ಸಂಬಂಧದ ಹುಡಗನೊಂದಿಗೆ ಪ್ರೀತಿ: ಅಪ್ರಾಪ್ತ ಮಗಳನ್ನು ಕೊಲೆಗೈದ ತಂದೆ ಅರೆಸ್ಟ್

ಸುದ್ದಿ ಸಂಗ್ರಹ ತುಮಕೂರುಪ್ರೀತಿ ಪ್ರೇಮದ ಬಲೆಗೆ ಬಿದ್ದು ಮನೆತನದ ಗೌರವ ಬೀದಿಪಾಲು ಮಾಡಿದ್ದಾಳೆ ಎಂದು ಬೇಸರದಿಂದ ಸ್ವತಃ ತಂದೆಯೇ ಅಪ್ರಾಪ್ತ ಮಗಳನ್ನು ಹತ್ಯೆ ಮಾಡಿದ ಘಟನೆ ತುಮಕೂರಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಮಗಳನ್ನು ಕೊಂದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತಿಮ್ಮರಾಯಪ್ಪ ಬಂಧಿತ ಆರೋಪಿ. ಶಿರಾ ತಾಲೂಕು ನಿಂಬೆ ಮರದಹಳ್ಳಿಯ ಮೇಘನ (17) ಎಂಬಾಕೆ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ತಿಂಗಳ […]

Continue Reading

ಹಾಸನದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ: ಪ್ರಯಾಣಿಕರು ಸೇಫ್

ಸುದ್ದಿ ಸಂಗ್ರಹ ಹಾಸನಚಲಿಸುತ್ತಿದ್ದ ಖಾಸಗಿ ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡು ಧಗಧಗಿಸಿ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಹಾಸನ ತಾಲೂಕಿನ, ಶಾಂತಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪುರುಷರು, ಮಹಿಳೆಯರು, ಮಕ್ಕಳು ಸೇರಿ 36 ಜನ ಪ್ರಯಾಣಿಸುತ್ತಿದ್ದರು. ಶಾಂತಿ ಗ್ರಾಮದ ಬಳಿ ಬಸ್‌ನ ಟೈರ್ ಸ್ಫೋಟಗೊಂಡಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಚಾಲಕ ರಸ್ತೆಯಲ್ಲಿ […]

Continue Reading

ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್

ಸುದ್ದಿ ಸಂಗ್ರಹ ಹುಬ್ಬಳ್ಳಿಕಾನೂನು ಬಾಹಿರವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರ ಬಳಿ ಯಾವುದೆ ಗುರುತಿನ ದಾಖಲೆಗಳಿರಲಿಲ್ಲ. ದಾಖಲೆಗಳಿಲ್ಲದಿದ್ದರೂ ನಾಲ್ವರು ವಿದೇಸಿಗರು ರೈಲಿನಲ್ಲಿ ಪ್ರಯಾಣ ಮಾಡಿ ಹುಬ್ಬಳ್ಳಿವರೆಗೆ ಬಂದಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದಿರುವ ಆರ್‌ಪಿಎಫ್ ಸಿಬ್ಬಂದಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ […]

Continue Reading

ನಾಪತ್ತೆಯಾಗಿದ್ದ ಬಾಲಕ 4 ವರ್ಷಗಳ ನಂತರ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್​​

ಸುದ್ದಿ ಸಂಗ್ರಹ ಮಂಡ್ಯನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ 4 ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರು ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷವೆಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ ಮಾಡುವಲ್ಲಿ ಮಹತ್ವದ ಪಾತ್ರವಹಿಸಿದೆ. ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡರ 9ನೇ ತರಗತಿ […]

Continue Reading

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಸುದ್ದಿ ಸಂಗ್ರಹ ಚಾಮರಾಜನಗರನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಮೇ.10 ರಂದು ರವಿವಾರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೆ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೆ ಕಳುಹಿಸಲು ಅಧಿಕಾರಿಗಳ ತೀರ್ಮಾನಿಸಿದ್ದಾರೆ. […]

Continue Reading

ನಾಗಮಲೆಗೆ ಪಾದಯಾತ್ರೆ ಹೊರಟಿದ್ದ ಬಾಲಕ ಚಿರತೆ ದಾಳಿಗೆ ಬಲಿ

ಸುದ್ದಿ ಸಂಗ್ರಹ ಚಾಮರಾಜನಗರ ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಬಾಲಕನನ್ನು ಚಿರತೆ (ಪೋಷಕರ ಕಣ್ಣೆದುರಲ್ಲೆ) ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕುಟುಂಬದ 10 ಮಂದಿ ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, […]

Continue Reading

ಕಲಬುರಗಿ: ಮೇ ನಲ್ಲಿಯೇ ಎರಡು ತಿಂಗಳ ಅಕ್ಕಿ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿಸರ್ಕಾರದ ನಿರ್ದೇಶನದಂತೆ ಪ್ರಸಕ್ತ ಮೇ ಹಾಗೂ ಜೂನ್ ಎರಡು ತಿಂಗಳ ಆಹಾರ ಧಾನ್ಯಗಳನ್ನು ಮೇ ತಿಂಗಳಲ್ಲೆ ವಿತರಿಸಲಾಗುತ್ತಿದ್ದು, ಪಡಿತರದಾರರು ಎರಡು ಬಾರಿ ಬಯೋಮೆಟ್ರಿಕ್ ನೀಡಿ ಪಡಿತರ ಧಾನ್ಯ ಪಡೆದುಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿಯಂತೆ ಒಟ್ಟು 70 ಕೆ.ಜಿ ಅಕ್ಕಿ ಮತ್ತು ಬಿಪಿಎಲ್ ಕಾರ್ಡ್‌ ಹೊಂದಿದ ಪ್ರತಿ ಸದಸ್ಯರಿಗೆ ತಲಾ 10 […]

Continue Reading

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ: 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಸುದ್ದಿ ಸಂಗ್ರಹ ಬೆಳಗಾವಿಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಮೊದಲು ಕಳ್ಳತನದ […]

Continue Reading

ರಕ್ತ ಸಂಬಂಧವನ್ನೆ ಮರೆತು ಮದುವೆಯಾದ ಅಕ್ಕ ತಮ್ಮ

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಕ್ತಸಂಬಂಧದ ಮನ್ನಣೆಯನ್ನೆ ಮರೆತು ಅಕ್ಕ-ತಮ್ಮ ಹಸೆಮಣೆ ಏರಿರುವ ವಿಲಕ್ಷಣ ಘಟನೆ ನಡೆದಿದೆ. ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಈಗ ಸಪ್ತಪದಿ ತುಳಿಯುವ ಮೂಲಕ ಸಾಮಾಜಿಕ ಚರ್ಚೆಗೆ ಗ್ರಾಸವಾಗಿದ್ದಾರೆ. ದೇವನಹಳ್ಳಿಯ ಸಾವಕನಹಳ್ಳಿ ಮೂಲದ ಶಶಿಕಲಾ ಮತ್ತು ಹೊಸಕೋಟೆಯ ಪ್ರವೀಣ್ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಅಂದರೆ ವರಸೆಯಲ್ಲಿ ಶಶಿಕಲಾ ಮತ್ತು ಪ್ರವೀಣ್ ಅಕ್ಕ-ತಮ್ಮನಾಗಬೇಕು. ಆದರೆ ಈ ಸಂಬಂಧದ ಗಡಿಯನ್ನು ಮೀರಿ […]

Continue Reading

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್: ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ

ಸುದ್ದಿ ಸಂಗ್ರಹ ಯಾದಗಿರಿಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ, ವಿಜಯಶ್ರೀ […]

Continue Reading