ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ

ಸುದ್ದಿ ಸಂಗ್ರಹ ಕಾರವಾರಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು […]

Continue Reading

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ಗೆ ಆರಂಭದಲ್ಲಿ ವಿಘ್ನ: ಸೇವಾಸಿಂಧು ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷ

ಸುದ್ದಿ ಸಂಗ್ರಹ ಯಾದಗಿರಿರಾಜ್ಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆ ಘೋಷಣೆ ಮಾಡಿರುವ ರಾಜ್ಯ ಸರಕಾರ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿರುವ ಆರಂಭದಲ್ಲೆ ವೆಬ್‌ಸೈಟ್‌ನಲ್ಲಿ ತಾಂತ್ರಿಕ ದೋಷಗಳು ಎದುರಾಗಿದ್ದು, ಉಚಿತ ಬಸ್‌ ಪಾಸ್‌ಗೆ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಣ ಖರ್ಚು ಮಾಡಿಕೊಂಡು ನಗರಗಳಿಗೆ ಅಲೆಯುವಂತಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕರಿಸಿದ ಸಮಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ […]

Continue Reading

ಬಳ್ಳಾರಿ: 3.50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ‌ ಭ್ರಷ್ಟ ಅಧಿಕಾರಿ

ಸುದ್ದಿ ಸಂಗ್ರಹ ಬಳ್ಳಾರಿ3.50 ಲಕ್ಷ ಲಂಚ ಪಡೆಯುವಾಗ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನಗರಾಭಿವೃದ್ಧಿ ಪ್ರಾಧಿಕಾರದ ಸರ್ವೇಯರ್ ಶಾಂತಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲೇಔಟ್ ಪ್ಲ್ಯಾನ್ ಡೆವಲಪ್ಮೆಂಟ್ ಅಪ್ರೂವಲ್ ಮಾಡಲು ವೀರೇಶ್ ಎಂಬವರ ಬಳಿ ಸರ್ವೇಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದ. ವೀರೇಶ್ ಅವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಶಾಂತಮೂರ್ತಿ ಪರವಾಗಿ ಮೊಹಮ್ಮದ್ ಸಾಜೀದ್ ಎಂಬಾತ ವೀರೇಶ್‌ನಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ […]

Continue Reading

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಮಂದಿಗೆ ಗಾಯ

ಸುದ್ದಿ ಸಂಗ್ರಹ ಮೈಸೂರುಮೈಸೂರಿನ ರಿಂಗ್ ರಸ್ತೆಯ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಸಾಹೀನ್ ಮತ್ತು ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ […]

Continue Reading

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೆ ಬ್ಲ್ಯಾಕ್‌ಮೇಲ್‌: ಹಣ ಹೊಂದಿಸಲು ಅತ್ತಿಗೆಯನ್ನೆ ಮುಗಿಸಿದ ನಾದಿನಿ

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಚಿನ್ನದ ಸರ ಕದ್ದು ಆಕೆಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಯಾರೂ ಊಹೆ ಮಾಡದ ಸಿನಿಮೀಯ ಟ್ವಿಸ್ಟ್ ಸಿಕ್ಕಿದೆ. ನಾದಿನಿಯೇ ತನ್ನ ಸಹೋದರ ಸಂಬಂಧಿಯ ಜೊತೆ ಸೇರಿ ಅಣ್ಣನ ಹೆಂಡತಿಯನ್ನು ಕೊಂದಿರುವದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ನಗರದ ಬಾಪೂಜಿ ನಗರದ ನರಸಿಂಹಮೂರ್ತಿಯವರ ಮನೆಯಲ್ಲಿ ಮೇ 28 ರಂದು ಆತನ ಸೊಸೆ ಪುಷ್ಪಲತಾಳನ್ನ (23) ಕತ್ತು ಕೊಯ್ದು ಕೊಲೆ ಮಾಡಿದಂತೆ ಶವ ಪತ್ತೆಯಾಗಿತ್ತು. ಪುಷ್ಪಲತಾಳ ಜೊತೆಗಿದ್ದ ಆಕೆಯ ನಾದಿನಿ ಭವ್ಯಾ, […]

Continue Reading

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

ಸುದ್ದಿ ಸಂಗ್ರಹ ರಾಯಚೂರುಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22) ನೀರು ಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂಜೆಯ ಬಳಿಕ ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೆ ಈಜಲು ಹೋಗಿ ನೀರು […]

Continue Reading

ಕಲಬುರಗಿ: ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನವಿ

ಸುದ್ದಿ ಸಂಗ್ರಹ ಕಲಬುರಗಿ2026–27ನೇ ಸಾಲಿನ ಶೈಕ್ಷಣಿಕ ವರ್ಷವು ಜೂನ್ 1ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಆಯೋಜಿಸಲಾಗುತ್ತಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಸಂಕನೂರ್‌ ಪಾಲಕ–ಪೋಷಕರಲ್ಲಿ ಮನವಿ ಮಾಡಿದ್ದಾರೆ. ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಪಾಲಕ–ಪೋಷಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ಗುಣಮಟ್ಟದ ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕಾಗಿದ್ದು, ಅದನ್ನು ಈಡೇರಿಸುವ ಮತ್ತು ಸಮೃದ್ಧ ಸಮಾಜ ನಿರ್ಮಾಣದ ಭದ್ರ ಅಡಿಪಾಯ ಹಾಕುವ ಜವಾಬ್ದಾರಿ ಪಾಲಕರ ಮೇಲಿದೆ. ಶಾಲೆ ಮತ್ತು […]

Continue Reading

ಧರ್ಮಸ್ಥಳ: ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಸುದ್ದಿ ಸಂಗ್ರಹ ಮಂಗಳೂರುಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ವೃದ್ಧೆಯನ್ನು […]

Continue Reading

ಬಿರುಗಾಳಿ ಸಹಿತ ಧಾರಾಕಾರ ಮಳೆ: ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

ಸುದ್ದಿ ಸಂಗ್ರಹ ಬೀದರ್ಭಾರಿ ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ನಡೆದಿದೆ. 6 ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಈ ವೇಳೆ ಮೇಲ್ಛಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಬಾಲಕಿ ಮೇಲೆ ಬಿದ್ದು […]

Continue Reading

ಕಾಖಂಡಕಿಯಲ್ಲಿ ತನಾರತಿ ಉತ್ಸವ: ಭಕ್ತರಿಂದ ಹರಕೆ ಸಮರ್ಪಣೆ

ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀಕ್ಷೇತ್ರ ಕಾಖಂಡಕಿ ಸದ್ಗುರು ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶನಿವಾರ ಮಧ್ಯರಾತ್ರಿ ಭಕ್ತರು ತನಾರತಿ ಹೊತ್ತು ಗುರುದ್ವಯರಿಗೆ ತಮ್ಮ ಹರಕೆಯನ್ನು ತೀರಿಸಿದರು ಎಂದು ನಾಲವಾರ ಶ್ರೀ ಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ನಾಲವಾರ- ಕಾಖಂಡಕಿ ಮಠಗಳ ಪೀಠಾಧಿಪತಿ ಡಾ.ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬಾದಾಮಿ ಅಮಾವಾಸ್ಯೆ ನಿಮಿತ್ತ ದಕ್ಷಿಣ ಭಾರತದ ಮಹಾದೀಪಮೇಳವೆಂದೆ ಪ್ರಖ್ಯಾತವಾದ ನಾಲವಾರ ಮಠದ ಪರಂಪರೆಯ ತನಾರತಿ ಉತ್ಸವಕ್ಕೆ ಭಕ್ತರು […]

Continue Reading