ಶಾಲೆಗಳ ದಸರಾ ರಜೆ ವಿಸ್ತರಣೆಗೆ ಸರಕಾರಿ ನೌಕರರ ಸಂಘ ಸ್ವಾಗತ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿ ಅ.18ರ ವರೆಗೆ ವಿಸ್ತರಿಸಿದ ಸರಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಸ್ವಾಗತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕಾ ನೀಡಿರುವ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025ರ ಗಣತಿ ಕಾರ್ಯದಲ್ಲಿ ರಾಜ್ಯಾದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ಸೆ.22 […]

Continue Reading

‘ಅಮ್ಮ ಪ್ರಶಸ್ತಿ’ಗೆ ಬೆಳ್ಳಿ ಹಬ್ಬ, 25ನೇ ವರ್ಷದ ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಕಲಬುರಗಿ: ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರಖ್ಯಾತಿ ಪಡೆದಿದ್ದು, ಇದೀಗ 25ನೇ ವರ್ಷದ ಸಂಭ್ರಮದಲ್ಲಿದೆ. ಪತ್ರಕರ್ತ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಜಿಲ್ಲೆಯ ಸೇಡಂ ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 25ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ 2024 ಮತ್ತು 2025 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಳೆದ 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ 25ರ […]

Continue Reading

ಜಾತಿಗಣತಿ ಹೆಸರಿನಲ್ಲಿ ಬಂದು ಮಹಿಳೆ ಮೇಲೆ ಹಲ್ಲೆ: ದರೋಡೆಗೆ ಯತ್ನ ?

ಶಿವಮೊಗ್ಗ: ಜಾತಿಗಣತಿ ಹೆಸರಿನಲ್ಲಿ ಬಂದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿರುವ ಆರೋಪ ಶಿವಮೊಗ್ಗದಲ್ಲಿ ಕೇಳಿಬಂದಿದೆ. ಮನೆಯಲ್ಲಿ ಪುರುಷರಿಲ್ಲದ ವೇಳೆ ಗಣತಿ ಹೆಸರಿನಲ್ಲಿ ಬಂದವರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದ್ದಾರೆ. ಈ ವೇಳೆ ಆಧಾರ್​ ಕಾರ್ಡ್​ ತರಲು ಮನೆಯೊಳಗೆ ಹೋಗಿದ್ದ ಮಹಿಳೆ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಹಲ್ಲೆಗೆ ಒಳಗಾದ ಮಹಿಳೆಯನ್ನು ದಿಲ್‌ಶಾದ್‌ ಎಂದು ಗುರುತಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಕ್ಲಾಕ್‌ಪೇಟೆಯ ಆಜಾದ್ ನಗರದ 2ನೇ ತಿರುವಿನಲ್ಲಿನ ಮನೆಗೆ ಗಣತಿ ಹೆಸರಿನಲ್ಲಿ ತಸ್ಲಿಮಾ ಹಾಗೂ ಅಸ್ಲಾಂ […]

Continue Reading

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

ಕಲಬುರಗಿ: ಉತ್ತರ ಪ್ರದೇಶದ ಕಾನಪುರನಲ್ಲಿ ಆರಂಭವಾದ ಐ ಲವ್ ಮೊಹಮ್ಮದ್ ಬ್ಯಾನರ್ ಸಾಕಷ್ಟು ವಿವಾದ ಸೃಷ್ಟಿಸಿದ್ದು, ಇದೀಗ ಈ ಐ ಲವ್ ಮೊಹಮದ್ ಎಂಬ ಬ್ಯಾನರ್ ಕಲಬುರಗಿಗೂ ಕಾಲಿಟ್ಟಿದೆ. ವೈದ್ಯಕೀಯ ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಬ್ಯಾನರ್ ಕಂಡು ಬಂದಿದ್ದು, ವಿವಿಧ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಐ ಲವ್ ಮೊಹಮದ್ ಬ್ಯಾನರ್ […]

Continue Reading

ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ: ಹುಬ್ಬಳ್ಳಿ ಕಿಮ್ಸ್’ನಲ್ಲಿ ಅಪರೂಪದ ಘಟನೆ

ಹುಬ್ಬಳ್ಳಿ,: ಜಗತ್ತಿನಲ್ಲಿ ‌ಸಯಾಮಿ ಮಕ್ಕಳ ಜನನ ಸೇರಿದಂತೆ ಅನೇಕ ಅಪರೂಪದ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇರುತ್ತವೆ. ಆದರೆ ಹುಬ್ಬಳ್ಳಿಯ ಕಿಮ್ಸ್​ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಎರಡನೇ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ಜನ್ಮ ನೀಡಿದ ಮಗುವಿನೊಳಗೊಂದು ಭ್ರೂಣ ಇರೋದು ಪತ್ತೆಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕಿಮ್ಸ್ ನ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ದಾಖಲಾಗಿದ್ದರು. ಕಳೆದ‌ ಸೆಪ್ಟಂಬರ್ 23ರಂದು ಗಂಡು ಮಗುವಿಗೆ ಈಕೆ ಜನ್ಮ ನೀಡಿದ್ದಾಳೆ. ಮಗುವಿನ ದೇಹದಲ್ಲಿ ಕೆಲ […]

Continue Reading

ನಾಲವಾರ ಶ್ರೀಗಳ ಜನ್ಮದಿನೋತ್ಸವ: ಅಂಧ, ಬುದ್ಧಿಮಾಂದ್ಯರಿಗೆ ಉಚಿತ ಕ್ಷೌರ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಚಿತ್ತಾಪುರ ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ ಅ.1 ರಂದು ಅನಾಥ, ನಿರ್ಗತಿಕ, ಬುದ್ಧಿಮಾಂದ್ಯರಿಗೆ ಉಚಿತ ಕ್ಷೌರ ಸೇವೆ ಮಾಡಲಾಗುವುದು ಎಂದು ಹಡಪದ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ (ಎನ್) ಹೇಳಿದರು. ಕಲಬುರಗಿ ನಗರದ ಬಿದ್ದಾಪೂರ ಕಾಲೋನಿಯ ಅನಾಥ, ನಿರ್ಗತಿಕ ಮತ್ತು ಬುದ್ಧಿಮಾಂದ್ಯರ ಕೇಂದ್ರಕ್ಕೆ ಭೇಟಿ ನೀಡಿ ಉಚಿತ ಕ್ಷೌರ ಸೇವೆ […]

Continue Reading

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್

ವಿಜಯಪುರ: ಮಹಾರಾಷ್ಟ್ರದಲ್ಲಿ ಮಳೆ ಎಫೆಕ್ಟ್‌ ಹಿನ್ನೆಲೆ ಜಯಪುರದಲ್ಲಿ ಭೀಮಾನದಿ‌ ಪ್ರವಾಹ ಉಂಟಾಗಿದೆ. ಹೀಗಾಗಿ ಈ ಭಾಗದ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್ ಆದ ಘಟನೆ ನಡೆದಿದೆ. ನೀರಿದ್ದ ಕಾರಣ ಸೇತುವೆ ಮೇಲೆ ವಾಹನ ಕೆಟ್ಟು ಅಧಿಕಾರಿಗಳು ಸಮಸ್ಯೆ ಅನುಭವಿಸಿದ್ದಾರೆ. ಪಿಡಬ್ಲ್ಯೂಡಿ ಅಧಿಕಾರಿಗಳು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ಭೀಮಾ ನದಿ ಪಾತ್ರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಪ್ರವಾಹದಿಂದ ಅಧಿಕ ನೀರು ಬಂದಿದ್ದು, ರಸ್ತೆಯ ಮೇಲೆ ಸಂಚಾರ ಮಾಡುವಾಗ ವಾಹನ ಕೈಕೊಟ್ಟಿದೆ. ಕೊನೆಗೆ […]

Continue Reading

ಪ್ರತಿಯೊಬ್ಬರಲ್ಲಿ ರಾಷ್ಟ್ರಪ್ರಜ್ಞೆ ಮೈಗೂಡಲಿ: ಡಾ.ಸಿದ್ದಲಿಂಗ ಶ್ರೀ

ಕಲಬುರಗಿ: ಪ್ರತಿಯೊಬ್ಬರು ಧರ್ಮ ಮತ್ತು ಪ್ರದೇಶಕ್ಕೆ ಪ್ರಾತಿನಿಧ್ಯ ನೀಡದೆ, ಎಲ್ಲರು ಭಾರತೀಯರು ಒಂದೆ ಎಂಬ ರಾಷ್ಟ್ರಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಯಡ್ರಾಮಿ ವಿರಕ್ತ ಮಠದ ಪೂಜ್ಯ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಜೇವರ್ಗಿ ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ‘ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಶಿಕ್ಷಕರ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ’ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ತಂದೆ-ತಾಯಿ, ಗುರು-ಹಿರಿಯರು, ದೇಶಕ್ಕೆ ಗೌರವ ನೀಡಬೇಕು. ವಿದ್ಯಾರ್ಥಿ ದಿಸೆಯಿಂದಲೇ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಕರು […]

Continue Reading

ಬಾಡಿಗೆಗೆಂದು ಸುಮಾರು 500 ಕಾರುಗಳನ್ನು ಪಡೆದು ಗಿರವಿಗೆ ಇಟ್ಟ ಭೂಪ

ಬಳ್ಳಾರಿ: ಬಾಡಿಗೆ ವಾಹನಗಳ ಟ್ರೆಂಡ್​ ಸದ್ಯ ಜೋರಾಗಿದೆ. ಅದರಲ್ಲೂ ಸೆಲ್ಫ್​ ಡ್ರೈವಿಂಗ್​ಗೆಂದು ವಾಹನ ಪಡೆಯುವವರೆ ಹೆಚ್ಚು, ಹೀಗಾಗಿ ಕೆಲ ವಾಹನಗಳ ಮಾಲಿಕರು ಕಂಡ ಕಂಡವರಿಗೆ ವಾಹನಗಳನ್ನು ಬಾಡಿಗೆಗೆ ಕೊಡುವುದು ಉಂಟು. ಅಂತಹ ಮಾಲಿಕರಿಗೆ ಬಳ್ಳಾರಿಯಲ್ಲೊಬ್ಬ ವ್ಯಕ್ತಿ ಭರ್ಜರಿ ಶಾಕ್​ ಕೊಟ್ಟಿದ್ದಾನೆ. ಯಾಮಾರಿ ಯಾರ್ಯಾರಿಗೋ ವಾಹನಗಳನ್ನು ಬಾಡಿಗೆ ನೀಡಿದರೆ, ಅವು ಇನ್ಯಾರ ಬಳಿ ಗಿರವಿ ಇರುತ್ತವೆ ಎಂಬುದು ಪ್ರೂವ್ ಮಾಡಿ ತೋರಿಸಿದ್ದಾನೆ. ಕಾರು ಪಡೆದಿದ್ದು ಬಾಡಿಗೆಗೆ, ಇಟ್ಟಿದ್ದು ಗಿರವಿಗೆ ರಾಯಚೂರು ಜಿಲ್ಲೆಯ ಸಿಂಧನೂರಿನ M.D ಜಹೀದ್ ಭಾಷಾ ಅಲಿಯಾಸ್ […]

Continue Reading

ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಮತ್ತು ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಬೆಣ್ಣೆತೊರಾ ನದಿ ತುಂಬಿ ಹರಿಯುತ್ತಿದ್ದು, ಕಾಳಗಿ ಮತ್ತು ಚಿತ್ತಾಪುರ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗಿದೆ. ಪ್ರವಾಹ ಪೀಡಿತ […]

Continue Reading