ಗೃಹ ಜ್ಯೋತಿ ದಾಖಲೆ ಪರಿಶೀಲನೆ ಆರಂಭ, ಗ್ರಾಹಕರು ಸಹಕರಿಸಬೇಕು

ಸುದ್ದಿ ಸಂಗ್ರಹ ಕಲಬುರಗಿಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಅಭಿಯಾನ ಆರಂಭವಾಗಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಫಲಾನುಭವಿಗಳ ಗುರುತು ಮತ್ತು ದಾಖಲೆಗಳನ್ನು ಪರಿಶೀಲಿಸುವರು. ಅಗತ್ಯ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವರು. ಘೋಷಣಾ ಪತ್ರವನ್ನೂ ಭರ್ತಿ ಮಾಡಿಸಿಕೊಂಡು ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸುವರು. ಪರಿಶೀಲನೆ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ […]

Continue Reading

ಹೆಂಡತಿ ಜಗಳವಾಡಿ ತವರಿಗೆ ಹೋಗಿದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಪತಿ

ಸುದ್ದಿ ಸಂಗ್ರಹ ಗದಗಗಂಡ-ಹೆಂಡತಿ ಜಗಳ ಕೆಲವೊಮ್ಮೆ ದೊಡ್ಡ ಅವಾಂತರಕ್ಕೂ ಕಾರಣವಾಗುತ್ತದೆ. ಗದಗ ಜಿಲ್ಲೆಯಲ್ಲಿ ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಜೀರ್ ಸಾಬ್ ಟವರ್ ಏರಿದ ವ್ಯಕ್ತಿ. ನಜೀರ್ ಸಾಬ್ ಮತ್ತು ಅವರ ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಈ ಬಾರಿಯೂ ಜಗಳವಾದ ಬಳಿಕ ಪತ್ನಿ ತವರು ಮನೆಗೆ ಹೋಗಿದ್ದಳು. […]

Continue Reading

ಮಗ ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಸ್ನೇಹಿತನ ಬರ್ಬರ ಹತ್ಯೆ: ಆರೋಪಿ ಅಂದರ್‌

ಸುದ್ದಿ ಸಂಗ್ರಹ ಬೆಳಗಾವಿಗಂಡು ಮಗು ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಣಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ ದುರ್ದೈವಿ. ಈತನ ಗೆಳೆಯ ವಿಶ್ವನಾಥ ಪೂಜೇರಿ ಕೊಲೆಗೈದ ಆರೋಪಿ. ಇಬ್ಬರು ಮದ್ಯದ ಅಮಲಿನಲ್ಲಿ ಗ್ರಾಮದ ಕಟ್ಟೆಯಲ್ಲಿ ಕುಳಿತು ಹರಟೆಯಲ್ಲಿ ತೊಡಗಿದ್ದರು. ಆಗ ಗಂಡು ಮಗು ಹುಟ್ಟಿದಕ್ಕೆ ವಿಶ್ವನಾಥ್ ಬಳಿ ಹಣಮಂತಪ್ಪ ಪಾರ್ಟಿ ಕೇಳಿದ್ದ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು […]

Continue Reading

ಫೋಟೊ ತೆಗೆಯಲು ಹೋಗಿ ಒಂದೆ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ

ಸುದ್ದಿ ಸಂಗ್ರಹ ಮಂಡ್ಯಫೋಟೊ ತೆಗೆಯಲು ಹೋಗಿ ಒಂದೆ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು. ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ ಐವರ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ […]

Continue Reading

ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ

ಸುದ್ದಿ ಸಂಗ್ರಹ ಕಾರವಾರಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು […]

Continue Reading

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ಗೆ ಆರಂಭದಲ್ಲಿ ವಿಘ್ನ: ಸೇವಾಸಿಂಧು ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷ

ಸುದ್ದಿ ಸಂಗ್ರಹ ಯಾದಗಿರಿರಾಜ್ಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರಕಾರ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿರುವ ಆರಂಭದಲ್ಲೆ ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷಗಳು ಎದುರಾಗಿದ್ದು, ಉಚಿತ ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಣ ಖರ್ಚು ಮಾಡಿಕೊಂಡು ನಗರಗಳಿಗೆ ಅಲೆಯುವಂತಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕರಿಸಿದ ಸಮಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ […]

Continue Reading

ಬಳ್ಳಾರಿ: 3.50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ‌ ಭ್ರಷ್ಟ ಅಧಿಕಾರಿ

ಸುದ್ದಿ ಸಂಗ್ರಹ ಬಳ್ಳಾರಿ3.50 ಲಕ್ಷ ಲಂಚ ಪಡೆಯುವಾಗ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನಗರಾಭಿವೃದ್ಧಿ ಪ್ರಾಧಿಕಾರದ ಸರ್ವೇಯರ್ ಶಾಂತಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲೇಔಟ್ ಪ್ಲ್ಯಾನ್ ಡೆವಲಪ್ಮೆಂಟ್ ಅಪ್ರೂವಲ್ ಮಾಡಲು ವೀರೇಶ್ ಎಂಬವರ ಬಳಿ ಸರ್ವೇಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದ. ವೀರೇಶ್ ಅವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಶಾಂತಮೂರ್ತಿ ಪರವಾಗಿ ಮೊಹಮ್ಮದ್ ಸಾಜೀದ್ ಎಂಬಾತ ವೀರೇಶ್‌ನಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ […]

Continue Reading

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ

ಸುದ್ದಿ ಸಂಗ್ರಹ ಮೈಸೂರುಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ […]

Continue Reading

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೆ ಬ್ಲ್ಯಾಕ್‌ಮೇಲ್‌: ಹಣ ಹೊಂದಿಸಲು ಅತ್ತಿಗೆಯನ್ನೆ ಮುಗಿಸಿದ ನಾದಿನಿ

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಆಕೆಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಯಾರೂ ಊಹೆ ಮಾಡದ ಸಿನಿಮೀಯ ಟ್ವಿಸ್ಟ್ ಸಿಕ್ಕಿದೆ. ನಾದಿನಿಯೇ ತನ್ನ ಸಹೋದರ ಸಂಬಂಧಿಯ ಜೊತೆ ಸೇರಿ ಅಣ್ಣನ ಹೆಂಡತಿಯನ್ನು ಕೊಂದಿರುವದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ನಗರದ ಬಾಪೂಜಿ ನಗರದ ನರಸಿಂಹಮೂರ್ತಿಯವರ ಮನೆಯಲ್ಲಿ ಮೇ 28 ರಂದು ಆತನ ಸೊಸೆ ಪುಷ್ಪಲತಾಳನ್ನ (23) ಕತ್ತು ಕೊಯ್ದು ಕೊಲೆ ಮಾಡಿದಂತೆ ಶವ ಪತ್ತೆಯಾಗಿತ್ತು. ಪುಷ್ಪಲತಾಳ ಜೊತೆಗಿದ್ದ ಆಕೆಯ ನಾದಿನಿ ಭವ್ಯಾ, […]

Continue Reading

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

ಸುದ್ದಿ ಸಂಗ್ರಹ ರಾಯಚೂರುಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22) ನೀರು ಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂಜೆಯ ಬಳಿಕ ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೆ ಈಜಲು ಹೋಗಿ ನೀರು […]

Continue Reading