ಪಾರಂಪರಿಕ ಸ್ಥಳಗಳಿಂದ ಇತಿಹಾಸ, ಸಂಸ್ಕೃತಿ ಉಳಿಯಲು ಸಾಧ್ಯ: ಮುಡಬಿ ಗುಂಡೇರಾವ
ಕಲಬುರಗಿ: ನಮ್ಮ ಜಿಲ್ಲೆ ಸೇರಿದಂತೆ ದೇಶದಲ್ಲಿ ಅನೇಕ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸ್ಥಳಗಳಿದ್ದು ಅವುಗಳನ್ನು ಉಳಿಸಿ, ಸಂರಕ್ಷಿಸಿ, ಅಭಿವೃದ್ಧಿಗೊಳಿಸುವುದು ಅವಶ್ಯಕವಾಗಿದೆ. ಇದರಿಂದ ನಮ್ಮ ದೇಶದ ಸಂಸ್ಕೃತಿ, ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ದೊರೆಯಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಟಪಟ್ಟರು. ನಗರದ ಬಹುಮನಿ ಕೋಟೆಯ ಆವರಣದಲ್ಲಿನ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಪರಂಪರೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಾಮಿಯಾ ಮಸೀದಿಯು […]
Continue Reading