ಕನ್ನಡ ನಾಡಿಗೆ ಡಾ.ರಾಜಕುಮಾರ ಕೊಡುಗೆ ಅನನ್ಯ

ಕಲಬುರಗಿ: ನಾಡಿನ ಪ್ರಸಿದ್ಧ ವ್ಯಕ್ತಿಯಾಗಿ, ಮೇರು ನಟ, ಗಾಯಕ, ಕನ್ನಡಪರ ಚಳುವಳಿಯ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಐದು ದಶಕಗಳ ಕಾಲ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿ ಜನಮಾನಸದಲ್ಲಿ ‘ಅಣ್ಣಾವ್ರ’ ಸ್ಥಾನ ಪಡೆದ ‘ಬಂಗಾರದ ಮನುಷ್ಯ’ ಡಾ.ರಾಜಕುಮಾರ ಅವರದು ಬಹುಮುಖ ವ್ಯಕ್ತಿತ್ವ. ಕನ್ನಡ ನಾಡಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ […]

Continue Reading

ಜಾತಿ ವರದಿ ಬಗ್ಗೆ ವೀರಶೈವ ಶಾಸಕರು ಸಿಡಿದೆಳಬೇಕು: ರಂಭಾಪುರಿ ಶ್ರೀ

ಹುಮನಾಬಾದ್‌: ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆಯ ವೀರಶೈವ ಲಿಂಗಾಯತ ಜನಸಂಖ್ಯೆ ಕುರಿತು ಪ್ರಸ್ತಾಪಕ್ಕೆ ಬಂದರೆ ಎಲ್ಲಾ ಪಕ್ಷದ ವೀರಶೈವ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಬೇಕು, ಅನ್ಯಾಯದ ವಿರುದ್ಧ ಸಿಡಿದೆಳಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ತಾಲೂಕಿನ ಹುಡಗಿ ಗ್ರಾಮದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, 10 ವರ್ಷದ ಹಿಂದಿನ ವರದಿ ಇದೀಗ ಏಕೆ ಪ್ರಸ್ತಾಪಕ್ಕೆ ಬರುತ್ತಿದೆ ? ಈ ಹಿಂದೆ ಹಾವನೂರು ಆಯೋಗದ ವರದಿ ಹರಿಯುವ ಮೂಲಕ ಭೀಮಣ್ಣ ಖಂಡ್ರೆ […]

Continue Reading

ನಿರಂತರ ಅಧ್ಯಯನ ಉನ್ನತ ಸಾಧನೆ, ವ್ಯಕ್ತಿತ್ವಕ್ಕೆ ಪೂರಕ

ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನು ಬದಲಿಸುವ ಶಕ್ತಿ ಶ್ರೇಷ್ಠ ಗ್ರಂಥಗಳಿವೆ. ಪುಸ್ತಕಗಳು ಸಾಧನೆಯ ದಾರಿ ತಿಳಿಸುವ ಮೂಲಕ ಉನ್ನತ ಸಾಧನೆ, ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿವೆ. ಆದ್ದರಿಂದ ಪುಸ್ತಕಗಳು, ಪತ್ರಿಕೆಗಳನ್ನು ಓದುವ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪುಸ್ತಕ ದಿನಾಚರಣೆ’ ವಿದ್ಯಾರ್ಥಿಗಳಿಗೆ ವಿವಿಧ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದ ನಂತರ […]

Continue Reading

ಭೂಮಿಯ ಸಂರಕ್ಷಣೆ ಸಾಮೂಹಿಕ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಜಗತ್ತಿನ ಸಕಲ ಜೀವರಾಶಿಗಳ ಅಸ್ತಿತ್ವಕ್ಕೆ ಕಾರಣಿಕತೃವಾದ ಭೂಮಿಯು ಅನೇಕ ಕಾರಣಗಳಿಂದ ಗಂಡಾಂತರಕ್ಕೆ ಸಿಲುಕುವ ಮೂಲಕ ಜೀವರಾಶಿಗಳ ಬದುಕಿಗೆ ಅಪಾಯ ಉಂಟಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ಜೀವಿಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ಇರುವ ಒಂದೆ ಭೂಮಿಯ ಸಂರಕ್ಷಣೆ ಮಾಡುವದು ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ವಿಶ್ವ ಭೂಮಿ ದಿನಾಚರಣೆ’ […]

Continue Reading

ಕನ್ನಡಕ್ಕೆ ತ.ರಾ ಸುಬ್ಬರಾವ್ ಕೊಡುಗೆ ಅನನ್ಯ

ಕಲಬುರಗಿ: ಕಥೆ, ಕಾದಂಬರಿ, ನಾಟಕ, ಸಂಪಾದನೆ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ತ.ರಾ ಸುಬ್ಬರಾವ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ತ.ರಾ ಸುಬ್ಬರಾವ್‌ರ 105ನೇ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ತರಾಸು ಅವರು ದೊಡ್ಡ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಸೃಜನಶೀಲತೆ ಮತ್ತು ನಾವಿನ್ಯತೆ ಅಗತ್ಯ

ಕಲಬುರಗಿ: ಇಂದಿನ ಯುವಕರು ಕೇವಲ ಪದವಿ, ಪ್ರಮಾಣಪತ್ರ ಪಡೆದರೆ ಸಾಲದು. ವಿಷಯದ ಜ್ಞಾನವನ್ನು ಕಾರ್ಯರೂಪದಲ್ಲಿ ತರುವ ಕೌಶಲ್ಯ ಅಳವಡಿಸಿಕೊಳ್ಳಬೇಕು. ಬಹುವಿಧ ಆಯಾಮಗಳ ಚಿಂತನೆ, ಹೊಸ ಆವಿಷ್ಕಾರಗನ್ನು ಮಾಡುವ ಸೃಜನಶೀಲತೆ ಮತ್ತು ನಾವಿನ್ಯತೆ ಬೆಳೆಸಿಕೊಳ್ಳಬೇಕು. ಇವುಗಳು ರಾಷ್ಟ್ರದ ಅಭಿವೃದ್ಧಿಗೆ ಅಗತ್ಯವಾಗಿವೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಅಂತರಾಷ್ಟ್ರೀಯ ಸೃಜನಶೀಲತೆ ಮತ್ತು […]

Continue Reading

ಹಿಮೋಫಿಲಿಯಾ ಅನುವಂಶಿಕ ಕಾಯಿಲೆ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತ ಹೆಪ್ಪುಗಟ್ಟುವ ಕ್ರಿಯೆಗೆ ಬೇಕಾಗುವ ಅಂಶಗಳಲ್ಲಿ ಕೆಲವು ಅಂಶಗಳ ತೀವ್ರ ಕೊರತೆಯಿಂದ ದೇಹದಲ್ಲಿ ಗಾಯಗಳಾದರೆ, ರಕ್ತನಾಳಗಳಿಗೆ ಯಾವುದೆ ಪೆಟ್ಟಾದರೆ ರಕ್ತಸ್ರಾವ ನಿರಂತರವಾಗುತ್ತದೆ. ಸಾಮಾನ್ಯವಾಗಿ ಈ ರೋಗದ ಮುಖ್ಯ ಲಕ್ಷಣ ಎಂದರೆ ನಿರಂತರ ರಕ್ತ ಸ್ರಾವವಾಗುವದು. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಖಾದ್ರಿ ಚೌಕ್’ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿಮೋಫಿಲಿಯಾ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, […]

Continue Reading

ಸಾಮಾಜಿಕ ಸಮತೋಲನ ಕಾಪಾಡುವ ಶಕ್ತಿ ಚಿತ್ರಕಲೆಗಿದೆ

ಕಲಬುರಗಿ: ದೃಶ್ಯ ಕಲೆಯು ಅತ್ಯಂತ ಪರಿಣಾಮಕಾರಿಯಾದ ಮಾಧ್ಯಮವಾಗಿದ್ದು, ಇದು ಮನುಷ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಸಮಾಜದಲ್ಲಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ, ಅವುಗಳಿಗೆ ಪರಿಹಾರವನ್ನು ಸೂಚಿಸಿ ಸಮಾಜದ ಸಮತೋಲನ ಸ್ಥಿತಿಯನ್ನು ಕಾಪಾಡುವ ಶಕ್ತಿ ದೃಶ್ಯಕಲೆಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘ವಿಶ್ವ ಕಲಾ ದಿನಾಚರಣೆ’ಯಲ್ಲಿ ಮಾತನಾಡಿದ […]

Continue Reading

ಸಾಮಾನ್ಯರಂತೆ ಬಸ್‌ನಲ್ಲಿ ಪ್ರಯಾಣಿಸಿದ ಕೃಷ್ಣ ಬೈರೇಗೌಡ: ಸಚಿವರ ಸರಳತೆಗೆ ಭಾರಿ ಮೆಚ್ಚುಗೆ

ವಿಜಯಪುರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾನ್ಯರಂತೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನಿಂದ ಸಾರಿಗೆ ಬಸ್‌ನಲ್ಲಿ ವಿಜಯಪುರಕ್ಕೆ ಅವರು ತೆರಳಿದ್ದು, ಸಚಿವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಇತರ ಸಂಘಟನೆಗಳಿಂದ ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಭಾಗಿಯಾಗಲು, ಕೆಕೆಆರ್‌ಟಿಸಿ ಕಲ್ಯಾಣ ರಥ ಬಸ್‌ನಲ್ಲಿ ವಿಜಯಪುರಕ್ಕೆ ತೆರಳಿದ ಸಚಿವ ಕೃಷ್ಣಬೈರೇಗೌಡರನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಹಾಗೂ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಕಲ್ಯಾಣ ರಥ ಬಸ್‌ನಿಂದ ಇಳಿದ […]

Continue Reading

ವಿಶ್ವದ ಪ್ರಥಮ ಸ್ತ್ರೀವಾದಿ ಚಿಂತಕಿ ಅಕ್ಕಮಹಾದೇವಿ

ಕಲಬುರಗಿ: ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನೈಜ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಚಿಕ್ಕ ವಯಸ್ಸಿನಲ್ಲಿಯೇ ಸಕಲ ಸುಖವನ್ನು ತ್ಯಜಿಸಿ, ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಅಕ್ಕಮಹಾದೇವಿಯವರು ವಿಶ್ವದ ಪ್ರಥಮ ಸ್ತ್ರೀವಾದಿ ಚಿಂತಕರಾಗಿದ್ದಾರೆ ಎಂದು ಶರಣ ಚಿಂತಕಿ ಜಯಶ್ರೀ ಎಚ್ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಶನಿವಾರ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ, ಸಾರ್ವಕಾಲಿಕ ವಿಶ್ವ ದಾಖಲೆಯ 5000ನೇ ಕಾರ್ಯಕ್ರಮವಾದ ‘ವೈರಾಗ್ಯ […]

Continue Reading