ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]

Continue Reading

ಮುಕ್ತ ಪತ್ರಿಕೋದ್ಯಮಕ್ಕೆ ಬೆಂಬಲ ನೀಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ, ದೇಶದ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಬೆಳಕು ಚೆಲ್ಲಿ, ಅದಕ್ಕೆ ಪರಿಹಾರ ಹುಡುಕುವಂತೆ ಮಾಡಿ ಸ್ವಸ್ಥ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ‘ಮಾಧ್ಯಮ ರಂಗ’ ತನ್ನದೆಯಾದ ಅದ್ವಿತೀಯ ಕೊಡುಗೆಯನ್ನು ನೀಡುತ್ತಿದೆ. ಸಮಾಜಕ್ಕೆ ಸ್ವತಂತ್ರ, ನಿರ್ಭೀತ, ನ್ಯಾಯಯುತ ಪತ್ರಿಕೋದ್ಯಮ ಅಗತ್ಯ. ಪತ್ರಿಕೋದ್ಯಮವು ಮುಕ್ತವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವುದು ಅವಶ್ಯಕ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading

ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ

ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. […]

Continue Reading

ರಾತ್ರಿ ವೇಳೆ ಮನೆಗಳಿಗೆ ಕನ್ನ, ಐಷಾರಾಮಿ ಜೀವನ: ಪಾಪ ಪರಿಹಾರಕ್ಕೆ ಸಮಾಜ ಸೇವೆ ಮಾಡುತ್ತಿದ್ದ ಕಳ್ಳನ ಬಂಧನ

ಕಲಬುರಗಿ: ಕದ್ದ ಹಣವನ್ನು ಜಾತ್ರೆಗಳಲ್ಲಿ ಸಾಮೂಹಿಕ ಭೋಜನಕ್ಕೆ, ಮದ್ಯ ಮತ್ತು ಮನರಂಜನೆಗಾಗಿ ಖರ್ಚು ಮಾಡುತ್ತಿದ್ದ ಕಳ್ಳನನ್ನು ಕಲಬುರಗಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಭಾಗ್ಯವಂತಿ ನಗರದ ನಿವಾಸಿ ಶಂಕರಗೌಡ ನೀಡಿದ ದೂರಿನ ಆಧಾರದ ಮೇಲೆ, ಏಪ್ರಿಲ್ 13 ರಂದು ತಮ್ಮ ಕುಟುಂಬದೊಂದಿಗೆ ಹೊರ ಹೋಗಿದ್ದರು. ಆ ಸಮಯದಲ್ಲಿ ಕಳ್ಳರು 343 ಗ್ರಾಂ ಚಿನ್ನಾಭರಣ, 14.5 ಲಕ್ಷ ರೂ. ನಗದು, 10,000 ರೂ. ಮೌಲ್ಯದ 40 ಗ್ರಾಂ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ ಎಂದು ಕಲಬುರಗಿ ಪೊಲೀಸ್ ಆಯುಕ್ತ […]

Continue Reading

ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ: ವೇದಿಕೆಯಲ್ಲೆ ತರಾಟೆ

ಬೆಳಗಾವಿ: ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ವೇದಿಕೆ ಮೇಲೆಯೆ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ವಿರುದ್ಧ ಗರಂ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡರು. ಆಗಿದ್ದು ಏನು ?ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ […]

Continue Reading

ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಒರ್ವ ಬಂಧನ

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ. ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ […]

Continue Reading

ಕಲಬುರಗಿ SBI ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧನ

ಕಲಬುರಗಿ: ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್ (28) ಮತ್ತು ಷರೀಫ್ ( 22) ಗಾಯಗೊಂಡವರು. ಜಿಮ್ಸ್ ಆವರಣದ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯ ಬೇಲೂರ ಕ್ರಾಸ್ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಆ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ […]

Continue Reading

225 ಪ್ರಕರಣದಲ್ಲಿ 345 ಆರೋಪಿಗಳ ಬಂಧನ: 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

ವಿಜಯಪುರ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, 225 ಕೇಸ್‌ನಲ್ಲಿದ್ದ 345 ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಬೇಧಿಸಿ, ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದಂತೆ ಒಟ್ಟು 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಒಟ್ಟು 5,145.02 ಗ್ರಾಂ ಚಿನ್ನದ ಆಭರಣ ಮತ್ತು 1,723 ಗ್ರಾಂ ಬೆಳ್ಳಿ ಆಭರಣ, 1,06,72,000 ರೂ. ಮೌಲ್ಯದ 73 […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಪಂಚಾಯತರಾಜ್ ವ್ಯವಸ್ಥೆಯ ಪಾತ್ರ ಅನನ್ಯ

ಕಲಬುರಗಿ: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಬಹುದೊಡ್ಡ ಜವಾಬ್ದಾರಿ ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಅನನ್ಯ ಕೊಡುಗೆ ನೀಡುತ್ತಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷ ಓಂಕಾರ ವಠಾರ ಅಭಿಮತಪಟ್ಟರು. ನಗರದ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರಿಕರಣದ ಪ್ರಮುಖ ಧ್ಯೇಯದೊಂದಿಗೆ ಉದಯಿಸಿದ ಪಂಚಾಯತ್ ರಾಜ್ ಪದ್ಧತಿಯು […]

Continue Reading