ಆಳಂದ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಆಲಂದಿ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳ ಕೊಡುಗೆ ಅಪಾರವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದಲ್ಲಿ ಪ್ರಾಚೀನ ಸಿದ್ದೇಶ್ವರ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 25ರಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಈ ಗ್ರಾಮವು ಆಲಂದಿ ಸಾಸಿರ ಅಂದರೆ ಸಾವಿರ ಹಳ್ಳಿಗಳಿಗೆ ರಾಜಧಾನಿಯಾಗಿದ್ದ ಆಳಂದ ಪಟ್ಟಣದ ಆಡಳಿತಕ್ಕೆ ಸೇರಿತ್ತು, ಕಲ್ಯಾಣ […]

Continue Reading

ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೆ ಮಾದಿಗರಿಗೆ 6% ಮೀಸಲಾತಿ ಕೊಡಿ

ಚಿತ್ತಾಪುರ: ಒಳ ಮೀಸಲಾತಿಗಾಗಿ ಆಗಸ್ಟ್ 1ರಂದು ಕಲಬುರಗಿ ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಚಿತ್ತಾಪುರ ಮತ್ತು ವಾಡಿ ಪಟ್ಟಣದಿಂದ 3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಮತ್ತು ಸಮಾಜದ ಹಿರಿಯ ಮುಖಂಡ ರಾಜು ಮುಕ್ಕಣ್ಣ ಹೇಳಿದರು. ಈ ಬೃಹತ್ ಪ್ರತಿಭಟನೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಒಳ ಮೀಸಲಾತಿ ಜಾರಿಗಾಗಿ ಮಾದಿಗರು ಮೂರುವರೆ ದಶಕಗಳಿಂದ ಹೋರಾಟ ನಡೆಸುತ್ತಿದ್ದರು ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುತ್ತಿಲ್ಲ […]

Continue Reading

ಆದಾಯ ಪ್ರಮಾಣ ಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​: ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಕಲಬುರಗಿ ಅಧಿಕಾರಿಗಳು

ಕಲಬುರಗಿ: ಕೆಲ ಸಂದರ್ಭಗಳಲ್ಲಿ ಪ್ರಮಾಣ ಪತ್ರದಲ್ಲಿ ಹೆಸರು, ವಿಳಾಸ ಅಥವಾ ಫೋಟೋ ಬದಲಾವಣೆ ಆಗಿರುವುದನ್ನು ನಾವು ನೋಡಿದ್ದೆವೆ. ಆದರೆ ಕಲಬುರಗಿಯಲ್ಲಿ ವಿಚಿತ್ರ ಘಟನೆ ನಡೆದಿದೆ. ತಹಸೀಲ್ದಾರ್ ​ ಕಚೇರಿ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ. ತಪ್ಪು ಸರಿಪಡಿಸುವಂತೆ ಸೂಚಿಸಿದರೂ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲವೆಂದು ಆರೋಪ ಕೇಳಿಬಂದಿದೆ. ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖ‌ ಕಲಬುರಗಿಯ ರಾಮತೀರ್ಥ ನಗರದ ಮಹಾಂತಪ್ಪ ಕೊತ್ಲೆ ಎಂಬ ವ್ಯಕ್ತಿ ವೀರಶೈವ ಲಿಂಗಾಯತ ಸಮುದಾಯದವರು. ಇವರು […]

Continue Reading

ತೇವಾಂಶ ಕಾಪಾಡಿ ಬೆಳೆಗಳ ಸಂರಕ್ಷಣೆ ಅಗತ್ಯ

ಕಲಬುರಗಿ: ತುಂತುರು ಅಥವಾ ಹನಿ ನೀರಾವರಿ ಮೂಲಕ ನೀರು ಉಪಯೋಗಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ಅನುಸರಿಸಿ, ಬೆಳೆಯನ್ನು ಕಾಪಾಡಬೇಕು ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು. ಸುಂಟನೂರ ಕ್ರಾಸ್ ಸಮೀಪದ ಪ್ರಗತಿಪರ ರೈತ ಸಂತೋಷ ಹಿರಮಶೆಟ್ಟಿ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಕೃಷಿ ಕ್ಷೇತ್ರ ಭೇಟಿ ಮತ್ತು ರೈತರಿಗೆ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಳೆಯಾಗಬೇಕಾಗಿದ್ದು. ಆದರೆ ಜಿಲ್ಲೆಯ ಬಹುತೇಕ ಕಡೆ ಮಳೆಯ ಅಭಾವವಿದೆ. ನಮ್ಮ […]

Continue Reading

ಕಲಬುರಗಿ: ಅತ್ಯಾಚಾರಿಗೆ 10 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ ದಂಡ

ಕಲಬುರಗಿ: ತಾಲೂಕಿನ ಗ್ರಾಮವೊಂದರ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಬ್ಬಿನ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಹೊನ್ನಪ್ಪ ಶರಣಪ್ಪ ದೊಡ್ಡಮನಿ ಎಂಬಾತನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿದೆ. 22 ಜನವರಿ 2024 ರಂದು ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆ ಚೀರಾಡಿದ್ದರಿಂದ ಆಕೆಯ ಸೋದರತ್ತೆ ಬಂದು ನೋಡಿದಾಗ ಹೊನ್ನಪ್ಪ ಪರಾರಿಯಾಗಿದ್ದ. ನಂತರ ಆಕೆ ಮಹಿಳೆಯ […]

Continue Reading

ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡಿದ ಅರಣ್ಯಾಧಿಕಾರಿ: ಕ್ರಮಕ್ಕೆ ಸೂಚಿಸಿದ ಸಚಿವರು

ರಾಯಚೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಮೊಬೈಲ್ ನಲ್ಲಿ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಅಧಿಕಾರಿಯ ವರ್ತನೆಗೆ ಗರಂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ರಾಯಚೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಸಚಿವ ಡಾ.ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ರಮ್ಮಿ ಆಟವಾಡುತ್ತ ಕುಳಿತಿದ್ದರು. ಒಂದು ಕಡೆ ಶಾಸಕರು, ಸಚಿವರ ಮಧ್ಯೆ ಕೆಡಿಪಿ […]

Continue Reading

ಶಾಸಕಿ ಕಚೇರಿಯನ್ನು ಬಿಡದ ಕಳ್ಳರು: ಲಕ್ಷಾಂತರ ರೂ. ಹಣ, ಚಿನ್ನ-ಬೆಳ್ಳಿ ಆಭರಣ ದೋಚಿದ ಖದೀಮರು

ವಿಜಯನಗರ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದ ಕಳ್ಳರು ಹಣ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ನಾಲ್ವರು ಮುಸುಕುದಾರಿಗಳು ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಶಾಸಕ ಕಚೇರಿಯ ಬೀಗ ಮುರಿದ ಒಳಗೆ ನುಗ್ಗಿದ್ದು. 2.5 ಲಕ್ಷ ನಗದು ಹಣ ಹಾಗೂ 10.80 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಬುಧವಾರ ಮಧ್ಯರಾತ್ರಿ ಒಂದು ಗಂಟೆಯಿಂದ ಗುರುವಾರ […]

Continue Reading

ಸಾರ್ವಜನಿಕವಾಗಿ ಕೈ ಎತ್ತಿದ್ದ ಸಿಎಂ: ಅವಮಾನದಿಂದ ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿಗೆ ಜಾಕ್‌ಪಾಟ್

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಲಾಟರಿ ಹೊಡೆದಿದ್ದಾರೆ. ಹೌದು ಬೆಳಗಾವಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿದೆ. ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್’ಗೆ ಮುಂದಾಗಿದೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ […]

Continue Reading

ಕನ್ನಡಿಗರ ಹಿರಿಮೆ, ಇತಿಹಾಸ ಸಾರುತ್ತಿರುವ ಗೊಬ್ಬುರ(ಬಿ) ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಗೊಬ್ಬುರ(ಬಿ) ಗ್ರಾಮದ ಐತಿಹಾಸಿಕ ಸ್ಮಾರಕಗಳು ಕನ್ನಡಿಗರ ಹಿರಿಮೆ, ಗರಿಮೆ, ಇತಿಹಾಸವನ್ನು ಸಾರುತ್ತಿವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಅಫಜಲಪುರ ತಾಲೂಕಿನ ಗೊಬ್ಬುರ(ಬಿ) ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-24ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಗೊಬ್ಬುರ(ಬಿ) ಗ್ರಾಮಕ್ಕೆ ಸಂತೆ ಗೊಬ್ಬುರು ಎಂಬುದು ಶಾಸನೋಕ್ತ ಹೆಸರು.10,11 ಮತ್ತು 12ನೇ ಶತಮಾನದಲ್ಲಿ ಈ ಗ್ರಾಮವು ಕರುನಾಡಿನ ಬಹುದೊಡ್ಡ ವ್ಯಾಪಾರ ಮತ್ತು ವಾಣಿಜ್ಯ ಕೇಂದ್ರವಾಗಿ ದೇಶದ […]

Continue Reading

ಸಗರ ನಾಡಿನ ಅನರ್ಘ್ಯ ರತ್ನ ಕಡಿಕೋಳ ಮಡಿವಾಳಪ್ಪ: ಮುಡುಬಿ ಗುಂಡೇರಾವ

ಕಲಬುರಗಿ: ತತ್ವಪದಕಾರ ಕಡಿಕೋಳ ಮಡಿವಾಳಪ್ಪನವರು ಬಿದನೂರಲ್ಲಿ ಜನಿಸಿ, ಚಿಣಮಗೇರಾದಲ್ಲಿ ತತ್ವಪದ ರಚಿಸಿ, ಕಡಕೋಳದಲ್ಲಿ ನೆಲೆನಿಂತು ತತ್ವ ಪದಗಳ ಶಿಖರವಾಗಿದ್ದಾರೆ. ಅವರು ಸಗರ ನಾಡಿನ ಅನರ್ಘ್ಯ ರತ್ನವಾಗಿದ್ದಾರೆ ಎಂದು ಸಂಶೋಧಕ ಸಾಹಿತಿ-ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಅಫಜಲಪುರ ತಾಲೂಕಿನ ಬಿದನೂರು ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-23ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಿಕೋಳ ಮಡಿವಾಳಪ್ಪನವರು ಸಾವಿರಾರು ತತ್ವಪದಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಲ್ಯಾಣ ಕರ್ನಾಟಕದ […]

Continue Reading