ನಾಟಕಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ: ನಾಟಕಗಳು ಸಮಾಜದಲ್ಲಿರುವ ಅಂಕು-ಡೊಂಕುಗಳು, ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಪರಿಹಾರ ನೀಡುತ್ತವೆ ಎಂದು ಮುಖಂಡ ಶರಣಬಸಪ್ಪ ಎಚ್. ಕಾಂದೆ ಅಭಿಮತಪಟ್ಟರು. ಆಳಂದ ತಾಲೂಕಿನ ಜಕ್ಕಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಜರುಗಿದ ‘ತಾಯಿಯ ಕರುಳು’ ಸಾಮಾಜಿಕ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ನಾಟಕ ಅಥವಾ ರಂಗಭೂಮಿ ನಡದಾಡುವ ವಿಶ್ವವಿದ್ಯಾಲಯವಾಗಿದೆ. ವಾಸ್ತವ ಸ್ಥಿತಿಯನ್ನು ದೊಡ್ಡದು ಅಥವಾ ಚಿಕ್ಕದಾಗಿ ಹೇಳದೆ ಇರುವುದನ್ನು, ಇರುವ ಹಾಗೆಯೇ ಹೇಳುವ ರಂಗಭೂಮಿ, ಸಮಾಜದ ನೈಜ ಪ್ರತಿಬಿಂಬವಾಗಿದೆ ಎಂದರು. ಇಂದಿನ ಆಧುನಿಕತೆಯ […]

Continue Reading

ಸಾಮಾಜಿಕ ಸುಧಾರಣೆಗೆ ಅಲ್ಲಮಪ್ರಭುಗಳ ಕೊಡುಗೆ ಅನನ್ಯ

ಕಲಬುರಗಿ: ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ಅವರ ಕೊಡುಗೆ ಅನನ್ಯ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣ ಅಲ್ಲಮಪ್ರಭು ದೇವರ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಢನಂಬಿಕೆ, ಕಂದಾಚಾರ, ಅಂಧಶೃದ್ಧೆ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ […]

Continue Reading

ಜೀವನದ ಸಾರ ಸಂದೇಶದ ಭಾರತೀಯರ ಹೊಸ ವರ್ಷ ಯುಗಾದಿ

ಕಲಬುರಗಿ: ಬೇವು-ಬೆಲ್ಲ ಸವಿಯುವ ವಿಶೇಷತೆಯ ಯುಗಾದಿ ಹಬ್ಬವು ಜೀವನದಲ್ಲಿ ಬರುವ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಮಭಾವದ ಮೇರು ಸಂದೇಶ ಹೊಂದಿದೆ. ಪ್ರತಿಯೊಬ್ಬರು ಪ್ರಯತ್ನಶೀಲರಾಗಿದ್ದರೆ ಉನ್ನತ ಸಾಧನೆ ಮಾಡಲು ಸಾಧ್ಯ, ಕಷ್ಟಗಳನ್ನು ಮೆಟ್ಟಿನಿಲ್ಲಬೇಕು ಎಂಬ ಜೀವನದ ಸಾರ ಸಂದೇಶ ಸಾರುವ ಭಾರತೀಯರ ಹೊಸ ವರ್ಷ ಯುಗಾದಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಹೊಸ ವರ್ಷ […]

Continue Reading

ಒಳ ಮೀಸಲಾತಿ ಜಾರಿ‌ ಮಾಡಲು ಮತ್ತೆ ಸಮೀಕ್ಷೆ ಯಾಕೆ ಬೇಕು: ದೀಪಕ್ ಹೊಸ್ಸೂರಕರ್

ಚಿತ್ತಾಪುರ: ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮಹಂದಾಸ್ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿರುವ ಮಧ್ಯಂತರ ವರದಿ ಮೀಸಲಾತಿ ವರ್ಗೀಕರಣದ ಕುರಿತು ಎಲ್ಲೂ ಹೇಳಿಲ್ಲಲ ಮೊದಲಿಗೆ ಆದಿ ಕರ್ನಾಟಕ (ಎ.ಕೆ) ಆದಿ ದ್ರಾವಿಡ(ಎ.ಡಿ) ಜಾತಿಗಳಲ್ಲಿ ಗೊಂದಲವಿರುವುದರಿಂದ ಮತ್ತೊಂದು ಸಮೀಕ್ಷೆ ಮಾಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಸರ್ಕಾರ ಶಿಫಾರಸು ಮಾಡಿದೆ ಸಮೀಕ್ಷೆ ವಿವರಗಳು ಮತ್ತು ನಿರ್ವಹಣೆ ಮಾಡಲು ಸಮಿತಿ ರಚಿಸಬೇಕು ಎಂದು ಹೇಳಿರುವುದು ಸರಿಯಲ್ಲ ಎಂದು ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ತಿಳಿಸಿದ್ದಾರೆ. […]

Continue Reading

ಸಮಾಜಕ್ಕೆ ಹೃದಯವಂತರ ಅವಶ್ಯಕತೆಯಿದೆ: ಹಾರಕೂಡ ಶ್ರೀ

ಕಲಬುರಗಿ: ಸಮಾಜದಲ್ಲಿ ಜ್ಞಾನವಂತ, ಬುದ್ದಿವಂತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಮತ್ತು ಕೃತಿಯಲ್ಲಿ ಒಂದಾಗಿರುವ, ಸಮಾಜದಲ್ಲಿರುವ ಬಡವರು, ಅಸಹಾಯಕರ ಕಣ್ಣೀರು ಒರೆಸುವ, ಸಹಾಯ ಹಸ್ತ ಚಾಚುವ, ಜಾತಿ-ಧರ್ಮ ಮೀರಿ, ಸರ್ವರನ್ನು ಪ್ರೀತಿಯಿಂದ ಕಾಣುವ, ತಂದೆ-ತಾಯಿ, ಗುರು-ಹಿರಿಯರು, ಜನ್ಮಭೂಮಿ, ಗುರು-ಲಿಂಗ-ಜಂಗಮ ಪ್ರೇಮಿಗಳಾಗಿರುವ ಹೃದಯವಂತ ಜನರು ಪ್ರಸ್ತುತ ಸಮಾಜಕ್ಕೆ ಅವಶ್ಯಕತೆಯಿದೆ, ಅವರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ಹಾರಕೂಡ ಮಠದ ಪೂಜ್ಯ ಡಾ.ಚನ್ನವೀರ ಶಿವಾಚಾರ್ಯರು ಆಶಯ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ತಂಬಾಕವಾಡಿಯ ಜಕ್ಕೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜರುಗಿದ ಧರ್ಮಸಭೆ ಉದ್ಘಾಟಿಸಿ ಆಶೀರ್ವಚನ […]

Continue Reading

ರಂಗಭೂಮಿ ಉಳಿಸಿ ಬೆಳೆಸುವ ಸವಾಲಿನ ಕಾರ್ಯ ಮಾಡಬೇಕು

ಕಲಬುರಗಿ: ಆಧುನಿಕತೆ, ವಿದೇಶಿ ಸಂಸ್ಕೃತಿಯ ಅನುಕರಣೆ ಮತ್ತು ಎಲೆಕ್ಟ್ರಾನಿಕ್ಸ್ ಮಾಧ್ಯಮಗಳ ಪ್ರಭಾವದಲ್ಲಿ ರಂಗಭೂಮಿ ಸಂದಿಗ್ದ ಪರಿಸ್ಥಿತಿಯಲ್ಲಿದೆ. ಜನರು ನಾಟಕ ನೋಡುವುದು, ರಂಗಭೂಮಿ ಕಲೆ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ಅಗತ್ಯ. ಪ್ರಸ್ತುತ ಸಂದರ್ಭದಲ್ಲಿ ರಂಗಭೂಮಿ ಉಳಿಸಿ-ಬೆಳೆಸುವುದು ಸವಾಲಿನ ಕಾರ್ಯವಾಗಿದ್ದು, ಇದನ್ನು ಜವಾಬ್ದಾರಿಯಿಂದ ಮಾಡಬೇಕಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ, ನಾಟಕ ರಚನಾಕಾರ ಹಣಮಂತರಾಯ ಮಂಗಾಣೆ ಮಾರ್ಮಿಕವಾಗಿ ಹೇಳಿದರು. ನಗರದ ಕಸ್ತೂರಿ ನಗರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ರಂಗಭೂಮಿ ದಿನಾಚರಣೆ’ ಕಾರ್ಯಕ್ರಮದಲ್ಲಿ […]

Continue Reading

ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ

ಕಲಬುರಗಿ: ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆ ಜ್ವರ ಬರುವುದು, ತೂಕ ಇಳಿಕೆ, ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಇದರ ಬಗ್ಗೆ ನಿರ್ಲಕ್ಷ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು. 2030ಕ್ಕೆ ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಜೀವನ ಸಾಗಿಸಲು ನಿಸರ್ಗ, ಹವಾಮಾನ ತುಂಬಾ ಅವಶ್ಯಕ: ಎಚ್.ಬಿ ಪಾಟೀಲ

ಕಲಬುರಗಿ: ಯಾವುದೆ ಜೀವಿಯು ಜನಿಸಿ, ಬೆಳವಣಿಗೆ ಹೊಂದಿ, ತನ್ನ ಜೀವನ ಸಾಗಿಸಲು ನಿಸರ್ಗ, ಹವಾಮಾನ ಅತ್ಯಂತ ಅವಶ್ಯಕವಾಗಿದೆ. ಉತ್ತಮವಾದ ನಿಸರ್ಗ, ಪರಿಸರವಿದ್ದರೆ ಎಲ್ಲಾ ಜೀವರಾಶಿಗಳು ಸದೃಢವಾಗಿ, ದೀರ್ಘಕಾಲವಾಗಿ ಜೀವಿಸಲು ಸಾಧ್ಯವಾಗಿದೆ. ನಿಸರ್ಗದಲ್ಲಿ ಏನಾದರೂ ಏರುಪೇರಾದರೆ, ಎಲ್ಲಾ ಜೀವರಾಶಿಗಳಿಗೂ ತೊಂದರೆಯಿದ್ದು, ನಿಸರ್ಗವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ವಿದ್ಯಾ ಮಂದಿರ’ದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಹವಾಮಾನ ದಿನಾಚರಣೆ’ […]

Continue Reading

ಜೀವ ಸಂಕುಲದ ಉಳಿವಿಗೆ ಉತ್ತಮ ಹವಾಮಾನ ಅಗತ್ಯ

ಕಲಬುರಗಿ: ಯಾವುದೆ ಜೀವಿಯು ಜನಿಸಿ, ಬೆಳವಣಿಗೆ ಹೊಂದಿ, ತನ್ನ ಜೀವನ ಸಾಗಿಸಬೇಕಾದರೆ ನಿಸರ್ಗ, ಹವಾಮಾನ ಅತ್ಯಂತ ಅವಶ್ಯಕವಾಗಿದೆ. ಉತ್ತಮವಾದ ನಿಸರ್ಗ, ಪರಿಸರವಿದ್ದರೆ ಎಲ್ಲಾ ಜೀವರಾಶಿಗಳು ಸದೃಢವಾಗಿ, ದೀರ್ಘಕಾಲ ಜೀವಿಸಲು ಸಾಧ್ಯವಾಗಿದೆ. ನಿಸರ್ಗದಲ್ಲಿ ಏನಾದರೂ ಏರುಪೇರಾದರೆ, ಎಲ್ಲಾ ಜೀವರಾಶಿಗಳಿಗೂ ತೊಂದರೆಯಿದ್ದು, ನಿಸರ್ಗವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ವಿದ್ಯಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಹವಾಮಾನ ದಿನಾಚರಣೆ’ […]

Continue Reading

ಜಲ ಸಂರಕ್ಷಣೆ ರಾಷ್ಟ್ರೀಯ ಆಂದೋಲನ, ಪ್ರತ್ಯೇಕ ಪಠ್ಯವಾಗಲಿ

ಕಲಬುರಗಿ: ಜಲ ಎಂಬುದು ಕೇವಲ ಎರಡು ಅಕ್ಷರದ ಶಬ್ದವಲ್ಲ, ಅದು ಸಕಲ ಜೀವಿಗಳ ಉಸಿರು, ಅಸ್ತಿತ್ವಕ್ಕೆ ಕಾರಣವಾಗಿದೆ. ವಿವಿಧ ಕಾರಣಗಳಿಂದ ಜಲ ಸಂಪತ್ತಿನ ಕೊರತೆಯಾಗುವುದರ ಜೊತೆಗೆ ಪರಿಸರ ಅಸಮತೋಲನವಾಗುತ್ತಿದೆ. ಜಲ ಸಂರಕ್ಷಣೆ ಸರ್ಕಾರ, ಕೆಲವು ವ್ಯಕ್ತಿ, ಸಂಘ-ಸAಸ್ಥೆಗಳ ಜವಾಬ್ದಾರಿಯಾಗಿರದೆ, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಜಲ ಸಂರಕ್ಷಣೆಯ ಕಾರ್ಯ ರಾಷ್ಟಿçÃಯ ಆಂದೋಲನದ ರೂಪದಲ್ಲಿ ಜರುಗುವುದರ ಜೊತೆ ಪ್ರತ್ಯೇಕ ಪಠ್ಯವಾಗಬೇಕಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಹಳೆ ಜೇವರ್ಗಿ ರಸ್ತೆಯ ಪಿ&ಟಿ ಕ್ವಾಟರ್ಸ್ […]

Continue Reading