲ್ಲಿ ಖ್ಯಾತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ […]

Continue Reading