ಹಿಮೋಫಿಲಿಯಾ ಅನುವಂಶಿಕ ಕಾಯಿಲೆ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತ ಹೆಪ್ಪುಗಟ್ಟುವ ಕ್ರಿಯೆಗೆ ಬೇಕಾಗುವ ಅಂಶಗಳಲ್ಲಿ ಕೆಲವು ಅಂಶಗಳ ತೀವ್ರ ಕೊರತೆಯಿಂದ ದೇಹದಲ್ಲಿ ಗಾಯಗಳಾದರೆ, ರಕ್ತನಾಳಗಳಿಗೆ ಯಾವುದೆ ಪೆಟ್ಟಾದರೆ ರಕ್ತಸ್ರಾವ ನಿರಂತರವಾಗುತ್ತದೆ. ಸಾಮಾನ್ಯವಾಗಿ ಈ ರೋಗದ ಮುಖ್ಯ ಲಕ್ಷಣ ಎಂದರೆ ನಿರಂತರ ರಕ್ತ ಸ್ರಾವವಾಗುವದು. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಖಾದ್ರಿ ಚೌಕ್’ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿಮೋಫಿಲಿಯಾ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, […]

Continue Reading

ಸಾಮಾಜಿಕ ಸಮತೋಲನ ಕಾಪಾಡುವ ಶಕ್ತಿ ಚಿತ್ರಕಲೆಗಿದೆ

ಕಲಬುರಗಿ: ದೃಶ್ಯ ಕಲೆಯು ಅತ್ಯಂತ ಪರಿಣಾಮಕಾರಿಯಾದ ಮಾಧ್ಯಮವಾಗಿದ್ದು, ಇದು ಮನುಷ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಸಮಾಜದಲ್ಲಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ, ಅವುಗಳಿಗೆ ಪರಿಹಾರವನ್ನು ಸೂಚಿಸಿ ಸಮಾಜದ ಸಮತೋಲನ ಸ್ಥಿತಿಯನ್ನು ಕಾಪಾಡುವ ಶಕ್ತಿ ದೃಶ್ಯಕಲೆಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘ವಿಶ್ವ ಕಲಾ ದಿನಾಚರಣೆ’ಯಲ್ಲಿ ಮಾತನಾಡಿದ […]

Continue Reading

ಸಾಮಾನ್ಯರಂತೆ ಬಸ್‌ನಲ್ಲಿ ಪ್ರಯಾಣಿಸಿದ ಕೃಷ್ಣ ಬೈರೇಗೌಡ: ಸಚಿವರ ಸರಳತೆಗೆ ಭಾರಿ ಮೆಚ್ಚುಗೆ

ವಿಜಯಪುರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾನ್ಯರಂತೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನಿಂದ ಸಾರಿಗೆ ಬಸ್‌ನಲ್ಲಿ ವಿಜಯಪುರಕ್ಕೆ ಅವರು ತೆರಳಿದ್ದು, ಸಚಿವರ ಸರಳತೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಇತರ ಸಂಘಟನೆಗಳಿಂದ ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಭಾಗಿಯಾಗಲು, ಕೆಕೆಆರ್‌ಟಿಸಿ ಕಲ್ಯಾಣ ರಥ ಬಸ್‌ನಲ್ಲಿ ವಿಜಯಪುರಕ್ಕೆ ತೆರಳಿದ ಸಚಿವ ಕೃಷ್ಣಬೈರೇಗೌಡರನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಹಾಗೂ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಕಲ್ಯಾಣ ರಥ ಬಸ್‌ನಿಂದ ಇಳಿದ […]

Continue Reading

ವಿಶ್ವದ ಪ್ರಥಮ ಸ್ತ್ರೀವಾದಿ ಚಿಂತಕಿ ಅಕ್ಕಮಹಾದೇವಿ

ಕಲಬುರಗಿ: ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನೈಜ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಚಿಕ್ಕ ವಯಸ್ಸಿನಲ್ಲಿಯೇ ಸಕಲ ಸುಖವನ್ನು ತ್ಯಜಿಸಿ, ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಅಕ್ಕಮಹಾದೇವಿಯವರು ವಿಶ್ವದ ಪ್ರಥಮ ಸ್ತ್ರೀವಾದಿ ಚಿಂತಕರಾಗಿದ್ದಾರೆ ಎಂದು ಶರಣ ಚಿಂತಕಿ ಜಯಶ್ರೀ ಎಚ್ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಶನಿವಾರ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ, ಸಾರ್ವಕಾಲಿಕ ವಿಶ್ವ ದಾಖಲೆಯ 5000ನೇ ಕಾರ್ಯಕ್ರಮವಾದ ‘ವೈರಾಗ್ಯ […]

Continue Reading

ತಾಯಂದಿರು ಆರೋಗ್ಯ ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯ

ಕಲಬುರಗಿ: ಆರೋಗ್ಯವಂತ ಮಗು ಪಡೆಯಬೇಕಾದರೆ, ಸದೃಢ, ಆರೋಗ್ಯಯುತ ತಾಯಂದಿರಿರಬೇಕು. ಸಾಮಾನ್ಯವಾಗಿ ತಾಯಂದಿರು ರಕ್ತಹೀನತೆ ಸಮಸ್ಯೆ ಎದುರಿಸುತ್ತಾರೆ. ಶುದ್ದವಾದ ಕುಡಿಯುವ ನೀರಿನ ಸೇವನೆ, ದಿನಕ್ಕೆ 7-8ರಿಂದ ಗಂಟೆಗಳ ಕಾಲ ಗಾಡ ನಿದ್ರೆ, ವ್ಯಾಯಾಮ, ಯೋಗ, ಧನಾತ್ಮಕ ಚಿಂತನೆ, ಎಣ್ಣೆಯಲ್ಲಿ ಹುರಿದ, ಕರಿದ ಮಸಾಲೆಯುಕ್ತ, ಹೆಚ್ಚು ಹುಳಿ, ಖಾರ, ಉಪ್ಪು ಇರುವ ಆಹಾರ ಸೇವನೆ ಮಾಡದಿರುವ ಮತ್ತಿತರ ಆರೋಗ್ಯಕರ ಕ್ರಮಗಳನ್ನು ಪಾಲಿಸುವ ಮೂಲಕ ತಾಯಂದಿರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು. […]

Continue Reading

ಶ್ರೇಷ್ಠ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ

ಕಲಬುರಗಿ: ಮಹಿಳಾ ಶಿಕ್ಷಣಕ್ಕೆ ಪ್ರಯತ್ನ, ಸ್ತಿçÃ-ಪುರುಷರ ನಡುವಿನ ಅಸಮಾನತೆ ನಿರ್ಮೂಲನೆ, ಜಾತಿ, ಧರ್ಮದ ಹೆಸರಿನ ಮೇಲೆ ನಡೆಯುತ್ತಿದ್ದ ವ್ಯಾಪಕ ಶೋಷಣೆ, ಮೌಢ್ಯತೆ, ಅಂಧಶೃದ್ಧೆ, ಅಸ್ಪೃಷ್ಯತೆ ಹೋಗಲಾಡಿಸಲು ನಿರಂತರವಾಗಿ ಇಡೀ ಜೀವನದುದ್ದಕ್ಕೂ ಹೋರಾಟ ಮಾಡಿದ ಮಹಾತ್ಮ ಜ್ಯೋತಿಬಾ ಫುಲೆಯವರು ಶ್ರೇಷ್ಠ ಸಮಜ ಸುಧಾರಕರಾಗಿದ್ದರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿಯ ಕರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಮಹಾತ್ಮ […]

Continue Reading

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಮುಂಜಾಗೃತೆ ವಹಿಸುವುದು ಅಗತ್ಯ

ಕಲಬುರಗಿ: ಕೇಂದ್ರ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಮೆದಳು, ದೇಹದ ಚಲನೆಗೆ ತೊಂದರೆ ಉಂಟು ಮಾಡುತ್ತದೆ. ಕೈಕಾಲು ಜೋಮು ಹಿಡಿಯುವುದು, ನಿಲ್ಲಲು ಹಾಗೂ ನಡೆಯಲು ಆಯಾಸವಾಗುವದು, ನಿದ್ರಾಹೀನತೆ, ಮಾತಿನಲ್ಲಿ ಬದಲಾವಣೆ, ಮೂಗಿನ ಕಾರ್ಯದಲ್ಲಿ ತೊಂದರೆ, ಮೂತ್ರ ಸೋರುವಿಕೆಯಂತಹ ಲಕ್ಷಣಗಳು ಪಾರ್ಕಿನ್ಸನ್ ಕಾಯಿಲೆಯದಾಗಿದೆ, ಇದರ ಬಗ್ಗೆ ಮುಂಜಾಗೃತೆ ವಹಿಸುವುದು ಅಗತ್ಯ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ […]

Continue Reading

ಸ್ವಾತಂತ್ರ್ಯ ಹೋರಾಟದ ಮಹಿಳಾ ಸೇನಾನಿ ಕಸ್ತೂರಬಾ ಗಾಂಧೀಜಿ

ಕಲಬುರಗಿ: ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಹೋರಾಟಕ್ಕೆ ಸಂಪೂರ್ಣವಾಗಿ ಕೈಜೋಡಿಸುವ ಮೂಲಕ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿದ ಸ್ವಾತಂತ್ರ್ಯ ಹೋರಾಟದ ವೀರ ಮಹಿಳೆಯಾಗಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಕಸ್ತೂರಬಾ ಗಾಂಧೀಜಿಯವರ 156ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಬಾ ಅವರು ರಾಷ್ಟ್ರಪತಿ ಗಾಂಧೀಜಿವರ ಪತ್ನಿ ಮಾತ್ರವಲ್ಲದೆ ಸ್ವಾತಂತ್ರ್ಯ ಆಂದೋಲದಲ್ಲಿ […]

Continue Reading

ವಾಡಿ ಪಟ್ಟಣದಲ್ಲಿ ಮತ್ತೆ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ವೀರಣ್ಣ ಯಾರಿ ಒತ್ತಾಯ

ವಾಡಿ: ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ಕುಡಿಯಲು, ಬಳಸಲು ನೀರಿಲ್ಲ, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಪೈಪ್ ಲೈನ್ ಸಮಸ್ಯೆ ಎನ್ನುತ್ತಾರೆ ಪದೆ ಪದೆ ಜನಸಾಮಾನ್ಯರು ನೀರಿಗಾಗಿ ಗೋಳಾಡುವಂತೆ ಮಾಡುತ್ತಿರುವ ಪುರಸಭೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸೇಡಂ ಸಹಾಯಕ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಸುಮಾರು 55 ಸಾವಿರ ಜನಸಂಖ್ಯೆ ಹೊಂದಿರುವ ವಾಡಿ ಪಟ್ಟಣಕ್ಕೆ ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ‌ […]

Continue Reading

ಹೋಮಿಯೋಪಥಿ ಅಡ್ಡಪರಿಣಾಮವಿಲ್ಲದ ಉತ್ತಮ ವೈದ್ಯಕೀಯ ಪದ್ಧತಿ

ಕಲಬುರಗಿ: ಹೋಮಿಯೋಪಥಿಯು ಯಾವುದೆ ಅಡ್ಡಪರಿಣಾಮಗಳಿಲ್ಲದ, ಬಹುತೇಕ ಎಲ್ಲಾ ಕಾಯಿಲೆಗಳಿಗೆ ಸೂಕ್ತ ಪರಿಣಾಮಕಾರಿ ಚಿಕಿತ್ಸೆ ಹೊಂದಿರುವ, ರೋಗ ಮುಕ್ತತೆ ಹೊಂದಿ ಜೀವನ ನಿರ್ವಹಣೆಗೆ ಪೂರಕವಾದ ವಿಶೇಷ ಚಿಕಿತ್ಸಾ ವಿಧಾನವಾಗಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಅಗತ್ಯವಾಗಿದೆ ಎಂದು ಹೋಮಿಯೋಪಥಿ ತಜ್ಞ ವೈದ್ಯ ಡಾ.ಮಂಜುನಾಥ ಬಿ ಪವಾಡಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಜರುಗಿದ ‘ವಿಶ್ವ ಹೋಮಿಯೋಪಥಿ ದಿನಾಚರಣೆ’ಯನ್ನು ‘ಹೋಮಿಯೋಪಥಿ […]

Continue Reading