ಪಾರಂಪರಿಕ ಸ್ಥಳಗಳಿಂದ ಇತಿಹಾಸ, ಸಂಸ್ಕೃತಿ ಉಳಿಯಲು ಸಾಧ್ಯ: ಮುಡಬಿ ಗುಂಡೇರಾವ

ಕಲಬುರಗಿ: ನಮ್ಮ ಜಿಲ್ಲೆ ಸೇರಿದಂತೆ ದೇಶದಲ್ಲಿ ಅನೇಕ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸ್ಥಳಗಳಿದ್ದು ಅವುಗಳನ್ನು ಉಳಿಸಿ, ಸಂರಕ್ಷಿಸಿ, ಅಭಿವೃದ್ಧಿಗೊಳಿಸುವುದು ಅವಶ್ಯಕವಾಗಿದೆ. ಇದರಿಂದ ನಮ್ಮ ದೇಶದ ಸಂಸ್ಕೃತಿ, ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ದೊರೆಯಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಟಪಟ್ಟರು. ನಗರದ ಬಹುಮನಿ ಕೋಟೆಯ ಆವರಣದಲ್ಲಿನ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಪರಂಪರೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಾಮಿಯಾ ಮಸೀದಿಯು […]

Continue Reading

ಕೊಲೆಯತ್ನ ಆರೋಪ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅರೆಸ್ಟ್

ಕಲಬುರಗಿ: ಕೊಲೆಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ ಅವರನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮುತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ ಆಗ್ರಹಿಸಿದ್ದರು. ಅಲ್ಲದೆ ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮುತ್ಯಾ ಕಾರು ಚಾಲಕನ […]

Continue Reading

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಾರವಾರ: ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಹಾನಗಲ್‌ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಬರುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ […]

Continue Reading

ಇದ್ದಕ್ಕಿದ್ದಂತೆ ಬಿಸಿಯಾಗ್ತಿರುವ ಮನೆಯ ಹಾಲ್‌ನ ಟೈಲ್ಸ್‌: ಬೆಚ್ಚಿಬಿದ್ದ ಜನ

ದಾವಣಗೆರೆ: ಕೆಲವೊಂದು ಘಟನೆಗಳು ವಿಜ್ಞಾನಕ್ಕೆ ಸವಾಲೆಸೆಯುವಂತಿರುತ್ತವೆ. ಅಂತಹದ್ದೆ ಒಂದು ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ರಾಜಾರಾಮ್ ಕಾಲೋನಿಯಲ್ಲಿ ನಡೆದಿದೆ. ನಗರದ ಶಿಕ್ಷಕ ಮಾರುತೇಶ್ ಅವರ ಮನೆಯಲ್ಲಿ ಹಾಲ್‌ನ ಟೈಲ್ಸ್ ಕಾದ ಕಾವಲಿಯಂತಾಗುತ್ತಿದೆ. ಇದರಿಂದ ಇಡಿ ಮನೆಯವರು ಅತಂಕದಲ್ಲಿ ಕಾಲ ಕಳೆಯುವಂತಾಗಿದೆ. ಟೈಲ್ಸ್‌ನ್ನು ಒದ್ದೆ ಬಟ್ಟೆಯಿಂದ ಒರೆಸಿದರೂ ಕೂಡ ಕಾವು ಹೆಚ್ಚಾಗುತ್ತಿದ್ದು, ಯಾವ ಕಾರಣಕ್ಕೆ ಟೈಲ್ಸ್’ಗಳು ಬಿಸಿಯಾಗುತ್ತಿವೆ ಎಂಬ ಪ್ರಶ್ನೆ ಕಾಡುತ್ತಿದೆ. ಸ್ಥಳಕ್ಕೆ ಖಗೋಳಶಾಸ್ತ್ರಜ್ಞರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

Continue Reading

ಕುಂದಾನಗರಿಯಲ್ಲಿ ಕುಳಿತು ಅಮೇರಿಕಾದ ನಾಗರಿಕರನ್ನ ವಂಚಿಸುತ್ತಿದ್ದ ಗ್ಯಾಂಗ್‌: 33 ಸೈಬರ್‌ ವಂಚಕರು ಅರೆಸ್ಟ್‌

ಬೆಳಗಾವಿ: ತಂತ್ರಜ್ಞಾನ ಬೆಳೆದಂತೆ ಆನ್‌ಲೈನ್‌ ವಹಿವಾಟು ಹೆಚ್ಚಾಗುತ್ತಲೆ ಇದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಸಾಮಾನ್ಯವಾಗಿ ಕರ್ನಾಟಕದಲ್ಲಿ ಎಲ್ಲೆ ಸೈಬರ್‌ ವಂಚನೆ ನಡೆದರೂ, ಅದರ ಹಿಂದೆ ವಿದೇಶಿಗರ ಲಿಂಕ್‌ ಇರುತ್ತಿತ್ತು. ಆದರೆ ಈಗ ಕುಂದಾನಗರಿಯಲ್ಲಿ ನಡೆದಿರೋದೆ ಬೇರೆ. ಬೆಳಗಾವಿಯಲ್ಲಿ ಕುಳಿತು ವಿಶ್ವದ ದೊಡ್ಡಣ್ಣ ಎನ್ನುವ ಅಮೇರಿಕಾದ ನಾಯಕರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಕಾಲ್ ಸೆಂಟರ್ ಹೆಸರಿನಲ್ಲಿ ಅನುಮತಿ ಪಡೆದು ವಂಚಿಸುತ್ತಿದ್ದ ಸೈಬರ್‌ ವಂಚಕರನ್ನ ಬೆಳಗಾವಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. […]

Continue Reading

ಗ್ರಂಥಾಲಯಗಳು ಜೀವಂತ ದೇವಾಲಯಗಳು

ಕಲಬುರಗಿ: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ನೀಡುವ ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಜೀವಂತ ದೇವಾಲಯ ಮತ್ತು ಬದುಕನ್ನು ಸುಂದರಗೊಳಿಸುವ ಸಾಧನಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ಸುಂಟನೂರ ಗ್ರಾಮದ ಅರಿವು ಕೇಂದ್ರವಾದ ಸಾರ್ವಜನಿಕ ಗ್ರಂಥಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ ಗ್ರಂಥಾಲಯ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಪುಸ್ತಕಗಳು, ದಿನ ಪತ್ರಿಕೆಗಳು ಓದುವ […]

Continue Reading

ತೊಗರಿ ಕಾಯಿ ಕೊರಕದ ಸಮಗ್ರ ಹತೋಟಿ ಮಾಡಿ

ಕಲಬುರಗಿ: ಅಧಿಕ ಮಳೆಯಾಗಿದ್ದರಿಂದ ಕೆಲವೆಡೆ ತೊಗರಿ ಬೆಳೆ ನಾಶವಾಗಿದೆ. ಇನ್ನೂ ಕೆಲವೆಡೆ ಬೆಳೆಗೆ ಗೊಡ್ಡು, ಹಳದಿ ಬಣ್ಣಕ್ಕೆ ತಿರುಗಿರುವುದು, ಕಪ್ಪು ಚುಕ್ಕೆ ರೋಗದ ಜೊತೆಗೆ ಕೀಟಗಳ ಬಾಧೆ ಕಂಡುಬರುತ್ತಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ರೈತರಿಗೆ ಸಲಹೆ ನೀಡಿದರು.  ಜಿಲ್ಲೆಯ ಸುಂಟನೂರ ಗ್ರಾಮದ ಹೊಲವೊಂದರಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಸಾಯಂಕಾಲ ಜರುಗಿದ ‘ತೊಗರಿ ಬೆಳೆ ಕ್ಷೇತ್ರ ಭೇಟಿ, ವೀಕ್ಷಣೆ ಹಾಗೂ ರೈತರಿಗೆ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೀಟಗಳ […]

Continue Reading

ಆರೇ ವರ್ಷಕ್ಕೆ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್‌

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ. ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ ಬಂದ್ ಆಗಿದೆ. ಹೀಗಾಗಿ ಆ ಭಾಗದ ಜನರ ದಶಕದ ಕನಸು ಆರೇ ವರ್ಷಕ್ಕೆ ಮಣ್ಣುಪಾಲಾದಂತಾಗಿದೆ. ಕಲಬುರಗಿಯಿಂದ ಬೆಂಗಳೂರು ಸಂಪರ್ಕಿಸುತ್ತಿದ್ದ ಏಕೈಕ ವಿಮಾನ ಹಾರಾಟ ಸ್ಟಾರ್ ಏರ್‌ ಸಂಸ್ಥೆ ನಿಲ್ಲಿಸಿದೆ. ಅಕ್ಟೋಬರ್‌ 15 ರಿಂದ ಸೇವೆ ಸ್ಥಗಿತಗೊಳಿಸಿದೆ. ಈಗ ಒಂದೇ ಒಂದು ವಿಮಾನವೂ ಸಹ ಕಲಬುರಗಿ […]

Continue Reading

ಕೆ-ಸೆಟ್ ಪರೀಕ್ಷೆ: ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

ಬಳ್ಳಾರಿ: ಇಂದು ಕೆ-ಸೆಟ್ ಪರೀಕ್ಷೆ ಹಿನ್ನೆಲೆ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ಮೈಮೇಲೆ ಹಾಕಿಕೊಂಡಿರೋ ದೇವರ ದಾರವನ್ನು ಸಹ ಬಿಚ್ಚಿಸಿ ಅಭ್ಯರ್ಥಿಗಳನ್ನು ಒಳಗೆ ಕಳುಹಿಸಿದ ಘಟನೆ ನಡೆದಿದೆ. ಕಿವಿಯೋಲೆ, ಮೂಗುತಿ ಹಾಗೂ ದೇವರ ದಾರ ಬಿಚ್ಚಿಸಿದ್ದಕ್ಕೆ ಕೆಲ ಪರೀಕ್ಷಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಅಸಮಾಧಾನದ ನಡುವೆಯೂ ಅನಿವಾರ್ಯವಾಗಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರು. ಇನ್ನೂ ಪರೀಕ್ಷೆ ಮುಗಿಸಿಕೊಂಡು ಹೊರಬಂದ ಬಳಿಕ ಪ್ರತಿಕ್ರಿಯೆ ನೀಡಿದ ಪರೀಕ್ಷಾರ್ಥಿಗಳು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ದ ಅಸಮಾಧಾನ ಹೊರಹಾಕಿದರು. ಕಿವಿಯೋಲೆ, ಮೂಗುತಿ ಬಿಚ್ಚಿಸಿದ್ದು […]

Continue Reading

ನಿವೃತ್ತ ಪ್ರಾಚಾರ್ಯ ಬಸವರಾಜ ಬಿರಾದಾರ ಅವರಿಗೆ ಬೀಳ್ಕೊಡುಗೆ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಬಸವರಾಜ ಬಿರಾಜದಾರ ಅವರಿಗೆ ಸತ್ಕರಿಸಿ, ಬೀಳ್ಕೊಡಲಾಯಿತು. ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಬಿರಾದಾರ ಅವರಿಗೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಬಿರಾದಾರ ಅವರಿಗೆ ಸತ್ಕರಿಸಿ, ಅವರ ಅನುಪಮ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ […]

Continue Reading