ಮಣ್ಣಿನ ಮೂರ್ತಿಗೆ ಪೂಜಿಸಿ ಪಾಲಕರನ್ನು ಸ್ಮರಿಸಿದ ಅನಾಥ ಮಕ್ಕಳು

ಕಲಬುರಗಿ: ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಮಹಾಲಯ ಅಮವಾಸ್ಯೆ’ಯ ಕಾರ್ಯಕ್ರಮದ ಪ್ರಯುಕ್ತ ಅನಾಥ ಮಕ್ಕಳು ಪಾಲಕರ ಮಣ್ಣಿನ ಮೂರ್ತಿಯನ್ನು ರಚಿಸಿ, ಪೂಜಿಸಿ ಸ್ಮರಿಸಿದ ಅಪರೂಪದ ಘಟನೆ ಜರುಗಿತು. ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ಏಕಲವ್ಯ ಮತ್ತು ದ್ರೋಣಾಚಾರ್ಯರ ಮೂರ್ತಿ ಸ್ಥಾಪಿಸಿ ಬಿಲ್ವವಿದ್ಯೆ ಕಲಿತಿದ್ದು ನಾವು ತಿಳಿದಿದ್ದೆವೆ. ಪ್ರಸ್ತುತವಾಗಿ ಇಲ್ಲಿನ ಅನಾಥ ಮಕ್ಕಳು ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥ […]

Continue Reading

ಜಿಎಸ್‌ಟಿ ಸುಧಾರಣೆಯಿಂದ ದಿನನಿತ್ಯದ ಅಗತ್ಯ ವಸ್ತುಗಳು, ಔಷಧಿಗಳು ಅಗ್ಗ: ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ ಹೊಸೂರಕರ್

ಚಿತ್ತಾಪುರ: ಜಿಎಸ್‌ಟಿ ಉಳಿತಾಯ ಉತ್ಸವದ ಆರಂಭದಿಂದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸೂರಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ ಸುಧಾರಣೆಯಿಂದ ದಿನನಿತ್ಯದ ಅಗತ್ಯ ವಸ್ತುಗಳು, ಔಷಧಿಗಳು, ವಿಮೆ ಅಗ್ಗವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವರಾತ್ರಿಯ ಮುನ್ನಾ ದಿನದಂದು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಉತ್ಸವ (ಉಳಿತಾಯ ಹಬ್ಬ) ಆರಂಭವಾಗುತ್ತಿದೆ ಎಂದು ಹೇಳಿದ್ದಾರೆ. ಕೇವಲ 5% ಮತ್ತು 18% ರ ಎರಡು ತೆರಿಗೆ ಸ್ಲ್ಯಾಬ್‌ಗಳಿಗೆ ತರಲಾಗಿದೆ. ಹಿಂದೆ 12% ತೆರಿಗೆಯಲ್ಲಿದ್ದ […]

Continue Reading

ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಬೇಲೂರು ಪುರಸಭೆ ಆವರಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತವೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶ ಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ […]

Continue Reading

ಚಿತ್ತಾಪುರ: ಯಲ್ಲಮ್ಮ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈ ತುಂಡು ಮಾಡಿ ಹೊತ್ತೊಯ್ದ ಕಳ್ಳರು

ಚಿತ್ತಾಪುರ: ಯಲ್ಲಮ್ಮ ದೇವಸ್ಥಾನದ ಬೀಗದ ಕೈ ಮುರಿದು ದೇವಿಯ ಬೆಳ್ಳಿ ಮೂರ್ತಿಯ 2 ಕೈಗಳನ್ನು ತುಂಡು ಮಾಡಿ ತೆಗೆದುಕೊಂಡು ಹೋದ ಘಟನೆ ಪಟ್ಟಣದ ಬಾಹರಪೇಟ್ ಸಮೀಪ ಕೊತಲಾಪೂರ ಯಲ್ಲಮ್ಮ ದೇವಸ್ಥಾನದಲ್ಲಿ ನಡೆದಿದೆ. ನವರಾತ್ರಿ ನಿಮಿತ್ಯ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿತ್ತು. ಸೆ.16 ರಂದು ಮಂಗಳವಾರ ಕೊನೆಯ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್’ಗೆ ಬೀಗ ಹಾಕಿ ಹೋಗಲಾಗಿತ್ತು. ಸೆ.17 ರಂದು ಬುಧವಾರ ಬೆಳಗ್ಗೆ ದೇವಿಯ ಪೂಜಾ ಕಾರ್ಯಕ್ಕೆ ಅರ್ಚಕ […]

Continue Reading

SBI ಬ್ಯಾಂಕ್‌ ದರೋಡೆ: ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಬ್ಯಾಂಕ್‌ನಲ್ಲಿ ಕಳ್ಳರು ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಕಟ್ಟಿಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್‌‌ಗೆ 5ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ […]

Continue Reading

ಬೀದರ್: 3ನೇ ಮಹಡಿಯಿಂದ ತಳ್ಳಿ ಮಲ ಮಗಳನ್ನು ಕೊಲೆ ಮಾಡಿದ ಮಹಿಳೆ

ಬೀದರ್: ಆಟ ಆಡಿಸುವ ನೆಪದಲ್ಲಿ ಮಲ ಮಗಳನ್ನು ಟೆರೇಸ್ ಮೇಲೆ ಕರೆದುಕೊಂಡು ಹೋಗಿ ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. 7 ವರ್ಷದ ಸಾನ್ವಿ ಮೃತ ಬಾಲಕಿ (ಮಲಮಗಳು) ಹಾಗೂ ಆರೋಪಿಯನ್ನು ರಾಧಾ (ಮಲತಾಯಿ) ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ (ಮಲಮಗಳು) ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದುಕೊಂಡು ಹೋಗಿದ್ದಳು. ಆ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಎಲ್ಲರಿಗೂ […]

Continue Reading

ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್: 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ

ಕಲಬುರಗಿ: ಇತ್ತೀಚೆಗಷ್ಟೇ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಗೋಲ್ಮಾಲ್ ಪ್ರಕರಣ ವರದಿಯಾದ ಬೆನ್ನಲ್ಲೆ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಜೇವರ್ಗಿ ಪುರಸಭೆಯಲ್ಲಿ 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಜಮೀನು, ನಿವೇಶನ ಮತ್ತು ಕಮರ್ಷಿಯಲ್ ಅಂಗಡಿಗಳ ನಕಲಿ ಖಾತೆಗಳ ನೋಂದಣಿ ತಡೆಯಲು ಸರ್ಕಾರ ಹಲವು ಕಠಿಣ ನಿಯಮ ಜಾರಿಗೆ ತರುತ್ತಿದೆ. ಆದರೆ ಜೇವರ್ಗಿ ಪುರಸಭೆಯಲ್ಲಿ ಅಧಿಕಾರಿಗಳ ಲಂಚಗುಳಿತನಕ್ಕೆ ನಕಲಿ ಖಾತೆಗಳ ಪ್ರಕರಣ ಹೆಚ್ಚಾಗಿದೆ. ಜೇವರ್ಗಿ ಪಟ್ಟಣದ ಶಾಂತಿ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನೆ ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ ಅಂಗಡಿ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನು ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ […]

Continue Reading

ಅತಿವೃಷ್ಟಿಯಿಂದ ಬೆಳೆಹಾನಿಯಾದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ

ಕಲಬುರಗಿ: ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾನಿಯಾಗಿರುವ ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನ ನಾನಾ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ತಾಲೂಕಿನ ವಾಡಿ ಮತ್ತು ಹಲಕಟ್ಟಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ತೊಗರಿ, ಹೆಸರು, ಹತ್ತಿ ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಶಹಾಬಾದ ತಾಲೂಕಿನ ರಾವೂರ ಮತ್ತು ಮಾಲಗತ್ತಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ತೊಗರಿ, ಹೆಸರು, ಉದ್ದು ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಚಿತ್ತಾಪುರ ಮತ್ತು ಶಹಾಬಾದ ತಾಲೂಕಿನಲ್ಲಿ ಅತಿವೃಷ್ಟಿಯಿಂದ […]

Continue Reading