ರಾಷ್ಟ್ರದ ಅಭಿವೃದ್ಧಿಗೆ ತಂತ್ರಜ್ಞಾನವೆ ಚಾಲನಾ ಶಕ್ತಿ: ಎಚ್.ಬಿ ಪಾಟೀಲ

ಕಲಬುರಗಿ: ಯಾವದೆ ಒಂದು ರಾಷ್ಟ್ರದ ಅಭಿವೃದ್ಧಿಯು, ಆ ರಾಷ್ಟ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಯನ್ನು ಅವಲಂಬಿಸಿದೆ. ಅಮೇರಿಕಾ, ರಷ್ಯಾ, ಜಪಾನದಂತಹ ಮುಂದುವರೆದ ಮುಂತಾದ ರಾಷ್ಟ್ರಗಳು ಅಭಿವೃದ್ಧಿಯಾಗಿವೆಯೆಂದರೆ, ಅದು ಅಲ್ಲಿನ ತಂತ್ರಜ್ಞಾನದ ಬೆಳವಣಿಗೆ ಮತ್ತು ಅದರ ಅಳವಡಿಕೆಯಿಂದಾಗಿದೆ. ಹೀಗಾಗಿ ಯಾವುದೆ ಒಂದು ರಾಷ್ಟ್ರವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದಕ್ಕೆ ತಂತ್ರಜ್ಞಾನವೇ ಚಾಲನಾ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಆಳಂದ ರಸ್ತೆಯ, ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ […]

Continue Reading

ತಾಯಿಗೆ ಸಮನಾದ ವ್ಯಕ್ತಿ ಬೇರೊಬ್ಬರಿಲ್ಲ: ಎಚ್.ಬಿ ಪಾಟೀಲ

ಕಲಬುರಗಿ: ಒಂಬತ್ತು ತಿಂಗಳು ಹೊತ್ತು, ಹೆತ್ತ, ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ಮತ್ತೊಬ್ಬ ವ್ಯಕ್ತಿ ಜಗತ್ತಿನಲ್ಲಿ ಯಾರು ಇಲ್ಲ. ವರ್ಣಿಸಲು ಅಸಾಧ್ಯವಾದ, ಅನುಪಮ ವ್ಯಕ್ತಿ ತಾಯಿಯಾಗಿದ್ದಾಳೆ. ಇಡೀ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು ಪೂಜ್ಯನೀಯ ಸ್ಥಾನವನ್ನು ನೀಡಿ, ಆರೈಕೆ ಮಾಡಿ, ಗೌರವಿಸಬೇಕಾದದ್ದು ಪ್ರಸ್ತುತ ದಿನಗಳಲ್ಲಿ ಅತಿ ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊರ ವಲಯದ ರಾಣೆಸ್ಪಿರ್ ದರ್ಗಾ ರಸ್ತೆಯಲ್ಲಿನ ನೆಮ್ಮದಿ ವೃದ್ಧಾಶ್ರಮದಲ್ಲಿ […]

Continue Reading

ನಾಡಿನ ಇತಿಹಾಸದ ಪುಟ ತೆರೆಯುವ ಬೋಳೆವಾಡ ಸ್ಮಾರಕಗಳು: ಮುಡುಬಿ ಗುಂಡೇರಾವ

ಚಿತ್ತಾಪುರ: ಕನ್ನಡಿಗರ ಶೌರ್ಯ, ಸಾಧನೆ, ಸಾಹಸ, ಪರಾಕ್ರಮತೆ, ತ್ಯಾಗ, ಬಲಿದಾನದ ರೋಚಕ ಇತಿಹಾಸ ಸಾರುವ ಬೋಳವಾಡದ ಸ್ಮಾರಕಗಳ ಬಗ್ಗೆ ಜನಜಾಗೃತಿ ಅವಶ್ಯಕ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು.  ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳೆವಾಡ ಗ್ರಾಮದ ಭೊಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-13 ರಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಕೂಟರು ಮತ್ತು ಕಲ್ಯಾಣ ಚಾಲುಕ್ಯರ ಕಾಲದ ವೀರಗಲ್ಲುಗಳು, […]

Continue Reading

ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲದ ಅನರ್ಘ್ಯ ರತ್ನ: ಎಚ್.ಬಿ ಪಾಟೀಲ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಸಣ್ಣ ವಿಷಯಕ್ಕೂ ಕೌಟುಂಬಿಕ ಕಲಹದಿಂದಾಗಿ, ಅವಿಭಕ್ತ ಕುಟುಂಬಗಳು ನಾಶವಾಗಿ ಒಡೆದ ಮನಸ್ಸುಗಳಾಗುತ್ತಿವೆ. ಮಹಿಳೆಯರು ಎಲ್ಲವನ್ನು ಸಾಧಿಸಬಹುದೆಂದು ತೋರಿಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಆದರ್ಶ ವ್ಯಕ್ತಿತ್ವ ಸಮಸ್ತ ಮಹಿಳಾ ಲೋಕಕ್ಕೆ ಮಾದರಿಯಾಗಿದೆ, ಸ್ತ್ರೀಕುಲದ ಅನರ್ಘ್ಯ ರತ್ನವಾಗಿದ್ದಾರೆ ಎಂದು ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಶನಿವಾರ ಜರುಗಿದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲ್ಲಮ್ಮನವರು […]

Continue Reading

ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವ

ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವವನ್ನು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಚರಿಸಲಾಯಿತು. ಗೋಖಲೆಯವರು ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, ಪ್ರೀತಿ ಸಣಮನಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading

ಕಾದಂಬರಿ ಸಾರ್ವಭೌಮ ಅ.ನ ಕೃಷ್ಣರಾವ

ಕಲಬುರಗಿ: ಅ.ನ ಕೃಷ್ಣರಾವ ಅವರು ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕನ್ನಡಪರ ಹೋರಾಟಗಾರರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ವಿಶೇಷ ಕಾದಂಬರಿಗಳು ನೀಡಿದ ಅವರು ‘ಕಾದಂಬರಿ ಸಾರ್ವಭೌಮ’ರಾಗಿದ್ದಾರೆ ಎಂದು ಲೇಖಕ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಅ.ನ ಕೃಷ್ಣರಾವ ಅವರ 117ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, […]

Continue Reading

ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಸಾಧ್ಯ

ಕಲಬುರಗಿ: ನಮ್ಮ ಭಾಗದಲ್ಲೂ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಮಾಡಲು ಸಾಧ್ಯ ಎಂದು ದೈಹಿಕ ಶಿಕ್ಷಣ ಶಿಕ್ಷಕ ಶರಣು ಮಲಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಅಥ್ಲೆಟಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೆ ರಾಷ್ಟ್ರದಲ್ಲಿ ಕ್ರೀಡಾ ಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಬೇಕು. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರೆಡ್‌ಕ್ರಾಸ್ ಸಂಸ್ಥೆಯ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರೆಟ್’ಕ್ರಾಸ್ ಸಂಸ್ಥೆ ರಾಷ್ಟ್ರದ ಅಭಿವೃದ್ಧಿಗೆ ತನ್ನದೆಯಾದ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳೀದರು. ನಗರದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ, ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಏರ್ಪಡಿಸಿದ್ದ ‘ವಿಶ್ವ ರೆಡ್‌ಕ್ರಾಸ್ ಸಂಸ್ಥೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಈ […]

Continue Reading

ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿತ್ರದುರ್ಗ: ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ರವಿವಾರ ಮದುವೆ ನಡೆದಿತ್ತು. ಮದುವೆಗೆ ಹಾಜರಾದವರಿಗೆ ರವಿವಾರ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಸೋಮವಾರ ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಕಲಬುರಗಿ: ಸಂಚಾರಿ ಪೊಲೀಸರಿಗೆ ಎ.ಸಿ ಹೆಲ್ಮೆಟ್

ಕಲಬುರಗಿ: ಸುಡುವ ಬಿಸಿಲಿನಲ್ಲಿ ಪ್ರಮುಖ ವೃತ್ತಗಳಲ್ಲಿ ವಾಹನಗಳ ಸಂಚಾರ ನಿಯಂತ್ರಿಸುವ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಪ್ರಾಯೋಗಿಕವಾಗಿ ಹವಾನಿಯಂತ್ರಿತ (ಎ.ಸಿ) ಹೆಲ್ಮೆಟ್‌ಗಳನ್ನು ನೀಡಲಾಗಿದೆ. ಇದರ ಜೊತೆಗೆ ಅತ್ಯಾಧುನಿಕ ಸೌಕರ್ಯಗಳ ಉಪಕರಣಗಳನ್ನು ಕಲ್ಪಿಸಲಾಗಿದೆ. ಇಲ್ಲಿನ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ತಲಾ 10 ಎ.ಸಿ ಹೆಲ್ಮೆಟ್ ಹಾಗೂ ಮಾಲಿನ್ಯ ತಡೆಯುವ ಮಾಸ್ಕ್‌ಗಳು,140 ಮಿಂಚುವ ಜಾಕೆಟ್ ಮತ್ತು 150 ಲೈಟ್ ಬ್ಯಾಟೊನ್‌ಗಳನ್ನು ವಿತರಣೆ ಮಾಡಲಾಯಿತು. ನಂತರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ಮಾತನಾಡಿ, ಹವಾನಿಯಂತ್ರಿತ ಹೆಲ್ಮೆಟ್‌ಗಳು ನಮ್ಮ ಸಂಚಾರಿ ಸಿಬ್ಬಂದಿಗೆ ಬೇಸಿಗೆಯ ಬಿಸಿಲಿನಿಂದ […]

Continue Reading