ಆರೋಗ್ಯದ ಸುರಕ್ಷತೆ ಕಾಪಾಡಿಕೊಳ್ಳುವದು ಅಗತ್ಯ

ಕಲಬುರಗಿ: ಆಹಾರದಲ್ಲಿ ಯಾವುದೆ ರೀತಿಯ ಕಲಬೆರಕೆ ಇಲ್ಲದೆ ಸುರಕ್ಷತೆಯಿಂದ ಇರಬೇಕು. ವಾಹನ ಚಲಾವಣೆ ಮಾಡುವಾಗ ಸಾರಿಗೆ ನಿಯಮಗಳನ್ನು ಪಾಲಿಸಬೇಕು. ಆರೋಗ್ಯದ ಸುರಕ್ಷತೆ ಕಾಪಾಡಿಕೊಳ್ಳುವದು ಅಗತ್ಯವಾಗಿದೆ ಎಂದು ವೈದ್ಯ ಡಾ. ವಿ.ಬಿ ಮಠಪತಿ ಹೇಳಿದರು. ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿನ ನಿಜಾಮಪುರನಲ್ಲಿರುವ ಮಠಪತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ್ರೀಯ ಸುರಕ್ಷತಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಕಿ ಅವಘಡಗಳು, ಪ್ರವಾಹ, ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸುವದು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕ ವರ್ಗಕ್ಕೆ ಸುರಕ್ಷತೆ […]

Continue Reading

ಕಿವಿಗಳ ಆರೋಗ್ಯ ರಕ್ಷಣೆ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ವಿವಿಧ ಕಾರಣಗಳಿಂದ ಕಿವಿಗಳಿಗೆ ತೊಂದರೆಯಾಗಿ ಆಲಿಸುವಿಕೆಗೆ ತೊಂದರೆಯಾಗುತ್ತದೆ. ಅದನ್ನು ಆರಂಭಿಕ ಹಂತದಲ್ಲಿ ಗುರ್ತಿಸಿ ಸೂಕ್ತ ಚಿಕಿತ್ಸೆ ನೀಡಿದರೆ ಕಿವಿಗಳು ಆರೋಗ್ಯವಾಗುತ್ತವೆ. ಉತ್ತಮ ಶ್ರವಣದಿಂದ ಸಮುದಾಯದೊಂದಿಗೆ ಬೆಸುಗೆ ಸಾಧ್ಯವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಮಂಗಳವಾರ ಜರುಗಿದ ‘ವಿಶ್ವ ಶ್ರವಣ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ರಕ್ತ ಸಂಬಂಧಿ ವಿವಾಹ ಹಾಗೂ ಅನುವಂಶಿಯತೆಯು ಪ್ರಮುಖವಾಗಿ ಕಿವುಡತನಕ್ಕೆ ಕಾರಣವಾಗಿದೆ. ಶ್ರವಣದೋಷವುಳ್ಳ […]

Continue Reading

ಶುದ್ಧವಾಗಿ ಮಾತನಾಡಲು, ಬರೆಯಲು, ಓದಲು ವ್ಯಾಕರಣ ಅಗತ್ಯ

ಕಲಬುರಗಿ: ಯಾವುದೆ ಒಂದು ಭಾಷೆಯ ಜೀವಂತಿಗೆಗೆ, ಬೆಳವಣಿಗೆಯಾಗಲು, ಶುದ್ಧವಾಗಿ ಮಾತನಾಡಲು, ಬರೆಯಲು, ಓದಲು ವ್ಯಾಕರಣ ಅಗತ್ಯ. ಇದು ಭಾಷೆಗೆ ಅಲಂಕಾರ, ಮೆರಗು ತರುತ್ತದೆ ಎಂದು ಇಂಗ್ಲೀಷ್ ಶಿಕ್ಷಕ ದತ್ತು ಹಡಪದ ಹೇಳಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಸಂಜೆ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ವ್ಯಾಕರಣ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವ್ಯಾಕರಣವು ಭಾಷೆಯ ಬೆಳವಣಿಗೆಗೆ ಸಹಾಯಕವಾಗಿದೆ. ಉತ್ತಮ […]

Continue Reading

ಸ್ಥೂಲಕಾಯದಿಂದ ಅನೇಕ ಕಾಯಿಲೆಗಳು ಬರಲು ಸಾಧ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ದೈಹಿಕ ಶ್ರಮ ಇಲ್ಲದಿರುವಿಕೆ, ಫಾಸ್ಟ್ ಪುಡ್, ಎಣ್ಣೆಯಲ್ಲಿ ಕರಿದ, ಹುರಿದ ಆಹಾರದ ಸೇವೆನ, ಒತ್ತಡ ಸೇರಿದಂತೆ ವಿವಿಧ ಕಾರಣಗಳಿಂದ ಬೊಜ್ಜು, ಸ್ಥೂಲಕಾಯ ಉಂಟಾಗುತ್ತದೆ. ಇದರಿಂದ ಬಿಪಿ, ಮಧುಮೇಹ, ಹೃದಯಘಾತ ಸೇರಿದಂತೆ ಇನ್ನಿತರರ ಕಾಯಿಲೆಗಳು ಬರುತ್ತಿವೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಮಂಗಳವಾರ ಜರುಗಿದ ‘ವಿಶ್ವ ಸ್ಥೂಲಕಾಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಶ್ರಮದ ಕೆಲಸ […]

Continue Reading

ಪಂಡಿತ ಡಾ.ಪುಟ್ಟರಾಜ ಗವಾಯಿಗಳ 111ನೇ ಜನ್ಮದಿನೋತ್ಸವ 

ಕಲಬುರಗಿ: ನಗರದ ಶಹಾಬಜಾರ ನಾಕಾ ಸಮೀಪವಿರುವ ಸುರಚಿತ್ರ ಮೆಲೋಡಿಸ್,  ಕರೊಕೆ ಸಂಗೀತ ತರಬೇತಿ ಕೇಂದ್ರ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಪಂಡಿತ ಡಾ.ಪುಟ್ಟರಾಜ ಗವಾಯಿಗಳ 111ನೇ ಜನ್ಮದಿನೋತ್ಸವ ಜರುಗಿತು. ಖ್ಯಾತ ಗಾಯಕಿ ಚಿತ್ರಲೇಖಾ ಬಿ ಗೊಲ್ಡಸ್ಮಿತ್ ಅವರು  ಪುಷ್ಪ ಹಾಗೂ ಸ್ವರ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ,  ಸದಸ್ಯರಾದ ಶಿವಯೋಗೆಪ್ಪಾ ಎಸ್. ಬಿರಾದಾರ, ನಾಗೇಶ ತಿಮಾಜಿ ಬೆಳಮಗಿ, ಶ್ರೀಮಂತ ಕೋಟನೂರ, ಬಸವರಾಜ ಮುಲಗೆ, ಹಣಮಂತ ಮೇದಾ, ಯಲ್ಲಪ್ಪ ಬಿ.ಕಡಕೋಳ, […]

Continue Reading

ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ: ಎಚ್.ಬಿ ಪಾಟೀಲ

ಕಲಬುರಗಿ: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವುನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ವನ್ಯಜೀವಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಪರಿಸರದ ಜೈವಿಕ ವ್ಯವಸ್ಥೆಯ ಸರಪಣಿಯಲ್ಲಿ ಒಂದು ಯಾವುದೆ ಜೀವಿಯ […]

Continue Reading

ದೇಶದ ನಾಗರಿಕರ ರಕ್ಷಣೆ ಅಗತ್ಯ

ಕಲಬುರಗಿ: ದೇಶದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ರಕ್ಷಣೆ ಮಾಡಬೇಕು. ಭೂಕಂಪ, ನೆರೆ ಹಾವಳಿ, ಸಾಂಕ್ರಾಮಿಕ ಕಾಯಿಲೆಗಳ ಸಂದರ್ಭದಲ್ಲಿ ನಾಗರಿಕರನ್ನು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸಮಾಜ ಸೇವಕ ಚನ್ನಬಸಪ್ಪ ಸಿ ಗಾರಂಪಳ್ಳಿ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವ ನಾಗರಿಕ ರಕ್ಷಣೆ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶವಾಸಿಗಳು ಕಷ್ಟದ ಸ್ಥಿತಿಯಲ್ಲಿ ಸರ್ಕಾರದ ನೆರವಿನ ಜೊತೆ ಸಹಾಯ ಹಸ್ತ ಚಾಚಬೇಕು ಎಂದರು. […]

Continue Reading

ಎಲ್ಲರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲಿ

ಕಲಬುರಗಿ: ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆವಣಿಗೆಯಾಗಿದೆ. ಆದರೆ ಇಂದಿಗೂ ಕೂಡಾ ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಸತ್ಯ, ವೈಚಾರಿಕತೆ ಹೊಂದಿರುವ ವಿಜ್ಞಾನದ ಅಂಶಗಳು, ವಿಷಯಗಳು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಂದರವಾಗುತ್ತದೆ ಮತ್ತು ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂದು ಉಪನ್ಯಾಸಕ, ವಿಚಾರವಾದಿ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯಲ್ಲಿ ಸರ್ ಸಿ.ವಿ ರಾಮನ್ ಅವರ ಭಾವಚಿತ್ರಕ್ಕೆ […]

Continue Reading

ಮಹಾ ಶಿವರಾತ್ರಿ ಆತ್ಮಾವಲೋಕನದ ಸಂದೇಶ ವಾಹಕ

ಕಲಬುರಗಿ: ಪರಮಾತ್ಮನ ಬೆಳಕು ಕಾಣುವುದೇ ನಮ್ಮ ಭಕ್ತಿಯ ಉದ್ದೇಶವಾಗಿರಬೇಕು. ಇಂತಹ ಅಂಶಗಳು ನಮ್ಮಲ್ಲಿ ಮೂಡಿದಾಗ ಆಗ ಭಕ್ತಿಯು ಸಾರ್ಥಕತೆಯನ್ನು ಪಡೆಯುತ್ತದೆಯೆಂಬ ಮೇರು ಸಂದೇಶವು ಶಿವರಾತ್ರಿ ಹೊಂದಿದೆ. ಇದು ಆತ್ಮಾವಲೋಕನದ ಸಂದೇಶದ ವಾಹಕದಂತೆ ಕಾರ್ಯನಿರ್ವಹಿಸುತ್ತದೆ ಎಂದು ಪೂಜ್ಯ ನಾಗೇಶ ಮಹಾರಾಜ ಗುಜರಾತಿ ಹೇಳಿದರು. ನಗರದ ಆಳಂದ ನಾಕಾ ಸಮೀಪದ ಐತಿಹಾಸಿಕ ಬಹು ಪುರಾತನ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ‘ದೇವಸ್ಥಾನ ಸಮಿತಿ’, ‘ಕನ್ನಡ ಜಾನಪದ ಪರಿಷತ್’ ಜಿಲ್ಲಾ ಘಟಕ ಮತ್ತು ‘ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ಸಂಯುಕ್ತ ಆಶ್ರಯದಲ್ಲಿ […]

Continue Reading

ದೇಶಿ ಆಹಾರದಲ್ಲಿದೆ ಆರೋಗ್ಯದ ಗುಟ್ಟು

ಕಲಬುರಗಿ: ವಿದೇಶ ಫಾಸ್ಟ್, ಜಂಕ್ ಪುಢ್ ಆಹಾರ ಸೇವನೆ ಮಾಡದೆ, ದೇಶಿಯ ಸಾವಯುವ ಆಹಾರ, ಸಿರಿಧಾನ್ಯಗಳ ಆಹಾರ ಉಪಯೋಗಿಸಬೇಕು. ದೇಶಿಯ ಆಹಾರದಲ್ಲಿದೆ ನಮ್ಮ ಆರೋಗ್ಯದ ಗುಟ್ಟು ಎಂದು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ ನಿಂಗಪ್ಪ ಹೇಳಿದರು. ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಪ್ರಗತಿಪರ ರೈತ ಕಾಶಿನಾಥ ಚೇಂಗಟಿ ಅವರ ಹೊಲದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಕನ್ನಡ ಜಾನಪದ ಪರಿಷತ್ ಇವುಗಳ ವತಿಯಿಂದ ಬುಧವಾರ ಜರುಗಿದ ‘ಸಿಹಿತೆನೆ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಜರು […]

Continue Reading