ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೆ ಬ್ಲ್ಯಾಕ್‌ಮೇಲ್‌: ಹಣ ಹೊಂದಿಸಲು ಅತ್ತಿಗೆಯನ್ನೆ ಮುಗಿಸಿದ ನಾದಿನಿ

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಆಕೆಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಯಾರೂ ಊಹೆ ಮಾಡದ ಸಿನಿಮೀಯ ಟ್ವಿಸ್ಟ್ ಸಿಕ್ಕಿದೆ. ನಾದಿನಿಯೇ ತನ್ನ ಸಹೋದರ ಸಂಬಂಧಿಯ ಜೊತೆ ಸೇರಿ ಅಣ್ಣನ ಹೆಂಡತಿಯನ್ನು ಕೊಂದಿರುವದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ನಗರದ ಬಾಪೂಜಿ ನಗರದ ನರಸಿಂಹಮೂರ್ತಿಯವರ ಮನೆಯಲ್ಲಿ ಮೇ 28 ರಂದು ಆತನ ಸೊಸೆ ಪುಷ್ಪಲತಾಳನ್ನ (23) ಕತ್ತು ಕೊಯ್ದು ಕೊಲೆ ಮಾಡಿದಂತೆ ಶವ ಪತ್ತೆಯಾಗಿತ್ತು. ಪುಷ್ಪಲತಾಳ ಜೊತೆಗಿದ್ದ ಆಕೆಯ ನಾದಿನಿ ಭವ್ಯಾ, […]

Continue Reading

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

ಸುದ್ದಿ ಸಂಗ್ರಹ ರಾಯಚೂರುಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22) ನೀರು ಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂಜೆಯ ಬಳಿಕ ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೆ ಈಜಲು ಹೋಗಿ ನೀರು […]

Continue Reading

ಕಲಬುರಗಿ: ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನವಿ

ಸುದ್ದಿ ಸಂಗ್ರಹ ಕಲಬುರಗಿ2026–27ನೇ ಸಾಲಿನ ಶೈಕ್ಷಣಿಕ ವರ್ಷವು ಜೂನ್ 1ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಆಯೋಜಿಸಲಾಗುತ್ತಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಸಂಕನೂರ್‌ ಪಾಲಕ–ಪೋಷಕರಲ್ಲಿ ಮನವಿ ಮಾಡಿದ್ದಾರೆ. ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಪಾಲಕ–ಪೋಷಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ಗುಣಮಟ್ಟದ ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕಾಗಿದ್ದು, ಅದನ್ನು ಈಡೇರಿಸುವ ಮತ್ತು ಸಮೃದ್ಧ ಸಮಾಜ ನಿರ್ಮಾಣದ ಭದ್ರ ಅಡಿಪಾಯ ಹಾಕುವ ಜವಾಬ್ದಾರಿ ಪಾಲಕರ ಮೇಲಿದೆ. ಶಾಲೆ ಮತ್ತು […]

Continue Reading

ಧರ್ಮಸ್ಥಳ: ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಸುದ್ದಿ ಸಂಗ್ರಹ ಮಂಗಳೂರುಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ವೃದ್ಧೆಯನ್ನು […]

Continue Reading

ಬಿರುಗಾಳಿ ಸಹಿತ ಧಾರಾಕಾರ ಮಳೆ: ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

ಸುದ್ದಿ ಸಂಗ್ರಹ ಬೀದರ್ಭಾರಿ ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ನಡೆದಿದೆ. 6 ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಈ ವೇಳೆ ಮೇಲ್ಛಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಬಾಲಕಿ ಮೇಲೆ ಬಿದ್ದು […]

Continue Reading

ಕಾಖಂಡಕಿಯಲ್ಲಿ ತನಾರತಿ ಉತ್ಸವ: ಭಕ್ತರಿಂದ ಹರಕೆ ಸಮರ್ಪಣೆ

ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀಕ್ಷೇತ್ರ ಕಾಖಂಡಕಿ ಸದ್ಗುರು ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶನಿವಾರ ಮಧ್ಯರಾತ್ರಿ ಭಕ್ತರು ತನಾರತಿ ಹೊತ್ತು ಗುರುದ್ವಯರಿಗೆ ತಮ್ಮ ಹರಕೆಯನ್ನು ತೀರಿಸಿದರು ಎಂದು ನಾಲವಾರ ಶ್ರೀ ಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ನಾಲವಾರ- ಕಾಖಂಡಕಿ ಮಠಗಳ ಪೀಠಾಧಿಪತಿ ಡಾ.ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬಾದಾಮಿ ಅಮಾವಾಸ್ಯೆ ನಿಮಿತ್ತ ದಕ್ಷಿಣ ಭಾರತದ ಮಹಾದೀಪಮೇಳವೆಂದೆ ಪ್ರಖ್ಯಾತವಾದ ನಾಲವಾರ ಮಠದ ಪರಂಪರೆಯ ತನಾರತಿ ಉತ್ಸವಕ್ಕೆ ಭಕ್ತರು […]

Continue Reading

ಸಂಬಂಧದ ಹುಡಗನೊಂದಿಗೆ ಪ್ರೀತಿ: ಅಪ್ರಾಪ್ತ ಮಗಳನ್ನು ಕೊಲೆಗೈದ ತಂದೆ ಅರೆಸ್ಟ್

ಸುದ್ದಿ ಸಂಗ್ರಹ ತುಮಕೂರುಪ್ರೀತಿ ಪ್ರೇಮದ ಬಲೆಗೆ ಬಿದ್ದು ಮನೆತನದ ಗೌರವ ಬೀದಿಪಾಲು ಮಾಡಿದ್ದಾಳೆ ಎಂದು ಬೇಸರದಿಂದ ಸ್ವತಃ ತಂದೆಯೇ ಅಪ್ರಾಪ್ತ ಮಗಳನ್ನು ಹತ್ಯೆ ಮಾಡಿದ ಘಟನೆ ತುಮಕೂರಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತಿಮ್ಮರಾಯಪ್ಪ ಬಂಧಿತ ಆರೋಪಿ. ಶಿರಾ ತಾಲೂಕು ನಿಂಬೆ ಮರದಹಳ್ಳಿಯ ಮೇಘನ (17) ಎಂಬಾಕೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ತಿಂಗಳ […]

Continue Reading

ಹಾಸನದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ: ಪ್ರಯಾಣಿಕರು ಸೇಫ್

ಸುದ್ದಿ ಸಂಗ್ರಹ ಹಾಸನಚಲಿಸುತ್ತಿದ್ದ ಖಾಸಗಿ ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡು ಧಗಧಗಿಸಿ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಹಾಸನ ತಾಲೂಕಿನ, ಶಾಂತಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪುರುಷರು, ಮಹಿಳೆಯರು, ಮಕ್ಕಳು ಸೇರಿ 36 ಜನ ಪ್ರಯಾಣಿಸುತ್ತಿದ್ದರು. ಶಾಂತಿ ಗ್ರಾಮದ ಬಳಿ ಬಸ್‌ನ ಟೈರ್ ಸ್ಫೋಟಗೊಂಡಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಚಾಲಕ ರಸ್ತೆಯಲ್ಲಿ […]

Continue Reading

ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್

ಸುದ್ದಿ ಸಂಗ್ರಹ ಹುಬ್ಬಳ್ಳಿಕಾನೂನು ಬಾಹಿರವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರ ಬಳಿ ಯಾವುದೆ ಗುರುತಿನ ದಾಖಲೆಗಳಿರಲಿಲ್ಲ. ದಾಖಲೆಗಳಿಲ್ಲದಿದ್ದರೂ ನಾಲ್ವರು ವಿದೇಸಿಗರು ರೈಲಿನಲ್ಲಿ ಪ್ರಯಾಣ ಮಾಡಿ ಹುಬ್ಬಳ್ಳಿವರೆಗೆ ಬಂದಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದಿರುವ ಆರ್‌ಪಿಎಫ್ ಸಿಬ್ಬಂದಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ […]

Continue Reading

ನಾಪತ್ತೆಯಾಗಿದ್ದ ಬಾಲಕ 4 ವರ್ಷಗಳ ನಂತರ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್​​

ಸುದ್ದಿ ಸಂಗ್ರಹ ಮಂಡ್ಯನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ 4 ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರು ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷವೆಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ ಮಾಡುವಲ್ಲಿ ಮಹತ್ವದ ಪಾತ್ರವಹಿಸಿದೆ. ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡರ 9ನೇ ತರಗತಿ […]

Continue Reading