ಅತಿವೃಷ್ಟಿಯಿಂದ ಬೆಳೆಹಾನಿಯಾದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ

ಕಲಬುರಗಿ: ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾನಿಯಾಗಿರುವ ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನ ನಾನಾ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ತಾಲೂಕಿನ ವಾಡಿ ಮತ್ತು ಹಲಕಟ್ಟಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ತೊಗರಿ, ಹೆಸರು, ಹತ್ತಿ ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಶಹಾಬಾದ ತಾಲೂಕಿನ ರಾವೂರ ಮತ್ತು ಮಾಲಗತ್ತಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ತೊಗರಿ, ಹೆಸರು, ಉದ್ದು ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಚಿತ್ತಾಪುರ ಮತ್ತು ಶಹಾಬಾದ ತಾಲೂಕಿನಲ್ಲಿ ಅತಿವೃಷ್ಟಿಯಿಂದ […]

Continue Reading

ಪ್ರಾಚಿನ ಕಾಲದ ಧಾರ್ಮಿಕ, ಆಧ್ಯಾತ್ಮಿಕ, ವಾಣಿಜ್ಯ ಕೇಂದ್ರ ಕಡಗಂಚಿ: ಮುಡುಬಿ ಗುಂಡೇರಾವ

ಕಲಬುರಗಿ: ಕುಂತಲ ನಾಡಿನ ಪ್ರಮುಖ ಧಾರ್ಮಿಕ, ಆಧ್ಯಾತ್ಮಿಕ, ವಾಣಿಜ್ಯ ಕೇಂದ್ರವಾಗಿ ಕಡಗಂಚಿ ಗ್ರಾಮವು ಇತಿಹಾಸದಲ್ಲಿ ರಾರಾಜಿಸಿದೆ. ಇಲ್ಲಿನ ಶಾಸನ-ಸ್ಮಾರಕಗಳು ನಾಡಿನ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಕಡಗಂಚಿಯ ಬಕ್ಕೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-37ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಗಂಚಿಯ ಕ್ರಿ.ಶ 1118ರ ಮತ್ತು 12ನೇ ಶತಮಾನದ ಶಾಸನಗಳ ಪ್ರಕಾರ, ಮಲ್ಲಿಕಾರ್ಜುನ ದೇವಾಲಯಕ್ಕೆ ಕಲ್ಯಾಣ […]

Continue Reading

ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿ, ನಿರಂತರ ಪ್ರಯತ್ನವಿರಲಿ

ಕಲಬುರಗಿ: ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ನಿರ್ಧರಿಸಿ, ಅದರ ಸಾಧನೆಗೆ ನಿರಂತರ ಪ್ರಯತ್ನ ಮಾಡಬೇಕು. ಸೃಜನಶೀಲತೆ, ಮಾನವೀಯತೆ, ದೇಶಭಕ್ತಿ, ಛಲಗಾರಿಕೆ, ಧನಾತ್ಮಕ ಚಿಂತನೆ ಬೆಳೆಸಿಕೊಂಡು, ಉನ್ನತವಾದ ಸಾಧನೆ ಮಾಡಬೇಕು ಎಂದು ಚಿಂತಕ ಮಹಾದೇಯ್ಯ ಕರದಳ್ಳಿ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ‘ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ’ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಪ್ರಾವೀಣ್ಯತೆ ಬೆಳೆಸಿಕೊಳ್ಳಬೇಕು. ಸ್ವ-ಅಧ್ಯಯನ ಅಗತ್ಯ. ಸಾಧಿಸುವ ಛಲಗಾರಿಕೆ ಅಗತ್ಯ. ಉದ್ದೇಶ ಸ್ಪಷ್ಟವಾಗಿರಲಿ. […]

Continue Reading

ವಿದ್ಯಾರ್ಥಿ, ಸಮಾಜಪರ ಕಾಳಜಿಯುಳ್ಳ ಶಿಕ್ಷಕರ ಸಂಖ್ಯೆ ಹೆಚ್ಚಾಗಲಿ

ಕಲಬುರಗಿ: ರಾಜಶೇಖರ ಗುಂಡದ್ ಅವರು ಎಲ್ಲಾ ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಸೇವೆ ಸಲ್ಲಿಸಿದ ಶಾಲೆಗೆ ನಿವೃತ್ತಿಯಾದ ನಂತರವು ದೇಣಿಗೆ ನೀಡಿ ಸದಾ ಅಭಿವೃದ್ಧಿ ಬಯಸುವರಾಗಿದ್ದಾರೆ. ಅವರಲ್ಲಿರುವ ವಿದ್ಯಾರ್ಥಿಗಳ ಬಗ್ಗೆಯಿದ್ದ ಕಾಳಜಿ, ಕಲಿಸುವ ಹಂಬಲ, ಕರ್ತವ್ಯಬದ್ಧತೆ, ಸೇವಾ ಮನೋಭಾವ ಶ್ಲಾಘನೀಯವಾಗಿದೆ. ಅಪರೂಪ ಹಾಗೂ ಮೇರು ವ್ಯಕ್ತಿತ್ವದ ಶಿಕ್ಷಕರ ಸಂಖ್ಯೆ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಾಗಬೇಕಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ತಾಲೂಕಿನ ಹತಗುಂದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇತ್ತೀಚಿಗೆ ವಯೋನಿವೃತ್ತಿ ಹೊಂದಿರುವ ಗುಂಡದ್ […]

Continue Reading

ಲಂಚ ಪಡೆಯುವಾಗ ದಾಳಿ: ಎಸಿಪಿ ಶರಣಬಸಪ್ಪ ಸುಬೇದಾ‌ರ್ ಸೇರಿ ಐವರು ಲೋಕಾಯುಕ್ತ ಬಲೆಗೆ

ಕಲಬುರಗಿ: ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್ ಸೇರಿ ಐವರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್, ಅವರ ರೈಟರ್ ಚಂದ್ರಕಾಂತ್, ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಸೈಟ್ ವಿವಾದವೊಂದನ್ನು ಬಗೆಹರಿಸಲು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 40 ಲಕ್ಷ ರೂ ಬೇಡಿಕೆ ಇಟ್ಟಿದ್ದರು, ಅದರಲ್ಲಿ ಮುಂಗಡವಾಗಿ 10 ಲಕ್ಷ ರೂ ಪಡೆದಿದ್ದರು. ಉಳಿದ 30 ಲಕ್ಷಕ್ಕೆ […]

Continue Reading

ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿಗೆ ಹೆರಿಗೆ: ಗಂಡು ಮಗುವಿಗೆ ಜನನ

ಶಹಾಪುರ: ನಗರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ‌ ಜನ್ಮ ನೀಡಿದ್ದಾರೆ. ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ‌ 2.30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ. ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು, ಕ್ರಮಕ್ಕೆ ಮುಂದಾಗಿದ್ದೆವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು. ಪ್ರಸ್ತುತ […]

Continue Reading

ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ ಬಿಂಬಿಸುವ ದೇವಾಲಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ದೊರೆಯುವ ಬಹುತೇಕ ಶಾಸನ, ಸ್ಮಾರಕಗಳು ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ, ದಾನ, ದತ್ತಿ, ಪರೋಪಕಾರತೆ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಜಿಲ್ಲೆಯ ಹೊನಗುಂಟಿ ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-36ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಶಹಾಬಾದ ತಾಲೂಕಿನ ಭಂಕೂರ, ಮಾಲಗತ್ತಿ, ಮರತೂರ, ದೇವರ ತೆಗನೂರು, ಹೊನಗುಂಟಿ ಗ್ರಾಮಗಳಲ್ಲಿ ಐತಿಹಾಸಿಕ ಪ್ರಾಚೀನ ಕುರುಹುಗಳು, […]

Continue Reading

ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳ ಆರಂಭಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧಾರ

ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದ ಆಯ್ದ ನಗರಗಳಲ್ಲಿ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಸಿಗಲಿದೆ. ಅಕ್ಟೋಬರ್‌ ಆರಂಭದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳನ್ನು ರಸ್ತೆಗೆ ಇಳಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಪ್ರಧಾನಮಂತ್ರಿ ವಿದ್ಯುನ್ಮಾನ ಯೋಜನೆಯಡಿ (ಪಿಎಂಇ) ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ಬಸ್‌ಗಳನ್ನು ಓಡಿಸಲಾಗುತ್ತದೆ. ಸಾರಿಗೆ ನಿಗಮದ ಅನುದಾನದಲ್ಲಿ ಕೊಪ್ಪಳ, ವಿಜಯನಗರ, ಬೀದರ್‌ ಮತ್ತು ರಾಯಚೂರು ಜಿಲ್ಲೆಗಳಿಗೆ ಡೀಸೆಲ್‌ ಆಧರಿತ ನೂತನ ಸಿಟಿ ಬಸ್‌ಗಳನ್ನು ಪೂರೈಸಲಾಗುತ್ತದೆ. […]

Continue Reading

ಲಿಂಗೈಕ್ಕೆಕ್ಕೂ ಮುನ್ನ ತಮ್ಮ ಕೊನೆಯ ಆಸೆ ಈಡೇರಿಸಿಕೊಂಡ ಡಾ.ಶರಣಬಸಪ್ಪ ಅಪ್ಪ

ಕಲಬುರಗಿ: ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ಡಾ. ಶರಣಬಸಪ್ಪ ಅಪ್ಪ ಅವರು ತಮ್ಮ ಅಂತಿಮ ಇಚ್ಛೆಯಂತೆ ಶ್ರೀ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರು ಎಳೆದಿದ್ದಾರೆ. ಗೃಹ ಆರೈಕೆಗೆಂದು ಶರಣಬಸಪ್ಪ ಅಪ್ಪಾ ಅವರನ್ನು ಮಠಕ್ಕೆ ಕರೆದುಕೊಂಡು ಬರಲು ಕುಟುಂಬಸ್ಥರು ನಿರ್ಧರಿಸಿದರು. ಅದರಂತೆ, ಡಾ. ಶರಣಬಸಪ್ಪ ಅಪ್ಪಾ ಅವರನ್ನು ಮಠಕ್ಕೆ ಕರೆದುಕೊಂಡು ಬರಲಾಯಿತು. ಶರಣಬಸವೇಶ್ವರ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು ಹಾಗೂ ಆರತಿ ನಡೆಯಿತು. ನಂತರ […]

Continue Reading

ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ: ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ ?

ಹಾಸನ: ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಾರಲ್ಲಿದ್ದವರು ನನ್ನನ್ನೂ ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದರು ಎಂದು ಶಾಲಾ ವಿದ್ಯಾರ್ಥಿನಿಯೊಬ್ಬಳು ಅಳುತ್ತ ಓಡಿ ಶಾಲೆಗೆ ಬಂದ ಪ್ರಸಂಗ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಶಾಲೆಗೆ ಓಡಿ ಬಂದ ವಿದ್ಯಾರ್ಥಿನಿ, ಬಿಳಿ ಬಣ್ಣದ ಮಾರುತಿ ಓಮ್ನಿಯಲ್ಲಿ ಬಂದವರು ಅಪಹರಣಕ್ಕೆ ಯತ್ನಿಸಿದ್ದರು, ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಿಕೊಂಡಿದ್ದಾಳೆ. ಈ ವೇಳೆ ಗಾಬರಿಯಿಂದ ಬಾಲಕಿ ಬ್ಯಾಗ್‌ ಸಹ ಎಸೆದು ಬಂದಿದ್ದಾಳೆ. ಈ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ […]

Continue Reading