ಕಲಬುರಗಿಯಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್ ಜೇವರ್ಗಿ ಬಳಿ ಪಲ್ಟಿ

ಸುದ್ದಿ ಸಂಗ್ರಹ ಜೇವರ್ಗಿ ತಾಲೂಕಿನ ಕೆಲ್ಲೂರ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕೆಕೆಆರ್‌ಟಿಸಿ ಬಸ್ ಮಂಗಳವಾರ ಸಂಜೆ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಸಿಂಧನೂರಿನ ಶಿವಲಿಂಗಮ್ಮ ಸಿದ್ದಣ್ಣ, ಪದ್ಮ ಸತ್ಯನಾರಾಯಣ, ಶ್ರಾವ್ಯ ರಾಘವೇಂದ್ರ, ಭಾಗ್ಯಲಕ್ಷ್ಮಿ, ಮೀನಾಕ್ಷಿ, ಸಮರ್ಥ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಈ ಬಸ್ ಕಲಬುರಗಿ ನಗರದಿಂದ ಧರ್ಮಸ್ಥಳಕ್ಕೆ ಮಂಗಳವಾರ ಮಧ್ಯಾಹ್ನ ಹೊರಟಿತ್ತು. ತಾಲೂಕಿನ ಕೆಲ್ಲೂರ ಗ್ರಾಮದ ಬಳಿ ಚಾಲಕ ನೀರು ಕುಡಿಯುತ್ತಾ ಬಸ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು […]

Continue Reading

ರಸಗೊಬ್ಬರಕ್ಕಾಗಿ ರೈತರು ಆತಂಕ ಪಡಬೇಡಿ: ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದ್ದಾರೆ. ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಂಗಾರು ಬಿತ್ತನೆಗೆ ರೈತರು ತರಾತುರಿ ಮಾಡಬಾರದು. ಮುಂಗಾರು ಮಳೆಗಾಲ ಶುರುವಾಗಲು ಇನ್ನೂ ಒಂದು ವಾರ […]

Continue Reading

ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಚಾಂದಪಾಶಾ ಮೋಮೀನ್ ಮನವಿ‌

ಸುದ್ದಿ ಸಂಗ್ರಹ ಚಿಂಚೊಳಿವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಾಂದಪಾಶಾ ಮೋಮೀನ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅತ್ಯಂತ ಪ್ರಭಾವಿ ನಾಯಕರಾಗಿರುವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉನ್ನತ ಜವಾಬ್ದಾರಿ ನೀಡುವುದು ಪಕ್ಷದ ಹಿತದೃಷ್ಟಿಯಿಂದ   ಸಮಯೋಚಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ […]

Continue Reading

ಕರದಾಳ: ಸಿಡಿಲ ಹೊಡೆತಕ್ಕೆ ಸುಟ್ಟು ಹೋದ ಕಣಕಿ ಬಣಮಿ

ಸುದ್ದಿ ಸಂಗ್ರಹ ಚಿತ್ತಾಪುರ ಮೇ.27ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಗುಡುಗು ಸಹಿತ ಭಾರಿ ಗಾಳಿ- ಮಳೆಯ ಅಬ್ಬರದ ನಡುವೆ ಕಣಕಿ ಬಣಮಿಗೆ ಸಿಡಿಲು ಬಡಿದು, ಕಣಕಿ ಬಣಮಿ ಸಂಪುರ್ಣವಾಗಿ ಹೊತ್ತಿ ಉರಿದ ಘಟನೆ ಕರದಾಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕರದಾಳ ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಎಂಬವರ ಜಮೀನಿನಲ್ಲಿ ಶೇಖರಿಸಿದ್ದ ಕಣಕಿ ಬಣಮಿಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಮಳೆಯ ನಡುವೆಯೂ ಕಣಕಿ ಬಣಮಿ ಬೆಂಕಿಗಾಹುತಿಯಾಗಿದ್ದು, ಗಾಳಿಯ ರಭಸಕ್ಕೆ ಕಣಕಿ ಬಣಮಿಯಿಂದ ಹಾರುತ್ತಿರುವ ಬೆಂಕಿಯ […]

Continue Reading

ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಧರಣಿ ಕುಳಿತ ಗ್ರಾಮಸ್ಥರು

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ತೊನಸನಳ್ಳಿ(ಎಸ್) ಗ್ರಾಮಕ್ಕೆ ಹೋಗುವ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಬೆಳಗ್ಗೆಯಿಂದ ರಸ್ತೆಯ ಮಧ್ಯೆ ಟೆಂಟ್‌ ಹಾಕಿಕೊಂಡು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಶಹಾಬಾದ್‌ನಿಂದ ಜೇವರ್ಗಿಗೆ ಹೋಗುವ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ದಿನನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ನಿರ್ಲಕ್ಷಿಸಿದ್ದಾರೆ. ರಸ್ತೆ ನಿರ್ಮಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳೇ ನೇರ ಹೊಣೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆಯಿಂದ […]

Continue Reading

ಟ್ಯಾಂಕರ್– ಕ್ರೂಸರ್ ಡಿಕ್ಕಿ, ಐವರು ಸ್ಥಳದಲ್ಲೇ ಸಾವು

ಸುದ್ದಿ ಸಂಗ್ರಹ ಚಿತ್ತಾಪುರಟ್ಯಾಂಕರ್- ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಭೀಕರ‌ ಅಪಘಾತದಲ್ಲಿ ಐವರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ತಾಲೂಕಿನ ಲಾಡ್ಲಾಪುರ- ಹಲಕರ್ಟಿ ಮಧ್ಯೆ ಶನಿವಾರ ಬೆಳಗಿನ ಜಾವ ಈ‌ ಅಪಘಾತ ಸಂಭವಿದೆ. ವಾಡಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-150ರ ಮೇಲೆ ಈ‌ ಅಪಘಾತ ಜರುಗಿದ್ದು ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ಮತ್ತು ವಾಡಿಯಿಂದ ಯಾದಗಿರಿಗೆ ತೆರಳುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಂಗಳಗಿ ಗ್ರಾಮದ ಐದು ಜನ ಮೃತಪಟ್ಟಿದ್ದು ಎಲ್ಲರೂ ಪರಸ್ಪರ ಸಂಬಂಧಿಕರಾಗಿದ್ದಾರೆ. […]

Continue Reading

ಕಲಬುರಗಿಯ ನೂತನ ಮೃಗಾಲಯ ಲೋಕಾರ್ಪಣೆ: ಬನ್ನೇರುಘಟ್ಟದಿಂದ ಬಂದ ಸಿಂಹಗಳೆ ಆಕರ್ಷಣೆ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಮಾಡಬೂಳ ಗ್ರಾಮದ ವ್ಯಾಪ್ತಿಯಲ್ಲಿ ಅಂದಾಜಯ 35 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಲಬುರಗಿ ‌ಮೃಗಾಲಯವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ಕಲಬುರಗಿ ನಗರದಲ್ಲಿ 1988ರಲ್ಲಿ ಸ್ಥಾಪಿಸಿದ್ದ‌ ಕಿರು ಮೃಗಾಲಯವನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸೆಕ್ಷನ್ 38(1) ಅಡಿಯಲ್ಲಿ ಮೃಗಾಲಯ ಸ್ಥಾಪನೆಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ರಾಜ್ಯ ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಅನುಮತಿಯೊಂದಿಗೆ ದೊಡ್ಡ ‌ಪ್ರಮಾಣದಲ್ಲಿ ಉನ್ನತೀಕರಿಸಿ ಮತ್ತು ವಿಸ್ತರಿಸಲಾಗಿದೆ. ಹೊಸ ಮೃಗಾಲಯದಲ್ಲಿ […]

Continue Reading

ಸೇಡಂ: ಸಿಡಿಲಿಗೆ ಮತ್ತೊಬ್ಬ ವ್ಯಕ್ತಿ, ಎತ್ತು ಬಲಿ

ಸುದ್ದಿ ಸಂಗ್ರಹ ಸೇಡಂತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸುರಿದ ಗುಡುಗು, ಸಿಡಿಲು ಮಿಶ್ರಿತ ಮಳೆಗೆ ಮತ್ತೊಬ್ಬ ವ್ಯಕ್ತಿ ಮತ್ತು ಒಂದು ಎತ್ತು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಜಾಕನಪಲ್ಲಿ ಗ್ರಾಮದ ಆಶಪ್ಪ ಕಂಪಿನ್‌ (60) ಮೃತರು. ಅವರು ಹೊಲದಲ್ಲಿನ ಕಸ-ಕಟ್ಟಿಗೆ ಸುಡಲು ಹೋಗಿದ್ದರು. ಆ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಅಲ್ಲದೆ ಗ್ರಾಮದ ದೂರದಲ್ಲಿರುವ ದೊಡ್ಡಿಯಲ್ಲಿ ಕಟ್ಟಿದ ಎತ್ತೊಂದು ಸಿಡಿಲು ಬಡಿದು ಮೃತಪಟ್ಟಿದೆ. ಚಂದ್ರಪ್ಪ ಪುಲಮೋ‌ ಅವರಿಗೆ ಸೇರಿದ ಎತ್ತು ಇದಾಗಿದೆ. ಜಾಕನಪಲ್ಲಿ ಗ್ರಾಮಕ್ಕೆ […]

Continue Reading

ಮುಗಳನಾಗಾವಿ: ಪುಣ್ಯ ಸ್ಮರಣೋತ್ಸವ, ಮಹಾರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಮುಗಳನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದಲ್ಲಿ ಮೇ 2ರಂದು ಶ್ರೀ ಗುರು ನಿಜಲಿಂಗೈಕ್ಯ ಸಿದ್ಧಲಿಂಗ ಶಿವಯೋಗಿಗಳ 77ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಮಠದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು. ಜಾತ್ರೆ ನಿಮಿತ್ತ ಬೆಳಗ್ಗೆ ಸಿದ್ಧಲಿಂಗ ಶಿವಯೋಗಿಗಳ ವಿಶೇಷ ಪೂಜೆ, ನಿತ್ಯ ಅಲಂಕಾರ ಪೂಜೆ ಜರುಗಲಿದೆ. ಸಂಜೆ ಗುರು ಸಿದ್ಧಲಿಂಗ ಶಿವಯೋಗಿಗಳ ಮಹಾಪುರಾಣ, ಸಂಗೀತ ಕಾರ್ಯಕ್ರಮ ನಿತ್ಯ ರಾತ್ರಿ 8ರಿಂದ 10ಗಂಟೆಯವರೆಗೆ ನಡೆಯುತ್ತಿದೆ. ಮೇ.1ರಂದು ಬೆಳಗ್ಗೆ ಪೂಜ್ಯ ಮರುಳಸಿದ್ದ […]

Continue Reading

ಸಾಧನೆಗೆ ಪ್ರೋತ್ಸಾಹಿಸುವುದು ಅಗತ್ಯ: ಕೋಳ್ಕೂರ

ಸುದ್ದಿ ಸಂಗ್ರಹ ಕಲಬುರಗಿಯಾವುದೆ ಕ್ಷೇತ್ರದಲ್ಲಿ ಸಾಧನೆ ಮಾಡಲಿ, ಅವರಿಗೆ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ. ಇದರಿಂದ ಸಾಧನೆಗೆ ಮತ್ತಷ್ಟು ಸ್ಪೂರ್ತಿ ನೀಡಿದಂತಾಗುತ್ತದೆ ಎಂದು ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳ್ಕೂರ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜರುಗಿದ ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮಬಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಎಲ್ಲಾ ಮೂಲಭೂತ […]

Continue Reading