ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣ: ಐವರು ಅಧಿಕಾರಿಗಳು ಅಮಾನತು

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪೊಲೀಸ್‌ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್’ಮಿಯಾ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ನಾಗರಾಜ, ಸಾಯಿಬಣ್ಣಾ, ಇಮಾಮ್, ಕಾನ್ಸ್‌ಟೇಬಲ್ ನಾಗಭೂಷಣ ಅವರನ್ನು ಅಮಾನತುಗೊಳಿಸಿ ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಜೊತೆಗೆ ವಾಡಿ ಠಾಣೆಯ ಪಿಎಸ್‌ಐ ತಿರುಮಲೇಶ್ ಅವರಿಗೂ ನೋಟಿಸ್ ಜಾರಿ ಮಾಡಿದ್ದು, ಕಾರಣ ನೀಡುವಂತೆ ಎಸ್‌ಪಿ ಕೇಳಿದ್ದಾರೆ.

Continue Reading

ಶ್ರೇಷ್ಟ ಸಮಾಜ ಸುಧಾರಕ, ಮಹಾದಾಸೋಹಿ ಶರಣಬಸವೇಶ್ವರರು

ಕಲಬುರಗಿ: ಭಾರತ ಅನೇಕ ಶರಣರ, ಸಂತರ, ಅನುಭವಿಗಳ ತವರೂರು. ಕಾಲಕಾಲಕ್ಕೆ ಅನೇಕ ಮಹನೀಯರು ಜನಿಸಿ, ತಮ್ಮದೆಯಾದ ಅದ್ವೀತಿಯ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ದಾಸೋಹ, ಕಾಯಕ, ಭಕ್ತಿಯನ್ನು ಗೈಯುತ್ತ, ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಶ್ರಮಿಸಿ, ಅಸಂಖ್ಯಾತ ಭಕ್ತರ ಆರಾಧ್ಯ ದೈವರೆನಿಸಿಕೊಂಡವರೇ ದಾಸೋಹ ಭಾಂಡಾರಿ ಶರಣಬಸವೇಶ್ವರರಾಗಿದ್ದಾರೆ. ಶರಣಬಸವೇಶ್ವರರು ಕ್ರಿ.ಶ 1746 ರಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಆದಯ್ಯ ಮತ್ತು ಮಡಿಯಮ್ಮ ಎಂಬ ಶರಣ ದಂಪತಿಗಳ ಮಗನಾಗಿ ಜನಿಸಿದ್ದಾರೆ. ಇವರು ರಾಜ […]

Continue Reading

ಮುಂಜಾಗ್ರತೆ ವಹಿಸಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಾನವನ ದೇಹದ ಪ್ರಮುಖ ಭಾಗವಾದ ಕಿಡ್ನಿಗೆ ವಿವಿಧ ರೀತಿಯಿಂದ ತೊಂದರೆಯಾಗುತ್ತದೆ. ನಿರಂತರ ಆಯಾಸ, ನಿದ್ರೆಯ ತೊಂದರೆ, ಒಣಗಿದ ಚರ್ಮ, ಮೂತ್ರದಲ್ಲಿ ಉರಿಯೂತ ಮತ್ತು ರಕ್ತಪಾತ, ಸ್ನಾಯು ಸೆಳೆತದಂತಹ ಲಕ್ಷಣಗಳು ಕಿಡ್ನಿಯ ತೊಂದರೆಯನ್ನು ಸೂಚಿಸುತ್ತವೆ. ಆಗ ನಿರ್ಲಕ್ಷ ಮಾಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದು ಕಿಡ್ನಿಯನ್ನು ರಕ್ಷಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದರು. ಶೇಖರೋಜಾ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ […]

Continue Reading

ಧೂಮಪಾನದಿಂದ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

ಕಲಬುರಗಿ: ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕದ ಮೇಲೆ ದುಷ್ಪರಿಣಾಮವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಬುಧವಾರ ಜರುಗಿದ ‘ರಾಷ್ಟೀಯ ಧೂಮಪಾನ ನಿಷೇಧ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ ಅಗತ್ಯವಾಗಿದೆ. ಅದರಲ್ಲಿಯೂ ಯುವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ. ಆದರೆ ನಮ್ಮ […]

Continue Reading

ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆಗೆ ಹಾಜರು: ಸಂಪೂರ್ಣ ಪೊಲೀಸ್ ಕಸ್ಟಡಿಗೆ

ಕಲಬುರಗಿ: ದ್ವಿತೀಯ ಪಿಯುಸಿ ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯ ಪರೀಕ್ಷೆಯಲ್ಲಿ ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ ಅವರನ್ನು ಇಲ್ಲಿನ 4ನೇ ಜೆಎಂಎಫ್‌ಸಿ ನ್ಯಾಯಾಲಯ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ನಗರದ ಮಿಲಿಂದ್ ಶಾಲೆಯಲ್ಲಿ ಅರ್ಚನಾ ಎಂಬ ವಿದ್ಯಾರ್ಥಿನಿಯ ಬದಲಿಗೆ ಅಕ್ರಮವಾಗಿ ಸಂಪೂರ್ಣ ಪಾಟೀಲ ಬರೆಯುತ್ತಿರುವುದನ್ನು ದಲಿತ ಸೇನೆ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ತಕ್ಷಣ ಪೊಲೀಸರು […]

Continue Reading

ಸದೃಢ ಆರೋಗ್ಯ– ಮಾದಕವಸ್ತು ಮುಕ್ತ ಕರ್ನಾಟಕಕ್ಕಾಗಿ ಓಟ

ಕಲಬುರಗಿ: ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಅಪರಾಧ ತಡೆ ಮತ್ತು ತಂಬಾಕು ನಿಷೇಧ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ – 2025 ಓಟದಲ್ಲಿ 5 ಕಿ.ಮೀ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಹೆಬ್ಬಾಳ ಮಕ್ಕಳು ಭಾಗವಹಿಸಿ ಕ್ರಮವಾಗಿ ಮಹೇಶ 6ನೇ ಸ್ಥಾನ ಮತ್ತು ಸಮೀರ್ 8ನೇ ಸ್ಥಾನ ಪಡೆದಿದ್ದಕ್ಕಾಗಿ ಕಲಬುರಗಿ ನಗರ ಪೊಲಿಸ್ ಆಯುಕ್ತರಿಂದ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಇಂದು (ಸೋಮವಾರ) ಶಾಲೆಯಲ್ಲಿ ಪ್ರಭಾರಿ ಮುಖ್ಯ ಗುರುಗಳು ಮತ್ತು ಶಿಕ್ಷಕರಿಂದ […]

Continue Reading

ಕಾರಿನಲ್ಲಿ ಸಾಗಿಸುತ್ತಿದ್ದ 40 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ

ಕಲಬುರಗಿ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು 40 ಲಕ್ಷ ರೂ ಮೊತ್ತದ ಗಾಂಜಾ ವಶಪಡಿಸಿಕೊಂಡು, ಸಾಗಾಟಕ್ಕೆ ಬಳಸಿದ 5 ಲಕ್ಷ ರೂ ಮೊತ್ತದ ಕಾರು ಹಾಗೂ 50 ಸಾವಿರ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ , ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲಿ ಗ್ರಾಮದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡಾದ ಹತ್ತಿರ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿರುವ […]

Continue Reading

ಕಳ್ಳರ ಹಾವಳಿಗೆ ಒನಕೆ ಒಬವ್ವನ ರೂಪ ತಾಳಿದ ಮಹಿಳೆಯರು ಗಸ್ತು ಸಂಚಾರ

ಬಾಗಲಕೋಟೆ: ಮನೆಗಳ್ಳರ ಹಾವಳಿ‌ಗೆ ಬೇಸತ್ತ ಮಹಿಳೆಯರು ಒನಕೆ ಓಬವ್ವನ ರೂಪ ತಾಳಿ ಗಮನ ಸೆಳೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ‌ ಮುಧೋಳ ನಗರದಲ್ಲಿ ನಡೆದಿದೆ. ನಗರದ ಜಯನಗರ ನಿವಾಸಿಗಳೇ ಓಬವ್ವನ ರೂಪ ತಾಳಿದ ಮಹಿಳೆಯರು. ಕಳ್ಳರ‌ ಕಾಟದಿಂದ ಬೇಸತ್ತ ಮಹಿಳೆಯರು, ರಾತ್ರಿಪೂರ್ತಿ ಬಡಿಗೆ ಹಿಡಿದು ಬಡಾವಣೆಯಲ್ಲಿ ಗಸ್ತು ತಿರುಗಿ ಗಮನ ಸೆಳೆದಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಜಯನಗರದಲ್ಲಿ ಎರಡು ಮನೆಗಳ ಕಳ್ಳತನವಾಗಿದ್ದರೆ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಇದರಿಂದ ಅಲರ್ಟ್ ಆದ ಮಹಿಳೆಯರು ಪೊಲೀಸರನ್ನು ನಂಬದೆ, […]

Continue Reading

ಗುರುಪಾದೇಶ್ವರ ಕಾಲೇಜಿನಲ್ಲಿ ಸ್ಕಾಲರ್‌’ಶಿಪ್ ಪ್ರವೇಶ ಪರೀಕ್ಷೆ 16ಕ್ಕೆ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಗುರುಪಾದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.16ರಂದು ಸ್ಕಾಲರ್‌ಪ್ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ತಿಳಿಸಿದ್ದಾರೆ. ಬೆಳಗ್ಗೆ 11 ರಿಂದ 12ರವರೆಗೆ ಪರೀಕ್ಷೆ ನಡೆಯಲಿದೆ. ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪಿಸಿಎಂಬಿ ವಿಷಯಗಳಿಂದ ತಲಾ 10 ಪ್ರಶ್ನೆಗಳು ನೀಡಲಾಗುವುದು. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಟಾಪ್ 10 […]

Continue Reading

ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್: ಎಚ್.ಬಿ ಪಾಟೀಲ

ಕಲಬುರಗಿ: ಈ ವರ್ಷದ ಬಜೆಟ್‌ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ,‌ ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್ ಇದಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಕೇಂದ್ರ ಬಜೆಟ್ ಯುವಕರು, ರೈತರು, ಮಹಿಳೆಯರು, ಮಧ್ಯಮ ವರ್ಗದವರ ಅಭಿವೃದ್ದಿಗೆ ಸಂಬಂಧಿಸಿದಂತೆ ಹೊಸ ಯೋಜನೆಗಳು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಡತನ ನಿರ್ಮೂಲನೆ, ಕ್ಯಾನ್ಸರ್ ಮಹಾಮಾರಿ ಚಿಕಿತ್ಸೆ, ರೈಲು ಸೌಲಭ್ಯ, ಜೀವರಕ್ಷಕ ಔಷಧಿಗಳಿಗೆ ಸುಂಕ ಕಡಿತ, ಹಿರಿಯ ನಾಗರಿಕರಿಗೆ ಟಿಡಿಸ್ ಕಡಿತ […]

Continue Reading