ದಂಡಗುಂಡ ಬಸವೇಶ್ವರ ರಥೋತ್ಸವ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ಸುಪ್ರಸಿದ್ದ ದಂಡಗುಂಡ ಬಸವೇಶ್ವರ ಭವ್ಯ ರಥೋತ್ಸವ ಭಕ್ತ ಸಾಗರದ ಮಧ್ಯ ವಿಜೃಂಭಣೆಯಿಂದ ಜರುಗಿತು.‌ ಬೆಳಗ್ಗೆಯಿಂದಲೆ ದೇವಸ್ಥಾನಕ್ಕೆ ಭಕ್ತರ ದಂಡೆ ಹರಿದು ಬಂದಿತು. ಸಾತನೂರ ಗ್ರಾಮದಿಂದ ಶುರುವಾದ ಭಕ್ತರ ದಾಸೋಹ ಸೇವೆ ದೇವಸ್ಥಾನದ ದಾರಿಯುದ್ದಕ್ಕೂ ನಿರಂತರವಾಗಿತ್ತು‌‌. ಹೆಗಲ ಮೇಲೆ ದವಸ ಧಾನ್ಯಗಳ ಚೀಲಗಳನ್ನು ಹೊತ್ತು ಕಾಲ್ನಡಿಗೆಯ ಮೂಲಕ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಬಾಜಾ ಭಜಂತ್ರಿ, ಡೊಳ್ಳು ಕುಣಿತ, ಪುರವಂತರ ಸೇವೆ, ಧರ್ಮದ ಧ್ವಜಗಳು, ಉಚ್ಚಾಯಿ, ಸುಮಂಗಲಿಯರಿಂದ ಆರತಿ, ಕುಂಭ, ಭಜನೆ, ಗೀಗೀ ಪದಗಳು, […]

Continue Reading

ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಸುದ್ದಿ ಸಂಗ್ರಹ ಕಾಳಗಿಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡ ನಿರ್ಮಾಣದ ಸ್ಥಳವನ್ನು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಗುರುವಾರ ಪರಿಶೀಲಿಸಿದರು. ತಾಲೂಕಿನ ಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 8 ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಟೆಂಡರ್ ಕಾರ್ಯ ಮಾಡಲಾಗಿದೆ, ಹೀಗಾಗಿ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಅವರ ನೇತೃತ್ವದಲ್ಲಿ ಮುಖ್ಯಗುರುಗಳು, ಗುತ್ತಿಗೆದಾರ ಮತ್ತು ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. […]

Continue Reading

ವಾಡಿ ಬಳಿ ಅರ್ಧರುಂಡ, ಬಲಗೈ ಇಲ್ಲದ ಯುವಕನ ಶವ ಪತ್ತೆ, ಕೊಲೆ ಶಂಕೆ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ಕುಂದನೂರು ಗ್ರಾಮದ ಸಂಗಮೇಶ್ವರ ದೇವಸ್ಥಾನ ಬಳಿ ಅರ್ಧರುಂಡ ಮತ್ತು ಒಂದು ಬಲಗೈ ಇಲ್ಲದ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಆ ಮೃತ ದೇಹವನ್ನು ನಾಯಿಗಳು ಸುತ್ತುವರಿದು ಎಳೆದಾಡುತ್ತಿದ್ದವು. ನಾಯಿಗಳ ಗುಂಪು ಕಂಡ ಜನರು ಹೋಗಿ ನೋಡಿದ್ದಾರೆ. ತಕ್ಷಣ ನಾಯಿಗಳನ್ನು ಅಲ್ಲಿಂದ ಓಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರನ್ನು ಶಹಾಬಾದ್‌ ಮೂಲದ ಮಹ್ಮದ್ ಫಯಾಜ್ (26) ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ದಿನಗಳ ಹಿಂದೆ ಶಹಾಬಾದ್‌ ಪಟ್ಟಣದ ಮನೆಯಿಂದ ನಾಪತ್ತೆಯಾಗಿದ್ದ. ಸ್ಥಳಕ್ಕೆ […]

Continue Reading

ಚಿತ್ತಾಪುರದಲ್ಲಿ ಡಿಕೆ ಶಿವಕುಮಾರ್ ಹೆಸರಿನಲ್ಲಿ ವಂಚನೆ, ಮಹಿಳೆಗೆ ಆಭರಣ ವಾಪಸ್

ಸುದ್ದಿ ಸಂಗ್ರಹ ಚಿತ್ತಾಪುರಡಿ.ಕೆ ಶಿವಕುಮಾರ್‌ ಅವರು ಆಧಾರ್ ಕಾರ್ಡ್ ಪರಿಗಣಿಸಿ ಸಾಲ ಕೊಡುತ್ತಿದ್ದಾರೆಂದು ನಂಬಿಸಿ ಮಹಿಳೆಯೊಬ್ಬರಿಂದ 10 ಗ್ರಾಂ ಬಂಗಾರದ ಆಭರಣಗಳನ್ನು ದೋಚಿದ್ದ ವಂಚಕರನ್ನು ಚಿತ್ತಾಪುರ ಪೊಲೀಸರು 8 ತಿಂಗಳ ನಂತರ ಬಂಧಿಸಿದ್ದಾರೆ. ಆರೋಪಿತರನ್ನು ಚಿತ್ತಾಪುರದ ಮಹಮ್ಮದ್ ಮದರಸಾ ಹಾಗೂ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಜನವರಿ 7 ರಂದು ಅಲ್ಲೂರ್(ಬಿ) ಗ್ರಾಮದ ಶರಣಮ್ಮ ಅವರು ಚಿತ್ತಾಪುರ ಬಸ್ ನಿಲ್ದಾಣದಲ್ಲಿ ಕೂತಿದ್ದರು. ಈ ವೇಳೆ ಮಹಿಳೆಯರಿಗೆ ಆಧಾರ್ ಕಾರ್ಡ್ ನೋಡಿ ಸಾಲ ಕೊಡುತ್ತಿದ್ದಾರೆಂದು ನಂಬಿಸಿದ್ದರು. […]

Continue Reading

ಚಿತ್ತಾಪುರ ಎಸ್‌ಐಆರ್ ಕುರಿತು ಗ್ರಾಮಸಭೆ ಇಂದಿನಿಂದ ಆಯೋಜನೆ ಮಾಡಲಾಗಿದೆ

ಸುದ್ದಿ ಸಂಗ್ರಹ ಚಿತ್ತಾಪುರಚಿತ್ತಾಪುರ, ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಚಿತ್ತಾಪುರ, ಶಹಾಬಾದ್, ಕಾಳಗಿ ತಾಲೂಕಿನ ಗ್ರಾಮಗಳ ಮತಗಟ್ಟೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಕುರಿತು ಗ್ರಾಮಸಭೆ ಆಯೋಜನೆ ಮಾಡಲಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಹೇಳಿದ್ದಾರೆ. ತಾಲೂಕು ಪಂಚಾಯಿತಿ ಅಧಿಕಾರಿ ಮೂಲಕ ಈಗಾಗಲೆ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಬೆಳಗ್ಗೆ 8.30ಕ್ಕೆ ಗ್ರಾಮಸಭೆ ಶುರುವಾಗುತ್ತದೆ. ಸಭೆಯಲ್ಲಿ ಪಿಡಿಒ, ಬಿಎಲ್ಒ, ಬಿಎಲ್ಎ, ಮೇಲ್ವಿಚಾರಕರು, ನೋಡಲ್ ಅಧಿಕಾರಿ ಉಪಸ್ಥಿತರಿರುತ್ತಾರೆ. ಪ್ರತಿ […]

Continue Reading

ಉತ್ತಮ ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ: ಸಿದ್ದಲಿಂಗ ಶ್ರೀ

ಸುದ್ದಿ ಸಂಗ್ರಹ ಶಹಾಬಾದ್ಶೈಕ್ಷಣಿಕ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಎಂದು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.  ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಹತ್ತನೇ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಕರು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು, ನಿರಂತರ ಅಧ್ಯಯನ ಶೀಲರಾಗಬೇಕು ಅಂದಾಗ ಮಾತ್ರ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯ ಎಂದರು.    ಪ್ರತಿಭಾವಂತ […]

Continue Reading

ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಿಗ್ಗಾಂವ ಮತ್ತು ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇಬ್ಬರನ್ನು ಬಂಧಿಸಿ 1,55,700 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಿಗ್ಗಾಂವ ಗ್ರಾಮದ ನಾಗರಾಜ ಸಾಬಣ್ಣ ಭಜಂತ್ರಿ (19) ಮತ್ತು ಅಭಿಷೇಕ ಅಮೃತ ಮಡಿವಾಳ (19) ಬಂಧಿತ ಆರೋಪಿಗಳು. ಬಂಧಿತರಿಂದ 10 ಸಾವಿರ ರೂ ಮೌಲ್ಯದ 3 ಮೊಬೈಲ್, 35 ಸಾವಿರ ರೂ. ಮೌಲ್ಯದ 6 ಗ್ರಾಂ. ಬಂಗಾರದ ಸರ, […]

Continue Reading

ದಂಡೋತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಿಜೆಪಿ ತಂಡ ಭೇಟಿ, ಮಾಹಿತಿ ಸಂಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜು.9ರಂದು ರಾತ್ರಿ ಊಟ ಮಾಡಿದ 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ತಂಡ ಬುಧವಾರ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ ನೇತೃತ್ವದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಬಿ.ಜಿ ಪಾಟೀಲ, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ, ಬಾಬುರಾವ ಚವ್ಹಾಣ ಅವರನ್ನೊಳಗೊಂಡ ತಂಡವು ವಸತಿ ಶಾಲೆಯ ವಿದ್ಯಾರ್ಥಿಗಳು, ಪಾಲಕರು […]

Continue Reading

ಜಾಗತಿಕ ತಾಪಮಾನ ತಡೆಗೆ ಮರ ಗಿಡ ಬೆಳೆಸಿ: ಶೈಲೇಂದ್ರ ಕಾವಡಿ

ಸುದ್ದಿ ಸಂಗ್ರಹ ಕಲಬುರಗಿ ಜಾಗತಿಕ ತಾಪಮಾನ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದರಿಂದ ತಾಪಮಾನ ನಿಯಂತ್ರಿಸಬಹುದು ಎಂದು ಬೀದರ ಪರಿಸರವಾನಿ ಅಧ್ಯಕ್ಷ, ಖ್ಯಾತ ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ತಾಲೂಕಿನ ಅವರಾದ್ (ಬಿ) ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪರಿಸರ ಸಂರಕ್ಷಣೆ ಜನ ಜಾಗೃತಿ ಮತ್ತು ವನಮೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ, ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, […]

Continue Reading

ಮಂಗಲಗಿ ಗ್ರಾಮದಲ್ಲಿ ಬಸವೇಶ್ವರರ ಅಶ್ವಾರೂಢ ಮೂರ್ತಿ ಅನಾವರಣ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಮಂಗಲಗಿ ಗ್ರಾಮದಲ್ಲಿ ಮಂಗಳವಾರ ಬಸವ ಅಭಿಮಾನಿಗಳ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಮಾಜಿ ಸಂಸದ ಡಾ.ಉಮೇಶ ಜಾಧವ ಮಾತನಾಡಿ, 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ಅಸ್ತಿತ್ವಕ್ಕೆ ತರುವ ಮೂಲಕ ಜಗತ್ತಿಗೆ ಮೊಟ್ಟಮೊದಲ ಸಂಸತ್ತು, ಪ್ರಜಾಪ್ರಭುತ್ವ ಪರಿಚಯಿಸಿದವರೇ ಬಸವಣ್ಣನವರು. ಅವರ ಸಮಾನತೆಯ ಸಂಸ್ಕೃತಿ ಮಂಗಲಗಿ ಗ್ರಾಮದಲ್ಲಿ ಮೇಳೈಸಿದೆ ಎಂದರು. ಬಸವಕಲ್ಯಾಣ ಅನುಭವ ಮಂಟಪದ ಅಭಿವೃದ್ಧಿಗೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ 500 ಕೋಟಿ ರೂ […]

Continue Reading