ಕ್ರೀಡಾ ಪತ್ರಿಭೆಗಳ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ

ಕಲಬುರಗಿ: ಕ್ರೀಡಾ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮಾರಾಜ ಜವಳಿ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಲ್ಲಿಯೂ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗುವುದರಿಂದ […]

Continue Reading

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಪತ್ರಿಕಾ ರಂಗದ ಮೇಲಿದೆ ಗುರುತರ ಜವಾಬ್ದಾರಿ: ಡಾ. ಶಿವರಂಜನ ಸತ್ಯಂಪೇಟೆ

ಕಲಬುರಗಿ: ಪತ್ರಿಕೆಗಳು ಸಮಾಜಮುಖಿ, ಅಭಿವೃದ್ಧಿ, ವೈಚಾರಿಕತೆ, ಮೌಲ್ಯಯುತ, ಧನಾತ್ಮಕ ವಿಷಯದ ಬಗ್ಗೆ ಸುದ್ದಿ ಬಿತ್ತರಿಸಿದರೆ ಮಾತ್ರ ಸಾಮಾಜಿಕ ಸ್ವಾಸ್ಥ್ಯಕಾಪಾಡಲು ಸಾಧ್ಯವಾಗುತ್ತದೆ. ಇಂತಹ ಗುರುತರ ಜವಾಬ್ದಾರಿ ಪತ್ರಿಕೆ, ಪತ್ರಕರ್ತರ ಮೇಲಿದೆ ಎಂದು ಹಿರಿಯ ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅಭಿಮತಪಟ್ಟರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜ್’ನ ಎನ್.ಎಸ್.ಎಸ್ ಘಟಕದ ವತಿಯಿಂದ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನವಾದ ಬುಧವಾರ ಶಕಾಪೂರ ಗ್ರಾಮದ ವಿಶ್ವರಾಧ್ಯ ತಪೋವನ ಮಠದ ಆವರಣದಲ್ಲಿ ಏರ್ಪಡಿಸಿದ್ದ ‘ಸಾಮಾಜಿಕ ಸ್ವಾಸ್ಥ್ಯಕಾಪಾಡುವಲ್ಲಿ […]

Continue Reading

ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

ತುಮಕೂರು: ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಇಂದು ಪುರಲೆಹಳ್ಳಿ ರಸ್ತೆಯಲ್ಲಿರುವ ಕುಮಾರ ಎಂಬವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೆ […]

Continue Reading

ಕಲಬುರಗಿ: ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ, ದಲ್ಲಾಳಿ

ಕಲಬುರಗಿ: ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆ ಕೊಡಿಸುವುದಾಗಿ 1 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ, ಮುಂಗಡವಾಗಿ 15 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ) ಹಾಗೂ ದಲ್ಲಾಳಿಯೊಬ್ಬರು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಂತೋಷ ರಾಮಚಂದ್ರ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ ಪೊಲೀಸರು ದಾಳಿ ಮಾಡಿ ಎಫ್‌ಡಿಎ ಶಿಲ್ಪಾ ಹಾಗೂ ದಲ್ಲಾಳಿ ದೇವಪ್ಪನನ್ನು ಬಂಧಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗೆ ನೇಮಕಾತಿ ಅರ್ಜಿ […]

Continue Reading

ಕಲಬುರಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ

ಕಲಬುರಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶ್ರೀನಿಧಿ ಅವರು ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್‌ ಮೇಘಣ್ಣನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Continue Reading

ಪ್ರಿಯಾಂಕ್ ಖರ್ಗೆ ಒಬ್ಬ ಪ್ರಬುದ್ಧ ರಾಜಕಾರಣಿ, ಬಿಜೆಪಿಯವರ ಷಡ್ಯಂತ್ರ ಫಲಿಸದು: ಓಂಕಾರೇಶ್ವರ ರೇಶ್ಮಿ

ಚಿತ್ತಾಪುರ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಒಬ್ಬ ಪ್ರಬುದ್ಧ ಹಾಗೂ ಪ್ರಾಮಾಣಿಕ ರಾಜಕಾರಣಿಗಳಾಗಿದ್ದಾರೆ. ಬಿಜೆಪಿಯವರು ನಮ್ಮ ನಾಯಕರ ಮೇಲೆ ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಫಲಿಸದು ಎಂದು ಕಾಂಗ್ರೆಸ್ ಮುಖಂಡ ಓಂಕಾರೇಶ್ವರ ರೇಶ್ಮಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗುತ್ತಿಗೆದಾರ ಸಚಿನ ಪ್ರಕರಣದಲ್ಲಿ ನಮ್ಮ ನಾಯಕರನ್ನು ಎಳೆದು ತರುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನಮ್ಮ ಪ್ರಿಯಾಂಕ್ ಖರ್ಗೆಯವರಿಗೂ ಯಾವುದೇ ಸಂಭಂದವಿಲ್ಲದಿದ್ದರು ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ […]

Continue Reading

ಶಿಕ್ಷಣ ರತ್ನ ಪ್ರಶಸ್ತಿಗೆ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಬೆಂಗಳೂರಿನ ಅನೇಲ್ಪ್ ಗ್ರೂಪ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ‘ಶಿಕ್ಷಣರತ್ನ ಪ್ರಶಸ್ತಿ’ಗೆ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ವಿನೂತನ ಚಟುವಟಿಕೆಗಳಿಂದ ಈ ಭಾಗದಲ್ಲಿ ಸೃಜನಶೀಲ ಶಿಕ್ಷಕರೆಂದು ಗುರುತಿಸಿಕೊಂಡಿರುವ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ನಾಳೆ ಸಂಜೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ […]

Continue Reading

ಖರ್ಗೆ ಮೇಲೆ ವ್ಯರ್ಥ ಆರೋಪ ಸಲ್ಲ: ಮಲ್ಲಪ್ಪ ಹೊಸಮನಿ

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸದು. ಡೆತ್ ನೋಟ್ ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಸುಳ್ಳು ಹೇಳುವ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜಕೀಯ ದುರುದ್ದೇಶದಿಂದ ವ್ಯರ್ಥ ಆರೋಪ, ಹೋರಾಟ ಮುಂದುವರಿಸಿದರೆ ನಾವು ಬಿಜೆಪಿ ನಾಯಕರ ವಿರುದ್ಧ ಧರಣಿ ಮಾಡಲು ಸಿದ್ಧರಿದ್ದೆವೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ […]

Continue Reading

ಪಿಎಸ್‌ಐ ಆನಂದ ಕಾಶಿ ಸೇವೆ ಮೆಚ್ಚಿ ರಾಜ್ಯಪಾಲರಿಂದ ಪ್ರಶಂಸಾ ಪತ್ರ

ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಕಾಶಿ ಅವರ ಪುತ್ರ ಆನಂದ ಕಾಶಿ ಪಿಎಸ್‌ಐ ಆಗಿ ರಾಜಭವನಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ಬೆಂಗಳೂರು ವಿಧಾನಸೌಧ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ ಕಾಶಿ ಅವರಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ರಾಜಭವನಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಮಾಡಿದ ಪ್ರಯತ್ನಗಳು ಮತ್ತು ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. […]

Continue Reading

ನರೋಣಾ ಕ್ಷೇಮಲಿಂಗೇಶ್ವರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳ್ಳಲಿ: ಮುಡಬಿ ಗುಂಡೇರಾವ

ಕಲಬುರಗಿ: ಅಯೋಧ್ಯ ನಗರದಂತೆ ನರೋಣಾ ಕ್ಷೇಮಲಿಂಗೇಶ್ವರರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳಿಸುವುದರಿಂದ ಈ ಕ್ಷೇತ್ರದ ಮಹಿಮೆ ದೇಶದೆಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಪಯಟ್ಟರು. ಆಳಂದ ತಾಲೂಕಿನ ನರೋಣಾ ಗ್ರಾಮದ ಐತಿಹಾಸಿಕ ಸುಕ್ಷೇತ್ರ ಕ್ಷೇಮಲಿಂಗೇಶ್ವರ ದೇವಸ್ಥಾನದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-6ರಲ್ಲಿ ಮಾತನಾಡಿದ ಅವರು, ಶ್ರೀ ರಾಮನು ರಾವಣನನ್ನು ಸಂಹರಿಸಿ, ಪಾಪ ಪರಿಹಾರಕ್ಕಾಗಿ ಕೋಟಿ ಲಿಂಗ ಸ್ಥಾಪನೆಯ ಗುರಿಯನ್ನಿಟ್ಟುಕೊಂಡು ದೇಶದಾದ್ಯಂತ […]

Continue Reading