ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಸೀಲ್ದಾರ್‌ಗೆ 4 ವರ್ಷ ಜೈಲು

ಸುದ್ದಿ ಸಂಗ್ರಹ ಕಲಬುರಗಿ1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಸೀಲ್ದಾರ್‌ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂ ದಂಡ ವಿಧಿಸಿದೆ. 2017ರಲ್ಲಿ ಅಫಜಲಪುರದ ತಹಸೀಲ್ದಾರ್‌ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ದೂರುದಾರನಿಂದ ಲಂಚದ ಹಣ ಪಡೆದು ತಹಸೀಲ್ದಾರ್‌ಗೆ ತಲುಪಿಸಿದ್ದ ಶಿವಾನಂದ ಜಮಖಂಡಿ ಶಿಕ್ಷೆಗೆ ಗುರಿಯಾದವರು. ಶಶಿಕಲಾ ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವಾರವಷ್ಟೆ […]

Continue Reading

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

ಸುದ್ದಿ ಸಂಗ್ರಹ ಶಿವಮೊಗ್ಗಎಸ್‌ಐಆರ್‌ ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರ ಜೊತೆ ಕೆಲಸ ಮಾಡುತ್ತಿದ್ದ ಗ್ರಾಮ ಆಡಳಿತ […]

Continue Reading

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ: ಮೂವರು ಕಳ್ಳಿಯರ ಬಂಧನ

ಸುದ್ದಿ ಸಂಗ್ರಹ ಉಡುಪಿಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೆ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ […]

Continue Reading

ಜನರಿಗೆ ಭಯ ಹುಟ್ಟಿಸುವ ರೀತಿ ಬಂದೂಕು ಹಿಡಿದು ರೀಲ್ಸ್‌: ಮೂವರು ಯುವಕರ ಬಂಧನ

ಸುದ್ದಿ ಸಂಗ್ರಹ ಬಳ್ಳಾರಿಜನರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ನಕಲಿ ಬಂದೂಕು ಹಿಡಿದು ರೀಲ್ಸ್‌ ಮಾಡಿದ್ದ ಮೂವರು ಯುವಕರನ್ನು ಬಳ್ಳಾರಿಯ ಕೌಲ್‌ ಬಜಾರ್‌ ಪೊಲೀಸರು ಬಂಧಿಸಿದ್ದಾರೆ. ಸಾಹಿಲ್, ವಿಕಾಸ್ ಮತ್ತು ಅಭಿಷೇಕ್ ಬಂಧಿತ ಆರೋಪಿಗಳು. ನಗರದ ಬಂಡಿಹಟ್ಟಿ ಬಳಿಯ ಹೆಚ್‌ಎಲ್‌ಸಿ ಕಾಲುವೆ ಮೇಲೆ ಭಯ ಹುಟ್ಟಿಸುವ ರೀತಿ ಆರೋಪಿಗಳು ರೀಲ್ಸ್ ಮಾಡಿದ್ದರು. ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಪ್ರಕರಣ […]

Continue Reading

ಪೋಕ್ಸೋ ಆರೋಪಿ ಮತ್ತೆ ಪೊಲೀಸರ ಬಲೆಗೆ: ಮಹಾರಾಷ್ಟ್ರಕ್ಕೆ ಪರಾರಿಯಾಗುವ ಮುನ್ನವೇ ಸೆರೆ

ಸುದ್ದಿ ಸಂಗ್ರಹ ಕಲಬುರಗಿಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಮಂಜುನಾಥ್ ಕೊನೆಗೂ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ತೆಲ್ಲೂರು ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌.ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ್‌ನ್ನು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಅಫಜಲಪುರಕ್ಕೆ ಕರೆತರಲಾಗಿತ್ತು. ಆದರೆ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಆತ ಪೊಲೀಸರ […]

Continue Reading

ಜವಳಿ ಪಾರ್ಕ್ ಅಭಿವೃದ್ಧಿಗೆ ಕ್ರಮವಹಿಸಲು ಸಂಪುಟ‌ ನಿರ್ಣಯ

ಸುದ್ದಿ ಸಂಗ್ರಹ ಕಲಬುರಗಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷೆಯ ಜವಳಿ ಪಾರ್ಕ್‌ ಅನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಲು ಕ್ರಮ ವಹಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 1,000 ಎಕರೆ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಈ ಜವಳಿ ಪಾರ್ಕ್ ಸುಮಾರು 1,700 ಕೋಟಿ ಯೋಜನಾ ಮೊತ್ತದೊಂದಿಗೆ ಅಭಿವೃದ್ಧಿಪಡಿಸಲಾಗುವುದು. 320 ಕೋಟಿ ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ ಕಾರ್ಯ ಕೆಐಎಡಿಬಿ ಕೈಗೆತ್ತಿಕೊಳ್ಳಲಿದೆ. ಕಲಬುರಗಿಯ ನದಿಸಿನ್ನೂರು, […]

Continue Reading

ಗೃಹ ಜ್ಯೋತಿ ದಾಖಲೆ ಪರಿಶೀಲನೆ ಆರಂಭ, ಗ್ರಾಹಕರು ಸಹಕರಿಸಬೇಕು

ಸುದ್ದಿ ಸಂಗ್ರಹ ಕಲಬುರಗಿಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಅಭಿಯಾನ ಆರಂಭವಾಗಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಫಲಾನುಭವಿಗಳ ಗುರುತು ಮತ್ತು ದಾಖಲೆಗಳನ್ನು ಪರಿಶೀಲಿಸುವರು. ಅಗತ್ಯ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವರು. ಘೋಷಣಾ ಪತ್ರವನ್ನೂ ಭರ್ತಿ ಮಾಡಿಸಿಕೊಂಡು ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸುವರು. ಪರಿಶೀಲನೆ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ […]

Continue Reading

ಹೆಂಡತಿ ಜಗಳವಾಡಿ ತವರಿಗೆ ಹೋಗಿದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಪತಿ

ಸುದ್ದಿ ಸಂಗ್ರಹ ಗದಗಗಂಡ-ಹೆಂಡತಿ ಜಗಳ ಕೆಲವೊಮ್ಮೆ ದೊಡ್ಡ ಅವಾಂತರಕ್ಕೂ ಕಾರಣವಾಗುತ್ತದೆ. ಗದಗ ಜಿಲ್ಲೆಯಲ್ಲಿ ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಜೀರ್ ಸಾಬ್ ಟವರ್ ಏರಿದ ವ್ಯಕ್ತಿ. ನಜೀರ್ ಸಾಬ್ ಮತ್ತು ಅವರ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಈ ಬಾರಿಯೂ ಜಗಳವಾದ ಬಳಿಕ ಪತ್ನಿ ತವರು ಮನೆಗೆ ಹೋಗಿದ್ದಳು. […]

Continue Reading

ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಸ್ನೇಹಿತನ ಬರ್ಬರ ಹತ್ಯೆ: ಆರೋಪಿ ಅಂದರ್‌

ಸುದ್ದಿ ಸಂಗ್ರಹ ಬೆಳಗಾವಿಗಂಡು ಮಗು ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಣಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ ದುರ್ದೈವಿ. ಈತನ ಗೆಳೆಯ ವಿಶ್ವನಾಥ ಪೂಜೇರಿ ಕೊಲೆಗೈದ ಆರೋಪಿ. ಇಬ್ಬರು ಮದ್ಯದ ಅಮಲಿನಲ್ಲಿ ಗ್ರಾಮದ ಕಟ್ಟೆಯಲ್ಲಿ ಕುಳಿತು ಹರಟೆಯಲ್ಲಿ ತೊಡಗಿದ್ದರು. ಆಗ ಗಂಡು ಮಗು ಹುಟ್ಟಿದಕ್ಕೆ ವಿಶ್ವನಾಥ್ ಬಳಿ ಹಣಮಂತಪ್ಪ ಪಾರ್ಟಿ ಕೇಳಿದ್ದ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು […]

Continue Reading

ಫೋಟೊ ತೆಗೆಯಲು ಹೋಗಿ ಒಂದೆ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ

ಸುದ್ದಿ ಸಂಗ್ರಹ ಮಂಡ್ಯಫೋಟೊ ತೆಗೆಯಲು ಹೋಗಿ ಒಂದೆ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು. ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ ಐವರ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ […]

Continue Reading