ಭಾಗ್ಯಲಕ್ಷ್ಮಿ ಯೋಜನೆಗೆ ಕುತ್ತು ತಂದ ಬಾಲ್ಯ ವಿವಾಹ: ಯಾದಗಿರಿಯಲ್ಲಿ 189 ಫಲಾನುಭವಿಗಳಿಗೆ ಸೌಲಭ್ಯ ಅನುಮಾನ

ಸುದ್ದಿ ಸಂಗ್ರಹ ಯಾದಗಿರಿ ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಂಡು ಬಾಂಡ್‌ ಪಡೆದಿರುವ 189 ಫಲಾನುಭವಿಗಳಿಗೆ ಬಾಲ್ಯ ವಿವಾಹವಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಇಷ್ಟು ಫಲಾನುಭವಿಗಳು ಸರಕಾರದ ಯೋಜನೆಯ ಆರ್ಥಿಕ ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಅಲ್ಲದೆ ಕಾನೂನಿನ ಸಂಕಷ್ಟ ಎದುರಿಸುವ ಭೀತಿಯೂ ಶುರುವಾಗಿದೆ. ಕರ್ನಾಟಕದಲ್ಲಿ 2006-07ನೇ ಸಾಲಿನಲ್ಲಿ ಜಾರಿಗೊಳಿಸಿದ ಭಾಗ್ಯಲಕ್ಷ್ಮಿ ಯೋಜನೆಯಡಿ ಮೊದಲನೆಯ ವರ್ಷವೇ ನೋಂದಣಿಯಾಗಿರುವ ಫಲಾನುಭವಿಗಳಿಗೆ ನೀಡಿರುವ ಬಾಂಡ್‌ಗಳಿಗೆ ಈ ವರ್ಷ ಮೆಚುರಿಟಿ (ಪರಿಪಕ್ವ) ಆಗಿರುವುದರಿಂದ ಫಲಾನುಭವಿಗಳಿಗೆ ಮೆಚುರಿಟಿ ಹಣ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಆದ್ದರಿಂದ […]

Continue Reading

ಕಲಬುರಗಿ-ಬೆಂಗಳೂರು ವಂದೆ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

ಕಲಬುರಗಿ: ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಂದೆ ಭಾರತ್ ರೈಲು ಸಂಚಾರದ ಸಮಯವನ್ನು ಜನವರಿ 1 ರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ಹರ್ಷ ವ್ಯಕ್ತಪಡಿಸಿದ್ದಾರೆ. ಬಹುದಿನಗಳಿಂದ ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಂದೆ ಭಾರತ್ ರೈಲಿನ ಸಮಯ ಬದಲಾವಣೆ ಮಾಡುವಂತೆ ಕೋರಿ ಪ್ರಯಾಣಿಕರು ಒತ್ತಾಯಿಸುತ್ತಿದ್ದು, ರೈಲ್ವೆ ಇಲಾಖೆಯವರೊಂದಿಗೆ ಸತತವಾಗಿ ಚರ್ಚಿಸಿದ ಪರಿಣಾಮವಾಗಿ ಮುಂದಿನ ತಿಂಗಳು ಜನವರಿ 1 […]

Continue Reading

ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು: ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ

ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದರೂ ತಪ್ಪು ಕೆಲಸ ಮಾಡಲು ಹೊರಟರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದರು ಮದ್ಯದಂಗಡಿ […]

Continue Reading

ಲ್ಯಾಂಡಿಂಗ್‌ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ: ಲ್ಯಾಂಡಿಂಗ್‌ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದಂತಾಗಿದೆ. ಬೆಂಗಳೂರಿನಿಂದ ಸಂಜೆ 6:45ಕ್ಕೆ ಬಿಟ್ಟು 7:45ಕ್ಕೆ ಹುಬ್ಬಳ್ಳಿಗೆ ಬಂದಿದ್ದ 6ಇ7162 ಇಂಡಿಗೋ ವಿಮಾನದಲ್ಲಿ ಲ್ಯಾಂಡಿಂಗ್‌ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಆಕಾಶದಲ್ಲಿ 30 ನಿಮಿಷಗಳ ವಿಮಾನ ಸುತ್ತಾಟ ನಡೆಸಿದೆ. ಪೈಲಟ್ ಚಾಣಾಕ್ಷತನದಿಂದ 70ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಂತಾಗಿದೆ. 30 ನಿಮಿಷಗಳ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣಿಕರು ಕುಳಿತಿದ್ದರು. ಸುಮಾರು 8:15ಕ್ಕೆ ಲ್ಯಾಂಡ್ ವಿಮಾನ ಲ್ಯಾಂಡ್‌ ಆಗಿದೆ.

Continue Reading

ಕಾರು ಅಪಘಾತ: ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಕಲಬುರಗಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMS) ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೆಎಸ್‌ಎಂಸಿಎಲ್ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ […]

Continue Reading

ಪಾರಂಪರಿಕ ಸ್ಥಳಗಳಿಂದ ಇತಿಹಾಸ, ಸಂಸ್ಕೃತಿ ಉಳಿಯಲು ಸಾಧ್ಯ: ಮುಡಬಿ ಗುಂಡೇರಾವ

ಕಲಬುರಗಿ: ನಮ್ಮ ಜಿಲ್ಲೆ ಸೇರಿದಂತೆ ದೇಶದಲ್ಲಿ ಅನೇಕ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸ್ಥಳಗಳಿದ್ದು ಅವುಗಳನ್ನು ಉಳಿಸಿ, ಸಂರಕ್ಷಿಸಿ, ಅಭಿವೃದ್ಧಿಗೊಳಿಸುವುದು ಅವಶ್ಯಕವಾಗಿದೆ. ಇದರಿಂದ ನಮ್ಮ ದೇಶದ ಸಂಸ್ಕೃತಿ, ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ದೊರೆಯಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಟಪಟ್ಟರು. ನಗರದ ಬಹುಮನಿ ಕೋಟೆಯ ಆವರಣದಲ್ಲಿನ ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಪರಂಪರೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಾಮಿಯಾ ಮಸೀದಿಯು […]

Continue Reading

ಕೊಲೆಯತ್ನ ಆರೋಪ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅರೆಸ್ಟ್

ಕಲಬುರಗಿ: ಕೊಲೆಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ ಅವರನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮುತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ ಆಗ್ರಹಿಸಿದ್ದರು. ಅಲ್ಲದೆ ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮುತ್ಯಾ ಕಾರು ಚಾಲಕನ […]

Continue Reading

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕಾರವಾರ: ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಹಾನಗಲ್‌ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಬರುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ […]

Continue Reading

ಇದ್ದಕ್ಕಿದ್ದಂತೆ ಬಿಸಿಯಾಗ್ತಿರುವ ಮನೆಯ ಹಾಲ್‌ನ ಟೈಲ್ಸ್‌: ಬೆಚ್ಚಿಬಿದ್ದ ಜನ

ದಾವಣಗೆರೆ: ಕೆಲವೊಂದು ಘಟನೆಗಳು ವಿಜ್ಞಾನಕ್ಕೆ ಸವಾಲೆಸೆಯುವಂತಿರುತ್ತವೆ. ಅಂತಹದ್ದೆ ಒಂದು ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ರಾಜಾರಾಮ್ ಕಾಲೋನಿಯಲ್ಲಿ ನಡೆದಿದೆ. ನಗರದ ಶಿಕ್ಷಕ ಮಾರುತೇಶ್ ಅವರ ಮನೆಯಲ್ಲಿ ಹಾಲ್‌ನ ಟೈಲ್ಸ್ ಕಾದ ಕಾವಲಿಯಂತಾಗುತ್ತಿದೆ. ಇದರಿಂದ ಇಡಿ ಮನೆಯವರು ಅತಂಕದಲ್ಲಿ ಕಾಲ ಕಳೆಯುವಂತಾಗಿದೆ. ಟೈಲ್ಸ್‌ನ್ನು ಒದ್ದೆ ಬಟ್ಟೆಯಿಂದ ಒರೆಸಿದರೂ ಕೂಡ ಕಾವು ಹೆಚ್ಚಾಗುತ್ತಿದ್ದು, ಯಾವ ಕಾರಣಕ್ಕೆ ಟೈಲ್ಸ್’ಗಳು ಬಿಸಿಯಾಗುತ್ತಿವೆ ಎಂಬ ಪ್ರಶ್ನೆ ಕಾಡುತ್ತಿದೆ. ಸ್ಥಳಕ್ಕೆ ಖಗೋಳಶಾಸ್ತ್ರಜ್ಞರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

Continue Reading

ಕುಂದಾನಗರಿಯಲ್ಲಿ ಕುಳಿತು ಅಮೇರಿಕಾದ ನಾಗರಿಕರನ್ನ ವಂಚಿಸುತ್ತಿದ್ದ ಗ್ಯಾಂಗ್‌: 33 ಸೈಬರ್‌ ವಂಚಕರು ಅರೆಸ್ಟ್‌

ಬೆಳಗಾವಿ: ತಂತ್ರಜ್ಞಾನ ಬೆಳೆದಂತೆ ಆನ್‌ಲೈನ್‌ ವಹಿವಾಟು ಹೆಚ್ಚಾಗುತ್ತಲೆ ಇದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಸಾಮಾನ್ಯವಾಗಿ ಕರ್ನಾಟಕದಲ್ಲಿ ಎಲ್ಲೆ ಸೈಬರ್‌ ವಂಚನೆ ನಡೆದರೂ, ಅದರ ಹಿಂದೆ ವಿದೇಶಿಗರ ಲಿಂಕ್‌ ಇರುತ್ತಿತ್ತು. ಆದರೆ ಈಗ ಕುಂದಾನಗರಿಯಲ್ಲಿ ನಡೆದಿರೋದೆ ಬೇರೆ. ಬೆಳಗಾವಿಯಲ್ಲಿ ಕುಳಿತು ವಿಶ್ವದ ದೊಡ್ಡಣ್ಣ ಎನ್ನುವ ಅಮೇರಿಕಾದ ನಾಯಕರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಕಾಲ್ ಸೆಂಟರ್ ಹೆಸರಿನಲ್ಲಿ ಅನುಮತಿ ಪಡೆದು ವಂಚಿಸುತ್ತಿದ್ದ ಸೈಬರ್‌ ವಂಚಕರನ್ನ ಬೆಳಗಾವಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. […]

Continue Reading