ಕಲಬುರಗಿ–ಬೆಂಗಳೂರು ಸ್ಟಾರ್‌ ಏರ್‌ ವಿಮಾನ ಸಂಚಾರ: ಸಮಯ ಬದಲಾವಣೆ

ಸುದ್ದಿ ಸಂಗ್ರಹ ಕಲಬುರಗಿಜೂನ್‌ 10ರಿಂದ ಆರಂಭವಾಗಲಿರುವ ಕಲಬುರಗಿ– ಬೆಂಗಳೂರು ಸ್ಟಾರ್‌ ಏರ್‌ ವಿಮಾನ ಸಂಚಾರದ ಸಮಯವನ್ನು ಸಂಜೆ ವೇಳೆಯಿಂದ ಬೆಳಗಿನ ವೇಳೆಗೆ ಬದಲಾವಣೆ ಮಾಡಲಾಗಿದೆ. ಸಮಯ ಬದಲಾವಣೆ ಕುರಿತು ಸ್ಟಾರ್ ಏರ್ ಸಂಸ್ಥೆಯವರು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಗೆ ಮಾಹಿತಿ ನೀಡಿರುವುದಾಗಿ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ.ಪಪ್ಪಾ, ಗೌರವ ಕಾರ್ಯದರ್ಶಿ ಶಿವರಾಜ್ ವಿ ಇಂಗಿನಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ನಿತ್ಯ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಬೆಳಿಗ್ಗೆ 8.10ಕ್ಕೆ […]

Continue Reading

ಮದುವೆ ಆಗ್ತಿನಿ ಅಂತ ನಂಬಿಸಿ ಯುವತಿಗೆ ವಂಚನೆ ಆರೋಪ: ಎಫ್‌ಐಆರ್‌ ಆದ್ರೂ ಪೊಲೀಸರು ಸೈಲೆಂಟ್

ಸುದ್ದಿ ಸಂಗ್ರಹ ದಾವಣಗೆರೆಪ್ರೀತಿ ಪ್ರೇಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಯುವಕನೊಬ್ಬ ವಂಚಿಸಿದ ಪ್ರಕರಣ ಹರಿಹರದಲ್ಲಿ ನಡೆದಿದೆ. ಮಲೆಬೆನ್ನೂರು ಮೂಲದ ಮುಷ್ರಫ್ ಖಾನ್ ಎಂಬಾತನ ವಿರುದ್ಧ ದಾವಣಗೆರೆಯ ಯುವತಿ ವಂಚನೆ ಆರೋಪ ಮಾಡಿದ್ದಾಳೆ. ಮುಷ್ರಫ್ ಮದುವೆ ಆಗುವುದಾಗಿ ಮುಚ್ಚಳಿಕೆ ಬರೆದುಕೊಟ್ಟು ಈಗ ನಾಪತ್ತೆಯಾಗಿದ್ದಾನೆ. ಅಲ್ಲದೆ ಪ್ರಭಾವಿ ನಾಯಕರ ಸಂಬಂಧಿ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆ ಆಗಲು 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನ್ಯಾಯಕ್ಕಾಗಿ ಯುವತಿ ಹೋರಾಟ ಮಾಡುತ್ತಿದ್ದಾಳೆ. ಯುವಕ ಹಾಗೂ ಆತನಿಗೆ ಸಾಥ್ […]

Continue Reading

ಹಂಪಿಯಲ್ಲಿ ಪ್ರಾಚೀನ ಕಾಲದ ಒಳಚರಂಡಿ ವ್ಯವಸ್ಥೆ, ಆಳ್ವಾರ್ ಪ್ರತಿಮೆ ಪತ್ತೆ ಹಚ್ಚಿದ ASI

ಸುದ್ದಿ ಸಂಗ್ರಹ ಹಂಪಿ/ಹೊಸಪೇಟೆಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI), ಹಂಪಿ ವೃತ್ತವು, ಪ್ರಾಚೀನ ಒಳಚರಂಡಿ ವ್ಯವಸ್ಥೆಗಳಲ್ಲಿ ಒಂದನ್ನು ಪತ್ತೆಹಚ್ಚಿದೆ. ಶುಕ್ರವಾರ ಹಂಪಿಯಲ್ಲಿರುವ ಪ್ರಸಿದ್ಧ ಹಜಾರ ರಾಮ ದೇವಾಲಯದಲ್ಲಿ ನಡೆಯುತ್ತಿರುವ ವೈಜ್ಞಾನಿಕ ಉತ್ಖನನದ ಸಮಯದಲ್ಲಿ ಈ ಒಳಚರಂಡಿ ಪತ್ತೆಯಾಗಿದೆ. ಐತಿಹಾಸಿಕ ದೇವಾಲಯ ಸಂಕೀರ್ಣದಲ್ಲಿ ASI ತಂಡ, ನಡೆಸುತ್ತಿರುವ ಉತ್ಖನನವು ಇನ್ನೂ ಎರಡು ಆಳ್ವಾರ್ ಶಿಲ್ಪಗಳ ಆವಿಷ್ಕಾರಕ್ಕೂ ಕಾರಣವಾಗಿದ್ದು, ಇದು ಇತ್ತೀಚಿನ ವಾರಗಳಲ್ಲಿ ಈ ಸ್ಥಳದಿಂದ ವರದಿಯಾದ ಮಹತ್ವದ ಸಂಶೋಧನೆಗಳ ಸರಣಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮೊದಲು, ದೇವಾಲಯದ ಆವರಣದಲ್ಲಿ ವೈಜ್ಞಾನಿಕ […]

Continue Reading

ಯಡಿಯೂರಪ್ಪರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರು ಇಲ್ಲ: ಅಮಿತ್‌ ಶಾ ಬಣ್ಣನೆ

ಸುದ್ದಿ ಸಂಗ್ರಹ ಚಿತ್ರದುರ್ಗಬಿ.ಎಸ್‌ ಯಡಿಯೂರಪ್ಪ ಅವರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರು ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಡಿ ಹೊಗಳಿದ್ದಾರೆ. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ರೈತರ ನಾಯಕ ಯಡಿಯೂರಪ್ಪ ಅವರು 50 ವರ್ಷ ರಾಜಕೀಯ ಸೇವೆ ಮಾಡಿದ್ದಾರೆ. ಯಡಿಯೂರಪ್ಪ ವ್ಯಕ್ತಿತ್ವದ ಕಾರಣ ಎಲ್ಲಾ ಧರ್ಮದ ಸ್ವಾಮೀಜಿಗಳು ವೇದಿಕೆ ಮೇಲೆ ಇದ್ದಾರೆ. ವೇದಿಕೆಯಲ್ಲಿ ಎಲ್ಲಾ ವರ್ಗದ ಸ್ವಾಮೀಜಿಗಳನ್ನು ಆಶ್ಚರ್ಯ ಮತ್ತು ಸಂತೋಷವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಂದು […]

Continue Reading

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ. ಸರಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸರಕಾರಿ ನೌಕರರ ಮಕ್ಕಳು, ಮೇ.25ರ ಒಳಗಾಗಿ https://powermedia.info ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ […]

Continue Reading

ಚುನಾವಣಾ ರಾಜಕೀಯಕ್ಕೆ ಎಚ್ ವಿಶ್ವನಾಥ್ ಗುಡ್ ಬೈ

ಸುದ್ದಿ ಸಂಗ್ರಹ ಮೈಸೂರುಮುಂಬರುವ ಯಾವುದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಎಂಎಲ್‌ಸಿ ಎಚ್ ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು. ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ […]

Continue Reading

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡು ಕಾಲು ಕಟ್: ಇಬ್ಬರ ಸ್ಥಿತಿ ಗಂಭೀರ

ಸುದ್ದಿ ಸಂಗ್ರಹ ಬೀದರ್ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊರ್ವನ ಎರಡು ಕಾಲು ಕಟ್ ಆಗಿದ್ದು, ಇಬ್ಬರ ಕಾಲಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಥೇರು ಮೈದಾನದಲ್ಲಿ ನಡೆದಿದೆ. ಶ್ರೀ ಬಸವೇಶ್ವರ ಜಾತ್ರಾ ರಥದಡಿ ಸಿಲುಕಿ ಧನರಾಜ್ ಎಂಬುವವರ ಎರಡು ಕಾಲು ಕತ್ತರಿಸಿದೆ. ಇಬ್ಬರು ವ್ಯಕ್ತಿಗಳ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಭೀಮಾಶಂಕರ ಎಂಬಾತನಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸವಕಲ್ಯಾಣದಲ್ಲಿ ಶ್ರೀ ಬಸವೇಶ್ವರ ಜಾತ್ರಾ ರಥೋತ್ಸವ ನಡೆಯುತ್ತಿತ್ತು. ಲಕ್ಷಾಂತರ ಭಕ್ತ ಸಮೂಹ ಥೇರು ನೋಡಲು ಆಗಮಿಸಿತ್ತು. […]

Continue Reading

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

ಸುದ್ದಿ ಸಂಗ್ರಹ ವಿಜಯಪುರ ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಮಗನನ್ನೇ ಪಾಪಿ ತಂದೆ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ(6) ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಪ್ರತಿನಿತ್ಯ […]

Continue Reading

ಲಂಚ ಪಡೆಯುವಂತೆ PSI ಒತ್ತಡ: ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

ಸುದ್ದಿ ಸಂಗ್ರಹ ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಸೀತಾರಾಮ್ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಮತ್ತು ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಠಾಣೆಯಲ್ಲಿ […]

Continue Reading

ಲೋಕಾಯುಕ್ತ ದಾಳಿ: ಮಂಗಳೂರು ಸಹಾಯಕ ಡ್ರಗ್ ಕಂಟ್ರೋಲರ್ ಬಳಿ 3.37 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಮತ್ತು ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ ದಿನೇಶಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ […]

Continue Reading