ದಂಡೋತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಿಜೆಪಿ ತಂಡ ಭೇಟಿ, ಮಾಹಿತಿ ಸಂಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜು.9ರಂದು ರಾತ್ರಿ ಊಟ ಮಾಡಿದ 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ತಂಡ ಬುಧವಾರ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ ನೇತೃತ್ವದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಬಿ.ಜಿ ಪಾಟೀಲ, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ, ಬಾಬುರಾವ ಚವ್ಹಾಣ ಅವರನ್ನೊಳಗೊಂಡ ತಂಡವು ವಸತಿ ಶಾಲೆಯ ವಿದ್ಯಾರ್ಥಿಗಳು, ಪಾಲಕರು […]

Continue Reading

ಜಾಗತಿಕ ತಾಪಮಾನ ತಡೆಗೆ ಮರ ಗಿಡ ಬೆಳೆಸಿ: ಶೈಲೇಂದ್ರ ಕಾವಡಿ

ಸುದ್ದಿ ಸಂಗ್ರಹ ಕಲಬುರಗಿ ಜಾಗತಿಕ ತಾಪಮಾನ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದರಿಂದ ತಾಪಮಾನ ನಿಯಂತ್ರಿಸಬಹುದು ಎಂದು ಬೀದರ ಪರಿಸರವಾನಿ ಅಧ್ಯಕ್ಷ, ಖ್ಯಾತ ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ತಾಲೂಕಿನ ಅವರಾದ್ (ಬಿ) ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪರಿಸರ ಸಂರಕ್ಷಣೆ ಜನ ಜಾಗೃತಿ ಮತ್ತು ವನಮೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ, ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, […]

Continue Reading

ಮಂಗಲಗಿ ಗ್ರಾಮದಲ್ಲಿ ಬಸವೇಶ್ವರರ ಅಶ್ವಾರೂಢ ಮೂರ್ತಿ ಅನಾವರಣ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಮಂಗಲಗಿ ಗ್ರಾಮದಲ್ಲಿ ಮಂಗಳವಾರ ಬಸವ ಅಭಿಮಾನಿಗಳ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಮಾಜಿ ಸಂಸದ ಡಾ.ಉಮೇಶ ಜಾಧವ ಮಾತನಾಡಿ, 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ಅಸ್ತಿತ್ವಕ್ಕೆ ತರುವ ಮೂಲಕ ಜಗತ್ತಿಗೆ ಮೊಟ್ಟಮೊದಲ ಸಂಸತ್ತು, ಪ್ರಜಾಪ್ರಭುತ್ವ ಪರಿಚಯಿಸಿದವರೇ ಬಸವಣ್ಣನವರು. ಅವರ ಸಮಾನತೆಯ ಸಂಸ್ಕೃತಿ ಮಂಗಲಗಿ ಗ್ರಾಮದಲ್ಲಿ ಮೇಳೈಸಿದೆ ಎಂದರು. ಬಸವಕಲ್ಯಾಣ ಅನುಭವ ಮಂಟಪದ ಅಭಿವೃದ್ಧಿಗೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ 500 ಕೋಟಿ ರೂ […]

Continue Reading

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾದಕ ವ್ಯಸನದಿಂದ ದೂರವಿರಿ: ಪಿಎಸ್ಐ ರೇಣುಕಾ ಉಡಗಿ‌

ಸುದ್ದಿ ಸಂಗ್ರಹ ಶಹಾಬಾದ್ ದೇಶದ ನಿಜವಾದ ಸಂಪತ್ತೆಂದರೆ ಅದು ಮಾನವ ಸಂಪತ್ತು, ಎಲ್ಲಾ ಸಂಪನ್ಮೂಲಗಳು ಇದ್ದೂ ಉತ್ತಮ ಆರೋಗ್ಯಯುತ ಮಾನವ ಸಂಪನ್ಮೂಲ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾದಕ ವ್ಯಸನದಿಂದ ದೂರವಿರಿ ಎಂದು ವಾಡಿ ಕ್ರೈಂ ಪಿಎಸ್ಐ ರೇಣುಕಾ ಉಡಗಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ’ದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಓದುವಂತಹ ವಯಸ್ಸಿನಲ್ಲಿ ಚಟಗಳಿಗೆ ದಾಸರಾಗಿ ಅಮೂಲ್ಯವಾದ ಬದುಕನ್ನು […]

Continue Reading

ಶಹಾಬಾದ್: ಭಂಕೂರಲ್ಲಿ ಅದ್ದೂರಿ ಕಾರಹುಣ್ಣಿಮೆ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಭಂಕೂರ ಗ್ರಾಮದ ಐತಿಹಾಸಿಕ ಕಾರಹುಣ್ಣಿಮೆ ಸೋಮವಾರ ಅದ್ದೂರಿಯಾಗಿ ನೆರವೇರಿತು. ರವಿವಾರದಿಂದಲೆ ಹಬ್ಬದ ಸಿದ್ಧತೆಗಳು ಶುರುವಾಗಿದ್ದು, ಗ್ರಾಮದ ಕೆರೆಯಮ್ಮ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತ ಬಂಡಿ ಗಂಗಸ್ಥಳಕ್ಕೆ ಹೋಗಿತ್ತು. ದೇವಿಯ ಮೂರ್ತಿಯನ್ನು ಹೊತ್ತ ಬಂಡಿ ಹೂಡಲು ರೈತರು ತಮ್ಮ ಎತ್ತುಗಳನ್ನು ಅಲ್ಲಲ್ಲಿ ನಿಲ್ಲಿಸಿಕೊಂಡು ನಿಂತಿರುತ್ತಾರೆ. ಗಾಡಿ ಹೋಗುತ್ತಿದ್ದಂತೆಯೇ ಒಂದು ಜೊತೆ ಎತ್ತುಗಳನ್ನು ನೊಗದಿಂದ ಬಿಚ್ಚಿ ಮತ್ತೊಂದು ಜೊತೆ ಎತ್ತುಗಳನ್ನು ಕಟ್ಟಿದರು. ನಂತರ ಹಣಮಂತ ದೇವರ ಗುಡಿ, ಅಂಕಲಮ್ಮಾ ಗುಡಿಗೆ ಮೂರ್ತಿಯನ್ನು ಕೊಂಡೊಯ್ಯಲಾಯಿತು. ಅಲ್ಲಿ ಭಕ್ತರು […]

Continue Reading

ಕಲಬುರಗಿ: ಸಂಗೋಳಗಿ ಸರ್ಕಾರಿ ಶಾಲೆಯ ಚಾವಣಿಯ ಪದರ ಕುಸಿತ

ಸುದ್ದಿ ಸಂಗ್ರಹ ಆಳಂದತಾಲೂಕಿನ ಸಂಗೋಳಗಿ (ಸಿ) ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದ ಚಾವಣಿಯ ಪದರ ಶನಿವಾರ ಕುಸಿದು ಬಿದ್ದಿದೆ. ಸದ್ಯ ಶಾಲಾ ತರಗತಿಗಳು ಹೊಸ ಕಟ್ಟಡದಲ್ಲಿ ನಡೆಯುತ್ತಿರುವುದರಿಂದ ಯಾವುದೆ ದುರ್ಘಟನೆ ಸಂಭವಿಸಿಲ್ಲ. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರುವ ಈ ಸರ್ಕಾರಿ ಶಾಲೆಯ ಹಳೆಯ ಕಟ್ಟಡದಲ್ಲಿ ಮೂರು ಕೋಣೆಗಳು ಇದ್ದವು. ಅಂದಾಜು 40 ವರ್ಷದ ಹಿಂದೆ ನಿರ್ಮಿಸಲಾದ ಕಟ್ಟಡವು ಈಗ ಬಳಕೆಯಲ್ಲಿಲ್ಲ. ಆದರೆ ಹೊಸ ಶಾಲೆಯ ಮುಂಭಾಗದಲ್ಲಿನ ಕಟ್ಟಡದಲ್ಲಿ ಮಕ್ಕಳು ಆಟೋಟದಲ್ಲಿ ನಿರತರಾಗಿರುತ್ತಾರೆ. 204 […]

Continue Reading

ಕಲಬುರಗಿಯಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್ ಜೇವರ್ಗಿ ಬಳಿ ಪಲ್ಟಿ

ಸುದ್ದಿ ಸಂಗ್ರಹ ಜೇವರ್ಗಿ ತಾಲೂಕಿನ ಕೆಲ್ಲೂರ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕೆಕೆಆರ್‌ಟಿಸಿ ಬಸ್ ಮಂಗಳವಾರ ಸಂಜೆ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಸಿಂಧನೂರಿನ ಶಿವಲಿಂಗಮ್ಮ ಸಿದ್ದಣ್ಣ, ಪದ್ಮ ಸತ್ಯನಾರಾಯಣ, ಶ್ರಾವ್ಯ ರಾಘವೇಂದ್ರ, ಭಾಗ್ಯಲಕ್ಷ್ಮಿ, ಮೀನಾಕ್ಷಿ, ಸಮರ್ಥ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಈ ಬಸ್ ಕಲಬುರಗಿ ನಗರದಿಂದ ಧರ್ಮಸ್ಥಳಕ್ಕೆ ಮಂಗಳವಾರ ಮಧ್ಯಾಹ್ನ ಹೊರಟಿತ್ತು. ತಾಲೂಕಿನ ಕೆಲ್ಲೂರ ಗ್ರಾಮದ ಬಳಿ ಚಾಲಕ ನೀರು ಕುಡಿಯುತ್ತಾ ಬಸ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು […]

Continue Reading

ರಸಗೊಬ್ಬರಕ್ಕಾಗಿ ರೈತರು ಆತಂಕ ಪಡಬೇಡಿ: ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದ್ದಾರೆ. ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಂಗಾರು ಬಿತ್ತನೆಗೆ ರೈತರು ತರಾತುರಿ ಮಾಡಬಾರದು. ಮುಂಗಾರು ಮಳೆಗಾಲ ಶುರುವಾಗಲು ಇನ್ನೂ ಒಂದು ವಾರ […]

Continue Reading

ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಚಾಂದಪಾಶಾ ಮೋಮೀನ್ ಮನವಿ‌

ಸುದ್ದಿ ಸಂಗ್ರಹ ಚಿಂಚೊಳಿವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಾಂದಪಾಶಾ ಮೋಮೀನ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅತ್ಯಂತ ಪ್ರಭಾವಿ ನಾಯಕರಾಗಿರುವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉನ್ನತ ಜವಾಬ್ದಾರಿ ನೀಡುವುದು ಪಕ್ಷದ ಹಿತದೃಷ್ಟಿಯಿಂದ   ಸಮಯೋಚಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ […]

Continue Reading

ಕರದಾಳ: ಸಿಡಿಲ ಹೊಡೆತಕ್ಕೆ ಸುಟ್ಟು ಹೋದ ಕಣಕಿ ಬಣಮಿ

ಸುದ್ದಿ ಸಂಗ್ರಹ ಚಿತ್ತಾಪುರ ಮೇ.27ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಗುಡುಗು ಸಹಿತ ಭಾರಿ ಗಾಳಿ- ಮಳೆಯ ಅಬ್ಬರದ ನಡುವೆ ಕಣಕಿ ಬಣಮಿಗೆ ಸಿಡಿಲು ಬಡಿದು, ಕಣಕಿ ಬಣಮಿ ಸಂಪುರ್ಣವಾಗಿ ಹೊತ್ತಿ ಉರಿದ ಘಟನೆ ಕರದಾಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕರದಾಳ ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಎಂಬವರ ಜಮೀನಿನಲ್ಲಿ ಶೇಖರಿಸಿದ್ದ ಕಣಕಿ ಬಣಮಿಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಮಳೆಯ ನಡುವೆಯೂ ಕಣಕಿ ಬಣಮಿ ಬೆಂಕಿಗಾಹುತಿಯಾಗಿದ್ದು, ಗಾಳಿಯ ರಭಸಕ್ಕೆ ಕಣಕಿ ಬಣಮಿಯಿಂದ ಹಾರುತ್ತಿರುವ ಬೆಂಕಿಯ […]

Continue Reading