ಕಲಬುರಗಿ: 3 ವರ್ಷದಲ್ಲಿ 87 ಬಾಲ ಕಾರ್ಮಿಕರ ‍ಪತ್ತೆ

ಸುದ್ದಿ ಸಂಗ್ರಹ ಕಲಬುರಗಿ ಜಿಲ್ಲೆಯಲ್ಲಿ ಕಲಿಕಾ ವಯಸ್ಸಿನಲ್ಲೆ ಮಕ್ಕಳನ್ನು ಕೆಲಸಕ್ಕೆ ದೂಡುವ ಅಪಾಯಕಾರಿ ಪ್ರವೃತ್ತಿ ಮುಂದುವರಿದಿದೆ. ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲೆಯ 5 ಕಾರ್ಮಿಕ ವೃತ್ತಗಳ ವ್ಯಾಪ್ತಿಯಲ್ಲಿ 3 ವರ್ಷದಲ್ಲಿ 2,300ಕ್ಕೂ ಅಧಿಕ ಕಡೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿದ್ದ ಒಟ್ಟು 87 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿದ್ದಾರೆ. ಈ ಸಂಬಂಧ ಒಟ್ಟು 57 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನೂ […]

Continue Reading

ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ: ಅಕ್ಕಿ, ಗೋಧಿ, ತೊಗರಿಯಲ್ಲಿ ಬರಿ ಹುಳು, ಕಸ ಪತ್ತೆ

ಸುದ್ದಿ ಸಂಗ್ರಹ ಯಾದಗಿರಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು, ಶಾಲಾ ದಾಖಲಾತಿ ಹೆಚ್ಚಿಸಲು ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ ಈಗ ಸರ್ಕಾರ ನೀಡುವ ಬಿಸಿಯೂಟ ಭಾಗ್ಯದಲ್ಲಿ ಬರಿ ಹುಳು ಭಾಗ್ಯವೆ ಹೆಚ್ಚಾಗಿದೆ. ಕೋಟ್ಯಾಂತರ ರೂಪಾಯಿ ಯೋಜನೆಯು ಸಮರ್ಪಕವಾಗಿ ನಿರ್ವಹಿಸದೆ ನಿರ್ಲಕ್ಷ್ಯ ತೋರಲಾಗಿದೆ. ಶಾಲೆಗಳಿಗೆ ಕಳಪೆ ಆಹಾರ ಧಾನ್ಯ ನೀಡಲಾಗುತ್ತಿದ್ದು, ಮಕ್ಕಳು ಶಾಲೆಗೆ ಬರೋದಕ್ಕೆ ಹಿಂದೇಟು ಹಾಕುವಂತಾಗಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಧಾನ್ಯ ವಿತರಣೆ ಮಾಡಿ ಉತ್ತಮ ಪೌಷ್ಟಿಕ ಆಹಾರ ನೀಡಬೇಕು. ಆದರೆ […]

Continue Reading

ಅಂತರರಾಜ್ಯ ಕಳ್ಳನ ಬಂಧನ: 250 ಗ್ರಾಂ ಚಿನ್ನ ವಶ

ಸುದ್ದಿ ಸಂಗ್ರಹ ಹಾಸನ ನಗರದ ಪೆನ್ಷನ್‍ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗಳೂರಿನ ವಿನಾಯಕ ನಗರದ ಗೆದ್ದಲಹಳ್ಳಿ ಮೂಲದ ಸೋಹಿಲ್‍ಖಾನ್ (38) ಎಂದು ಗುರುತಿಸಲಾಗಿದೆ. ಈತ ಕರ್ನಾಟಕದಲ್ಲಿ 27 ಪ್ರಕರಣ, ಆಂಧ್ರಪ್ರದೇಶದಲ್ಲಿ 52 ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಉಡುಪಿ ಜಿಲ್ಲೆಯಲ್ಲಿ ನಡೆದಿದ್ದ ಒಂದು ಪ್ರಕರಣದಲ್ಲಿ ಆರೋಪಿ ಎಂಬುದು ಸಾಬೀತಾಗಿತ್ತು. ಸೋಹಿಲ್‍ಖಾನ್ ಪೆನ್ಷನ್‍ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಕಳ್ಳತನ ಮಾಡಿದ್ದ. ಈ ಬಗ್ಗೆ ಶಾರದ, ಪ್ರೇಮಾ […]

Continue Reading

ನಕಲಿ ದಾಖಲೆ ಸೃಷ್ಟಿಸಿ 512 ಎಕರೆ ಭೂಮಿ ಕಬಳಿಕೆ ಯತ್ನ: ಆರೋಪಿ ಬಂಧನ

ಸುದ್ದಿ ಸಂಗ್ರಹ ಮೂಡಿಗೆರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 512 ಎಕರೆ 21 ಗುಂಟೆ ಅರಣ್ಯ ಕಂದಾಯ ಭೂಮಿಯನ್ನು ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಮರೆಬೈಲ್ ಗ್ರಾಮದ ಮನ್ಮಥ (ನೇಮಣ್ಣಗೌಡ) ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ. 512 ಎಕರೆ 21 ಗುಂಟೆ ತನ್ನ ಪೂರ್ವಜರಾದ ಈರೇಗೌಡರಿಗೆ 1974ರಲ್ಲಿ ಭೂಮಿ ಹಕ್ಕು ಮರು ವರ್ಗಾವಣೆಯಾಗಿದೆ ಎಂಬ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದ ಆರೋಪಿ, ಗ್ರಾಮ ಲೆಕ್ಕಾಧಿಕಾರಿಯ ನಕಲಿ ಸಹಿ ಹಾಗೂ ನಕ್ಷೆಯನ್ನು ಬಳಸಿದ್ದ ಎನ್ನಲಾಗಿದೆ. ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ […]

Continue Reading

ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ: ಸುಮಾರು 25 ಕೋಟಿ ರೂ. ಜಮೀನು ಪರಭಾರೆ

ನೆಲಮಂಗಲ: ಪೊಲೀಸ್ ಇಲಾಖೆಯನ್ನೆ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರಿ ಪ್ರಕರಣ ನೆಲಮಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೆ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಸ್ಪೆಂಡ್ ಆಗಿ ಮನೆಲ್ಲಿದ್ದರು ಬುದ್ದಿ ಕಲಿಯದಹೆಡ್ ಕಾನ್ಸಟೇಬಲ್ ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನದ ಪ್ರಕರಣ ದಾಖಲಾಗಿದೆ, ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ಈ […]

Continue Reading

ಕಡಲೆ ಬೆಳೆಗೆ ಸೂಕ್ತ ನಿರ್ವಹಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಕಡಲೆ ಬೆಳೆ ದ್ವಿದಳ ಹಾಗೂ ಹಿಂಗಾರು ಬೆಳೆಯಾಗಿದೆ. ಬೆಳೆಯ ಉತ್ತಮ ಇಳುವರಿಗಾಗಿ ಸಮಗ್ರ ನಿರ್ವಹಣಾ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ಕಮಲಾಪುರ ತಾಲೂಕಿನ ಶಿರಗಾಪುರ ಗ್ರಾಮದ ಈರಣ್ಣ ಬಿರಾದಾರ ಅವರ ಕಡಲೆ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಕಡಲೆ ಬೆಳೆ ಕ್ಷೇತ್ರ ಭೇಟಿ ಮತ್ತು ನಿರ್ವಹಣೆ ಕ್ರಮ” ಕಾರ್ಯಕದಲ್ಲಿ ಬೆಳೆ ವೀಕ್ಷಿಸಿ, ನಂತರ ಮಾತನಾಡಿದ ಅವರು, ಹಿಂಗಾರು […]

Continue Reading

ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ: ಬೆಚ್ಚಿಬಿದ್ದ ಗ್ರಾಮಸ್ಥರು

ಸುದ್ದಿ ಸಂಗ್ರಹ ದಾವಣಗೆರೆಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ ಕೋಲಮ್ಮನಹಳ್ಳಿ ಕಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಾಂಬ್ ಸಿಡಿದಂತೆ ಶಬ್ಧವಾಗಿದ್ದು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಕೂಡ ಯಕ್ಷ ಪ್ರಶ್ನೆಯಾಗಿದೆ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ […]

Continue Reading

ರಾಯಚೂರಿನಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಕುಸಿತ: ಇನ್ನೂ 5 ದಿನ ಮುಂದುವರಿಯಲಿದೆ ಚಳಿ ಅಬ್ಬರ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ದಾಖಲೆ ಮಟ್ಟದ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ತಂಪುಗಾಳಿಗೆ ಬಿಸಿಲು ನಾಡಿನ ಜನ ಥಂಡಾ ಹೊಡೆದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ, ಇನ್ನೂ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಚಳಿಯದ್ದೆ ಅಬ್ಬರ ಮುಂದುವರಿಯಲಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಯಚೂರಿನಲ್ಲಿ ಎರಡು ದಿನ ಹಗುರ ಮಳೆ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ರಿಂದ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 10 ರಿಂದ 7 […]

Continue Reading

ವೃದ್ಧೆ ಬದುಕಿದ್ದಾಗಲೆ ಡೆತ್‌ ಸರ್ಟಿಫಿಕೇಟ್ ಮಾಡಿಸಿ ಆಸ್ತಿ ಲಪಟಾಯಿಸಿದ ಭೂಪ ?

ಸುದ್ದಿ ಸಂಗ್ರಹ ಹಾಸನ ಮಹಿಳೆ ಬದುಕಿರುವಾಗಲೆ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ ಭೂಮಿ ಇದೆ. ಈ ಭೂಮಿಯನ್ನು ಬಾಳ್ಳುಪೇಟೆ ಗ್ರಾಮದ ಶೇಖ್‍ ಅಹಮದ್ ಎಂಬಾತ ದತ್ತು ಪುತ್ರ ಎಂದು ವಂಶ ವೃಕ್ಷ ಮಾಡಿಸಿ, 2008ರಲ್ಲೆ ಸಿದ್ದಮ್ಮ ವಿಲ್ ಮಾಡಿದಂತೆ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾನೆ. ಬಳಿಕ 2009ರ ಅ.4 […]

Continue Reading

ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ: ಗಣಿ ಸಚಿವರ ತವರಿನಲ್ಲೆ ಅಕ್ರಮ ಮರಳು ಗಣಿಗಾರಿಕೆ

ದಾವಣಗೆರೆ: ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೆ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ ಬೃಹತ್ ಪೈಪ್‌ಗಳು, ಕಲ್ಲು ಬಂಡೆಗಳನ್ನು ಬಳಸಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲಾಗಿದೆ. ಮರಳು ತೆಗೆಯಲು ನದಿಯ ದಡದಲ್ಲಿರುವ ಹತ್ತಾರು ತೆಪ್ಪಗಳು, ನದಿಯ ತಟದಲ್ಲೆ ಇರುವ ಮರಳು ಫಿಲ್ಟರ್ ಹಾಗೂ ಜರಡಿ ಬಾವಿಯಲ್ಲಿ ಕಾಣಿಸಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ […]

Continue Reading