ಲಂಚ ಪಡೆಯುವಾಗ ದಾಳಿ: ಎಸಿಪಿ ಶರಣಬಸಪ್ಪ ಸುಬೇದಾ‌ರ್ ಸೇರಿ ಐವರು ಲೋಕಾಯುಕ್ತ ಬಲೆಗೆ

ಕಲಬುರಗಿ: ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್ ಸೇರಿ ಐವರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್, ಅವರ ರೈಟರ್ ಚಂದ್ರಕಾಂತ್, ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಸೈಟ್ ವಿವಾದವೊಂದನ್ನು ಬಗೆಹರಿಸಲು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 40 ಲಕ್ಷ ರೂ ಬೇಡಿಕೆ ಇಟ್ಟಿದ್ದರು, ಅದರಲ್ಲಿ ಮುಂಗಡವಾಗಿ 10 ಲಕ್ಷ ರೂ ಪಡೆದಿದ್ದರು. ಉಳಿದ 30 ಲಕ್ಷಕ್ಕೆ […]

Continue Reading

ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿಗೆ ಹೆರಿಗೆ: ಗಂಡು ಮಗುವಿಗೆ ಜನನ

ಶಹಾಪುರ: ನಗರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ‌ ಜನ್ಮ ನೀಡಿದ್ದಾರೆ. ವಸತಿ ಶಾಲೆಯ ಶೌಚಾಲಯದಲ್ಲಿ ಬುಧವಾರ ಮಧ್ಯಾಹ್ನ‌ 2.30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ. ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು, ಕ್ರಮಕ್ಕೆ ಮುಂದಾಗಿದ್ದೆವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು. ಪ್ರಸ್ತುತ […]

Continue Reading

ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ ಬಿಂಬಿಸುವ ದೇವಾಲಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ದೊರೆಯುವ ಬಹುತೇಕ ಶಾಸನ, ಸ್ಮಾರಕಗಳು ರಾಷ್ಟ್ರಕೂಟ, ಕಲ್ಯಾಣ ಚಾಲುಕ್ಯರ ಕಲಾ ವೈಭವ, ದಾನ, ದತ್ತಿ, ಪರೋಪಕಾರತೆ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಜಿಲ್ಲೆಯ ಹೊನಗುಂಟಿ ಗ್ರಾಮದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-36ದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಶಹಾಬಾದ ತಾಲೂಕಿನ ಭಂಕೂರ, ಮಾಲಗತ್ತಿ, ಮರತೂರ, ದೇವರ ತೆಗನೂರು, ಹೊನಗುಂಟಿ ಗ್ರಾಮಗಳಲ್ಲಿ ಐತಿಹಾಸಿಕ ಪ್ರಾಚೀನ ಕುರುಹುಗಳು, […]

Continue Reading

ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳ ಆರಂಭಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧಾರ

ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದ ಆಯ್ದ ನಗರಗಳಲ್ಲಿ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಸಿಗಲಿದೆ. ಅಕ್ಟೋಬರ್‌ ಆರಂಭದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳನ್ನು ರಸ್ತೆಗೆ ಇಳಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಪ್ರಧಾನಮಂತ್ರಿ ವಿದ್ಯುನ್ಮಾನ ಯೋಜನೆಯಡಿ (ಪಿಎಂಇ) ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ಬಸ್‌ಗಳನ್ನು ಓಡಿಸಲಾಗುತ್ತದೆ. ಸಾರಿಗೆ ನಿಗಮದ ಅನುದಾನದಲ್ಲಿ ಕೊಪ್ಪಳ, ವಿಜಯನಗರ, ಬೀದರ್‌ ಮತ್ತು ರಾಯಚೂರು ಜಿಲ್ಲೆಗಳಿಗೆ ಡೀಸೆಲ್‌ ಆಧರಿತ ನೂತನ ಸಿಟಿ ಬಸ್‌ಗಳನ್ನು ಪೂರೈಸಲಾಗುತ್ತದೆ. […]

Continue Reading

ಲಿಂಗೈಕ್ಕೆಕ್ಕೂ ಮುನ್ನ ತಮ್ಮ ಕೊನೆಯ ಆಸೆ ಈಡೇರಿಸಿಕೊಂಡ ಡಾ.ಶರಣಬಸಪ್ಪ ಅಪ್ಪ

ಕಲಬುರಗಿ: ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ಡಾ. ಶರಣಬಸಪ್ಪ ಅಪ್ಪ ಅವರು ತಮ್ಮ ಅಂತಿಮ ಇಚ್ಛೆಯಂತೆ ಶ್ರೀ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರು ಎಳೆದಿದ್ದಾರೆ. ಗೃಹ ಆರೈಕೆಗೆಂದು ಶರಣಬಸಪ್ಪ ಅಪ್ಪಾ ಅವರನ್ನು ಮಠಕ್ಕೆ ಕರೆದುಕೊಂಡು ಬರಲು ಕುಟುಂಬಸ್ಥರು ನಿರ್ಧರಿಸಿದರು. ಅದರಂತೆ, ಡಾ. ಶರಣಬಸಪ್ಪ ಅಪ್ಪಾ ಅವರನ್ನು ಮಠಕ್ಕೆ ಕರೆದುಕೊಂಡು ಬರಲಾಯಿತು. ಶರಣಬಸವೇಶ್ವರ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು ಹಾಗೂ ಆರತಿ ನಡೆಯಿತು. ನಂತರ […]

Continue Reading

ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ: ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ ?

ಹಾಸನ: ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಾರಲ್ಲಿದ್ದವರು ನನ್ನನ್ನೂ ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದರು ಎಂದು ಶಾಲಾ ವಿದ್ಯಾರ್ಥಿನಿಯೊಬ್ಬಳು ಅಳುತ್ತ ಓಡಿ ಶಾಲೆಗೆ ಬಂದ ಪ್ರಸಂಗ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಶಾಲೆಗೆ ಓಡಿ ಬಂದ ವಿದ್ಯಾರ್ಥಿನಿ, ಬಿಳಿ ಬಣ್ಣದ ಮಾರುತಿ ಓಮ್ನಿಯಲ್ಲಿ ಬಂದವರು ಅಪಹರಣಕ್ಕೆ ಯತ್ನಿಸಿದ್ದರು, ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಿಕೊಂಡಿದ್ದಾಳೆ. ಈ ವೇಳೆ ಗಾಬರಿಯಿಂದ ಬಾಲಕಿ ಬ್ಯಾಗ್‌ ಸಹ ಎಸೆದು ಬಂದಿದ್ದಾಳೆ. ಈ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ […]

Continue Reading

ಕರ್ತವ್ಯ ಲೋಪ: ಧಾರವಾಡ ಜಿ.ಪಂ ಯೋಜನಾಧಿಕಾರಿ ಅಮಾನತು

ಧಾರವಾಡ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಧಾರವಾಡ ಜಿ.‌ಪಂ ಯೋಜನಾಧಿಕಾರಿ ರೇಖಾ ಡೊಳ್ಳಿನ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ರೇಖಾ ಅವರು ಕಾನೂನು ಬಾಹಿರವಾಗಿ ಕೋಟಿ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾ ಮಟ್ಟದ ಅನುದಾನ ಪ್ರಸ್ತಾವನೆ ಸಲ್ಲಿಸುವಾಗ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಗ್ರಾಮೀಣ ಜನರಿಗೆ ಕೌಶಲ್ಯ ಕೊಡುವ ಯೋಜನೆ ಇತ್ತು. 2017-18ರಲ್ಲಿ ಈ ಯೋಜನೆಯ ಕಾರ್ಯಕ್ರಮಕ್ಕೆ ಕೈಗೊಂಡ ಅಭಿಯಾನದ […]

Continue Reading

ಕಲಬುರಗಿ: ಜಿ.ಪಂ ಸಿಇಒ ಕೈ ಸೇರಲಿದೆ ಹಾಸ್ಟೆಲ್‌ ಅವ್ಯವಸ್ಥೆ ವರದಿ

ಕಲಬುರಗಿ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಳಪೆ ಊಟ ಪೂರೈಕೆ, ಕಾಟ್, ಬೆಡ್ ಇಲ್ಲದಿರುವುದು, ಮೆನು ಪ್ರಕಾರ ಊಟ, ಉಪಾಹಾರ ನೀಡದಿರುವುದು, ಶುಚಿ ಕಿಟ್ ನೀಡದಿರುವುದು, ಶೌಚಾಲಯ ಸ್ವಚ್ಛತೆ ಕಾಯ್ದುಕೊಳ್ಳದೆ ಅಸಡ್ಡೆ ತೋರಿಸುವಂತಹ ಹಾಸ್ಟೆಲ್‌ ವಾರ್ಡನ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಈ ಸಂಬಂಧ ಹಾಸ್ಟೆಲ್ ಪರಿಸ್ಥಿತಿ ಯಥಾವತ್ ವರದಿ ನೀಡುವುದಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಭಂವರ್ ಸಿಂಗ್ ಮೀನಾ ಅವರು ಪ್ರತಿ ಹಾಸ್ಟೆಲ್‌ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ. ಯುವಕರು ವಿಶ್ವದ ಭವಿಷ್ಯ, ದೇಶದ ಪ್ರಗತಿಗೆ ಯುವಶಕ್ತಿ ಬಳಸಿಕೊಳ್ಳಬೇಕು ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯವೆಂದು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು, ಸಾಮಾಜಿಕ-ಆರ್ಥಿಕ […]

Continue Reading

ಕಲಬುರಗಿ: ಕಾರು-ಬಸ್ ಮಧ್ಯೆ ಭೀಕರ ಅಪಘಾತ, ತಂದೆ-ಮಗ ಸ್ಥಳದಲ್ಲೇ ಸಾವು

ಕಲಬುರಗಿ: ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಕೆ) ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಸೋಮಶೇಖರ್ (55), ಪ್ರಕಾಶ್ (28) ಮೃತ ದುರ್ದೈವಿಗಳಾಗಿದ್ದು, ಮೃತರು ಬಾಗಲಕೋಟೆ ಜಿಲ್ಲೆಯವರಾಗಿದ್ದು, ಕಾರಿನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದಾರೆ‌. ಕಲಬುರಗಿ ಕಡೆಯಿಂದ ಬಾಗಲಕೋಟೆಯ ಬಿಳಗಿ ಕಡೆಗೆ ಹೋಗುತ್ತಿರುವ ಸಂದರ್ಭದಲ್ಲಿ ಎದುರಿಗೆ ಬಂದ ಎನ್‌ಇಕೆಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಅವಘಡ ಸಂಭವಿಸಿದೆ. ಬಸ್ ಡಿಕ್ಕಿ […]

Continue Reading