ಕಲಬುರಗಿಯಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್ ಜೇವರ್ಗಿ ಬಳಿ ಪಲ್ಟಿ
ಸುದ್ದಿ ಸಂಗ್ರಹ ಜೇವರ್ಗಿ ತಾಲೂಕಿನ ಕೆಲ್ಲೂರ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಕೆಕೆಆರ್ಟಿಸಿ ಬಸ್ ಮಂಗಳವಾರ ಸಂಜೆ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಸಿಂಧನೂರಿನ ಶಿವಲಿಂಗಮ್ಮ ಸಿದ್ದಣ್ಣ, ಪದ್ಮ ಸತ್ಯನಾರಾಯಣ, ಶ್ರಾವ್ಯ ರಾಘವೇಂದ್ರ, ಭಾಗ್ಯಲಕ್ಷ್ಮಿ, ಮೀನಾಕ್ಷಿ, ಸಮರ್ಥ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಸ್ ಕಲಬುರಗಿ ನಗರದಿಂದ ಧರ್ಮಸ್ಥಳಕ್ಕೆ ಮಂಗಳವಾರ ಮಧ್ಯಾಹ್ನ ಹೊರಟಿತ್ತು. ತಾಲೂಕಿನ ಕೆಲ್ಲೂರ ಗ್ರಾಮದ ಬಳಿ ಚಾಲಕ ನೀರು ಕುಡಿಯುತ್ತಾ ಬಸ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು […]
Continue Reading