ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಮೂರು ಪ್ರತ್ಯೇಕ ಪೋಕ್ಸೊ ಪ್ರಕರಣಗಳಲ್ಲಿ ಮೂವರು ಯುವಕರಿಗೆ ಇಲ್ಲಿನ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಒಂದು ಪ್ರಕರಣದಲ್ಲಿ ಕಲಬುರಗಿಯ ಮಹಾದೇವ ನಗರದ ನಿವಾಸಿ ನಾಗೇಶ ಅಲಿಯಾಸ್ ಬಾಬು ರಾಠೋಡ (30) ನ್ಯಾಯಾಲಯವು 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಇನ್ನೆರಡು ಪ್ರಕರಣಗಳಲ್ಲಿ ಕಲಬುರಗಿಯ ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ […]

Continue Reading

ರಾಯಚೂರಿನ ಸಿಂಧನೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ಪ್ರಜೆಗೆ 3 ವರ್ಷ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ರಾಯಚೂರುಸಿಂಧನೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ಪ್ರಜೆಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಂಧನೂರು 2ನೇ ಅಧಿಕ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ತೀರ್ಪು ನೀಡಿದೆ.‌ ಆರೋಪಿ ಶೋರನಜಿತ್ ಮಂಡಲ್‌ಗೆ 3 ವರ್ಷ ಸಜೆ ಮತ್ತು 5,000 ರೂ. ದಂಡ ನ್ಯಾಯಾಲಯ ವಿಧಿಸಿದೆ. ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್ 3ರಲ್ಲಿ 12 ವರ್ಷಗಳಿಂದ ವಾಸಿಸುತ್ತಿದ್ದ ಶೋರನಜಿತ್ ಮಂಡಲ್ ಬಾಂಗ್ಲಾ ವಲಸಿಗರು ವಾಸಿಸುತ್ತಿರುವ ಆರ್‌ಎಚ್ ಕ್ಯಾಂಪ್ 3ರಲ್ಲಿ ಸೇರಿಕೊಂಡಿದ್ದ. ನಕಲಿ ದಾಖಲೆ ಸೃಷ್ಟಿಸಿ 2018ರಲ್ಲಿ ಭಾರತದಲ್ಲಿ […]

Continue Reading

ಮನೆ ಮನೆಗೆ ಹೋಗದೆ ಒಂದೆ ಕಡೆ ಕುಳಿತು SIR ಪ್ರಕ್ರಿಯೆ: BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸುದ್ದಿ ಸಂಗ್ರಹ ಚಿಕ್ಕೋಡಿಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೆ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ. ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನಿಸಿದ […]

Continue Reading

ಡಿವೈಎಸ್ಪಿ ಶಂಕರಗೌಡರಿಗೆ ಪಿತೃ ವಿಯೋಗ

ಸುದ್ದಿ ಸಂಗ್ರಹ ಕಲಬುರಗಿ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ರಾಮಗೇರಿ ನಿವಾಸಿ, ಶಿಕ್ಷಣ ಪ್ರೇಮಿ, ಭೂ ದಾನಿಯಾಗಿದ್ದ ವೀರನಗೌಡ ಪಾಟೀಲ (84) ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನಿಧನ ಹೊಂದಿರುವ ದಿವ್ಯಚೇತನರಾದ ವೀರಗೌಡರಿಗೆ ಪತ್ನಿ, ಪುತ್ರರಾದ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್‌ ಮತ್ತು ಪುತ್ರಿ ಇದ್ದಾರೆ.‌ ವೀರನಗೌಡರು ಶಿಕ್ಷಣದ ಬಗ್ಗೆ ಅಪಾರವಾದ ಗೌರವ ಹೊಂದಿದ್ದು ಇವರನ್ನು ಶಿಕ್ಷಣ ಪ್ರೇಮಿ ಎಂದೆ ಗುರುತಿಸಿಕೊಂಡಿದ್ದಾರೆ. ಇವರ ಪುತ್ರ ಡಿವೈಎಸ್ಪಿ ಶಂಕರಗೌಡ ಪಾಟೀಲರು ಸಹ ತಂದೆಯಂತೆ ಸ್ನೇಹಮಯಿ ಹಾಗೂ ಮಾನವೀಯತೆಗೆ ಹೆಸರುವಾಸಿಯಾಗಿದ್ದಾರೆ. […]

Continue Reading

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಸೀಲ್ದಾರ್‌ಗೆ 4 ವರ್ಷ ಜೈಲು

ಸುದ್ದಿ ಸಂಗ್ರಹ ಕಲಬುರಗಿ1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಸೀಲ್ದಾರ್‌ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂ ದಂಡ ವಿಧಿಸಿದೆ. 2017ರಲ್ಲಿ ಅಫಜಲಪುರದ ತಹಸೀಲ್ದಾರ್‌ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ದೂರುದಾರನಿಂದ ಲಂಚದ ಹಣ ಪಡೆದು ತಹಸೀಲ್ದಾರ್‌ಗೆ ತಲುಪಿಸಿದ್ದ ಶಿವಾನಂದ ಜಮಖಂಡಿ ಶಿಕ್ಷೆಗೆ ಗುರಿಯಾದವರು. ಶಶಿಕಲಾ ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವಾರವಷ್ಟೆ […]

Continue Reading

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

ಸುದ್ದಿ ಸಂಗ್ರಹ ಶಿವಮೊಗ್ಗಎಸ್‌ಐಆರ್‌ ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರ ಜೊತೆ ಕೆಲಸ ಮಾಡುತ್ತಿದ್ದ ಗ್ರಾಮ ಆಡಳಿತ […]

Continue Reading

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ: ಮೂವರು ಕಳ್ಳಿಯರ ಬಂಧನ

ಸುದ್ದಿ ಸಂಗ್ರಹ ಉಡುಪಿಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೆ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ […]

Continue Reading

ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌: ಮೂವರು ಯುವಕರ ಬಂಧನ

ಸುದ್ದಿ ಸಂಗ್ರಹ ಬಳ್ಳಾರಿಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ನಕಲಿ ಬಂದೂಕು ಹಿಡಿದು ರೀಲ್ಸ್‌ ಮಾಡಿದ್ದ ಮೂವರು ಯುವಕರನ್ನು ಬಳ್ಳಾರಿಯ ಕೌಲ್‌ ಬಜಾರ್‌ ಪೊಲೀಸರು ಬಂಧಿಸಿದ್ದಾರೆ. ಸಾಹಿಲ್, ವಿಕಾಸ್ ಮತ್ತು ಅಭಿಷೇಕ್ ಬಂಧಿತ ಆರೋಪಿಗಳು. ನಗರದ ಬಂಡಿಹಟ್ಟಿ ಬಳಿಯ ಹೆಚ್‌ಎಲ್‌ಸಿ ಕಾಲುವೆ ಮೇಲೆ ಭಯ ಹುಟ್ಟಿಸುವ ರೀತಿ ಆರೋಪಿಗಳು ರೀಲ್ಸ್ ಮಾಡಿದ್ದರು. ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಪ್ರಕರಣ […]

Continue Reading

ಪೋಕ್ಸೋ ಆರೋಪಿ ಮತ್ತೆ ಪೊಲೀಸರ ಬಲೆಗೆ: ಮಹಾರಾಷ್ಟ್ರಕ್ಕೆ ಪರಾರಿಯಾಗುವ ಮುನ್ನವೇ ಸೆರೆ

ಸುದ್ದಿ ಸಂಗ್ರಹ ಕಲಬುರಗಿಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಮಂಜುನಾಥ್ ಕೊನೆಗೂ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ತೆಲ್ಲೂರು ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌.ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ್‌ನ್ನು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಅಫಜಲಪುರಕ್ಕೆ ಕರೆತರಲಾಗಿತ್ತು. ಆದರೆ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಆತ ಪೊಲೀಸರ […]

Continue Reading

ಜವಳಿ ಪಾರ್ಕ್ ಅಭಿವೃದ್ಧಿಗೆ ಕ್ರಮವಹಿಸಲು ಸಂಪುಟ‌ ನಿರ್ಣಯ

ಸುದ್ದಿ ಸಂಗ್ರಹ ಕಲಬುರಗಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷೆಯ ಜವಳಿ ಪಾರ್ಕ್‌ ಅನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಲು ಕ್ರಮ ವಹಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 1,000 ಎಕರೆ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಈ ಜವಳಿ ಪಾರ್ಕ್ ಸುಮಾರು 1,700 ಕೋಟಿ ಯೋಜನಾ ಮೊತ್ತದೊಂದಿಗೆ ಅಭಿವೃದ್ಧಿಪಡಿಸಲಾಗುವುದು. 320 ಕೋಟಿ ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ ಕಾರ್ಯ ಕೆಐಎಡಿಬಿ ಕೈಗೆತ್ತಿಕೊಳ್ಳಲಿದೆ. ಕಲಬುರಗಿಯ ನದಿಸಿನ್ನೂರು, […]

Continue Reading