ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

ಸುದ್ದಿ ಸಂಗ್ರಹ ಮೈಸೂರುಈ ಬಾರಿಯ ದಸರಾ ಮೆರವಣಿಗೆಯಲ್ಲಿ ಕನ್ನಡ ಚಲನಚಿತ್ರ ರಂಗದ ನಟ ನಟಿಯರು ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ ಈ ಬಾರಿ ಮೆರವಣಿಗೆಯಲ್ಲಿ ನಟ ನಟಿಯರು ಸಾಗಲಿದ್ದಾರೆ. ಜಂಬೂ ಸವಾರಿಯ ದಿನ ಅಂಬಾರಿ ಬಸ್‌ನಲ್ಲಿ ಅರಮನೆ ಆವರಣದಿಂದ ಕೆಆರ್ ಸರ್ಕಲ್‌ವರೆಗೆ ಮೆರವಣಿಗೆ ಮೂಲಕ ನಟ ನಟಿಯರು ಸಾಗಲಿದ್ದಾರೆ. ನಂತರ ಕಲಾವಿದರನ್ನು ಕೆಆರ್ ಸರ್ಕಲ್‌ನಿಂದ ಕರೆದುಕೊಂಡು ಬಂದು ಅರಮನೆ ಗ್ಯಾಲರಿಯಲ್ಲಿ ಬಿಡಲಾಗುವುದು ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ. ಆನೆಗಳ ತಾಲೀಮು ನೋಡಲು ದಿನವೂ ಜನಸಾಗರಮೈಸೂರು ದಸರಾ ಹಿನ್ನೆಲೆ ಗಜಪಡೆ […]

Continue Reading

ಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ: 16 ದಿನದಲ್ಲಿ 3.30 ಕೋಟಿ ರೂ. ಕಾಣಿಕೆ ನೀಡಿದ ಭಕ್ತರು

ಸುದ್ದಿ ಸಂಗ್ರಹ ರಾಯಚೂರುಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್-ಸೆಪ್ಟೆಂಬರ್ ತಿಂಗಳಿನ 16 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಮಠದ ಇತಿಹಾಸದಲ್ಲೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಕೇವಲ 16 ದಿನದಲ್ಲಿ 3 ಕೋಟಿ 30 ಲಕ್ಷ 69,139 ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಭಕ್ತರು ದಂಡು ಮಠಕ್ಕೆ ಹರಿದು ಬಂದಿದೆ. ಆದರು ಗುರು ರಾಯರ 355ನೇ ಆರಾಧನಾ ಮಹೋತ್ಸವ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ಸಂಖ್ಯೆ […]

Continue Reading

ಮಂತ್ರಾಲಯದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ

ಸುದ್ದಿ ಸಂಗ್ರಹ ರಾಯಚೂರುಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮದಿಂದ ಆಚರಿಸಲಾಗಿದೆ. ಕೃಷ್ಣನ ಪೂಜೆಗೂ ಮುನ್ನ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಶ್ರೀಗಳ ನೇತೃತ್ವದಲ್ಲಿ ಪಿಂಡ್ಲಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಸ್ವತಃ ಸುಬುಧೇಂದ್ರ ತೀರ್ಥ ಶ್ರೀಗಳು ಪಿಂಡ್ಲಿ ಉತ್ಸವದಲ್ಲಿ ಪಾಲ್ಗೊಂಡು ಮೊಸರು, ಹಾಲು, ಬೆಣ್ಣೆ ತುಂಬಿದ ಮಡಿಕೆಯನ್ನು ಒಡೆದರು. ಉತ್ಸವದಲ್ಲಿ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಮತ್ತು ಮಠದ ಸಿಬ್ಬಂದಿ, ಭಕ್ತರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ನಿರಂತರ ಎರಚುವ ಓಕಳಿ ಮಧ್ಯೆಯೆ ಕಣ್ಣಿಗೆ ಬಟ್ಟೆ […]

Continue Reading

ಪರೀಕ್ಷೆಯಲ್ಲಿ ಕಡಿಮೆ ಅಂಕ: ಮಕ್ಕಳಿಗೆ ರಕ್ತ ಬರುವಂತೆ ಥಳಿಸಿದ ಶಿಕ್ಷಕಿ

ಸುದ್ದಿ ಸಂಗ್ರಹ ಶಿವಮೊಗ್ಗಅಕ್ಷರ ಕಲಿಸಿ, ತಿದ್ದಿ ತೀಡಿ ಸನ್ಮಾರ್ಗ ತೋರಬೇಕಾದ ಶಿಕ್ಷಕಿಯೊಬ್ಬರು ಮಕ್ಕಳ ಮೇಲೆ ರಾಕ್ಷಸೀ ಪ್ರವೃತ್ತಿ ಮೆರೆದ ಅತ್ಯಂತ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದರೆಂಬ ಕ್ಷುಲ್ಲಕ ಕಾರಣಕ್ಕೆ, ಅತಿಥಿ ಶಿಕ್ಷಕಿ ಮಕ್ಕಳ ಬೆನ್ನಿನ ಮೇಲೆ ಬಾಸುಂಡೆ ಎದ್ದು ರಕ್ತ ಬರುವಂತೆ ಮನಬಂದಂತೆ ಥಳಿಸಿದ್ದು, ಈ ಘಟನೆ ಇಡಿ ನಾಗರಿಕ ಸಮಾಜವನ್ನೆ ಬೆಚ್ಚಿಬೀಳಿಸಿದೆ. ನಡೆದಿದ್ದೆನು ? ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾಗಿರುವ […]

Continue Reading

ತರಗತಿ ನಡೆಯುತ್ತಿದ್ದಾಗಲೇ ಕೊಠಡಿಯ ಮೇಲ್ಛಾವಣಿ ಕುಸಿತ: ನಾಲ್ವರು ಮಕ್ಕಳಿಗೆ ಗಾಯ

ಸುದ್ದಿ ಸಂಗ್ರಹ ಬಾಗಲಕೋಟೆಶಾಲಾ ಶಿಕ್ಷಕ ಮಕ್ಕಳಿಗೆ ಪಾಠ ಮಾಡುವಾಗ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ದಿನನಿತ್ಯದಂತೆ ತರಗತಿ ನಡೆಯುತ್ತಿದ್ದಾಗ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಮತ್ತು ಕಾಂಕ್ರೀಟ್ ಚೂರುಗಳು ಏಕಾಏಕಿ ಮಕ್ಕಳ ಮೇಲೆ ಬಿದ್ದಿವೆ. ಘಟನೆಯಿಂದ ನಾಲ್ವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿ […]

Continue Reading

ಪಿಂಚಣಿ ಮರುಪಡೆಯಲು ತಕ್ಷಣ ದಾಖಲೆ ಸಲ್ಲಿಸಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಸುದ್ದಿ ಸಂಗ್ರಹ ಕಲಬುರಗಿಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ತಡೆಹಿಡಿಯಲಾದ ಪಿಂಚಣಿಯನ್ನು ಮರುಪಡೆಯಲು ಅಗತ್ಯ ದಾಖಲೆಗಳನ್ನು ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ. ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯಲ್ಲಿ ವಯಸ್ಸಿನ ವ್ಯತ್ಯಾಸವಾಗಿದ್ದಲ್ಲಿ, ಆದಾಯ ತೆರಿಗೆ ಪಾವತಿಸುತ್ತಿರುವುದು, ಯುಡಿಐಡಿ ಕಾರ್ಡ್ ಇಲ್ಲದಿರುವುದು ಮತ್ತು ಈ ಹಿಂದಿನ ಮಾನದಂಡದಂತೆ ಕುಟುಂಬದ ವಾರ್ಷಿಕ ಆದಾಯ 32 ಸಾವಿರಕ್ಕಿಂತ ಹೆಚ್ಚಿರುವವರ ಪಿಂಚಣಿಯನ್ನು ಸರ್ಕಾರವು ಅನುಮಾನಾಸ್ಪದ ಎಂದು ಗುರುತಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ […]

Continue Reading

ಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 1,033 ಕೆಜಿ ಆಹಾರ ಪದಾರ್ಥ ಸೀಜ್

ಸುದ್ದಿ ಸಂಗ್ರಹ ಹಾವೇರಿಜಿಲ್ಲೆಯ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ರಾಣೇಬೆನ್ನೂರು ತಹಸೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಒಟ್ಟು 1,033 ಕೆಜಿ ಆಹಾರ ಪದಾರ್ಥಗಳು ಸೀಜ್ ಮಾಡಲಾಗಿದೆ. ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಮತ್ತು ಹನುಮನಹಳ್ಳಿ ಗ್ರಾಮದಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ದಿಢೀರ್ ತಪಾಸಣೆ ನಡೆಸಲಾಯಿತು. ಈ ವೇಳೆ ಆಹಾರ ಪದಾರ್ಥಗಳನ್ನು ಸರಿಯಾಗಿ ಪ್ಯಾಕ್ ಮಾಡದೆ ಸಾಗಣೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಹೀಗಾಗಿ ಸ್ಥಳ […]

Continue Reading

ತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

ಸುದ್ದಿ ಸಂಗ್ರಹ ಶಿವಮೊಗ್ಗತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಬಳಿಯ ತುಂಗಾ ಮೇಲ್ದಂಡೆ ನಾಲೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯ ನಿವಾಸಿ ಕೃಷ್ಣ (15) ನೀರುಪಾಲಾದ ಬಾಲಕ. ಕೃಷ್ಣ ಶಿವಮೊಗ್ಗ ನಗರದ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆರು ಜನ ಸ್ನೇಹಿತರ ಜೊತೆ ತುಂಗಾ ನಾಲೆಗೆ ಈಜಲು ತೆರಳಿದ್ದ ವೇಳೆ ನಾಲೆಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ನಿಯಂತ್ರಣ ಕಳೆದುಕೊಂಡು ಕೃಷ್ಣ ಕಣ್ಮರೆಯಾಗಿದ್ದಾನೆ. ಬಾಲಕ ಕೃಷ್ಣನ ರಕ್ಷಿಸಲು ಸ್ನೇಹಿತರ ಯತ್ನ ವಿಫಲವಾಗಿದೆ. ಅಗ್ನಿಶಾಮಕ […]

Continue Reading

8.43 ಕೋಟಿ ಹಗರಣ ಪ್ರಕರಣ: ಕಿಂಗ್‌ಪಿನ್ ಸಹೋದರನ ಬಂಧನ

ಸುದ್ದಿ ಸಂಗ್ರಹ ಕೊಪ್ಪಳನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಬರೋಬ್ಬರಿ 8.43 ಕೋಟಿ ರೂ ಹಗರಣ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಪ್ರಮುಖ ಆರೋಪಿ ರವೀಂದ್ರಕುಮಾರ್‌ನ ಸಹೋದರ ಅನಿಲಕುಮಾರ್‌ನನ್ನು ಬೆಂಗಳೂರಿನಲ್ಲಿ ಅತ್ಯಂತ ರೋಚಕವಾಗಿ ಬಂಧಿಸಿದ್ದಾರೆ. ನಿವೇಶನ ಕೊಡಿಸುವುದಾಗಿ ನಂಬಿಸಿ ಪ್ರಾಧಿಕಾರದ ಅಧಿಕೃತ ಬ್ಯಾಂಕ್ ಖಾತೆಯಿಂದಲೇ ಸುಮಾರು 40ಕ್ಕೂ ಹೆಚ್ಚು ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ವಂಚಿಸಲಾಗಿತ್ತು. ಈ ಪೈಕಿ ಅನಿಲಕುಮಾರ್ ಖಾತೆಗೆ ಐದಕ್ಕೂ ಹೆಚ್ಚು ಕಂತುಗಳಲ್ಲಿ 1 ಕೋಟಿಗೂ ಅಧಿಕ ಮೊತ್ತ ವರ್ಗಾವಣೆಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. […]

Continue Reading

ಮಂತ್ರಾಲಯ: ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವ

ಸುದ್ದಿ ಸಂಗ್ರಹ ರಾಯಚೂರುಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ 7 ದಿನಗಳ ಕಾಲ ಗುರು ರಾಯರ 355ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ ಅವರು, ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದರು. ಆಗಸ್ಟ್ 29, 30, 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನ ರಾತ್ರಿ ವೇಳೆ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ ಪೂರ್ವಾರಾಧನೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಪೂಜಾ […]

Continue Reading