ಖಾಸಗಿ ಬಸ್‌ ದುರಂತ– ಏನಾಗಿದೆ ಅಂತ ಗೊತ್ತಾಗಲಿಲ್ಲ: ಶಾಕ್‌ನಲ್ಲೆ ವಿವರಿಸಿದ ಕ್ಲೀನರ್‌

ಸುದ್ದಿ ಸಂಗ್ರಹ ಚಿತ್ರದುರ್ಗಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ಬಸ್‌ ದುರಂತದಲ್ಲಿ 4 ಜನ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್‌ನ ಕ್ಲೀನರ್‌ ಸಾಧಿಕ್‌, ನಮಗೆ ಏನಾಯ್ತು ಅಂತಾನೆ ಗೊತ್ತಾಗಲಿಲ್ಲ ಎಂದು ಶಾಕ್‌ನಲ್ಲೆ ಮಾತಾಡಿದ್ದಾರೆ. ರಾತ್ರಿ 1‌.30 ರಿಂದ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಾನು ರಾತ್ರಿ ಮಲಗಿದ್ದೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನಿಂದ ಹೊರಗೆ ಬಿದ್ದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಬಸ್ ಹೊತ್ತಿ ಉರಿದಿದೆ. ಸ್ಥಳೀಯರು ನಮ್ಮ ಸಹಾಯಕ್ಕೆ ಬಂದರು. ಅಪಘಾತವಾಗುತ್ತಿದ್ದಂತೆ […]

Continue Reading

ನ್ಯೂಜಿಲೆಂಡ್ ವರ, ಕರ್ನಾಟಕದ ವಧು: ಸಾಗರದಾಚೆಗಿನ ವಿವಾಹಕ್ಕೆ ಸಾಕ್ಷಿಯಾದ ಬೆಣ್ಣೆನಗರಿ

ಸುದ್ದಿ ಸಂಗ್ರಹ ದಾವಣಗೆರೆ ನ್ಯೂಜಿಲೆಂಡ್ ವರ, ಕರ್ನಾಟಕದ ವಧು. ಇವರಿಬ್ಬರ ಪ್ರೇಮ ವಿವಾಹಕ್ಕೆ ಸಾಕ್ಷಿಯಾಗಿದ್ದು ಬೆಣ್ಣೆನಗರಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಪೂಜಾ ನಾಗರಾಜ್ ಹಾಗೂ ನ್ಯೂಜಿಲೆಂಡ್‌ನ ಕ್ಯಾಂಬೆಲ್ ವಿಲ್ ವರ್ಥ್ ಹಿಂದೂ ಸಂಪ್ರದಾಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವೃತ್ತಿಯಲ್ಲಿ ಪೂಜಾ ನಾಗರಾಜ್ ದಂತವೈದ್ಯೆ. ಕ್ಯಾಂಬೆಲ್ ವಿಲ್ ವರ್ಥ್ ಸಾಫ್ಟ್‌ವೇರ್‌ ಇಂಜಿನಿಯರ್. ಇಬ್ಬರು ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪೂಜಾ ತಂದೆ ನಾಗರಾಜ್ ಸಿವಿಲ್ ಇಂಜಿನಿಯರ್ ಆಗಿದ್ದು, 2005 ರಲ್ಲಿ ನ್ಯೂಜಿಲೆಂಡ್‌ಗೆ ಹೋಗಿ […]

Continue Reading

ಅಕ್ರಮ ಸಂಬಂಧಕ್ಕೆ ಅಡ್ಡಿ: 50 ಸಾವಿರ ರೂ.ಗೆ ಹೆತ್ತ ಮಗುವನ್ನೆ ಮಾರಿದ ಪಾಪಿ ತಾಯಿ

ಸುದ್ದಿ ಸಂಗ್ರಹ ಚಿತ್ರದುರ್ಗ ಹೆತ್ತವರಿಗೆ ಹೆಗ್ಗಣ ಮುದ್ದು ಅಂತಾರೆ. ಆದರೆ ಇಲ್ಲೊಂದು ಪಾಪಿ ತಾಯಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೆ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಡಿ.23ರಂದು ಹುಳಿಯಾರು […]

Continue Reading

ಉಡುಪಿ ಬೀಚ್​ನಲ್ಲಿ ಪವಾಡ: ಕಡಲಲ್ಲಿ ತೇಲಿ ಬಂತೆ ಕೃಷ್ಣನ ವಿಗ್ರಹ ? ಅಸಲಿಯತ್ತು ಇಲ್ಲಿದೆ

ಸುದ್ದಿ ಸಂಗ್ರಹ ಉಡುಪಿ ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲಾ ವಿಷಯಗಳು ನಂಬಬಾರದು. ಕೆಲವೊಂದು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದ್ದೆ ಘಟನೆಯೊಂದು ನಡೆದಿದೆ. ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿತ್ತು. ಆದರೆ ಈ ವೈರಲ್​​ ಆಗಿರುವ ವಿಡಿಯೋದಲ್ಲಿರುವ ಸತ್ಯವೆ ಬೇರೆ. ಅಷ್ಟಕ್ಕೂ ವೈರಲ್​​​ […]

Continue Reading

ಯಾರಿಗೆ ಹೇಳ್ತಿರಾ ಹೇಳಿ: ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಲ್ಲಿ MLC ತಡೆದು ಅನುಚಿತ ವರ್ತನೆ

ಸುದ್ದಿ ಸಂಗ್ರಹ ವಿಜಯಪುರ ರಾಷ್ಟ್ರೀಯ ಹೆದ್ದಾರಿ 52ರ ಟೋಲ್‌ನಲ್ಲಿ ಎಂಎಲ್‌ಸಿ ಕೇಶವ ಪ್ರಸಾದ್ ಅವರನ್ನು ತಡೆದು ಅನುಚಿತ ವರ್ತನೆ ತೋರಿರುವ ಘಟನೆ ನಡೆದಿದೆ. ವಿಜಯಪುರ ನಗರದ ಹೊರವಲಯದಲ್ಲಿರುವ ಬೆಂಗಳೂರು-ಸೋಲಾಪುರ ಹೈವೆಯಲ್ಲಿರುವ ಟೋಲ್‌ನಲ್ಲಿ ಕೇಶವ ಪ್ರಸಾದ್ ಅವರ ಪಾಸ್ ಹಾಗೂ ಪಿಎ ಮೊಬೈಲ್ ಕಸಿದುಕೊಂಡ ಮಹಿಳಾ ಸಿಬ್ಬಂದಿ ಅನುಚಿತ ವರ್ತನೆ ತೋರಿದ್ದಾರೆ. ಬರೋಬ್ಬರಿ ಒಂದು ಗಂಟೆಕಾಲ ಎಂಎಲ್‌ಸಿಯನ್ನು ತಡೆದು ಗೊಂದಲ ಸೃಷ್ಟಿಸಿದ್ದಾರೆ. ಮೊಬೈಲ್, ಪಾಸ್ ಕಸಿದು ‘ಯಾರಿಗೆ ಹೇಳ್ತಿರಾ ಹೇಳಿ’ ಎಂದು ಏರುದ್ವನಿಯಲ್ಲಿ ಮಾತನಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ನೀವೆ […]

Continue Reading

ಕಲಬುರಗಿ: 3 ವರ್ಷದಲ್ಲಿ 87 ಬಾಲ ಕಾರ್ಮಿಕರ ‍ಪತ್ತೆ

ಸುದ್ದಿ ಸಂಗ್ರಹ ಕಲಬುರಗಿ ಜಿಲ್ಲೆಯಲ್ಲಿ ಕಲಿಕಾ ವಯಸ್ಸಿನಲ್ಲೆ ಮಕ್ಕಳನ್ನು ಕೆಲಸಕ್ಕೆ ದೂಡುವ ಅಪಾಯಕಾರಿ ಪ್ರವೃತ್ತಿ ಮುಂದುವರಿದಿದೆ. ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲೆಯ 5 ಕಾರ್ಮಿಕ ವೃತ್ತಗಳ ವ್ಯಾಪ್ತಿಯಲ್ಲಿ 3 ವರ್ಷದಲ್ಲಿ 2,300ಕ್ಕೂ ಅಧಿಕ ಕಡೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿದ್ದ ಒಟ್ಟು 87 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿದ್ದಾರೆ. ಈ ಸಂಬಂಧ ಒಟ್ಟು 57 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನೂ […]

Continue Reading

ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ: ಅಕ್ಕಿ, ಗೋಧಿ, ತೊಗರಿಯಲ್ಲಿ ಬರಿ ಹುಳು, ಕಸ ಪತ್ತೆ

ಸುದ್ದಿ ಸಂಗ್ರಹ ಯಾದಗಿರಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು, ಶಾಲಾ ದಾಖಲಾತಿ ಹೆಚ್ಚಿಸಲು ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ ಈಗ ಸರ್ಕಾರ ನೀಡುವ ಬಿಸಿಯೂಟ ಭಾಗ್ಯದಲ್ಲಿ ಬರಿ ಹುಳು ಭಾಗ್ಯವೆ ಹೆಚ್ಚಾಗಿದೆ. ಕೋಟ್ಯಾಂತರ ರೂಪಾಯಿ ಯೋಜನೆಯು ಸಮರ್ಪಕವಾಗಿ ನಿರ್ವಹಿಸದೆ ನಿರ್ಲಕ್ಷ್ಯ ತೋರಲಾಗಿದೆ. ಶಾಲೆಗಳಿಗೆ ಕಳಪೆ ಆಹಾರ ಧಾನ್ಯ ನೀಡಲಾಗುತ್ತಿದ್ದು, ಮಕ್ಕಳು ಶಾಲೆಗೆ ಬರೋದಕ್ಕೆ ಹಿಂದೇಟು ಹಾಕುವಂತಾಗಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಧಾನ್ಯ ವಿತರಣೆ ಮಾಡಿ ಉತ್ತಮ ಪೌಷ್ಟಿಕ ಆಹಾರ ನೀಡಬೇಕು. ಆದರೆ […]

Continue Reading

ಅಂತರರಾಜ್ಯ ಕಳ್ಳನ ಬಂಧನ: 250 ಗ್ರಾಂ ಚಿನ್ನ ವಶ

ಸುದ್ದಿ ಸಂಗ್ರಹ ಹಾಸನ ನಗರದ ಪೆನ್ಷನ್‍ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗಳೂರಿನ ವಿನಾಯಕ ನಗರದ ಗೆದ್ದಲಹಳ್ಳಿ ಮೂಲದ ಸೋಹಿಲ್‍ಖಾನ್ (38) ಎಂದು ಗುರುತಿಸಲಾಗಿದೆ. ಈತ ಕರ್ನಾಟಕದಲ್ಲಿ 27 ಪ್ರಕರಣ, ಆಂಧ್ರಪ್ರದೇಶದಲ್ಲಿ 52 ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಉಡುಪಿ ಜಿಲ್ಲೆಯಲ್ಲಿ ನಡೆದಿದ್ದ ಒಂದು ಪ್ರಕರಣದಲ್ಲಿ ಆರೋಪಿ ಎಂಬುದು ಸಾಬೀತಾಗಿತ್ತು. ಸೋಹಿಲ್‍ಖಾನ್ ಪೆನ್ಷನ್‍ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಕಳ್ಳತನ ಮಾಡಿದ್ದ. ಈ ಬಗ್ಗೆ ಶಾರದ, ಪ್ರೇಮಾ […]

Continue Reading

ನಕಲಿ ದಾಖಲೆ ಸೃಷ್ಟಿಸಿ 512 ಎಕರೆ ಭೂಮಿ ಕಬಳಿಕೆ ಯತ್ನ: ಆರೋಪಿ ಬಂಧನ

ಸುದ್ದಿ ಸಂಗ್ರಹ ಮೂಡಿಗೆರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 512 ಎಕರೆ 21 ಗುಂಟೆ ಅರಣ್ಯ ಕಂದಾಯ ಭೂಮಿಯನ್ನು ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಮರೆಬೈಲ್ ಗ್ರಾಮದ ಮನ್ಮಥ (ನೇಮಣ್ಣಗೌಡ) ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ. 512 ಎಕರೆ 21 ಗುಂಟೆ ತನ್ನ ಪೂರ್ವಜರಾದ ಈರೇಗೌಡರಿಗೆ 1974ರಲ್ಲಿ ಭೂಮಿ ಹಕ್ಕು ಮರು ವರ್ಗಾವಣೆಯಾಗಿದೆ ಎಂಬ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದ ಆರೋಪಿ, ಗ್ರಾಮ ಲೆಕ್ಕಾಧಿಕಾರಿಯ ನಕಲಿ ಸಹಿ ಹಾಗೂ ನಕ್ಷೆಯನ್ನು ಬಳಸಿದ್ದ ಎನ್ನಲಾಗಿದೆ. ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ […]

Continue Reading

ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ: ಸುಮಾರು 25 ಕೋಟಿ ರೂ. ಜಮೀನು ಪರಭಾರೆ

ನೆಲಮಂಗಲ: ಪೊಲೀಸ್ ಇಲಾಖೆಯನ್ನೆ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರಿ ಪ್ರಕರಣ ನೆಲಮಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೆ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಸ್ಪೆಂಡ್ ಆಗಿ ಮನೆಲ್ಲಿದ್ದರು ಬುದ್ದಿ ಕಲಿಯದಹೆಡ್ ಕಾನ್ಸಟೇಬಲ್ ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನದ ಪ್ರಕರಣ ದಾಖಲಾಗಿದೆ, ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ಈ […]

Continue Reading