ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳುವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

ಶಿವಮೊಗ್ಗ: ಕನ್ನಡದ ಬಗ್ಗೆ ನನಗೆ ಅಷ್ಟು ತಿಳುವಳಿಕೆ ಇಲ್ಲ. ಆದರೆ ಕನ್ನಡದ ಉಳಿಯುವಿಕೆಗೆ ನನ್ನ ಜವಾಬ್ದಾರಿ ಇದೆ. ಕನ್ನಡದ ಬಗ್ಗೆ ತಿಳಿದುಕೊಳ್ಳದೆ ಇದ್ದರೂ ಅದಕ್ಕಿಂತ ಮಿಗಿಲಾಗಿ ನನಗೆ ಕನ್ನಡದ ಬಗ್ಗೆ ಅಭಿಮಾನ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್‌ನ ಗ್ರಂಥಾಲಯಕ್ಕೆ ನನ್ನ ತಂದೆ ಎಸ್‌ ಬಂಗಾರಪ್ಪ ಅವರ ಹೆಸರಿನಲ್ಲಿ 5 ಲಕ್ಷ ರೂ. ಅನುದಾನ ನೀಡಿದ್ದೆನೆ. ನಮ್ಮ ತಂದೆ ಬಂಗಾರಪ್ಪ ಅವರು ಕಷ್ಟಪಟ್ಟು […]

Continue Reading

ಜಾನಪದದಿಂದ ದೇಶದ ಸಂಸ್ಕೃತಿ, ಪರಂಪರೆ ಶ್ರೀಮಂತ

ಕಲಬುರಗಿ:  ಜಾನಪದ ದೇಶದ ಮೂಲ ಸಂಸ್ಕೃತಿಯಾಗಿದೆ. ಇದಕ್ಕೆ ಗ್ರಾಮೀಣ ಜನರ ಕೊಡುಗೆ ಅಪಾರವಾಗಿದೆ. ಇದನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕಾಗಿದೆ. ಕಲಾವಿದರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಬಿ ನಿಂಗಪ್ಪ ಹೇಳಿದರು. ತಾಲೂಕಿನ ಗೌಡನಹಳ್ಳಿಯ ಭೋಜಲಿಂಗೇಶ್ವರ ಮಠದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ, ಸೇಡಂ ತಾಲೂಕ ಘಟಕ  ಹಾಗೂ ಭೋಜಲಿಂಗೇಶ್ವರ ಮಠದ ಸಂಯುಕ್ತಾಶ್ರಯದಲ್ಲಿ ರವಿವಾರ ಏರ್ಪಡಿಸಲಾಗಿದ್ದ ‘ಜಾನಪದ ಜಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಜನಪದರ ಹಾಡು-ಪಾಡು’ ಎಂಬ ವಿಷಯದ […]

Continue Reading

ಪ್ರಶಸ್ತಿಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ: ಪ್ರೊ.ಮಲ್ಲೇಪುರಂ ವೆಂಕಟೇಶ

ಕಲಬುರಗಿ: ರಾಜ್ಯ ಸರ್ಕಾರವು ವಿವಿಧ ಅಕಾಡೆಮಿಗಳ ಮೂಲಕ ನೀಡುತ್ತಿರುವ ‍ಪ್ರಶಸ್ತಿಗಳಲ್ಲಿ ಕಲ್ಯಾಣ ಕರ್ನಾಟಕದವರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಸಂಸ್ಕೃತ ವಿ.ವಿ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ ವೆಂಕಟೇಶ ಬೇಸರ ವ್ಯಕ್ತಪಡಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಸಾರಾಂಗದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ ಅಥವಾ ಉತ್ತರ ಕರ್ನಾಟಕ ಭಾಗದವರಿಗೆ ಪ್ರಶಸ್ತಿಗಳಲ್ಲಿ ಸಿಕ್ಕ ಆದ್ಯತೆ ಇಲ್ಲಿಯವರಿಗೆ ಸಿಗುತ್ತಿಲ್ಲ. ಈ ಭಾಗದ ಪ್ರತಿಭೆಗಳನ್ನು ಗುರುತಿಸುವ […]

Continue Reading

ವಿದ್ಯಾರ್ಥಿ ದೆಸೆಯಿಂದಲೆ ಮೌಲ್ಯಗಳು, ಪ್ರಯತ್ನಶೀಲತೆ ಮೈಗೂಡಲಿ

ಕಲಬುರಗಿ: ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಗುರಿಯನ್ನು ನಿರ್ಧರಿಸಿ, ಅದಕ್ಕೆ ಪೂರಕವಾಗಿ ಕಾರ್ಯನಿರ್ವಹಸಿಬೇಕು. ಕೀಳರಿಮೆ ತಾಳದೆ, ಧನಾತ್ಮಕ ಚಿಂತನೆ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗುವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಎಚ್ ಹೇಳಿದರು. ಜೇವರ್ಗಿ ಪಟ್ಟಣದ ಶಹಾಪುರ ರಸ್ತೆಯಲ್ಲಿರುವ ಜೈನಾಪುರ ಫಂಕ್ಸನ್ ಹಾಲ್‌ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡಬೇಕು. ವಿದೇಶಿ ಸಂಸ್ಕೃತಿ ಅನುಕರಣೆ […]

Continue Reading

ಕಾರಿನಲ್ಲಿ ಸಾಗಿಸುತ್ತಿದ್ದ 40 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರ ಬಂಧನ

ಕಲಬುರಗಿ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು 40 ಲಕ್ಷ ರೂ ಮೊತ್ತದ ಗಾಂಜಾ ವಶಪಡಿಸಿಕೊಂಡು, ಸಾಗಾಟಕ್ಕೆ ಬಳಸಿದ 5 ಲಕ್ಷ ರೂ ಮೊತ್ತದ ಕಾರು ಹಾಗೂ 50 ಸಾವಿರ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ , ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲಿ ಗ್ರಾಮದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡಾದ ಹತ್ತಿರ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿರುವ […]

Continue Reading

ಕಳ್ಳರ ಹಾವಳಿಗೆ ಒನಕೆ ಒಬವ್ವನ ರೂಪ ತಾಳಿದ ಮಹಿಳೆಯರು ಗಸ್ತು ಸಂಚಾರ

ಬಾಗಲಕೋಟೆ: ಮನೆಗಳ್ಳರ ಹಾವಳಿ‌ಗೆ ಬೇಸತ್ತ ಮಹಿಳೆಯರು ಒನಕೆ ಓಬವ್ವನ ರೂಪ ತಾಳಿ ಗಮನ ಸೆಳೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ‌ ಮುಧೋಳ ನಗರದಲ್ಲಿ ನಡೆದಿದೆ. ನಗರದ ಜಯನಗರ ನಿವಾಸಿಗಳೇ ಓಬವ್ವನ ರೂಪ ತಾಳಿದ ಮಹಿಳೆಯರು. ಕಳ್ಳರ‌ ಕಾಟದಿಂದ ಬೇಸತ್ತ ಮಹಿಳೆಯರು, ರಾತ್ರಿಪೂರ್ತಿ ಬಡಿಗೆ ಹಿಡಿದು ಬಡಾವಣೆಯಲ್ಲಿ ಗಸ್ತು ತಿರುಗಿ ಗಮನ ಸೆಳೆದಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಜಯನಗರದಲ್ಲಿ ಎರಡು ಮನೆಗಳ ಕಳ್ಳತನವಾಗಿದ್ದರೆ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಇದರಿಂದ ಅಲರ್ಟ್ ಆದ ಮಹಿಳೆಯರು ಪೊಲೀಸರನ್ನು ನಂಬದೆ, […]

Continue Reading

ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿದಂತೆ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ -1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ-2 ರಾಹುಲ್ ತಳಕೇರಿ (20), ಎ-3 ಗದಿಗೆಪ್ಪ ಅಲಿಯಾಸ್ ಮಣಿಕಂಠ ದನಕೊಪ್ಪ (27), ಎ-4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು. ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ […]

Continue Reading

ಗುರುಪಾದೇಶ್ವರ ಕಾಲೇಜಿನಲ್ಲಿ ಸ್ಕಾಲರ್‌’ಶಿಪ್ ಪ್ರವೇಶ ಪರೀಕ್ಷೆ 16ಕ್ಕೆ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಗುರುಪಾದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.16ರಂದು ಸ್ಕಾಲರ್‌ಪ್ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ತಿಳಿಸಿದ್ದಾರೆ. ಬೆಳಗ್ಗೆ 11 ರಿಂದ 12ರವರೆಗೆ ಪರೀಕ್ಷೆ ನಡೆಯಲಿದೆ. ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪಿಸಿಎಂಬಿ ವಿಷಯಗಳಿಂದ ತಲಾ 10 ಪ್ರಶ್ನೆಗಳು ನೀಡಲಾಗುವುದು. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಟಾಪ್ 10 […]

Continue Reading

ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕ ಪ್ರಶಸ್ತಿ ಪ್ರಧಾನ

ಚಿತ್ತಾಪುರ: ಮಹಿಳಾ ಜನಪದ ಲೋಕೋತ್ಸವ ಸಮಾರಂಭದಲ್ಲಿ ರಾಮತೀರ್ಥ ಗ್ರಾಮದ ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ರಾಮನಗರದ ಜನಪದ ಲೋಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಜನಪದ ಲೋಕೋತ್ಸವ ಸಮಾರಂಭದಲ್ಲಿ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ನಿರ್ಮಲಾನಂದ […]

Continue Reading

ಪೋಷಕಾಂಶಗಳ ಆಗರವಾದ ದ್ವಿದಳ ಧಾನ್ಯಗಳನ್ನು ಸೇವಿಸಿ: ಡಾ.ಪ್ರಮೋದ ಗುಂಡಗುರ್ತಿ

ಕಲಬುರಗಿ: ತೊಗರಿ ಬೇಳೆ, ಕಡಲೆಕಾಳು ಸೇರಿದಂತೆ ಸುಮಾರು 22 ತರಹದ ದ್ವಿದಳ ಧಾನ್ಯಗಳಿವೆ. ವಿಶೇಷವಾಗಿ ಬಾಣಂತಿಯರು ಮತ್ತು ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಲು ದ್ವಿದಳ ಧಾನ್ಯ ಉತ್ತಮ ಆರೋಗ್ಯಕ್ಕಾಗಿ ಮತ್ತು ರೋಗ ನಿರೋಧಕ ಶಕ್ತಿಗಾಗಿ ಬೇಕಾದ ಪ್ರೋಟಿನ್, ಫೈಬರ್ ಪ್ರಮಾಣ ಹೆಚ್ಚಾಗಿರುವದರಿಂದ ಅವುಗಳನ್ನು ಸೇವಿಸುವ ಮೂಲಕ ಅಪೌಷ್ಠಿಕತೆ ನಿರ್ಮೂಲನೆ ಮಾಡಲು ಪ್ರಯತ್ನಿಸಬೇಕಾಗಿದೆ ಎಂದು ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ಡಾ.ಪ್ರಮೋದ ಗುಂಡಗುರ್ತಿ ಸಲಹೆ ನೀಡಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ […]

Continue Reading