ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೀದರ್ ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್‌ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು ಸಮಸ್ಯೆ ಇಲ್ಲಾ ಅಂದರೆ […]

Continue Reading

JEEಯಲ್ಲಿ ಮಗ ದೇಶಕ್ಕೆ ಟಾಪರ್: 4 ಸಾವಿರ ಶಾಲಾ ಮಕ್ಕಳಿಗೆ ಸಿಹಿಯೂಟ ಹಾಕಿ ಸಂಭ್ರಮಿಸಿದ ತಾಯಿ

ಸುದ್ದಿ ಸಂಗ್ರಹ ಮೈಸೂರು‌ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಬಿ.ಆರ್ಕ್, ಬಿ ಪ್ಲಾನಿಂಗ್‌ ಫೇಸ್ 1ರಲ್ಲಿ ಮಗ ದೇಶಕ್ಕೆ ಟಾಪರ್ ಆದ ಖುಷಿಯಲ್ಲಿ ತಾಯಿ ಶಾಲಾ ಮಕ್ಕಳಿಗೆ ಊಟ ಹಾಕಿಸಿ ಸಂಭ್ರಮಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಮಲೆಯೂರು ಗ್ರಾಮದ ನಿವಾಸಿಗಳಾಗಿರುವ ಎ.ಸಿ ನೇತ್ರಾವತಿ ಮತ್ತು ಎಂ.ಡಿ ಗುರುಸ್ವಾಮಿ ದಂಪತಿಯ ಪುತ್ರ ಎಂ.ಜಿ ನಾಗದೇವ 2026ರ ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಸುತ್ತೂರು ಜೆಎಸ್ಎಸ್ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿರುವ ತಾಯಿ, ಸುತ್ತೂರಿನ ವಸತಿ ಶಾಲೆಯಲ್ಲಿ […]

Continue Reading

ರಾಷ್ಟ್ರದ ರಕ್ಷಣೆಯಲ್ಲಿ ಸಿಐಎಸ್‌ಎಫ್ ಸೇವೆ ಅನನ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿವಿಧ್ವಂಸಕ ಕೃತ್ಯ ತಡೆ, ಅಗ್ನಿಶಾಮಕ ಸೇವೆ ಮತ್ತು ವಿವಿಐಪಿ ರಕ್ಷಣೆ ನಿರ್ವಹಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಸಿಐಎಸ್‌ಎಫ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಮಹಾಗಾಂವ ಕ್ರಾಸ್ ಸಮೀಪದ ಸಂಜೀವಿನ ವೃದ್ಧಾಶ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಿಐಎಸ್‌ಎಫ್ ದಿನಾಚರಣೆ’ಯಲ್ಲಿ  ನಿವೃತ್ತ ಸಿಐಎಸ್‌ಎಫ್ ಯೋಧ ಕಾಮಣ್ಣ ಮದಗುಣಕಿ ಅವರನ್ನು ಸತ್ಕರಿಸಲಾಯಿತು, ನಂತರ ಮಾತನಾಡಿದ ಅವರು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು 1969ರಲ್ಲಿ ಸ್ಥಾಪಿತವಾದ ಪ್ರಮುಖ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಾಗಿದ್ದು, ದೇಶದ […]

Continue Reading

ಸರ್ಕಾರಕ್ಕೆ ಸೀರೆ ವಾಪಸ್ ಕೊಡುವ ಅಭಿಯಾನ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಘೋಷಣೆ

ಸುದ್ದಿ ಸಂಗ್ರಹ ಹಾವೇರಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡುವ ಬದಲಾಗಿ, ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕೇವಲ ಸೀರೆ ಕೊಟ್ಟು ಅಪಮಾನ ಮಾಡಿದೆ. ಇದನ್ನು ಖಂಡಿಸಿ ಸೀರೆ ವಾಪಸ್ ಕೊಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಪ್ರಧಾನ ಕಾರ್ಯದರ್ಶಿ ಸುನಂದಮ್ಮ ರೇವಣಕರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರಿಗೆ […]

Continue Reading

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

ಸುದ್ದಿ ಸಂಗ್ರಹ ಯಾದಗಿರಿ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿ ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೆ ಇದೀಗ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು […]

Continue Reading

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ, ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.10 ರಿಂದ ನಗರದ ಪತ್ರಿಕಾ ಭವನದಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು […]

Continue Reading

ಸತ್ತಿದ್ದ ವ್ಯಕ್ತಿ ಮತ್ತೆ ಜೀವಂತ: ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ಮಾತಾಡಿದ್ದನ್ನು ಕಂಡು ಮನೆಯವರೆ ಶಾಕ್

ಸುದ್ದಿ ಸಂಗ್ರಹ ಬಾಗಲಕೋಟೆ ಸತ್ತಿದ್ದಾನೆ ಎಂದುಕೊಂಡಿದ್ದ ವ್ಯಕ್ತಿ ಬದುಕಿ ಮತ್ತೆ ಮಾತನಾಡಿರುವ ಅಚ್ಚರಿ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಮೊಮಿನ್ ಗಲ್ಲಿಯ ನಿವಾಸಿ 65 ವರ್ಷದ ಮುಬಾರಕ್ ಅವಟಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಬಳಿಕ ಕುಟುಂಬದವರು ಅಂತಿಮ ಸಂಸ್ಕಾರಕ್ಕಾಗಿ ಊರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಲೋಕಾಪುರ ಬಳಿ ರೋಡ್ ಹಂಪ್ಸ್ ಬರುತ್ತಿದ್ದತೆ ವಾಹನ ಅಲುಗಾಡಿದೆ. ಆಗ ಮುಬಾರಕ್ ಹಠಾತ್ ಉಸಿರಾಡಲು ಆರಂಭಿಸಿ, ಕುಟುಂಬಸ್ಥರ […]

Continue Reading

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ ಕಾರ್ಡ್ ಪತ್ತೆ

ಸುದ್ದಿ ಸಂಗ್ರಹ ಮಂಗಳೂರು ಇಲ್ಲಿನ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ರಾಶಿರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಸಾವಿರಾರು ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನು ಕಂಡ ಸಾರ್ವಜನಿಕರು ಶಾಕ್ ಆಗಿದ್ದು, ತಕ್ಷಣ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸ್ಥಳೀಯರು ಎಲ್ಲಾ ಆಧಾರ್ ಕಾರ್ಡ್‌ ಸಂಗ್ರಹಿಸಿದ್ದಾರೆ. ಆಧಾರ್ ಕಾರ್ಡ್ ದುರುಪಯೋಗ ಅಥವಾ ನಿರ್ಲಕ್ಷ್ಯದ ಬಗ್ಗೆ ಸೂಕ್ತ ತನಿಖೆ ನಡೆಸಲು ಅಧಿಕಾರಿಗಳಿಗೆ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. […]

Continue Reading

ನಾನು ಗಂಡಸಾಗಿ ಹುಟ್ಟಿರುವುದೆ ತಪ್ಪಾ ? ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆಯ ಮುಖ್ಯಶಿಕ್ಷಕ

ಸುದ್ದಿ ಸಂಗ್ರಹ ಕೊಪ್ಪಳಜಿಲ್ಲೆಯ ಕುಕನೂರ ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ವೈಯಕ್ತಿಕ ಬದುಕಿನ ವಿವಾದ ಶಾಲಾ ಆವರಣದಲ್ಲಿ ಸಾರ್ವಜನಿಕ ಗಲಾಟೆಗೆ ಕಾರಣವಾಗಿದೆ. ತಮ್ಮ ಪತ್ನಿ ಪ್ರತಿದಿನ ಶಾಲೆಗೆ ಬಂದು ಕಿರಿಕ್​​ ಮಾಡುವುದು, ತಮ್ಮ ವೃತ್ತಿ ಬದುಕಿಗೆ ಮತ್ತು ಸಾರ್ವಜನಿಕ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶಿಕ್ಷಕ ಸಿದ್ದೇಶ ಶೆಟ್ಟರ್ ಆರೋಪಿಸಿದ್ದಾರೆ. ಸಿದ್ದೇಶ ಶೆಟ್ಟರ್ ಅವರ ಹೇಳಿಕೆಯ ಪ್ರಕಾರ, ತಮ್ಮ ಪತ್ನಿ ತಮ್ಮನ್ನು ಮನೆಯಲ್ಲಿ ಕೈದಿ ತರಹ ಇಟ್ಟುಕೊಂಡಿದ್ದು, ಕುಟುಂಬದ […]

Continue Reading

9 ರೂ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್‌: 10 ರೂ. ಲೋನ್ ಕಟ್ಟಿದ್ದಿವಿ, 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು

ಸುದ್ದಿ ಸಂಗ್ರಹ ಹಾಸನ9 ರೂ 34 ಪೈಸೆ ಸಾಲ ಕಟ್ಟುವಂತೆ ಕೆನರಾ ಬ್ಯಾಂಕ್‌ನಿಂದ ಕರೆ ಮಾಡಿದ ಹಿನ್ನೆಲೆಯಲ್ಲಿ 10 ರೂ ಲೋನ್ ಕಟ್ಟಿದ್ದಿವಿ 66 ಪೈಸೆ ವಾಪಸ್ ಕೊಡಿ ಎಂದು ಗ್ರಾಹಕ ಪಟ್ಟು ಹಿಡಿದ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಕಾಫಿ ಬೆಳೆಗಾರ ಚೊಕ್ಕಣ್ಣಗೌಡ ಎಂಬವರು ವರ್ಷಗಳ ಹಿಂದೆ ಕೆನರಾ ಬ್ಯಾಂಕ್‌‌ನಿಂದ 50 ಸಾವಿರ ಲೋನ್ ಪಡೆದು ಸಂಪೂರ್ಣ ಹಣ ಬಡ್ಡಿ ಸಮೇತ ಕಟ್ಟಿದ್ದರು. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ […]

Continue Reading