ಮಾನವ ಸಂಪನ್ಮೂಲ ಸಂಸ್ಥೆಯ ಬೆನ್ನೆಲುಬು

ಕಲಬುರಗಿ: ಯಾವುದೆ ಒಂದು ಕಂಪನಿ ಅಥವಾ ಸಂಸ್ಥೆಗೆ ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದರಿಂದ, ವೇತನ, ಸಂಘರ್ಷ ಪರಿಹಾರ, ಉದ್ಯೋಗಿಗಳಿಗೆ ತರಬೇತಿ, ಕಾನೂನು ಸಮಸ್ಯೆಗಳನ್ನು ನಿರ್ವಹಿಸುವುದು, ಉದ್ಯೋಗಿಗಳನ್ನು ಒಗ್ಗೂಡಿಸುವುದು ಸೇರಿದಂತೆ ಮುಂತಾದ ಪ್ರಮುಖ ಕಾರ್ಯಗಳು ಮಾಡುವ ಮಾನವ ಸಂಪನ್ಮೂಲ ವಿಭಾಗವು ಸಂಸ್ಥೆಯ ಬೆನ್ನೆಲುಬಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ಅಂತಾರಾಷ್ಟ್ರೀಯ ಮಾನವ ಸಂಪನ್ಮೂಲ […]

Continue Reading

ನೆಲದ ಸಂಸ್ಕೃತಿ ಸಾರುವ ಹೊಡಲ್ ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಸಾರುವ ಹೊಡಲ ಗ್ರಾಮದ ರಾಮಲಿಂಗೇಶ್ವರ ದೇವಾಲಯ ಮತ್ತು ಸ್ಮಾರಕಗಳ ಕೊಡುಗೆ ಅಪಾರವಾಗಿವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಕಮಲಾಪುರ ತಾಲೂಕಿನ ಹೊಡಲ್ ಗ್ರಾಮದ ರಾಮಲಿಂಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-15ರಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ನಾಡಿನ ಭವ್ಯ ಪರಂಪರೆಯ ಪ್ರತೀಕವಾದ ಸ್ಮಾರಕಗಳ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಇಲ್ಲಿಯ ಒಂದೊಂದು ಕಲ್ಲು, ಶಿಲ್ಪಗಳು, […]

Continue Reading

ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ

ಕಲಬುರಗಿ: ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿರುವ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಹೊರವಲಯ ಉಪಳಾಂವನ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ಡಾ.ಗಿರೀಶ್ ಕಾರ್ನಾಡ್‌ರ 87ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ನಾಡಿಗೆ ಕನ್ನಡ ಭಾಷೆಯನ್ನು ಬೋಧಿಸಿದ ಬೋಧನ ಗ್ರಾಮ: ಮುಡುಬಿ ಗುಂಡೇರಾವ

ಕಲಬುರಗಿ: ತಾಲೂಕಿನ ಬೋಧನ ಗ್ರಾಮವು ಪ್ರಾಚೀನ ಕಾಲದಲ್ಲಿ ‘ಸರಸ್ವತಿಪುರ’ ಎಂದು ನಾಡಿಗೆ ಚಿರಪರಿಚಿತವಾಗಿದೆ. ನಾಡಿಗೆ ಕನ್ನಡ ಭಾಷೆಯನ್ನು ಬೋಧಿಸಿದ ‘ಬೋಧನ’ ಗ್ರಾಮವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಬೋಧನ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-14ರಲ್ಲಿ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಪ್ರಾಚೀನ ಕಾಲದಲ್ಲಿ ಕನ್ನಡ ವಿಷಯ […]

Continue Reading

ಶಿಕ್ಷಕರಿಗೆ ಕಿರುಕುಳ: ಬಿಇಒ ಅಮಾನತು

ಬೀದರ್‌: ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌ ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತುಗೊಳಿಸಿದ್ದಾರೆ. ಟಿ.ಆರ್‌ ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್‌ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ. ಏಳನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ […]

Continue Reading

ಆರೋಗ್ಯಯುತ ಜೀವನಶೈಲಿಯಿಂದ ಅಧಿಕ ರಕ್ತದೊತ್ತಡ ದೂರ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ಅನಾರೋಗ್ಯಕರ ಜೀವನಶೈಲಿಯಿಂದ ಬೊಜ್ಜು, ಸ್ಥೂಲಕಾಯದ ಪ್ರಮಾಣ ಹೆಚ್ಚಾಗಿದೆ. ಒತ್ತಡ ಜೀವನ ಸೇರಿದಂತೆ ಮುಂತಾದ ಕಾರಣದಿಂದ ಅಧಿಕ ರಕ್ತದೊತ್ತಡವಿರುವವರ ಸಂಖ್ಯೆ ಹೆಚ್ಚಾಗುತ್ತಾದೆ. ಇದು ಉಸಿರಾಟ ಸಂಬಂಧಿತ ಸಮಸ್ಯೆಗಳೊಂದಿಗೆ ಹೃದಯಘಾತಕ್ಕೆ ಕಾರಣವಾಗುವ ಮೂಲಕ ಜೀವಕ್ಕೆ ಅಪಾಯಕಾರಿಯಾಗಿದೆ. ಆರೋಗ್ಯಯುತ ಜೀವನಶೈಲಿಯಿಂದ ಅಧಿಕ ರಕ್ತದೊತ್ತಡದಿಂದ ದೂರವಿರಲು ಸಾಧ್ಯ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವ ಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ದೂರಸಂಪರ್ಕ ಕ್ಷೇತ್ರದ ಕೊಡುಗೆ ಅಪಾರ

ಕಲಬುರಗಿ: ನಮ್ಮ ದೇಶ ಸೇರಿದಂತೆ ಇಡಿ ವಿಶ್ವದಲ್ಲಿ ಉಂಟಾದ ದೂರ ಸಂಪರ್ಕ ಕ್ಷೇತ್ರದಲ್ಲಿನ ಕ್ರಾಂತಿಯಿಂದಾಗಿ, ಪ್ರಸ್ತುತವಾಗಿ ಜಗತ್ತೆ ಒಂದು ಚಿಕ್ಕ ಗ್ರಾಮವೆಂಬ ಪರಿಕಲ್ಪನೆ ಮೂಡಲು ಸಾಧ್ಯವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಸಾಧ್ಯವಾಗಿದ್ದು, ದೂರಸಂಪರ್ಕ ಕ್ಷೇತ್ರದ ಕ್ರಾಂತಿಯಿಂದಾಗಿ ರಾಷ್ಟ್ರ ತೀವ್ರಗತಿಯಲ್ಲಿ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಅಪಾರವಾದ ಕೊಡುಗೆ ನೀಡಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಜೆ.ಆರ್ ನಗರದಲ್ಲಿನ ‘ಶ್ರೇಯಸ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಏರ್ಪಡಿಲಾಗಿದ್ದ ‘ಅಂತಾರಾಷ್ಟ್ರೀಯ ದೂರಸಂಪರ್ಕ ದಿನಾಚರಣೆ’ […]

Continue Reading

ಡೆಂಗ್ಯೂ ಜ್ವರದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣು, ಬಾಯಿ, ವಸಡು, ಕೀಲು ನೋವು, ಮೂಗಿನಿಂದ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತದ ಗುರುತು ಕಂಡುಬಂದರೆ ಇವು ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ಹೀಗಾಗಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿ ಡೆಂಗ್ಯೂ ದೃಢಪಟ್ಟರೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದ್ದಾರೆ. ನಗರದ ಶೇಖರೋಜಾದ ಶಹಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶುಕ್ರವಾರ […]

Continue Reading

ಸರಣಿ ಕಳ್ಳತನ ಪ್ರಕರಣದ ಆರೋಪಿಯ ಬಂಧನ: 4.40 ಲಕ್ಷ ರೂ. ಮೌಲ್ಯದ ನಗ-ನಗದು ವಶ

ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಪೊಲೀಸ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಝಾಮ ಗೇಟ್ ವಾಡಿ ನಿವಾಸಿ ಶೇಖ್ ಪಾಶ ಬಂಧಿತ ಆರೋಪಿ. ಈತನಿಂದ 4,40,400 ರೂ. ಮೌಲ್ಯದ ಬೆಳ್ಳಿ-ಚಿನ್ನದ ಆಭರಣಗಳು ಹಾಗೂ ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಹಿಂದೆ […]

Continue Reading

ಜಾಗತಿಕ ಕುಟುಂಬ ವ್ಯವಸ್ಥೆಯ ಪರಿಕಲ್ಪನೆ ಬೆಳೆಯಲಿ: ಎಚ್.ಬಿ ಪಾಟೀಲ

ಕಲಬುರಗಿ: ವಿಶ್ವದಲ್ಲಿರುವ ಎಲ್ಲರು ಒಂದೆ ಕುಟುಂಬದ ಸದಸ್ಯರು, ನಾವೆಲ್ಲರು ಒಂದೆ ಎಂಬ ಜಾಗತಿಕ ಕುಟುಂಬ ವ್ಯವಸ್ಥೆಯ ಪರಿಕಲ್ಪನೆ ಬೆಳೆದರೆ ವಿಶ್ವದೆಲ್ಲೆಡೆ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯ ಎಂದು ಚಿಂತಕ ಎಚ್.ಬಿ ಪಾಟೀಲ ಆಶಯ ವ್ಯಕ್ತಪಡಿಸಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಕುಟುಂಬ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಕುಟುಂಬವು ಸಮಾಜದ ಪ್ರಮುಖ ಘಟಕವಾಗಿದ್ದು, ಪ್ರೀತಿ, ಪ್ರೇಮ, ಬಾಂಧವ್ಯ, ಸಂಬಂಧದ ಬೆಸುಗೆಯಾಗಿದೆ. ಇಂದು ಕಾರಣಾಂತರಗಳಿಂದ ವಿಭಜನೆಯಾಗಿ, […]

Continue Reading