ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

ಸುದ್ದಿ ಸಂಗ್ರಹ ಶಿವಮೊಗ್ಗ ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ದಾವಣಗೆರೆಯಿಂದ ಭದ್ರಾವತಿಗೆ ಬಸ್ ಬರುತ್ತಿತ್ತು. ಕಾಗೆಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇಂದು ಮಧ್ಯಾಹ್ನ ಸುಮಾರು 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ‌, ಕಂಡಕ್ಟರ್‌ ಸೇರಿ ಒಟ್ಟು 35 ಜನ ಪ್ರಯಾಣಿಕರು […]

Continue Reading

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: 600 ಚೀಲಗಳಿದ್ದ ಲಾರಿ ಜಪ್ತಿ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು  ಪೊಲೀಸರು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲಾರಿಯನ್ನು ಹಿಂಬಾಲಿಸಿ, ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಂದಾಜು 8 ಲಕ್ಷ ರೂ. ಮೌಲ್ಯದ 30 ಟನ್ ಪಡಿತರ ಅಕ್ಕಿಯಿದ್ದ 600 ಚೀಲಗಳನ್ನು ಪೊಲೀಸರು […]

Continue Reading

ಸೈಬರ್‌ ವಂಚಕರ ಖೆಡ್ಡಾಕ್ಕೆ ಬಿದ್ದು ಕೋಟಿ ರೂಪಾಯಿ ಕಳೆದುಕೊಂಡ ಭೂಪ

ಸುದ್ದಿ ಸಂಗ್ರಹ ಚಿಕ್ಕಮಗಳೂರು ಕಡೂರು ತಾಲೂಕಿನ ಶಿವಪುರ ಗ್ರಾಮದ ವ್ಯಕ್ತಿಯೊಬ್ಬ ಅಲ್ಪ ಅವಧಿಯಲ್ಲಿ ಹೆಚ್ಚಿನ ಲಾಭ ಮಾಡುವ ಆಸೆಗೆ ಬಿದ್ದು, ಆನ್‌ಲೈನ್‌ ಟ್ರೇಡಿಂಗ್‍ ನಂಬಿ 1,28,10,000 ರೂ. ಹಣ ಕಳೆದುಕೊಂಡಿದ್ದಾನೆ. ಗ್ರಾಮದ ಕಲ್ಲೇಗೌಡ ಹಣ ಕಳೆದುಕೊಂಡ ನತದೃಷ್ಟ. ಈತ ಫೇಸ್ಬುಕ್‌ನಲ್ಲಿ ಟ್ರೇಡಿಂಗ್ ಲಿಂಕ್ ನೋಡಿದ್ದ. ಅದನ್ನ ಕ್ಲಿಕ್‌ ಮಾಡಿ ಬಳಿಕ ವಾಟ್ಸಾಪ್‌ನಲ್ಲಿ ಗ್ರೂಪ್‌ ಒಂದಕ್ಕೆ ಸೇರಿದ್ದ. ಅಲ್ಲಿಂದ ಟ್ರೇಡಿಂಗ್ ಲಿಂಕ್‍ನಲ್ಲಿ ಅಕೌಂಟ್ ತೆರೆದಿದ್ದ. ಆರಂಭದಲ್ಲಿ 60 ಸಾವಿರ ರೂ. ಹಣ ಹಾಕಿದ್ದ. ಈ ವೇಳೆ 17,800 ರೂ. […]

Continue Reading

ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟ: ಪ್ರತ್ಯೇಕ ಪ್ರಕರಣಗಳಲ್ಲಿ 69 ಲಕ್ಷ ಮೌಲ್ಯದ ವಸ್ತು ಜಪ್ತಿ, ನಾಲ್ವರು ಅರೆಸ್ಟ್

ಸುದ್ದಿ ಸಂಗ್ರಹ ಬೀದರ್ ಜಿಲ್ಲೆಯಲ್ಲಿ ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿ, 69 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಹೈದ್ರಾಬಾದ್‌ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. 83 ಕೆ.ಜಿ 670 ಗ್ರಾಂನ ಒಟ್ಟು 41 ಲಕ್ಷ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಓರ್ವ ಆರೋಪಿ ಬಂಧಿಸಿದ್ದು, ಇನ್ನೊರ್ವ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಮನ್ನಳ್ಳಿ ಪೊಲೀಸ್ […]

Continue Reading

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ: ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

ಸುದ್ದಿ ಸಂಗ್ರಹ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ಹಾಗೂ ಮನೆಯ ಮುಂಭಾಗ ಮರಗಳು ಹಾಗೂ ವಿದ್ಯುತ್ ಕಂಬಗಳು ಬಿದ್ದಿವೆ. ಮಳೆ ಬೀಳುವ ಸಮಯದಲ್ಲಿ ಜನರು ಇಲ್ಲದಿದ್ದರಿಂದ ಭಾರಿ ಅನಾಹುತಗಳು ತಪ್ಪಿವೆ. ವಿದ್ಯುತ್ ಕಂಬಗಳು ಬಿದ್ದ ಹಿನ್ನೆಲೆ ವಿದ್ಯುತ್ ವ್ಯತ್ಯಯ ಉಂಟಾಗಿ ಜನರಿಗೆ ಸಮಸ್ಯೆ ಉಂಟಾಯಿತು. ಅಲ್ಲದೆ ರಸ್ತೆಗಳ ಮೇಲೆ ಕಂಬಗಳು […]

Continue Reading

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೆನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಸುದ್ದಿ ಸಂಗ್ರಹ ಕಾರವಾರ ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೆನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆಹೆರಿಗೆ ಮಾಡಿದರೆ ಯಾಕೆ ಹಣ ಪಡೆಯುತ್ತಿರಿ ಎಂದು ಸಭೆಯಲ್ಲಿ ಶಾಸಕ […]

Continue Reading

ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಡ್ರಗ್​​ ಕಂಟ್ರೋಲರ್

ಸುದ್ದಿ ಸಂಗ್ರಹ ಕೋಲಾರಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ 38 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಜಿಲ್ಲಾ ಡ್ರಗ್​​ ಕಂಟ್ರೋಲರ್​​ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ನಾಟಕ ದಲಿತ ಸಿಂಹ ಸೇನೆ ಮುಖಂಡ ಹೂಹಳ್ಳಿ ಪ್ರಕಾಶ್, ಕೃಷ್ಣಯ್ಯ ದೂರಿನ ಅನ್ವಯ ಲೋಕಾಯುಕ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಜಿಲ್ಲಾ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ಶ್ರೀನಿವಾಸನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಾಲೂರು […]

Continue Reading

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

ಸುದ್ದಿ ಸಂಗ್ರಹ ಮಂಗಳೂರು ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ ಮೇಲೆ‌ ಭಾರಿ ಹೊಡೆತ ಬಿದ್ದಿದೆ. ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಸುಮಾರು 50 ಕ್ಕೂ ಹೆಚ್ಚು ಫ್ಯಾಕ್ಟರಿಗಳು ಮಂಗಳೂರು ಹಾಗೂ ಉಡುಪಿಯಲ್ಲಿವೆ. ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚ ಭರಿಸಲು ಫ್ಯಾಕ್ಟರಿಗಳು ಪರದಾಡುತ್ತಿದೆ‌. ಕಚ್ಚಾ ತೈಲದ ಬೆಲೆ‌ ಪ್ರತಿ […]

Continue Reading

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೀದರ್ ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್‌ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು ಸಮಸ್ಯೆ ಇಲ್ಲಾ ಅಂದರೆ […]

Continue Reading

JEEಯಲ್ಲಿ ಮಗ ದೇಶಕ್ಕೆ ಟಾಪರ್: 4 ಸಾವಿರ ಶಾಲಾ ಮಕ್ಕಳಿಗೆ ಸಿಹಿಯೂಟ ಹಾಕಿ ಸಂಭ್ರಮಿಸಿದ ತಾಯಿ

ಸುದ್ದಿ ಸಂಗ್ರಹ ಮೈಸೂರು‌ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಬಿ.ಆರ್ಕ್, ಬಿ ಪ್ಲಾನಿಂಗ್‌ ಫೇಸ್ 1ರಲ್ಲಿ ಮಗ ದೇಶಕ್ಕೆ ಟಾಪರ್ ಆದ ಖುಷಿಯಲ್ಲಿ ತಾಯಿ ಶಾಲಾ ಮಕ್ಕಳಿಗೆ ಊಟ ಹಾಕಿಸಿ ಸಂಭ್ರಮಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆಯೂರು ಗ್ರಾಮದ ನಿವಾಸಿಗಳಾಗಿರುವ ಎ.ಸಿ ನೇತ್ರಾವತಿ ಮತ್ತು ಎಂ.ಡಿ ಗುರುಸ್ವಾಮಿ ದಂಪತಿಯ ಪುತ್ರ ಎಂ.ಜಿ ನಾಗದೇವ 2026ರ ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಸುತ್ತೂರು ಜೆಎಸ್ಎಸ್ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾಯಿ, ಸುತ್ತೂರಿನ ವಸತಿ ಶಾಲೆಯಲ್ಲಿ […]

Continue Reading