ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

ಸುದ್ದಿ ಸಂಗ್ರಹ ವಿಜಯಪುರ ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಮಗನನ್ನೇ ಪಾಪಿ ತಂದೆ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ(6) ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಪ್ರತಿನಿತ್ಯ […]

Continue Reading

ಲಂಚ ಪಡೆಯುವಂತೆ PSI ಒತ್ತಡ: ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

ಸುದ್ದಿ ಸಂಗ್ರಹ ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಸೀತಾರಾಮ್ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಮತ್ತು ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ […]

Continue Reading

ಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಮತ್ತು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ ದಿನೇಶಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ […]

Continue Reading

ಫುಡ್ ಪಾಯಿಸನ್ ಆಗಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ಸುದ್ದಿ ಸಂಗ್ರಹ ಬೀದರ್ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು. ಇದನ್ನು ತಿಂದು ಗ್ರಾಮದ ಜನರು ಬೆಳಗಿನ ಜಾವ ಫುಡ್ ಪಾಯಿಸನ್ ಆಗಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, 5 ರಿಂದ 6 ಜನರ ಸ್ಥಿತಿ ಗಂಭೀರವಾಗಿದೆ. ಆಂಬುಲೆನ್ಸ್ ಮೂಲಕ ಜನರನ್ನು ಬೀದರ್‌ನ ಬ್ರಿಮ್ಸ್ […]

Continue Reading

ಬಾಲ್ಯದಿಂದಲೇ ಮಕ್ಕಳಲ್ಲಿ ಮೌಲ್ಯ ಬಿತ್ತುವ ಕಾರ್ಯವಾಗಲಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಮಕ್ಕಳಿಗೆ ಬಾಲ್ಯದಿಂದಲೇ ಮೌಲ್ಯ, ದೇಶದ ಸಂಸ್ಕೃತಿ, ಪರಂಪರೆ, ಹಬ್ಬಗಳು, ಉತ್ಸವಗಳ ಹಿನ್ನಲೆಯ ಬಗ್ಗೆ ಅವರಲ್ಲಿ ಬಿತ್ತುವ ಕಾರ್ಯ ಮಾಡಬೇಕಾದದ್ದು ಪ್ರಸ್ತುತ ಜರೂರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು.‌ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಗುರುವಾರ ಜರುಗಿದ ‘ಯುಗಾದಿ ಮಕ್ಕಳ ಕಲರವ’ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವ ಜನತೆ ವಿದೇಶಿ […]

Continue Reading

ಕೆಪಿಎಸ್‌ಸಿ ಅಕ್ರಮ ನೇಮಕಾತಿಗಳ ತನಿಖೆ: ಪ್ರಿಯಾಂಕ್‌ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ವಹಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜಿಲ್ಲೆಯ ಚಿಂಚೋಳಿಯ ಚಂದ್ರಂಪಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್‌ಸಿ ನಡೆಸಿದ ಪಿಡಿಒ, ಬಿಬಿಎಂಪಿ ಸಹಾಯಕ ಎಂಜಿನಿಯರ್, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading

ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ

ಸುದ್ದಿ ಸಂಗ್ರಹ ಬಳ್ಳಾರಿ ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೆ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತಿ ಹೆಚ್ಚು ಬಿಸಿ ಗಾಳಿ ಸಾಧ್ಯತೆ […]

Continue Reading

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ: ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

ಸುದ್ದಿ ಸಂಗ್ರಹ ಕೊಪ್ಪಳನೆರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ ಇಟ್ನಾಳ್ ಸೂಚನೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದು ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೋಳಿ ಫಾರಂ ಮಾಲೀಕರು ಮತ್ತು […]

Continue Reading

ಚೌಡಯ್ಯನವರ ವಚನಗಳು ಸಾರ್ವಕಾಲಿಕ, ಸಮಾಜಕ್ಕೆ ದಾರಿದೀಪ

ಸುದ್ದಿ ಸಂಗ್ರಹ ಕಲಬುರಗಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ಅನುಭವದ ಅಮೃತದ ವಚನಗಳು ಸಾರ್ವಕಾಲಿಕ ಮತ್ತು ಸಮಾಜಕ್ಕೆ ದಾರಿದೀಪವಾಗಿವೆ. ವಿದ್ಯಾರ್ಥಿ ದಿಸೆಯಿಂದಲೆ ವಚನಗಳ ಅಧ್ಯಯನ ಮಾಡಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು‌. ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ್ ಮಾತನಾಡಿ, […]

Continue Reading