ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ: ಸಿಬ್ಬಂದಿ ವಿರುದ್ಧ ಶಂಕೆ

ಸುದ್ದಿ ಸಂಗ್ರಹ ಹಾಸನ ನಗರದ ಎಟಿಎಂಗಳಿಗೆ ಹಾಕಬೇಕಿದ್ದ ಕೋಟಿ ಕೋಟಿ ರೂ. ಹಣವನ್ನು ತಾವೆ ಲಪಟಾಯಿಸಿ ಕಂಪನಿಗೆ ಸುಳ್ಳು ಲೆಕ್ಕ ನೀಡಿರುವ ಗಂಭೀರ ಆರೋಪ ಸಿಎಂಎಸ್ ಕಂಪನಿ ವಿರುದ್ಧ ಕೇಳಿ ಬಂದಿದೆ. ಕಂಪನಿಯ ಸಿಬ್ಬಂದಿ ನಂದೀಶ್ ಹಾಗೂ ಮಧು ಎಂಬವರು ಕೋಟ್ಯಂತರ ರೂ. ಹಣ ನುಂಗಿ ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ಕಂಪನಿಯ ಅಧಿಕಾರಿಗಳು ಆಡಿಟ್ ಮಾಡಿಸುತ್ತಿದ್ದಾರೆ. ಹಾಸನ ನಗರದ ಗೌರಿಕೊಪ್ಪಲಿನಲ್ಲಿ ಕ್ಯಾಶ್ ಮ್ಯಾನೆಜ್‍ಮೆಂಟ್ ಸರ್ವಿಸಸ್ ಕಚೇರಿಯಿದ್ದು, ಪ್ರತಿನಿತ್ಯ ನಗರದಲ್ಲಿರುವ ಕೆನರಾ ಬ್ಯಾಂಕ್, ಎಸ್‍ಬಿಐ, ಬ್ಯಾಂಕ್ […]

Continue Reading

ಗದಗ: ಶಿವರಾತ್ರಿಯಂದೆ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಸುದ್ದಿ ಸಂಗ್ರಹ ಗದಗ ನಾಡಿನೆಲ್ಲಡೆ ಮಹಾ ಶಿವರಾತ್ರಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಶಿವನ ಆರಾಧನೆ ದಿನವೆ ದುಷ್ಕರ್ಮಿಗಳು ಶಿವಲಿಂಗ ಹಾಗೂ ನಂದಿ ವಿಗ್ರಹ ಭಗ್ನಗೊಳಿಸಿದ ಘಟನೆ ಮುಂಡರಗಿ ತಾಲೂಕಿನ ಶಿಂಗಟಾಲೂರ ಬಳಿ ನಡೆದಿದೆ. ಗ್ರಾಮದ ಹೊರವಲಯದ ಶ್ರೀ ರಾಮಲಿಂಗೇಶ್ವರ, ನಂದಿ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ಈ ದುಷ್ಕೃತ್ಯ ಮೆರೆದಿದ್ದಾರೆ. ಮಹಾ ಶಿವರಾತ್ರಿ ಹಿನ್ನೆಲೆ ಗ್ರಾಮಸ್ಥರು ಶನಿವಾರ ದೇವಸ್ಥಾನಕ್ಕೆ ಸುಣ್ಣ, ಬಣ್ಣ ಹಚ್ಚಿ ಬಂದಿದ್ದರು. ಬೆಳಿಗ್ಗೆ ಪೂಜೆಗೆ ತೆರಳಿದಾಗ ಮೂರ್ತಿ ಭಗ್ನವಾಗಿರುವ ವಿಷಯ ಬೆಳಕಿಗೆ ಬಂದಿದೆ. […]

Continue Reading

ಹೊಸ ಜಿಲ್ಲೆ ವಿಜಯನಗರ ಪ್ರಗತಿಗೆ 394 ಕೋಟಿ ರೂ. ಒದಗಿಸಿ

ಸುದ್ದಿ ಸಂಗ್ರಹ ಹಂಪಿ ವಿಜಯನಗರವು ನೂತನ ಜಿಲ್ಲೆಯಾಗಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಮುಂಬರುವ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಮೀಸಲಿಡಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಒತ್ತಾಯಿಸಿದರು. ಶುಕ್ರವಾರ ರಾತ್ರಿ ಹಂಪಿ ಉತ್ಸವದ ಮೊದಲ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸಚಿವನಾದ ಮೇಲೆ ಕಳೆದ 3 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಈ ಉತ್ಸವ ಆಚರಿಸಲಾಗುತ್ತಿದೆ. ಹಿಂದೆ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ […]

Continue Reading

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಮನೆಯೊಳಗೆ ಹುದುಗಿಹೋಗಿದ್ದ 5 ದೇವಾಲಯಗಳು, ಬಾವಿ: ಜೀರ್ಣೋದ್ಧಾರಕ್ಕೆ ಸಿಗಲಿದೆ ಚಾಲನೆ

ಸುದ್ದಿ ಸಂಗ್ರಹ ಗದಗ ಪುರಾತನ ದೇಗುಲಗಳ ಊರು ಎಂದೆ ಖ್ಯಾತವಾಗಿರುವ ಲಕ್ಕುಂಡಿಯಲ್ಲಿ ಬಂಗಾರದ ನಿಧಿ ದೊರೆತ ಬಳಿಕ, ಅದೆ ಗ್ರಾಮದ ಮನೆಯೊಳಗೆ ಹುದುಗಿ ಹೋಗಿದ್ದ ಮತ್ತು ಅಭಿವೃದ್ಧಿಯಾಗದೆ ಉಳಿದಿದ್ದ 5 ದೇವಾಲಯಗಳು ಪತ್ತೆಯಾಗಿವೆ. 5 ದೇವಾಲಯಗಳಿಗೆ, 5 ಬಾವಿಗಳಿಗೆ ಸಚಿವ ಎಚ್.ಕೆ ಪಾಟೀಲ್ ಜೀರ್ಣೋದ್ಧಾರಕ್ಕೆ ಚಾಲನೆ ನೀಡಲಿದ್ದಾರೆ. 10 ಅಡಿ ಆಳದಲ್ಲಿ ಮುಚ್ಚಿಹೋಗಿದ್ದ ಚೌಕಿಮಠದ ಅರ್ಧಲಿಂಗೇಶ್ವರ ದೇವಾಲಯ, ವಿದ್ಯಾಶಂಕರಲಿಂಗ ದೇವಾಲಯ, ಸೋಮಲಿಂಗೇಶ್ವರ ದೇವಾಲಯಗಳು ಹುದುಗಿ ಹೋಗಿವೆ. ಸಮರ್ಪಕ ಪರಿಹಾರ ಕೊಟ್ಟರೆ ಮನೆ ಬಿಡುವುದಾಗಿಯೂ ಕುಟುಂಬಸ್ಥರು ಹೇಳಿದ್ದಾರೆ. ಕಲಾಕೃತಿಯಿರುವ […]

Continue Reading

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ: ಮಗು ಸೇರಿ ಮೂವರಿಗೆ ಗಾಯ

ಸುದ್ದಿ ಸಂಗ್ರಹ ಮೈಸೂರು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ನಡೆದಿದೆ. ಚಿರತೆ ದಾಳಿಯಿಂದ ಬೈಕ್‌ನಲ್ಲಿದ್ದ ಮಗು ಮತ್ತು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚುಂಚನಹಳ್ಳಿ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ ಹಾಗೂ ಮಗು ಗಂಭೀರ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ದಾಳಿ ನಡೆಸಿದ ಚಿರತೆ ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

Continue Reading

ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 8.76 ಲಕ್ಷ ರೂ ದಂಡ

ಸುದ್ದಿ ಸಂಗ್ರಹ ಬೆಳಗಾವಿ ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರಗೈದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಪೋಕ್ಸೋ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. 8 ತಿಂಗಳ ಅವಧಿಯಲ್ಲಿ ಪ್ರಕರಣ ಇತ್ಯರ್ಥಗೊಳಿಸಿ ನಾಲ್ವರಿಗೆ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ. ಸಾಕೀಬ್ ನಿಜಾಮಿ (22), ರವಿ ನಾಯ್ಯೋಡಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 8.76 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್, ಅಶುತೋಷ್ ಪಾಟೀಲ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಈ ಇಬ್ಬರಿಗೂ […]

Continue Reading

ಕಲಬುರಗಿ: 10 ಸಾವಿರ ರೂ ಲಂಚ ಪಡೆಯುತ್ತಿದ್ದ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲೆಯ ಕಮಲಾಪುರ ತಹಸೀಲ್ದಾರ್ ಕಚೇರಿಯಲ್ಲಿ 10 ಸಾವಿರ ರೂ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆ ಪತ್ರ ನೀಡಲು ಶಶಿಕುಮಾರ್, ಕಿಶನ್ ರಾಠೋಡ ಅವರಿಗೆ 20 ಸಾವಿರಕ್ಕೂ ಹೆಚ್ಚು ಹಣದ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ರಾಠೋಡ ದೂರು ನೀಡಿದ್ದರು. ಲಂಚ ಪಡೆಯುವಾಗ ದಾಳಿ ಮಾಡಿದ ಲೋಕಾಯುಕ್ತರು, ಹಣ ಪಡೆಯುತ್ತಿದ್ದ ಆರೋಪಿ ಶಶಿಕಾಂತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. […]

Continue Reading

ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ

ಸುದ್ದಿ ಸಂಗ್ರಹ ಉಡುಪಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಮತ್ತು ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ಮತ್ತು ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಕುಟುಂಬ ಮತ್ತು ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ ವತಿಯಿಂದ […]

Continue Reading

ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ: ಐವರು ಅರೆಸ್ಟ್‌

ಸುದ್ದಿ ಸಂಗ್ರಹ ಕೋಲಾರ ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರು ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರ್ರ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು. ಬಂಧಿತರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಉಪಕರಣ ಮತ್ತು ಕಲಬೆರೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಮಾಯಲ್, ಮಿಲ್ಕ್ ಪೌಡರ್, […]

Continue Reading

ಪಾಲಿಕೆ ಆಯುಕ್ತರ ಡಿಪಿ ಹಾಕೊಂಡು ಉಪ ಆಯುಕ್ತರಿಗೆ ಹಣಕ್ಕೆ ಮೆಸೇಜ್‌: ಸೈಬರ್‌ ಖದೀಮರ ಹೊಸ ಆಟ

ಸುದ್ದಿ ಸಂಗ್ರಹ ಬೆಳಗಾವಿ ಸೈಬರ್‌ ವಂಚಕರು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿ ವಂಚನೆಗಿಳಿದಿದ್ದಾರೆ. ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಡಿಪಿ ಹಾಕಿಕೊಂಡು ಉಪ ಆಯುಕ್ತ ಉದಯಕುಮಾರ್ ತಳವಾರಗೆ ಹಣಕ್ಕಾಗಿ ವಾಟ್ಸಪ್‌ನಲ್ಲಿ ಮೆಸೇಜ್ ಕಳುಹಿಸಿದ್ದಾರೆ. ಮೆಸೇಜ್‌ನಲ್ಲಿ ತುರ್ತಾಗಿ 50 ಸಾವಿರ ರೂ. ಅಕೌಂಟ್‍ಗೆ ಹಾಕಿ. ನಾನು ಮೀಟಿಂಗ್‍ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸಿ ಎಂದು ವಂಚಕರು ಮೆಸೆಜ್‌ ಕಳುಹಿಸಿದ್ದಾರೆ. ಮೆಸೇಜ್ ನೋಡಿ ಕಕ್ಕಾಬಿಕ್ಕಿಯಾದ ಉಪ ಆಯುಕ್ತ ಉದಯಕುಮಾರ್ ತಳವಾರ, ಹಣ ಕೇಳಿದ ನಂಬರ್‌ಗೆ ವಾಟ್ಸಪ್ ಕಾಲ್ […]

Continue Reading