ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಸುದ್ದಿ ಸಂಗ್ರಹ ಚಾಮರಾಜನಗರನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಮೇ.10 ರಂದು ರವಿವಾರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೆ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೆ ಕಳುಹಿಸಲು ಅಧಿಕಾರಿಗಳ ತೀರ್ಮಾನಿಸಿದ್ದಾರೆ. […]

Continue Reading

ನಾಗಮಲೆಗೆ ಪಾದಯಾತ್ರೆ ಹೊರಟಿದ್ದ ಬಾಲಕ ಚಿರತೆ ದಾಳಿಗೆ ಬಲಿ

ಸುದ್ದಿ ಸಂಗ್ರಹ ಚಾಮರಾಜನಗರ ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಬಾಲಕನನ್ನು ಚಿರತೆ (ಪೋಷಕರ ಕಣ್ಣೆದುರಲ್ಲೆ) ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕುಟುಂಬದ 10 ಮಂದಿ ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, […]

Continue Reading

ಕಲಬುರಗಿ: ಮೇ ನಲ್ಲಿಯೇ ಎರಡು ತಿಂಗಳ ಅಕ್ಕಿ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿಸರ್ಕಾರದ ನಿರ್ದೇಶನದಂತೆ ಪ್ರಸಕ್ತ ಮೇ ಹಾಗೂ ಜೂನ್ ಎರಡು ತಿಂಗಳ ಆಹಾರ ಧಾನ್ಯಗಳನ್ನು ಮೇ ತಿಂಗಳಲ್ಲೆ ವಿತರಿಸಲಾಗುತ್ತಿದ್ದು, ಪಡಿತರದಾರರು ಎರಡು ಬಾರಿ ಬಯೋಮೆಟ್ರಿಕ್ ನೀಡಿ ಪಡಿತರ ಧಾನ್ಯ ಪಡೆದುಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿಯಂತೆ ಒಟ್ಟು 70 ಕೆ.ಜಿ ಅಕ್ಕಿ ಮತ್ತು ಬಿಪಿಎಲ್ ಕಾರ್ಡ್‌ ಹೊಂದಿದ ಪ್ರತಿ ಸದಸ್ಯರಿಗೆ ತಲಾ 10 […]

Continue Reading

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ: 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಸುದ್ದಿ ಸಂಗ್ರಹ ಬೆಳಗಾವಿಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಮೊದಲು ಕಳ್ಳತನದ […]

Continue Reading

ರಕ್ತ ಸಂಬಂಧವನ್ನೆ ಮರೆತು ಮದುವೆಯಾದ ಅಕ್ಕ ತಮ್ಮ

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಕ್ತಸಂಬಂಧದ ಮನ್ನಣೆಯನ್ನೆ ಮರೆತು ಅಕ್ಕ-ತಮ್ಮ ಹಸೆಮಣೆ ಏರಿರುವ ವಿಲಕ್ಷಣ ಘಟನೆ ನಡೆದಿದೆ. ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಈಗ ಸಪ್ತಪದಿ ತುಳಿಯುವ ಮೂಲಕ ಸಾಮಾಜಿಕ ಚರ್ಚೆಗೆ ಗ್ರಾಸವಾಗಿದ್ದಾರೆ. ದೇವನಹಳ್ಳಿಯ ಸಾವಕನಹಳ್ಳಿ ಮೂಲದ ಶಶಿಕಲಾ ಮತ್ತು ಹೊಸಕೋಟೆಯ ಪ್ರವೀಣ್ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಅಂದರೆ ವರಸೆಯಲ್ಲಿ ಶಶಿಕಲಾ ಮತ್ತು ಪ್ರವೀಣ್ ಅಕ್ಕ-ತಮ್ಮನಾಗಬೇಕು. ಆದರೆ ಈ ಸಂಬಂಧದ ಗಡಿಯನ್ನು ಮೀರಿ […]

Continue Reading

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್: ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ

ಸುದ್ದಿ ಸಂಗ್ರಹ ಯಾದಗಿರಿಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ, ವಿಜಯಶ್ರೀ […]

Continue Reading

ಬೀದರ್: 2.50 ಲಕ್ಷ ರೂ ಲಂಚ ಪಡೆಯುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಸೆರೆ  

ಸುದ್ದಿ ಸಂಗ್ರಹ ಜನವಾಡ  ಮನೆಯ ಮ್ಯುಟೇಶನ್ ನೀಡಲು 2.50 ಲಕ್ಷ ರೂ ಲಂಚ ಪಡೆಯುತ್ತಿದ್ದ ಬೀದರ್ ತಾಲೂಕಿನ ಮರಕುಂದಾ ಗ್ರಾಮ ಆಡಳಿತಾಧಿಕಾರಿ ಶಿವಕುಮಾರ ಅವರ ಸಹಚರ ಶರಣಯ್ಯ ಸ್ವಾಮಿ ಮಂಗಳವಾರ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.   ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಅವರು ಮನೆಯ ಮ್ಯುಟೇಶನ್‌ಗಾಗಿ ಗ್ರಾಮ ಆಡಳಿತಾಧಿಕಾರಿ ಸಂಪರ್ಕಿಸಿದ್ದರು. ಇದಕ್ಕಾಗಿ ಶಿವಕುಮಾರ ಹಾಗೂ ಶರಣಯ್ಯ ಸ್ವಾಮಿ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಮಹಾದೇವ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ […]

Continue Reading

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

ಸುದ್ದಿ ಸಂಗ್ರಹ ಹಾಸನಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಮತ್ತು ಸಿಬ್ಬಂದಿ […]

Continue Reading

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸುದ್ದಿ ಸಂಗ್ರಹ ಚಿಕ್ಕಮಗಳೂರುಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. […]

Continue Reading

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

ಸುದ್ದಿ ಸಂಗ್ರಹ ಚಿಕ್ಕಮಗಳೂರುಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎನ್‌ ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಗೌರವಕುಮಾರ್ ಶೆಟ್ಟಿ ಪ್ರಮಾಣ ಪತ್ರ ನೀಡಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ನನ್ನನ್ನು ಗೆಲ್ಲಿಸಿದ್ದರು. ಆದರೆ ಇಲ್ಲಿಯ ಕೆಲವರು ಸೋಲಿಸಿದ್ದರು. ಕಾನೂನಿನ ಹೋರಾಟದ ಮೂಲಕ ನನಗೆ ಜಯಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಅವರು, ಟ್ಯಾಂಪರಿಂಗ್ ಆರೋಪದಡಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ಠಾಣಾ ವ್ಯಾಪ್ತಿಗೆ […]

Continue Reading