ಚಿತ್ತಾಪುರ: ಯಲ್ಲಮ್ಮ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈ ತುಂಡು ಮಾಡಿ ಹೊತ್ತೊಯ್ದ ಕಳ್ಳರು

ಚಿತ್ತಾಪುರ: ಯಲ್ಲಮ್ಮ ದೇವಸ್ಥಾನದ ಬೀಗದ ಕೈ ಮುರಿದು ದೇವಿಯ ಬೆಳ್ಳಿ ಮೂರ್ತಿಯ 2 ಕೈಗಳನ್ನು ತುಂಡು ಮಾಡಿ ತೆಗೆದುಕೊಂಡು ಹೋದ ಘಟನೆ ಪಟ್ಟಣದ ಬಾಹರಪೇಟ್ ಸಮೀಪ ಕೊತಲಾಪೂರ ಯಲ್ಲಮ್ಮ ದೇವಸ್ಥಾನದಲ್ಲಿ ನಡೆದಿದೆ. ನವರಾತ್ರಿ ನಿಮಿತ್ಯ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿತ್ತು. ಸೆ.16 ರಂದು ಮಂಗಳವಾರ ಕೊನೆಯ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್’ಗೆ ಬೀಗ ಹಾಕಿ ಹೋಗಲಾಗಿತ್ತು. ಸೆ.17 ರಂದು ಬುಧವಾರ ಬೆಳಗ್ಗೆ ದೇವಿಯ ಪೂಜಾ ಕಾರ್ಯಕ್ಕೆ ಅರ್ಚಕ […]

Continue Reading

SBI ಬ್ಯಾಂಕ್‌ ದರೋಡೆ: ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಬ್ಯಾಂಕ್‌ನಲ್ಲಿ ಕಳ್ಳರು ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಕಟ್ಟಿಹಾಕಿ ಕಳ್ಳರು ಕಳ್ಳತನ ಮಾಡಿದ್ದಾರೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆ ಬ್ಯಾಂಕ್‌‌ಗೆ 5ಕ್ಕೂ ಹೆಚ್ಚು ಮುಸುಕುಧಾರಿಗಳು ನುಗ್ಗಿ ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ […]

Continue Reading

ಬೀದರ್: 3ನೇ ಮಹಡಿಯಿಂದ ತಳ್ಳಿ ಮಲ ಮಗಳನ್ನು ಕೊಲೆ ಮಾಡಿದ ಮಹಿಳೆ

ಬೀದರ್: ಆಟ ಆಡಿಸುವ ನೆಪದಲ್ಲಿ ಮಲ ಮಗಳನ್ನು ಟೆರೇಸ್ ಮೇಲೆ ಕರೆದುಕೊಂಡು ಹೋಗಿ ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. 7 ವರ್ಷದ ಸಾನ್ವಿ ಮೃತ ಬಾಲಕಿ (ಮಲಮಗಳು) ಹಾಗೂ ಆರೋಪಿಯನ್ನು ರಾಧಾ (ಮಲತಾಯಿ) ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ (ಮಲಮಗಳು) ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದುಕೊಂಡು ಹೋಗಿದ್ದಳು. ಆ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಎಲ್ಲರಿಗೂ […]

Continue Reading

ಜೇವರ್ಗಿ ಪುರಸಭೆಯಲ್ಲಿ ಗೋಲ್ಮಾಲ್: 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆ

ಕಲಬುರಗಿ: ಇತ್ತೀಚೆಗಷ್ಟೇ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಗೋಲ್ಮಾಲ್ ಪ್ರಕರಣ ವರದಿಯಾದ ಬೆನ್ನಲ್ಲೆ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಜೇವರ್ಗಿ ಪುರಸಭೆಯಲ್ಲಿ 3 ವರ್ಷದಲ್ಲಿ 188 ನಕಲಿ ಖಾತೆಗಳು ಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಜಮೀನು, ನಿವೇಶನ ಮತ್ತು ಕಮರ್ಷಿಯಲ್ ಅಂಗಡಿಗಳ ನಕಲಿ ಖಾತೆಗಳ ನೋಂದಣಿ ತಡೆಯಲು ಸರ್ಕಾರ ಹಲವು ಕಠಿಣ ನಿಯಮ ಜಾರಿಗೆ ತರುತ್ತಿದೆ. ಆದರೆ ಜೇವರ್ಗಿ ಪುರಸಭೆಯಲ್ಲಿ ಅಧಿಕಾರಿಗಳ ಲಂಚಗುಳಿತನಕ್ಕೆ ನಕಲಿ ಖಾತೆಗಳ ಪ್ರಕರಣ ಹೆಚ್ಚಾಗಿದೆ. ಜೇವರ್ಗಿ ಪಟ್ಟಣದ ಶಾಂತಿ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನೆ ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ ಅಂಗಡಿ […]

Continue Reading

ಕಲಬುರಗಿ: ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳು ದಾಳಿ

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಬಿತ್ತನೆ ಕಾರ್ಯ ಜೋರಾಗಿದೆ. ಇದನ್ನು ಬಂಡವಾಳ ಮಾಡಿಕೊಂಡು ಕಲಬುರಗಿ ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಲಾಗಿದೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿ ಗೊಬ್ಬರ […]

Continue Reading

ಅತಿವೃಷ್ಟಿಯಿಂದ ಬೆಳೆಹಾನಿಯಾದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ

ಕಲಬುರಗಿ: ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾನಿಯಾಗಿರುವ ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನ ನಾನಾ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ತಾಲೂಕಿನ ವಾಡಿ ಮತ್ತು ಹಲಕಟ್ಟಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ತೊಗರಿ, ಹೆಸರು, ಹತ್ತಿ ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಶಹಾಬಾದ ತಾಲೂಕಿನ ರಾವೂರ ಮತ್ತು ಮಾಲಗತ್ತಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ತೊಗರಿ, ಹೆಸರು, ಉದ್ದು ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಚಿತ್ತಾಪುರ ಮತ್ತು ಶಹಾಬಾದ ತಾಲೂಕಿನಲ್ಲಿ ಅತಿವೃಷ್ಟಿಯಿಂದ […]

Continue Reading

ಪ್ರಾಚಿನ ಕಾಲದ ಧಾರ್ಮಿಕ, ಆಧ್ಯಾತ್ಮಿಕ, ವಾಣಿಜ್ಯ ಕೇಂದ್ರ ಕಡಗಂಚಿ: ಮುಡುಬಿ ಗುಂಡೇರಾವ

ಕಲಬುರಗಿ: ಕುಂತಲ ನಾಡಿನ ಪ್ರಮುಖ ಧಾರ್ಮಿಕ, ಆಧ್ಯಾತ್ಮಿಕ, ವಾಣಿಜ್ಯ ಕೇಂದ್ರವಾಗಿ ಕಡಗಂಚಿ ಗ್ರಾಮವು ಇತಿಹಾಸದಲ್ಲಿ ರಾರಾಜಿಸಿದೆ. ಇಲ್ಲಿನ ಶಾಸನ-ಸ್ಮಾರಕಗಳು ನಾಡಿನ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಕಡಗಂಚಿಯ ಬಕ್ಕೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-37ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಗಂಚಿಯ ಕ್ರಿ.ಶ 1118ರ ಮತ್ತು 12ನೇ ಶತಮಾನದ ಶಾಸನಗಳ ಪ್ರಕಾರ, ಮಲ್ಲಿಕಾರ್ಜುನ ದೇವಾಲಯಕ್ಕೆ ಕಲ್ಯಾಣ […]

Continue Reading

ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿ, ನಿರಂತರ ಪ್ರಯತ್ನವಿರಲಿ

ಕಲಬುರಗಿ: ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ನಿರ್ಧರಿಸಿ, ಅದರ ಸಾಧನೆಗೆ ನಿರಂತರ ಪ್ರಯತ್ನ ಮಾಡಬೇಕು. ಸೃಜನಶೀಲತೆ, ಮಾನವೀಯತೆ, ದೇಶಭಕ್ತಿ, ಛಲಗಾರಿಕೆ, ಧನಾತ್ಮಕ ಚಿಂತನೆ ಬೆಳೆಸಿಕೊಂಡು, ಉನ್ನತವಾದ ಸಾಧನೆ ಮಾಡಬೇಕು ಎಂದು ಚಿಂತಕ ಮಹಾದೇಯ್ಯ ಕರದಳ್ಳಿ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ‘ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ’ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಪ್ರಾವೀಣ್ಯತೆ ಬೆಳೆಸಿಕೊಳ್ಳಬೇಕು. ಸ್ವ-ಅಧ್ಯಯನ ಅಗತ್ಯ. ಸಾಧಿಸುವ ಛಲಗಾರಿಕೆ ಅಗತ್ಯ. ಉದ್ದೇಶ ಸ್ಪಷ್ಟವಾಗಿರಲಿ. […]

Continue Reading

ವಿದ್ಯಾರ್ಥಿ, ಸಮಾಜಪರ ಕಾಳಜಿಯುಳ್ಳ ಶಿಕ್ಷಕರ ಸಂಖ್ಯೆ ಹೆಚ್ಚಾಗಲಿ

ಕಲಬುರಗಿ: ರಾಜಶೇಖರ ಗುಂಡದ್ ಅವರು ಎಲ್ಲಾ ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಸೇವೆ ಸಲ್ಲಿಸಿದ ಶಾಲೆಗೆ ನಿವೃತ್ತಿಯಾದ ನಂತರವು ದೇಣಿಗೆ ನೀಡಿ ಸದಾ ಅಭಿವೃದ್ಧಿ ಬಯಸುವರಾಗಿದ್ದಾರೆ. ಅವರಲ್ಲಿರುವ ವಿದ್ಯಾರ್ಥಿಗಳ ಬಗ್ಗೆಯಿದ್ದ ಕಾಳಜಿ, ಕಲಿಸುವ ಹಂಬಲ, ಕರ್ತವ್ಯಬದ್ಧತೆ, ಸೇವಾ ಮನೋಭಾವ ಶ್ಲಾಘನೀಯವಾಗಿದೆ. ಅಪರೂಪ ಹಾಗೂ ಮೇರು ವ್ಯಕ್ತಿತ್ವದ ಶಿಕ್ಷಕರ ಸಂಖ್ಯೆ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಾಗಬೇಕಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ತಾಲೂಕಿನ ಹತಗುಂದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇತ್ತೀಚಿಗೆ ವಯೋನಿವೃತ್ತಿ ಹೊಂದಿರುವ ಗುಂಡದ್ […]

Continue Reading