ಪಕ್ಷಿಗಳಿಂದ ನಿಸರ್ಗದ ಸಮತೋಲನ ಸಾಧ್ಯ

ಕಲಬುರಗಿ: ಗುಬ್ಬಚ್ಚಿ ಸೇರಿದಂತೆ ವಿವಿಧ ಪಕ್ಷಿಗಳು ಕೀಟ, ಹುಳ-ಹುಪ್ಪಟಿಗಳನ್ನು ಭಕ್ಷಿಸುವ ಮೂಲಕ ಮಣ್ಣು ಮತ್ತು ಬೆಳೆಗಳನ್ನು ರಕ್ಷಿಸುತ್ತವೆ. ಇದರಿಂದ ಮಣ್ಣು ಸತ್ವಯುತವಾಗಿ, ಪರಾಗಸ್ಪರ್ಷ ಕ್ರಿಯೆ ಜರುಗುವುದರಿಂದ ಉತ್ತಮ ಇಳುವರಿ ಸಾಧ್ಯ. ಜೊತೆಗೆ ಗಿಡ-ಮರಗಳು ಸಮೃದ್ಧವಾಗಿ ಬೆಳೆಯುವ ಮೂಲಕ ಪರಿಸರ, ನಿಸರ್ಗ ಸಮತೋಲವಾಗಿರಲು ಸಾಧ್ಯವಿದೆ ಎಂದು ಉಪನ್ಯಾಸಕ ಹಾಗೂ ಪಕ್ಷಿಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ‘ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ ಅಕಾಡೆಮಿ’ಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ […]

Continue Reading

ವಿಜೃಂಭಣೆಯಿಂದ ಜರುಗಿದ ಶರಣಬಸವೇಶ್ವರ ಭವ್ಯ ರಥೋತ್ಸವ

ಕಲಬುರಗಿ: ಕಲ್ಯಾಣ ಕರ್ನಾಟಕದ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ 203ನೇ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಸಂಜೆ 6ಕ್ಕೆ ಸಾವಿರಾರು ಭಕ್ತವೃಂದದ ಜೈಘೋಷದೊಂದಿಗೆ ವಿಜೃಂಭಣೆಯಿಂದ ರಥೋತ್ಸವ ಜರುಗಿತು. ಶರಣಬಸವೇಶ್ವರ ದೇವಾಲಯ ಸಂಕೀರ್ಣದಲ್ಲಿ ರಥೋತ್ಸವದ ಸಮಯದಲ್ಲಿ ವರ್ಷಕ್ಕೊಮ್ಮೆ ಪ್ರದರ್ಶಿಸಲಾಗುವ ಪ್ರಸಾದ ಬಟ್ಟಲನ್ನು ರಥೋತ್ಸವದ ಆರಂಭವನ್ನು ಸೂಚಿಸಲು 8ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಹಾಗೂ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು ಪ್ರದರ್ಶಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಸಹಸ್ರಾರು […]

Continue Reading

ಶ್ರೀ ಶರಣಬಸವೇಶ್ವರ ಜಾತ್ರೆ: ಅನ್ನ ದಾಸೋಹ

ಕಲಬುರಗಿ: ಶ್ರೀ ಶರಣಬಸವೇಶ್ವರರ 203ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ನಗರದ ಆಳಂದ ರಸ್ತೆಯ ವಿಜಯನಗರ ಕಾಲೋನಿ ಕ್ರಾಸ್’ನಲ್ಲಿ ‘ಸಿದ್ದಲಿಂಗೇಶ್ವರ ಗೆಳೆಯರ ಬಳಗ’ದ ವತಿಯಿಂದ  ಬುಧವಾರ ಅನ್ನ ದಾಸೋಹ ಜರುಗಿತು. ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ದಾಸೋಹ ಸಮಿತಿಯವರಿಗೆ ಗೌರವಿಸಲಾಯಿತು, ಅವರ ಸಮಾಜಮುಖಿ ಕಾರ್ಯಕ್ಕೆ ಪ್ರೋತ್ಸಾಹಿಸಲಾಯಿತು. ಸಿದ್ಧಲಿಂಗೇಶ್ವರ ಗೆಳೆಯರ ಬಳಗದ ಕಾರ್ಯ ಶ್ಲಾಘನೀಯವಾಗಿದೆ. ಸಮಾಜ ಸೇವಕರಾದ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್ ಬಿರಾದಾರ, ದಾಸೋಹ ಸಮಿತಿಯ ಜಗನ್ನಾಥ ಕೋರೆ, ಶಿವು ಸದಾಲಪುರ, ಅರ್ಪಿತ ಹತಗುಂದಿ, ಸಂಗಮೇಶ ಬಿರಾದಾರ, ಜಗು ಬಬಲಾದ, […]

Continue Reading

ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣ: ಐವರು ಅಧಿಕಾರಿಗಳು ಅಮಾನತು

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್’ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್ ನಾಗಭೂಷಣ ಅವರನ್ನು ಅಮಾನತುಗೊಳಿಸಿ ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಜೊತೆಗೆ ವಾಡಿ ಠಾಣೆಯ ಪಿಎಸ್‌ಐ ತಿರುಮಲೇಶ್ ಅವರಿಗೂ ನೋಟಿಸ್ ಜಾರಿ ಮಾಡಿದ್ದು, ಕಾರಣ ನೀಡುವಂತೆ ಎಸ್‌ಪಿ ಕೇಳಿದ್ದಾರೆ.

Continue Reading

ಡಿವಿಜಿ ಆಧುನಿಕ ಸರ್ವಜ್ಞ, ಪುತಿನ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಬರೆದಂತೆ ಬದುಕಿದ ಅಪರೂಪದ ಸಾಹಿತಿ ಡಿವಿಜಿಯವರು ಆಧುನಿಕ ಸರ್ವಜ್ಞರಾಗಿದ್ದಾರೆ. ಪು.ತಿ ನರಸಿಂಹಚಾರ್ಯರು ಭಾವಗೀತೆ, ಗೀತನಾಟಕ, ಭಾವನಾಚಿತ್ರ, ರಸಚಿತ್ರ, ಸಂಗೀತರೂಪಕ, ಪ್ರಬಂಧ, ವಿಚಾರ ಸಾಹಿತ್ಯ, ಸಣ್ಣಕಥೆ, ಗದ್ಯನಾಟಕ, ಮಹಾಕಾವ್ಯ ಸೇರಿದಂತೆ ಹತ್ತು ಹಲವು ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಂಜೆ ಜರುಗಿದ […]

Continue Reading

ರೋಗ ತಡೆಯಲು ಲಸಿಕೆ ಪಡೆಯುವದು ಅಗತ್ಯ: ಡಾ.ಅಮರೇಶ ಪತ್ತಾರ

ಕಲಬುರಗಿ: ಲಸಿಕೆಗಳು ಕಾಯಿಲೆ ವಿರುದ್ದ ರಾಮಬಾಣದಂತೆ ಕಾರ್ಯನಿರ್ವಹಿಸುತ್ತವೆ. ಲಸಿಕೆ ಪಡೆಯುವ ಬಗ್ಗೆ ಭಯ ಪಡದೆ ತೆಗೆದುಕೊಳ್ಳಬೇಕು ಎಂದು ಖ್ಯಾತ ಕುಟುಂಬ ವೈದ್ಯ ಡಾ.ಅಮರೇಶ ಪತ್ತಾರ ಹೇಳಿದರು. ನಗರದ ಆಳಂದ ರಸ್ತೆಯ ಶಹಾಬಜಾರ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಿವಶಕ್ತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ರಾಷ್ಟ್ರೀಯ ಲಸಿಕೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ವಿವಿಧ ಕಾರಣಗಳಿಂದ ಕಾಯಿಲೆ ಬರುತ್ತವೆ. ಅವುಗಳ ನಿವಾರಣೆಗೆ ಮತ್ತು ಬರದಂತೆ ತಡೆಯಲು ಲಸಿಕೆ ಪಡೆಯುವದು ಅಗತ್ಯವಾಗಿದೆ ಎಂದರು. ಇಜೇರಿ […]

Continue Reading

ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಸತ್ಕಾರ

ಕಲಬುರಗಿ: ದಕ್ಷಿಣ ವಲಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಬಸಯ್ಯ ಎಸ್ ಸ್ವಾಮಿ ಮತ್ತು ಅಖಿಲ ಕರ್ನಾಟಕ ಅನುದಾನಿತ ಶಾಲಾ-ಕಾಲೇಜು ಒಕ್ಕೂಟದ ಜಿಲ್ಲಾಧ್ಯಕ್ಷ ಸತೀಶಕುಮಾರ ಜಾಮಗೊಂಡ ಅವರಿಗೆ ಗೆಳೆಯರ ಬಳಗದ ವತಿಯಿಂದ ರವಿವಾರ ನಗರದ ಕಸ್ತೂರಿ ನಗರದಲ್ಲಿ ಸತ್ಕರಿಸಿ, ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಆಳಂದ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ತಾಲೂಕಾ ಕೃಷಿ ಸಹಾಯಕರ ಸಂಘದ ಮಾಜಿ ಕಾರ್ಯದರ್ಶಿ ಶಿವಯೋಗೆಪ್ಪಾ ಎಸ್ […]

Continue Reading

ಶ್ರೇಷ್ಟ ಸಮಾಜ ಸುಧಾರಕ, ಮಹಾದಾಸೋಹಿ ಶರಣಬಸವೇಶ್ವರರು

ಕಲಬುರಗಿ: ಭಾರತ ಅನೇಕ ಶರಣರ, ಸಂತರ, ಅನುಭವಿಗಳ ತವರೂರು. ಕಾಲಕಾಲಕ್ಕೆ ಅನೇಕ ಮಹನೀಯರು ಜನಿಸಿ, ತಮ್ಮದೆಯಾದ ಅದ್ವೀತಿಯ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ದಾಸೋಹ, ಕಾಯಕ, ಭಕ್ತಿಯನ್ನು ಗೈಯುತ್ತ, ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಶ್ರಮಿಸಿ, ಅಸಂಖ್ಯಾತ ಭಕ್ತರ ಆರಾಧ್ಯ ದೈವರೆನಿಸಿಕೊಂಡವರೇ ದಾಸೋಹ ಭಾಂಡಾರಿ ಶರಣಬಸವೇಶ್ವರರಾಗಿದ್ದಾರೆ. ಶರಣಬಸವೇಶ್ವರರು ಕ್ರಿ.ಶ 1746 ರಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಆದಯ್ಯ ಮತ್ತು ಮಡಿಯಮ್ಮ ಎಂಬ ಶರಣ ದಂಪತಿಗಳ ಮಗನಾಗಿ ಜನಿಸಿದ್ದಾರೆ. ಇವರು ರಾಜ […]

Continue Reading

ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯ

ಕಲಬುರಗಿ: ಜನರಲ್ಲಿ ‘ಕೊಳ್ಳುಬಾಕ ಸಂಸ್ಕೃತಿ’ ಹೆಚ್ಚಾಗಿರುವುದುರಿಂದ ಆನ್’ಲೈನ್ ಮತ್ತು ನೇರ ಮಾರಾಟ ಕಂಪನಿಗಳಿಂದ ಗುಣಮಟ್ಟ, ಬೆಲೆ, ಪ್ರಮಾಣ, ಖಾತ್ರಿ, ಪರಿಶುದ್ಧತೆ ಸೇರಿದಂತೆ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಅನ್ಯಾಯವಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಗ್ರಾಹಕರು ವ್ಯವಹರಿಸುವಾಗ ಬಹಳಷ್ಟು ಜಾಗೃತಿ ವಹಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಜ್ಞಾನಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ […]

Continue Reading

ಸೂಕ್ತ ನಿದ್ರೆಯಿಂದ ಆರೋಗ್ಯಯುತ ಜೀವನ ಸಾಧ್ಯ

ಕಲಬುರಗಿ: ವಯಸ್ಸಿಗೆ ತಕ್ಕಂತೆ ಗಾಡವಾದ ನಿದ್ರೆಯನ್ನು ಮಾಡಿದರೆ ಆರೋಗ್ಯಯುತವಾಗಿರಲು ಸಾಧ್ಯ ಎಂದು ಚಿಂತಕ ಸಿದ್ದಾರೂಡ ಬಿರಾದಾರ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ನಿದ್ರಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒತ್ತಡದ ಬದುಕಿನಲ್ಲಿ ಸರಿಯಾಗಿ ಊಟ ಮತ್ತು ನಿದ್ರೆ ಮಾಡಲು ಸಮಯ ಸಿಗದಂತಾಗಿ, ಚಿಕ್ಕ ವಯಸಿನಲ್ಲಿಯೇ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯಘಾತದಂತದ ರೋಗಗಳಿಗೆ ತುತ್ತಾಗಿ ಅಮೂಲ್ಯವಾದ ಜೀವನ […]

Continue Reading