ಜೇವರ್ಗಿ: ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ

ಕಲಬುರಗಿ: ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ ಜೇವರ್ಗಿ ಪಟ್ಟಣದಲ್ಲಿ ಜರುಗಿತು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಸರ್ಕಾರಿ ಐಟಿಐ ಕಾಲೇಜಿನ ಜೆಟಿಓ ಶಿವಶರಣಪ್ಪ ಹಳಿಮನಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆಟಿಓ ಸೈಯದ್ ಅಯಾಜ್, ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ […]

Continue Reading

ಬೆಂದವರಷ್ಟೆ ಬೇಂದ್ರೆಯಾಗಲು ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬೇಂದ್ರೆಯವರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸಿ, ಅವುಗಳನ್ನು ಸಾಹಿತ್ಯದಲ್ಲಿ ಕೃಷಿ ಮಾಡಿದ್ದರಿಂದ ಅವರ ಸಾಹಿತ್ಯವು ಹೆಚ್ಚು ನೈಜತೆ ಹಾಗೂ ಗಟ್ಟಿತನದಿಂದ ಕೂಡಿದೆ. ಅವರಂತೆ ಸಾಹಿತ್ಯ ಮೇರು ಸಾಧನೆ ಮಾಡಬೇಕಾದರೆ, ಸಾಕಷ್ಟು ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕು. ‘ಜೀವನದಲ್ಲಿ ಬೆಂದವರು ಮಾತ್ರ ಬೇಂದ್ರೆಯಾಗಲು ಸಾಧ್ಯ’ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಅಭಿಮತಪಟ್ಟರು. ತಾಲೂಕಿನ ಫರತಾಬಾದನ ಕರಿಗೋಳೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವರಕವಿ ದ.ರಾ ಬೇಂದ್ರೆಯವರ 44ನೇ ಪುಣ್ಯಸ್ಮರಣೋತ್ಸವ’ […]

Continue Reading

ಕನ್ನಡಕ್ಕೆ ಕಾರಂತರ ಕೊಡುಗೆ ಅಪಾರ: ಎಚ್.ಬಿ ಪಾಟೀಲ      

ಕಲಬುರಗಿ: ಕನ್ನಡದ “ಕಡಲತೀರದ ಭಾರ್ಗವ” ಎಂದೆ ಪ್ರಸಿದ್ಧರಾದ ಡಾ.ಕೆ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ ಮತ್ತು ವೈಜ್ಞಾನಿಕ ಬರಹಗಾರ. ಕನ್ನಡಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಶಹಾಪುರ ರಸ್ತೆಯಲ್ಲಿನ ನರೇಂದ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಕೆ.ಶಿವರಾಮ ಕಾರಂತರ 123ನೇ  ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾರಂತರು 200ಕ್ಕೂ ಹೆಚ್ಚು ಕೃತಿಗಳನ್ನು […]

Continue Reading

ಅಂಬಿಗರ ಚೌಡಯ್ಯ ಮೂರ್ತಿ ಭಗ್ನ: ಕೋಲಿ ಸಮಾಜದಿಂದ ಬೃಹತ್ ಪ್ರತಿಭಟನೆ‌

ಸುದ್ದಿ ಸಂಗ್ರಹ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ, ಕೋಲಿ ಸಮಾಜದ ಸ್ವಾಭಿಮಾನ ಕೆರಳಿಸಿದಂತಾಗಿದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ನಿಂಗಪ್ಪ ಹುಳಗೋಳಕರ ಉಗ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಮುತ್ತಗಾ ಗ್ರಾಮದ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಘಟನೆ ವಿರೋಧಿಸಿ ಕೋಲಿ ಸಮಾಜದ ವತಿಯಿಂದ ಶುಕ್ರವಾರ ಭಂಕೂರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯನವರು ಸಾಮಾಜಿಕ ಹರಿಕಾರರು, ಅವರು […]

Continue Reading

ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ: ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಪರಿಣಾಮ ತಾಲೂಕಿನಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪಾ ಪಾಳಾ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಶ್ವಾನದಳ ಅಧಿಕಾರಿಗಳು ಮತ್ತು ಗ್ರಾಮ ಲೇಖಾಧಿಕಾರಿ ರೇವಣಸಿದ್ದಪ್ಪ ಪಾಟಿಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

Continue Reading

ಭಜನೆಯಿಂದ ಸಾಮಾಜಿಕ ಸಾಮರಸ್ಯ: ತೆಂಗಳಿ ಶ್ರೀ

ಚಿತ್ತಾಪುರ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ತೆಂಗಳಿ- ಮುಂಗಲಗಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ.ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ತೆಂಗಳಿ ಗ್ರಾಮದಲ್ಲಿ ಸೀಗಿ ಹುಣ್ಣಿಮೆ ಪ್ರಯುಕ್ತ ಗ್ರಾಮದ ಅಂಬಾಭವಾನಿ ದೇವಸ್ಥಾನದಲ್ಲಿ ಅಂಡಗಿ ಮನೆತನದ ವತಿಯಿಂದ ಅಂಬಾ ಭವಾನಿಗೆ ಉಡಿ ತುಂಬುವ ಕಾರ್ಯಕ್ರಮದ 48ನೇ ವಾರ್ಷಿಕೋತ್ಸವ ಮತ್ತು ನವರಾತ್ರಿಯಲ್ಲಿ 9 ದಿನಗಳ ಪರ್ಯಂತ ಭಜನೆ ಮಾಡಿ ಧಾರ್ಮಿಕ ಸೇವೆ ಸಲ್ಲಿಸಿದ ವಿವಿಧ ಭಜನಾ ಮಂಡಳಿ ಅಧ್ಯಕ್ಷರಿಗೆ ‘ಸೇವಾಶ್ರೀ ಪ್ರಶಸ್ತಿ’ ವಿತರಿಸಿ ಮಾತನಾಡಿದ ಅವರು, […]

Continue Reading

ಪ್ರವಾಹ ಪೀಡಿತ ಹಳೆ ಹೆಬ್ಬಾಳ ಗ್ರಾಮದ ಜನರ ಸಮಸ್ಯೆ ಆಲಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಮಳೆ ಹಾಗೂ ಪ್ರವಾಹ ಪೀಡಿತ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ನಿರಂತರ ಸುರಿವ ಮಳೆಯ ಮಧ್ಯೆಯೇ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ತಾಲೂಕಿನ ಹಳೆ ಹೆಬ್ಬಾಳ ಗ್ರಾಮದಲ್ಲಿ ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. […]

Continue Reading

ಚಿತ್ತಾಪುರ: ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಚಿತ್ತಾಪುರ: ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ನಿರಂತರವಾಗಿ ಸುರಿದ ಮಳೆಗೆ ತಾಲೂಕಿನಾದ್ಯಂತ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತೆ ಸುರಿದ ಮಳೆಯಿಂದ ಬೆಳಗ್ಗೆ ಜೀವನಾವಶ್ಯಕ ಸಾಮಗ್ರಿ ಖರೀದಿಸಲು, ದೈನಂದಿನ ಜೀವನಕ್ಕೆ ತೀವ್ರ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಮಳೆಯಿಂದ ತೀವ್ರ ತೊಂದರೆ ಅನುಭವಿಸಿದರು. ಮಳೆಯಿಂದ ಹೊಲಗದ್ದೆಗಳು ನೀರುಮಯವಾಗಿವೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಮಳೆಯು ಕೂಲಿಕಾರ್ಮಿಕರಿಗೆ ಕೆಲಸವಿಲ್ಲದೆ ಮನೆಯಲ್ಲಿಯೆ ಇರುವಂತೆ ಮಾಡಿದೆ.

Continue Reading

ಮರತೂರ: ಶ್ರೀಶೈಲ ಮಹಾಸ್ವಾಮಿಗಳ ಮೌನಾನುಷ್ಠಾನ

ಸುದ್ದಿ ಸಂಗ್ರಹ ಶಹಾಬಾದ್ ತಾಲೂಕಿನ ಮರತೂರ ಗ್ರಾಮದ ವಿರಕ್ತ ಮಠದ ಪೀಠಾಧ್ಯಕ್ಷ ಶ್ರೀಶೈಲ ಮಹಾಸ್ವಾಮಿಗಳು ಲೋಕಕಲ್ಯಾಣ ಮತ್ತು ಲಿಂಗೈಕ್ಯ ಗುರುಲಿಂಗ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ ನಿಮಿತ್ಯ ಒಂದು ತಿಂಗಳ ಕಾಲ ಮೌನ ಅನುಷ್ಠಾನ ಕೈಗೊಂಡಿದ್ದಾರೆ, ಕಲಬುರಗಿಯ ಮುಕ್ತಂಪುರಿನ ಗುರುಬಸವೇಶ್ವರ ಬೃಹನ್ಮಠದ ಶಿವಾನಂದ ಮಹಾಸ್ವಾಮಿಗಳ ಪಾದಪೂಜೆ ಮಾಡುವ ಮೂಲಕ ಮೌನ ಅನುಷ್ಠಾನ ಪ್ರಾರಂಭಿಸಿದರು. ಇದೆ ಸಂದರ್ಭದಲ್ಲಿ ಶಿರೋಳಿಯ ಶಿವಬಸವ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಅ.7 ರಂದು ಮೌನ ಅನುಷ್ಠಾನ ಮಂಗಲ ಸಮಾರಂಭ ನಡೆಯಲಿದೆ, ನಾಡಿನ ಪೂಜ್ಯರು, ವಿವಿಧ ರಾಜಕೀಯ ಪಕ್ಷದ ಮುಖಂಡರು […]

Continue Reading

ಧಾರಾಕಾರ ಮಳೆಗೆ ಮನೆ ನೆಲಸಮ: ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

ಚಿತ್ತಾಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದು ಸಂಪೂರ್ಣವಾಗಿ ನೆಲಕ್ಕುರುಳಿದ ಘಟನೆ ತಾಲೂಕಿನ ಸುಗೂರ (ಎನ್) ಗ್ರಾಮದಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸೆ.22 ರಂದು ಸೋಮುವಾರ ತಡರಾತ್ರಿ ಸುರಿದ ಭಾರಿ ಮಳೆಯ ಪರಿಣಾಮ ಉಮಾದೇವಿ ಗುರಯ್ಯಾಸ್ವಾಮಿ ಮಠಪತಿ ಅವರ ಮನೆಯ ಒಂದು ಕೋಣೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ತಾಯಿ ಮತ್ತು ಇಬ್ಬರು ಮಕ್ಕಳು ಮನೆಯ ಇನ್ನೊಂದು ಕೋಣೆಯಲ್ಲಿ ಮಲಗಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸುದ್ದಿ ತಿಳಿಯುತ್ತಲೆ ಊರಿನ ಗ್ರಾಮಸ್ಥರು ಭೇಟಿ ನೀಡಿ ಧೈರ್ಯ ಹೇಳಿದರು. […]

Continue Reading