ಬೀದರ್: 2.50 ಲಕ್ಷ ರೂ ಲಂಚ ಪಡೆಯುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಸೆರೆ  

ಸುದ್ದಿ ಸಂಗ್ರಹ ಜನವಾಡ  ಮನೆಯ ಮ್ಯುಟೇಶನ್ ನೀಡಲು 2.50 ಲಕ್ಷ ರೂ ಲಂಚ ಪಡೆಯುತ್ತಿದ್ದ ಬೀದರ್ ತಾಲೂಕಿನ ಮರಕುಂದಾ ಗ್ರಾಮ ಆಡಳಿತಾಧಿಕಾರಿ ಶಿವಕುಮಾರ ಅವರ ಸಹಚರ ಶರಣಯ್ಯ ಸ್ವಾಮಿ ಮಂಗಳವಾರ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.   ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಅವರು ಮನೆಯ ಮ್ಯುಟೇಶನ್‌ಗಾಗಿ ಗ್ರಾಮ ಆಡಳಿತಾಧಿಕಾರಿ ಸಂಪರ್ಕಿಸಿದ್ದರು. ಇದಕ್ಕಾಗಿ ಶಿವಕುಮಾರ ಹಾಗೂ ಶರಣಯ್ಯ ಸ್ವಾಮಿ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಮಹಾದೇವ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ […]

Continue Reading

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

ಸುದ್ದಿ ಸಂಗ್ರಹ ಹಾಸನಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಮತ್ತು ಸಿಬ್ಬಂದಿ […]

Continue Reading

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಸುದ್ದಿ ಸಂಗ್ರಹ ಚಿಕ್ಕಮಗಳೂರುಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. […]

Continue Reading

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

ಸುದ್ದಿ ಸಂಗ್ರಹ ಚಿಕ್ಕಮಗಳೂರುಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎನ್‌ ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಗೌರವಕುಮಾರ್ ಶೆಟ್ಟಿ ಪ್ರಮಾಣ ಪತ್ರ ನೀಡಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ನನ್ನನ್ನು ಗೆಲ್ಲಿಸಿದ್ದರು. ಆದರೆ ಇಲ್ಲಿಯ ಕೆಲವರು ಸೋಲಿಸಿದ್ದರು. ಕಾನೂನಿನ ಹೋರಾಟದ ಮೂಲಕ ನನಗೆ ಜಯಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಅವರು, ಟ್ಯಾಂಪರಿಂಗ್ ಆರೋಪದಡಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ಠಾಣಾ ವ್ಯಾಪ್ತಿಗೆ […]

Continue Reading

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌: ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪೈಲಟ್ ಗೊಂದಲದಿಂದ ಕಿಚ್ಚ ಸುದೀಪ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಇಳಿಯುವಾಗ ಹೆಲಿಪ್ಯಾಡ್ ಬದಲಾಯಿಸಿದ್ದು ಅಧಿಕಾರಿಗಳಲ್ಲಿ ಕೆಲಕಾಲ ಗೊಂದಲ, ಆತಂಕ ಸೃಷ್ಟಿ ಮಾಡಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಆಗಮಿಸಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದೆ. ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಘಟನೆ ನಡೆದಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬೇರೆ ಬೇರೆ ಹೆಲಿಕ್ಯಾಪ್ಟರ್ ನಲ್ಲಿ ಡಿಕೆಶಿ ಹಾಗೂ ಸುದೀಪ್ ಆಗಮಿಸಿದ್ದು ನಟ ಕಿಚ್ಚ ಸುದೀಪ್ ಬಂದಿದ್ದ ಹೆಲಿಕ್ಯಾಪ್ಟರ್ ಪೈಲೆಟ್ ಗೊಂದಲಕ್ಕೀಡಾಗಿದ್ದಾರೆ. […]

Continue Reading

ಕಲಬುರಗಿ: ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ನೂತನ ಜಿಲ್ಲಾಧಿಕಾರಿ

ಕಲಬುರಗಿ: ಬೆಂಗಳೂರಿನ ಆರ್ಥಿಕ ಇಲಾಖೆಯ (ಬಜೆಟ್‌ ಮತ್ತು ಸಂಪನ್ಮೂಲ) ಜಂಟಿ ಕಾರ್ಯದರ್ಶಿಯಾಗಿದ್ದ, 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೊಹಮ್ಮದ್‌ ಇಕ್ರಾಮುಲ್ಲಾ ಶರೀಫ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಷರೀಫ್‌ ಅವರು ಪ್ರಸ್ತುತ ಹಣಕಾಸು ಇಲಾಖೆಯ (ಬಜೆಟ್ ಮತ್ತು ಸಂಪನ್ಮೂಲ) ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುನ್ನ ರಾಮನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಜಿಲ್ಲಾಧಿಕಾರಿಯಾಗಿದ್ದ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಅಧೀನದ ಗ್ರಾಮೀಣ ಕುಡಿಯುವ […]

Continue Reading

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲವೆಂದು 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

ಸುದ್ದಿ ಸಂಗ್ರಹ ಬಾಗಲಕೋಟೆ ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಪಟ್ಟಿ ಹಣ ಕೊಡದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿಂದ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹುಣಸಿಕಟ್ಟಿ ಗ್ರಾಮದ ಊರಿನ ಹಿರಿಯರು, ಹನುಮಂತ ದೇವರ ಜಾತ್ರೆಗೆ ಪ್ರತಿ ಕುಟುಂಬಕ್ಕೆ 600 ರೂ. ಪಟ್ಟಿ ಹಾಕಿದ್ದರು. ಆದರೆ ಗ್ರಾಮದ 7 ಕುಟುಂಬಗಳು ಪಟ್ಟಿ ಹಣ ಕೊಟ್ಟಿರಲಿಲ್ಲ. ಆ ಕಾರಣವನ್ನೆ ಮುಂದಿಟ್ಟುಕೊಂಡ ಹಿರಿಯರು, ಆ ಕುಟುಂಬಗಳನ್ನು ದೈವದಿಂದ‌ ಹೊರಗೆ ಇಟ್ಟಿದ್ದೆವೆ […]

Continue Reading

ಹವಾಮಾನ ವೈಪರಿತ್ಯ: ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

ಸುದ್ದಿ ಸಂಗ್ರಹ ಹುಬ್ಬಳ್ಳಿಪ್ಲೈ 91 (Fly 91) ವಿಮಾನಕ್ಕೆ ಮತ್ತೆ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಸಮಸ್ಯೆ ಎದುರಾಗಿದೆ. ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆಗಸದಲ್ಲಿಯೇ ಹಲವು ಸುತ್ತು ಹೊಡೆದು 40 ನಿಮಿಷ ತಡವಾಗಿ ವಿಮಾನ ಲ್ಯಾಂಡ್‌ ಆಗಿದೆ. ಏ.25 ರಂದು ಶನಿವಾರ ಹೈದ್ರಾಬಾದ್‌ನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಪ್ಲೈ 91 ಸಂಸ್ಥೆಯ ಐಸಿ 3401 ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆ ಎದುರಾಗಿತ್ತು. ಮಧ್ಯಾಹ್ನ 3:13ಕ್ಕೆ ಹೈದರಾಬಾದ್‌ ಬಿಟ್ಟಿದ್ದ ವಿಮಾನ ಸಂಜೆ 4:30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದ ಆಕಾಶದಲ್ಲಿ ಹಲವು […]

Continue Reading

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

ಸುದ್ದಿ ಸಂಗ್ರಹ ಹಾವೇರಿ ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆ ಹಾಗೂ ಉಪಕರಣಗಳು ಸುಟ್ಟು ಭಸ್ಮವಾಗಿವೆ. ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿ ಹೊತ್ತಿ ಉರಿದಿದೆ. ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂ. ಮೌಲ್ಯದ ಔಷಧಿ, 50 ಲಕ್ಷ ರೂ. ಮೌಲ್ಯದ ಮಾತ್ರೆಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ಒಂದು ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ […]

Continue Reading

ಅಂಧ ವಿದ್ಯಾರ್ಥಿನಿ ಬಾಳಲ್ಲಿ ಆಟವಾಡಿದ SSLC ಬೋರ್ಡ್:  84% ಪರ್ಸೆಂಟೇಜ್ ಅಂಕ ಗಳಿಸಿದರೂ ಫೇಲ್

ಸುದ್ದಿ ಸಂಗ್ರಹ ಉತ್ತರ ಕನ್ನಡ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಶಿಕ್ಷಣ ಇಲಾಖೆಯ ಮತ್ತು ಪರೀಕ್ಷಾ ಪ್ರಾಧಿಕಾರದ ಅಚಾತುರ್ಯವೊಂದು ಬೆಳಕಿಗೆ ಬಂದಿದೆ. ಹಗಲಿರುಳು ಶ್ರಮಪಟ್ಟು ಅಭ್ಯಾಸ ಮಾಡಿ, ಅತ್ಯುತ್ತಮ ಅಂಕ ಗಳಿಸಿದರೂ ಸಹ, ತಾಂತ್ರಿಕ ದೋಷ ಅಥವಾ ನಿರ್ಲಕ್ಷ್ಯದಿಂದಾಗಿ ಅಂಧ ವಿದ್ಯಾರ್ಥಿನಿಯೊಬ್ಬಳನ್ನು ‘ಫೇಲ್’ ಎಂದು ಘೋಷಿಸಿರುವುದು ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಂದಿರಾ ನಗರದ ಯುನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಲೀಜಾ ಖಾನಮ್ ಈ ಅನ್ಯಾಯಕ್ಕೆ ಒಳಗಾದ ಪ್ರತಿಭೆ. […]

Continue Reading