ಗಂಡನ ಮನೆಯಲ್ಲಿ ಕಿರುಕುಳ ಆರೋಪ: ನದಿಗೆ ಹಾರಿ ಪ್ರಾಣಬಿಟ್ಟ ತಾಯಿ, ಮಗಳು

ಹಾವೇರಿ: ಪತಿ ಕುಟುಂಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು, ಮಹಿಳೆ ತನ್ನ ಮಗಳ ಜೊತೆ ವರಾದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಕಾವ್ಯಾ (12) ಆತ್ಮಹತ್ಯೆಗೆ ಶರಣಾದ ತಾಯಿ, ಮಗಳು. ಗಂಡನ ಮನೆಯಲ್ಲಿ ದಿನನಿತ್ಯ ಭಿನ್ನಾಭಿಪ್ರಾಯ ಹಾಗೂ ಕಲಹಗಳು ನಡೆಯುತ್ತಿದ್ದವು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರವಿವಾರ (ಅ.19) ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. […]

Continue Reading

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅನುದಾನಿತ […]

Continue Reading

ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ

ಕಲಬುರಗಿ: ಸೇಡಂನಲ್ಲಿ ರವಿವಾರ ನಡೆದ ಆರ್‌ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕೆ ಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದರು. […]

Continue Reading

ಜಗತ್ತಿನ ಅಪರೂಪದ ಪ್ರಕರಣಕ್ಕೆ ಸುಖಾಂತ್ಯ ಹಾಡಿದ ಕಿಮ್ಸ್ ವೈದ್ಯರು: ಮಗು ಮನೆಗೆ

ಹುಬ್ಬಳ್ಳಿ: ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ನವಜಾತ ಗಂಡು ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾದ ಹಿನ್ನಲೆ ಡಾ. ರಾಜಶಂಕರ್ ನೇತೃತ್ವದ ವೈದ್ಯರ ತಂಡ ಅಕ್ಟೋಬರ್ 8ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿತ್ತು. ಬಳಿಕ ಮಗುವನ್ನು ತುರ್ತು ನಿಘಾ ಘಟಕದಲ್ಲಿಡಲಾಗಿತ್ತು. ಈಗ ಮಗು ಸಂಪೂರ್ಣವಾಗಿ ಗುಣಮುಖವಾಗಿರುವ ಹಿನ್ನೆಲೆಯಲ್ಲಿ ತಾಯಿ, ಮಗುವನ್ನು ಮನೆಗೆ ಕಳುಹಿಸಿಕೊಡಲಾಗಿದೆ. ಸೆಪ್ಟೆಂಬರ್​ 23ರಂದು ಹೆರಿಗೆಗೆಂದು ದಾಖಲಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ […]

Continue Reading

ರೈತರು ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡಿ

ಕಲಬುರಗಿ: ಹಿಂಗಾರು ಬಿತ್ತನೆ ಕಾಲ ಪ್ರಾರಂಭವಾಗಿದ್ದು, ಪ್ರಮುಖವಾಗಿ ಜೋಳ, ಕಡಲೆ, ಕುಸುಬೆ, ಗೋದಿ ಬಿತ್ತನೆ ಮಾಡಲಾಗುತ್ತದೆ. ರೈತರು ಬೀಜದ ಪ್ರಮಾಣ, ರಸಗೊಬ್ಬರ ಬಳಕೆ, ಬಿತ್ತನೆಯ ವಿಧಾನ ಅನುಸರಿಸುವ ಮೂಲಕ ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡುವುದು ಅಗತ್ಯವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನಿಡಿದರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ಇಟಗಿಯವರ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರೈತರಿಗೆ ಹಿಂಗಾರು ಬಿತ್ತನೆಯ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೆ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ

ಹಾಸನ: ಹಾಸನಾಂಬ ದರ್ಶನೋತ್ಸವ ಆರಂಭಗೊಂಡು ಕೇವಲ ಒಂದೆ ವಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇಲ್ಲಿಯವರೆಗೂ 15 ಲಕ್ಷ 30 ಸಾವಿರ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಕೇವಲ 8 ದಿನದಲ್ಲಿ ದೇವಾಲಯಕ್ಕೆ 10.5 ಕೋಟಿ ರೂ. ಆದಾಯ ಹರಿದು ಬಂದಿದ್ದು ದಾಖಲೆಯಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿರುವುದರಿಂದ ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿದ್ದಾರೆ. ಇದರಿಂದಾಗಿ ಭಕ್ತರಲ್ಲಿ ಸಂತಸ ಮೂಡಿದೆ. ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೆ ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ. […]

Continue Reading

ನಕಲಿ ಅಂಗವಿಕಲರ ಕಾರ್ಡ್‌: ಶಿರಾ ಆಸ್ಪತ್ರೆ ನಂಟು ?

ಶಿರಾ: ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಅಂಗವಿಕಲರ ಕೋಟಾದಡಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದ ಜಯದೇವ್ ಎಂಬ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗವಿಕಲರ (ಯುಡಿ ಐಡಿ) ಕಾರ್ಡ್ ವಿತರಿಸಿದ ಇಲ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಡೇಟಾ ಆಪರೇಟರ್ ನಾಗರಾಜು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾದ ಕೆಲವು ವೈದ್ಯರ ವಿಚಾರಣೆ ನಡೆಸಿದ್ದಾರೆ. ಹಿರಿಯೂರು ತಾಲೂಕಿನ ಜಯದೇವ್, ಶಿರಾ ತಾಲೂಕಿನ‌ ಮದ್ದೇನಹಳ್ಳಿ ಗ್ರಾಮದ ವಿಳಾಸ ನೀಡಿ ಅಂಗವಿಕಲರ ಕಾರ್ಡ್‌ ಪಡೆದಿರುವುದು ತನಿಖೆಯ […]

Continue Reading

PSI ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್: ಫೋಟೋ ವೈರಲ್ ಆಗ್ತಿದ್ದಂತೆ ಸಸ್ಪೆಂಡ್

ಯಾದಗಿರಿ: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆಯ ಪಿಎಸ್‌ಐ ಆಗಿರುವ ರಾಜಶೇಖರ್ ರಾಠೋಡ್ ಅವರನ್ನು ಅಮಾನತು ಮಾಡಿದ್ದಾರೆ. ಪಿಎಸ್‌ಐ ಆಗಿ ಹತ್ತು ವರ್ಷ ಪೊರೈಸಿದ್ದಕ್ಕೆ ಅದೆ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸೆಲೆಬ್ರೇಷನ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿತ್ತು. […]

Continue Reading

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಒಂದೆ ದಿನಕ್ಕೆ 1 ಕೋಟಿ ಆದಾಯ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ 2ನೇ ದಿನವಾದ ಇಂದು ಸಾವಿರಾರು ಭಕ್ತರು ಮುಂಜಾನೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪಾವನರಾದರು. ಕೆಲವರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾದು ನಿಂತಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಸಹಜವಾಗಿಯೇ ಹೆಚ್ಚುಗಿತ್ತು. 1 ಸಾವಿರ ಟಿಕಟ್‌ನ ಸಾಲು ಖಾಲಿ ಇದ್ದರೆ, 300 ರೂ. ವಿಶೇಷ ದರ್ಶನದ ಸರತಿ ಸಾಲು ಸಂಪೂರ್ಣ ಭರ್ತಿಯಾಗಿದ್ದವು. ಸಚಿವ ಶಿವರಾಜ್ ತಂಗಡಗಿ, ಶಾಸಕ […]

Continue Reading

ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜುರಾತಿಗೆ ಸಂಪುಟ ಸಭೆ ಅನುಮೋದನೆ: ನೌಕರರ ಸಂಘ ಹರ್ಷ

ಕಲಬುರಗಿ: ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಡಿಶಾ ಸರ್ಕಾರ 2024ರಲ್ಲಿ ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜಾ ಸೌಲಭ್ಯ ಜಾರಿಗೆ ತಂದಿದ್ದು, ಇದೆ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಗೆ ತರಲು ಕಳೆದ ಜನವರಿ 10 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ […]

Continue Reading