ಮುಂಜಾಗ್ರತೆ ವಹಿಸಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಾನವನ ದೇಹದ ಪ್ರಮುಖ ಭಾಗವಾದ ಕಿಡ್ನಿಗೆ ವಿವಿಧ ರೀತಿಯಿಂದ ತೊಂದರೆಯಾಗುತ್ತದೆ. ನಿರಂತರ ಆಯಾಸ, ನಿದ್ರೆಯ ತೊಂದರೆ, ಒಣಗಿದ ಚರ್ಮ, ಮೂತ್ರದಲ್ಲಿ ಉರಿಯೂತ ಮತ್ತು ರಕ್ತಪಾತ, ಸ್ನಾಯು ಸೆಳೆತದಂತಹ ಲಕ್ಷಣಗಳು ಕಿಡ್ನಿಯ ತೊಂದರೆಯನ್ನು ಸೂಚಿಸುತ್ತವೆ. ಆಗ ನಿರ್ಲಕ್ಷ ಮಾಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದು ಕಿಡ್ನಿಯನ್ನು ರಕ್ಷಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದರು. ಶೇಖರೋಜಾ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ […]

Continue Reading

ಧೂಮಪಾನದಿಂದ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

ಕಲಬುರಗಿ: ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಬುಧವಾರ ಜರುಗಿದ ‘ರಾಷ್ಟೀಯ ಧೂಮಪಾನ ನಿಷೇಧ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ ಅಗತ್ಯವಾಗಿದೆ. ಅದರಲ್ಲಿಯೂ ಯುವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ. ಆದರೆ ನಮ್ಮ […]

Continue Reading

ಸೂಕ್ತ ತಯಾರಿಯಿಂದ ಪರೀಕ್ಷೆ ಸುಲಭ: ಡಾ. ಪ್ರಹ್ಲಾದ ಬರ‍್ಲಿ

ಚಿತ್ತಾಪುರ: 10ನೇ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಸೂಕ್ತ ತಯಾರಿ ಮಾಡಿಕೊಂಡರೆ ಎಂತಹ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು ಎಂದು ಆರ್.ಜೆ ಕಾಲೇಜಿನ ಪ್ರಾಚಾರ್ಯ ಡಾ. ಪ್ರಲ್ಹಾದ್ ಬರ‍್ಲಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 10ನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ಬೇರೆಡೆಗೆ ಸೆಳೆಯುವ ಆಕರ್ಷಣೆ ಇದ್ದರು ಕೂಡ ಲೆಕ್ಕಿಸದೆ ಓದಿನ ಕಡೆಗೆ ಮಾತ್ರ ಗಮನಹರಿಸಿ ಅಧ್ಯಯನ ಮಾಡಿದರೆ, ಉತ್ತಮ […]

Continue Reading

ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆಗೆ ಹಾಜರು: ಸಂಪೂರ್ಣ ಪೊಲೀಸ್ ಕಸ್ಟಡಿಗೆ

ಕಲಬುರಗಿ: ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯ ಪರೀಕ್ಷೆಯಲ್ಲಿ ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ ಅವರನ್ನು ಇಲ್ಲಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ನಗರದ ಮಿಲಿಂದ್ ಶಾಲೆಯಲ್ಲಿ ಅರ್ಚನಾ ಎಂಬ ವಿದ್ಯಾರ್ಥಿನಿಯ ಬದಲಿಗೆ ಅಕ್ರಮವಾಗಿ ಸಂಪೂರ್ಣ ಪಾಟೀಲ ಬರೆಯುತ್ತಿರುವುದನ್ನು ದಲಿತ ಸೇನೆ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ತಕ್ಷಣ ಪೊಲೀಸರು […]

Continue Reading

ಸದೃಢ ಆರೋಗ್ಯ– ಮಾದಕವಸ್ತು ಮುಕ್ತ ಕರ್ನಾಟಕಕ್ಕಾಗಿ ಓಟ

ಕಲಬುರಗಿ: ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಅಪರಾಧ ತಡೆ ಮತ್ತು ತಂಬಾಕು ನಿಷೇಧ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ – 2025 ಓಟದಲ್ಲಿ 5 ಕಿ.ಮೀ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಹೆಬ್ಬಾಳ ಮಕ್ಕಳು ಭಾಗವಹಿಸಿ ಕ್ರಮವಾಗಿ ಮಹೇಶ 6ನೇ ಸ್ಥಾನ ಮತ್ತು ಸಮೀರ್ 8ನೇ ಸ್ಥಾನ ಪಡೆದಿದ್ದಕ್ಕಾಗಿ ಕಲಬುರಗಿ ನಗರ ಪೊಲಿಸ್ ಆಯುಕ್ತರಿಂದ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಇಂದು (ಸೋಮವಾರ) ಶಾಲೆಯಲ್ಲಿ ಪ್ರಭಾರಿ ಮುಖ್ಯ ಗುರುಗಳು ಮತ್ತು ಶಿಕ್ಷಕರಿಂದ […]

Continue Reading

ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆ ದೊರೆಯಲಿ

ಕಲಬುರಗಿ: ಕುಂಬಾರಿಕೆಗೆ ಆಧುನಿಕತೆಯಿಂದ ವೃತ್ತಿಗೆ ತೊಂದರೆಯಾಗುತ್ತಿದೆ. ಕಷ್ಟದ ಸ್ಥಿತಿಯಲ್ಲಿಯೂ ವೃತ್ತಿ ಕಾಪಾಡಿಕೊಂಡು ಬರುತ್ತಿರುವ ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆಯ ಯೋಜನೆಗಳು ಸಮರ್ಪಕವಾಗಿ ದೊರೆಯಬೇಕಾಗಿದೆ ಎಂದು ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಟಾಕೀಸ್ ಸಮೀಪದ ವೃತ್ತಿ ಕುಂಬಾರ ಶಿವಶರಣಪ್ಪ ಕುಂಬಾರ ಅವರಳ್ಳಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗೃಹ ಕೈಗಾರಿಕೆಯಲ್ಲಿ ಕುಂಬಾರಿಕೆ ಒಂದು. ಈ ವೃತ್ತಿಗೆ ಮಣ್ಣೆ ಆಧಾರ. […]

Continue Reading

ಸಮನ್ವಯತೆಯ ಸಾಕಾರ ಮೂರ್ತಿ ಸಂತ ಶಿಶುನಾಳ ಶರೀಫ್

ಕಲಬುರಗಿ: ಯಾವುದೆ ಜಾತಿ, ಧರ್ಮ, ಪ್ರದೇಶ ದೊಡ್ಡದಲ್ಲ. ಬದಲಿಗೆ ಮಾನವೀಯತೆಯಿಂದ ಬದುಕುವದೆ ಶ್ರೇಷ್ಠ ಜೀವನವಾಗುತ್ತದೆಯೆಂದು ಪ್ರತಿಯೊಬ್ಬರಲ್ಲಿ ಸೌಹಾರ್ಧತೆಯುತವಾದ ಬದುಕುವ ಕಲೆಯನ್ನು ಸಾರಿದ ಸಂತ ಶಿಶುನಾಳ ಶರೀಫರು ಸಮನ್ವಯತೆಯ ಸಾಕಾರ ಮೂರ್ತಿಯಾಗಿ ಕಂಡುಬರುತ್ತಾರೆ ಎಂದು ಉಪನ್ಯಾಸ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಖಾದ್ರಿ ಚೌಕ್‌ನಲ್ಲಿರುವ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಸಂಜೆ ಏರ್ಪಡಿಸಿದ್ದ ‘ಶ್ರೇಷ್ಠ ಸಂತ ಶಿಶುನಾಳ ಶರೀಫ್‌ರ 206ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ […]

Continue Reading

ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರಕ್ಕೆ ಬಂಪರ್ ಫಲಿತಾಂಶ

ಕಲಬುರಗಿ: ಗುಣಮಟ್ಟದ ಕಂಪ್ಯೂಟರ ಶಿಕ್ಷಣ ನೀಡುವಲ್ಲಿ ತನ್ನದೆಯಾದ ಛಾಪು ಮೂಡಿಸಿರುವ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ ‘ಗಣಕಯಂತ್ರ ಶಿಕ್ಷಣ ಪರೀಕ್ಷೆ’ಯಲ್ಲಿ ಶೇ.97.23 ಉತ್ತಮ ಫಲಿತಾಂಶ ಪಡೆದಿದೆ ಎಂದು ತರಬೇತಿ ಕೇಂದ್ರದ ಅಧ್ಯಕ್ಷ ಅಸ್ಲಾಂ ಶೇಖ್ ಹೇಳಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ಅಗಷ್ಟನಲ್ಲಿ ಪರೀಕ್ಷೆ ನಡೆಸಲಾಗಿತ್ತು, ಪರೀಕ್ಷೆಗೆ ಹಾಜರಾದ 181 ವಿದ್ಯಾರ್ಥಿಗಳಲ್ಲಿ 176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾವೇರಿ ಬಿ. ಹೌದೆ (ಶೇ.91),ರಹಿಮಾ ಬೇಗಂ (ಶೇ.91), ಶಾಂತಲಾ […]

Continue Reading

ಸಂಗೀತ ಕ್ಷೇತ್ರಕ್ಕೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರ

ಕಲಬುರಗಿ: ಸಂಗೀತ ಕ್ಷೇತ್ರದ ಬೆಳವಣಿಗೆಗೆ ತಮ್ಮ ಜೀವನದುದ್ದಕ್ಕೂ ಸೇವೆ ಸಲ್ಲಿಸಿ ನಾಡಿನ ಕೀರ್ತಿ ದೇಶದಾದ್ಯಂತ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಗಾನ ಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ ಐತಿಹಾಸಿಕ 4,900ನೇ ಕಾರ್ಯಕ್ರಮವಾದ ‘ಗಂಗೂಬಾಯಿ ಹಾನಗಲ್‌ರ 112ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ಸಂಗೀತ ಕ್ಷೇತ್ರಕ್ಕೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರ

ಕಲಬುರಗಿ: ಸಂಗೀತ ಕ್ಷೇತ್ರದ ಬೆಳವಣಿಗೆಗೆ ಜೀವನದುದ್ದಕ್ಕೂ ಸೇವೆ ಸಲ್ಲಿಸಿ ನಮ್ಮ ನಾಡಿನ ಕೀರ್ತಿ ದೇಶದಾದ್ಯಂತ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಗಾನ ಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ 4,900ನೇ ಕಾರ್ಯಕ್ರಮವಾದ ‘ಗಂಗೂಬಾಯಿ ಹಾನಗಲ್‌ರ 112ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ವ್ಯಕ್ತಿಯಲ್ಲಿ […]

Continue Reading