ದೇಶಿ ಆಹಾರದಲ್ಲಿದೆ ಆರೋಗ್ಯದ ಗುಟ್ಟು

ಕಲಬುರಗಿ: ವಿದೇಶ ಫಾಸ್ಟ್, ಜಂಕ್ ಪುಢ್ ಆಹಾರ ಸೇವನೆ ಮಾಡದೆ, ದೇಶಿಯ ಸಾವಯುವ ಆಹಾರ, ಸಿರಿಧಾನ್ಯಗಳ ಆಹಾರ ಉಪಯೋಗಿಸಬೇಕು. ದೇಶಿಯ ಆಹಾರದಲ್ಲಿದೆ ನಮ್ಮ ಆರೋಗ್ಯದ ಗುಟ್ಟು ಎಂದು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ ನಿಂಗಪ್ಪ ಹೇಳಿದರು. ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಪ್ರಗತಿಪರ ರೈತ ಕಾಶಿನಾಥ ಚೇಂಗಟಿ ಅವರ ಹೊಲದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಕನ್ನಡ ಜಾನಪದ ಪರಿಷತ್ ಇವುಗಳ ವತಿಯಿಂದ ಬುಧವಾರ ಜರುಗಿದ ‘ಸಿಹಿತೆನೆ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಜರು […]

Continue Reading

ಪ್ರತಿಯೊಬ್ಬರಲ್ಲಿ ಸಾಮರಸ್ಯ ಮನೋಭಾವ ಬೆಳೆಯಲಿ: ಎಚ್.ಬಿ ಪಾಟೀಲ

ಕಲಬುರಗಿ: ದೇಶದಲ್ಲಿರುವ ಪ್ರತಿಯೊಬ್ಬರು ನಾವೆಲ್ಲರು ಭಾರತಾಂಬೆಯ ಮಕ್ಕಳು ಒಂದೆ ಎಂಬ ಸಾಮರಸ್ಯ ಭಾವದಿಂದ ಬದುಕುವುದು ಪ್ರಸ್ತುತ ದಿನಗಳಲ್ಲಿ ಅತ್ಯವಶ್ಯಕ ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಖಾದ್ರಿ ದರ್ಗಾದ ಹಜರತ್ ಸೈಯದ್ ಷಾ ಹುಸನೋದ್ದಿನ್ ಖಾದ್ರಿ ಉರಫತ್ ನೂರಾನಿ ಬಾಬಾರವರ 19ನೇ ಉರುಸ್, ಕೋಮು ಸಾಮರಸ್ಯ ಕಾರ್ಯಕ್ರಮ ಹಾಗೂ ವಿವಿಧ ಸಮುದಾಯ ಮುಖಂಡರಿಗೆ ಸೋಮವಾರ ರಾತ್ರಿ ಏರ್ಪಡಿಸಿದ್ದ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಮಾನವರೆಲ್ಲರೂ ಒಂದೆಯಾಗಿದ್ದು, […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಮುದ್ರಣದ ಕೊಡುಗೆ ಅನನ್ಯ

ಕಲಬುರಗಿ: ಐತಿಹಾಸಿಕ, ಭೌಗೋಳಿಕೆ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಪ್ರತಿಯೊಂದು ವಿಷಯ, ಮಾಹಿತಿ ದೊರೆಯಬೇಕಾದರೆ ಪುಸ್ತಕ ಅಧ್ಯಯನ ಅಗತ್ಯ. ದೇಶದ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಂಕಿ-ಅಂಶಗಳನ್ನು ಒದಗಿಸಿ, ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಲು ಸೂಕ್ತ ಮಾಹಿತಿ ಅಗತ್ಯವಾಗಿದೆ. ಮುದ್ರಣ ಶಾಶ್ವತ ದಾಖಲೆಯಾಗಿದ್ದು, ರಾಷ್ಟ್ರದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನರೋಣಾ ಗ್ರಾಮದ ಎಸ್.ಡಿ ಮಠಪತಿ ಪ್ರಿಂರ‍್ಸ್ನಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ […]

Continue Reading

ಶಿಶು ಸಾಹಿತ್ಯದ ಜನಕ ಪಂಜೆ ಮಂಗೇಶರಾಯರು

ಕಲಬುರಗಿ: ಇಂದಿನ ಮಕ್ಕಳೆ ನಾಳಿನ ನಾಗರಿಕರಾಗಿರುವದರಿಂದ ಬಾಲ್ಯದಲ್ಲಿಯೆ ಅವರಿಗೆ ಮೌಲ್ಯ ಬಿತ್ತುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಅನೇಕ ಮೌಲ್ಯಗಳುಳ್ಳ ಸಣ್ಣ ಕಥೆಗಳನ್ನು ಸರಳವಾಗಿ ತಿಳಿಯುವಂತೆ ರಚಿಸಿ ಮಕ್ಕಳ ಸಾಹಿತ್ಯದ ಜನಕರೆನಿಸಿಕೊಂಡ ಪಂಜೆ ಮಂಗೇಶರಾಯರ ಕೊಡುಗೆ ಅವಿಸ್ಮರಣೀಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿ‌ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಪಂಜೆ ಮಂಗೇಶರಾಯರ 151ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಂಗೇಶರಾಯರು ಸಣ್ಣಕಥೆ, […]

Continue Reading

ಉತ್ತಮ ಚಿಂತನೆ ಉನ್ನತ ಸಾಧನೆಗೆ ಪೂರಕ

ಕಲಬುರಗಿ: ಜೀವನದಲ್ಲಿ ಯಾವುದೆ ಸಂದರ್ಭದಲ್ಲಿಯೂ ಕೂಡ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವದು ಉತ್ತಮ. ಉತ್ತಮ ಚಿಂತನೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.  ನಗರದ  ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಚಿಂತನೆ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಸಕಾರಾತ್ಮಕ ಆಲೋಚನೆಗಳೊಂದಿಗೆ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಬೇಕು. ಹೊಸ- ಹೊಸ ಯೋಚನೆಗಳಿಂದ ಯೋಜನೆ ರೂಪಿಸಿಕೊಂಡರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು.  ಈ ದಿನವನ್ನು  […]

Continue Reading

ಕಿತ್ತೂರ ರಾಣಿ ಚನ್ನಮ್ಮ ಕೊಡುಗೆ ಅವಿಸ್ಮರಣೀಯ

ಕಲಬುರಗಿ: ದೇಶದ ಪ್ರಥಮ ಸ್ವಾತಂತ್ರ ಹೋರಾಟಗಾರ್ತಿಯಾಗಿ ಬಲಿದಾನವಾದ ವೀರ ಮಹಿಳೆ ಕಿತ್ತೂರ ರಾಣಿ ಚನ್ನಮ್ಮ ಶೂರ, ತ್ಯಾಗ, ಸ್ವಾಭಿಮಾನ, ದೇಶಪ್ರೇಮ, ಕೊಡುಗೆ ಅವಿಸ್ಮರಣೀಯ ಎಂದು ಶಿಕ್ಷಕಿ ಪೂಜಾ ಜಮಾದಾರ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವೀರಮಾತೆ ಕಿತ್ತೂರ ರಾಣಿ ಚನ್ನಮ್ಮರ 196ನೇ ಪುಣ್ಯಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ ದೊರೆಕಿಸಿಕೊಡುವಲ್ಲಿ, ಸಾಮಾಜಿಕ […]

Continue Reading

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಾಮಾಜಿಕ ನ್ಯಾಯ ಅಗತ್ಯ

ಕಲಬುರಗಿ: ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನವಾದ ಅವಕಾಶ ಒದಗಿಸಿಕೊಡುವ ಪರಿಕಲ್ಪನೆಯೇ ಸಾಮಾಜಿಕ ನ್ಯಾಯವಾಗಿದ್ದು, ಇದರಿಂದ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಿದೆ ಎಂದು ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಗಂಗಾ ನಗರದಲ್ಲಿರುವ ವಿವೇಕಾನಂದ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು.‌ ಜಾತಿ, ಧರ್ಮ, ಭಾಷೆ, ಪ್ರಾಂತ್ಯ, […]

Continue Reading

ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ: ಡಾ. ಎಂ.ಬಿ ಹಡಪದ ‌ ‌

ಕಲಬುರಗಿ: ಈ ವರ್ಷದ ಬಜೆಟ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ 100 ಕೋಟಿ ರೂ ಮೀಸಲಿಡುವಂತೆ ಹಡಪದ ಅಪ್ಪಣ್ಣ ಸಮಾಜದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ‌ ಹಡಪದ ಸುಗೂರ ಎನ್ ಒತ್ತಾಯಿಸಿದರು. ಒತ್ತಾಯ. ಬಸವರಾಜ ಭೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಘೋಷಣೆ ಮಾಡಿ‌ ಆದೇಶ ಹೊರಡಿಸಿದ್ದರು. ಆದರೆ ಆ ನಿಗಮ ಪೂರ್ಣ ಪ್ರಮಾಣದಲ್ಲಿ ಇದುವರೆಗೆ ಜಾರಿಗೆ […]

Continue Reading

ಹರ್ಡೇಕರ ಮಂಜಪ್ಪನವರ ಸಾಮಾಜಿಕ ಕೊಡುಗೆ ಅನನ್ಯ

ಕಲಬುರಗಿ: ಮಹಾತ್ಮ ಗಾಂಧಿಜಿಯವರ ಸತ್ಯ, ಶಾಂತಿ, ಅಹಿಂಸೆ, ನ್ಯಾಯ, ಸಮಾನತೆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಅವುಗಳನ್ನು ಪಸರಿಸುವ ಕಾರ್ಯ ಮಾಡಿರುವ ಹರ್ಡೇಕರ ಮಂಜಪ್ಪನವರು ಕರ್ನಾಟಕದ ಗಾಂಧಿಜಿಯಾಗಿದ್ದಾರೆ. ಅವರ ಸಾಮಾಜಿಕ ಕೊಡುಗೆ ಅನನ್ಯವಾಗಿದೆ ಎಂದು ಪೂಜ್ಯ ಶಿವಾನಂದ ಶ್ರೀಗಳು ಅಭಿಮತಪಟ್ಟರು. ನಗರದ ಮಕ್ತಂಪುರ ಗುರುಬಸವ ಮಠದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಏರ್ಪಡಿಸಲಾಗಿದ್ದ ‘ಶರಣ ಹರ್ಡೇಕರ ಮಂಜಪ್ಪನವರ 139ನೇ ಜನ್ಮದಿನೋತ್ಸವ’ ನಿಮಿತ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಶೀರ್ವಚನ ನೀಡಿದ ಅವರು, ಮಂಜಪ್ಪನವರು ಗಾಂಧಿಯವರ ಅನುಯಾಯಿಯಾಗಿ […]

Continue Reading

ಸಮನ್ವಯ ತತ್ವದ ಮೇರು ಸಾಧಕ ರಾಮಕೃಷ್ಣ ಪರಮಹಂಸ

ಕಲಬುರಗಿ: ಧರ್ಮಗಳು ಬೇರೆ-ಬೇರೆಯಾದರು ಕೂಡಾ, ಎಲ್ಲಾ ಧರ್ಮಗಳ ಮೂಲತತ್ವ ಒಂದೆಯಾಗಿದೆ. ‘ದೇವನೊಬ್ಬ, ನಾಮ ಹಲವು’ ಆಗಿದ್ದು, ಎಲ್ಲಾ ಧರ್ಮಗಳ ತಿರುಳು ಒಂದೆಯಾಗಿದೆ. ಪ್ರತಿಯೊಬ್ಬರು ಪರಸ್ಪರ ಪ್ರೀತಿ, ಸೌಹಾರ್ದವಾಗಿ ಬದುಕಬೇಕೆಂಬ ಸಮನ್ವಯ ತತ್ವ ಪ್ರತಿಪಾದಿಸಿದ ರಾಮಕೃಷ್ಣ ಪರಮಹಂಸ್‌ರ ಸಂದೇಶ ಪಾಲನೆ ಅಗತ್ಯವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಜರುಗಿದ ‘ರಾಮಕೃಷ್ಣ ಪರಮಹಂಸ್‌ರ 189ನೇ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading