ನೇತಾಜಿ ಯುವ ಪೀಳಿಗೆಗೆ ಸ್ಪೂರ್ತಿ 

ಸುದ್ದಿ ಸಂಗ್ರಹ ಶಹಾಬಾದ ದುಶ್ಚಟಗಳಿಗೆ ದಾಸರಾಗಿ, ಪ್ರೀತಿ-ಪ್ರೇಮ ಎಂಬ ಜಾಲಕ್ಕೆ ಸಿಲುಕಿ, ಹತಾಶರಾಗಿ ಆತ್ಮಹತ್ಯೆಯ ಮೊರೆ ಹೋಗುತ್ತಿರುವ ಇಂದಿನ ಯುವ ಪೀಳಿಗೆಯ ಮುಂದಿನ ಭವಿಷ್ಯ ನೋಡಿದರೆ ಆತಂಕವುಂಟು ಮಾಡುತ್ತಿದೆ ಎಂದು ಧಾರವಾಡದ ಜನಜಾಗೃತಿ ವೇದಿಕೆಯ ಸಲಹೆಗಾರ ರಾಮಾಂಜಿನಪ್ಪ ಆಲ್ದಳ್ಳಿ ಹೇಳಿದರು. ನಗರದ ಸಿದ್ದರಾಮೇಶ್ವರ ಶಾಲಾ ಮೈದಾನದಲ್ಲಿ ಎಐಡಿಎಸ್ಓ ಎಐಡಿವೈಓ ಹಾಗೂ ಎಐಎಂಎಸ್ಎಸ್ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮದಿನದ ಅಂಗವಾಗಿ ನಡೆದ 12ನೇ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ […]

Continue Reading

ಜೇವರ್ಗಿ: ಜ.12 ರಂದು ಸರ್ಕಾರಿ ಪಿಯು ಕಾಲೇಜಿನ ವಾರ್ಷಿಕೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೀಜಿನ 67ನೇ ವಾರ್ಷಿಕೋತ್ಸವ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ದಿ.12 ರಂದು ಬುಧವಾರ ಬೆ.10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಉಪನ್ಯಾಸಕ, ಸಾಂಸ್ಕೃತಿಕ ಕಾರ್ಯದರ್ಶಿ ಹಾಗೂ ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ ಪಾಟೀಲ ಹೇಳಿದ್ದಾರೆ. ಗುವಿವಿ ಸಿಂಡಿಕೇಟ್ ಸದಸ್ಯ, ಹಿರಿಯ ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಎಸ್.ಪಿ.ಸುಳ್ಳದ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಕ್ಷಕ ಹಾಗೂ ಚಿಂತಕ ಸಂತೋಷ ಹೂಗಾರ ವಾರ್ಷಿಕೋತ್ಸವ ಭಾಷಣ ಮಾಡಲಿದ್ದಾರೆ. ಸಿಬಿಸಿ […]

Continue Reading

ಶಹಾಬಾದ: ಫೆ.10 ರಿಂದ ಸಾಂಸ್ಕೃತಿಕ ಜನೋತ್ಸವ

ಸುದ್ದಿ ಸಂಗ್ರಹ ಶಹಾಬಾದ ಪ್ರಜಾತಂತ್ರದ ಬಗ್ಗೆ ನೇತಾಜಿ ಸುಭಾಶ್ಚಂದ್ರ ಭೋಸ್ ಕನಸು ಕಂಡಿದ್ದರು, ಭಾರತದಲ್ಲಿ ಪರ್ಯಾಯ ವ್ಯವಸ್ಥೆ ಬರಬೇಕಾಗಿದೆ, ಅಂತಹ ವ್ಯವಸ್ಥೆ ಜಾರಿಗೆ ಬರುವ ಉದ್ದೇಶದಿಂದ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನೇತಾಜಿ ಅವರ 128ನೇ ಜಯಂತೋತ್ಸವ ನಿಮಿತ್ಯ ಫೆ.10,11 ರಂದು 12ನೇ ಸಾಂಸ್ಕೃತಿಕ ಜನೋತ್ಸವ ಆಯೋಜಿಸಲಾಗಿದೆ ಎಂದು ಎಐಡಿಎಸ್‌ಒ, ಎಐಸಿವೈಒ, ಎಐಎಮ್‌ಎಸ್‌ಎಸ್ ಪರವಾಗಿ ಜಗನ್ನಾಥ ಎಸ್.ಎಚ್. ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯಗೊಂಡು 75 ವರ್ಷವಾದರು ನೇತಾಜಿ […]

Continue Reading

ನಾಡಿನ ಶೈಕ್ಷಣಿಕ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅನನ್ಯ: ಡಾ.ಮೋಹನ್ ಆಳ್ವಾ

ಚಿತ್ತಾಪುರ: ಕನ್ನಡ ನಾಡಿನಾದ್ಯಂತ ಸರಕಾರಕ್ಕಿಂತ ಮೊದಲು ಮಠ ಮಾನ್ಯಗಳು ಉಚಿತವಾಗಿ ಅನ್ನ, ಅಕ್ಷರ, ಆಶ್ರಯ ನೀಡುತ್ತಾ ಬಂದಿದ್ದು ಜನರಲ್ಲಿ ಅಕ್ಷರ ಸಂಸ್ಕೃತಿ ಬಿತ್ತುವಲ್ಲಿ ಮಠಗಳ ಪಾತ್ರ ಅನನ್ಯ ಎಂದು ಮೂಡಬಿದಿರೆಯ ಆಳ್ವಾಸ್ ಸಂಸ್ಥೆಯ ಸಂಸ್ಥಾಪಕ, ನಾಡೋಜ ಡಾ.ಮೋಹನ್ ಆಳ್ವಾ ಹೇಳಿದರು. ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ವತಿಯಿಂದ ಪ್ರದಾನ ಮಾಡಿದ ಪ್ರತಿಷ್ಠಿತ “ಶ್ರೀ ಸಿದ್ಧತೋಟೇಂದ್ರ ಶಿಕ್ಷಣ ರತ್ನ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ನಾಡು ಸಂಸ್ಕಾರಯುತವಾಗಿ ಬೆಳೆಯಲು ಮಠಗಳು ಜನಮನದಲ್ಲಿ ಬಿತ್ತಿದ ಆಧ್ಯಾತ್ಮಿಕ ಮೌಲ್ಯಗಳೇ […]

Continue Reading

ನಾಲವಾರ ಮಠ ಕಲಾವಿದರ ಆಶ್ರಯ ಧಾಮ: ನಟ ಶರಣ್

ಚಿತ್ತಾಪುರ: ನಾಲವಾರದ ಸದ್ಗುರು ಕೋರಿಸಿದ್ದೇಶ್ವರ ಸಂಸ್ಥಾನ ಮಠವು ನನ್ನಂತಹ ಅನೇಕ ಕಲಾವಿದರನ್ನು ಬೆಳೆಸಿ ಪ್ರೋತ್ಸಾಹಿಸಿದ ಆಶ್ರಯಧಾಮ ಎಂದು ಕನ್ನಡದ ಖ್ಯಾತ ಚಿತ್ರನಟ ಶರಣ್ ಹೇಳಿದರು. ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಸಂಸ್ಥಾನ ಜಾತ್ರಾಮಹೋತ್ಸವ ಸಾಂಸ್ಕೃತಿಕ ಸಮಾರೋಪ ಸಮಾರಂಭದ ವಿಶೇಷ ಅತಿಥಿಯಾಗಿ ಮಾತನಾಡಿದ ಅವರು, ಪಕ್ಕದ ಯಾದಗಿರಿ ಜಿಲ್ಲೆಯ ಅಮೇರಿಕನ್ ಆಸ್ಪತ್ರೆ ಎಂದು ಕರೆಯಲ್ಪಡುತ್ತಿದ್ದ ಹೋಲ್ ಸ್ಟನ್ ಆಸ್ಪತ್ರೆಯಲ್ಲಿ ನನ್ನ ಜನನವಾಗಿದ್ದು,ಈ ಭಾಗಕ್ಕೆ ಬಂದಾಗಲೆಲ್ಲ ನನ್ನ ಮನೆಗೆ ಬಂದ ಅನುಭವವಾಗುತ್ತದೆ ಎಂದರು. ಕಲಬುರಗಿ ಶರಣನ ಆಶೀರ್ವಾದ ಫಲದಿಂದ ನಾನು ಜನ್ಮತಾಳಿರುವೆ, […]

Continue Reading

ಬೇಂದ್ರೆಯವರ ಸಾಹಿತ್ಯ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ: ಭುವನೇಶ್ವರಿ ಎಂ

ಚಿತ್ತಾಪುರ: ಕನ್ನಡ ಸಾರಸತ್ವ ಲೋಕದಲ್ಲಿ ದ್ರುವ ನಕ್ಷತ್ರದಂತೆ ಬೆಳಗಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ವರಕವಿ ದ.ರಾ ಬೇಂದ್ರೆ ಅವರಿಗೆ ಸಲ್ಲುತ್ತದೆ ಎಂದು ಶಿಕ್ಷಕಿ ಭುವನೇಶ್ವರಿ ಎಂ ಹೇಳಿದರು. ಸಮೀಪದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ದ.ರಾ ಬೇಂದ್ರೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಬೆಂದರೆ ಮಾತ್ರ ಬೇಂದ್ರೆ ಆಗಲು ಸಾಧ್ಯವೆಂಬ ಮಾತು ಸಾಹಿತ್ಯ ವಲಯದಲ್ಲಿ ಕೇಳುತ್ತೆವೆ. ಹುಟ್ಟು ಸಾಮಾನ್ಯವಾದರೂ ಸಾವು ಚರಿತ್ರೆ ಆಗಬೇಕು ಎನ್ನುವ ಮಾತಿನಂತೆ ಬಡತನದಲ್ಲೇ ಹುಟ್ಟಿ […]

Continue Reading

ಅಂಗನವಾಡಿಗಳಲ್ಲಿ‌ ಶುಚಿತ್ವ ಕಾಪಾಡಿ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಅಂಗನವಾಡಿ ಕೇಂದ್ರಗಳಲ್ಲಿ ತಯಾರಿಸುವ ಅಡುಗೆಯಲ್ಲಿ ಶುಚಿತ್ವ ಹಾಗೂ ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ವಿದ್ಯೆ ಕಲಿಸುವುದರ ಜೊತೆಗೆ ಆರೋಗ್ಯದ ಕಡೆಗೆ ವಿಶೇಷ ಗಮನಹರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವಪ್ರಿಯಾಂಕ್ ಖರ್ಗೆ ಸೂಚಿಸಿದರು. 2022-23ನೇ ಸಾಲಿನ ಕೆಕೆಆರ್ ಡಿಬಿ ಮೆಗಾ ಮ್ಯಾಕ್ರೋ ಯೋಜನೆಯಡಿಯಲ್ಲಿ ತಲಾ 20 ಲಕ್ಷ ರೂ ವೆಚ್ಚದಲ್ಲಿ ದಂಡೋತಿ ಗ್ರಾಮದಲ್ಲಿ ಮೂರು ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ […]

Continue Reading

ಕೋಲಿ ಸಮಾಜ ಒಡೆಯುವುದೆ ಕಮಕನೂರು ಪ್ರವೃತ್ತಿ: ಮುನಿಯಪ್ಪ ಕೊಳ್ಳಿ

ಚಿತ್ತಾಪುರ: ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರು‌ ಅವರು ದಿ.ವಿಠಲ್ ಹೇರೂರ ಅವರ ಹೋರಾಟದ ಸಮಯದಿಂದ ಇಂದಿನವರೆಗೂ ಕೋಲಿ ಸಮಾಜದಲ್ಲಿ ಒಡಕುಂಟು ಮಾಡುವದು ಮುಂದುವರೆಸಿದ್ದಾರೆ‌. ಅದು ಅವರ ಪ್ರವೃತ್ತಿಯಾಗಿದೆ ಎಂದು ಕೋಲಿ ಸಮಾಜದ ಮುಖಂಡ ಮುನಿಯಪ್ಪ ಎಸ್ ಕೊಳ್ಳಿ ದಂಡೋತಿ ಹೇಳಿದ್ದಾರೆ. ಹೇರೂರ ಅವರು ಬದುಕಿರುವವರೆಗೂ ಅವರನ್ನು ವಿರೋಧ ಮಾಡುತ್ತಲೇ ಬಂದಿದ್ದಾರೆ. ಹೇರೂರ ಅವರು ಸಮಾಜದ ಒಳಿತಿಗಾಗಿ ಯಾವುದೆ ಸಭೆ, ಸಮಾರಂಭ, ಕಾರ್ಯಕ್ರಮ, ಪ್ರತಿಭಟನೆ, ಹೋರಾಟ ಹಮ್ಮಿಕೊಂಡರೆ ಆಗ ಕಮಕನೂರು ಅವರು ಪರ್ಯಾಯವಾಗಿ ಕಾರ್ಯಕ್ರಮ ಮಾಡುವ ಮೂಲಕ […]

Continue Reading

ಸಮಾಜದ ಒಗ್ಗಟ್ಟಿಗೆ ಧಕ್ಕೆ ತರುವುದು ಅಕ್ಷಮ್ಯ: ಭೀಮಣ್ಣಾ ಸಾಲಿ

ಚಿತ್ತಾಪುರ: ಹಾಲಿನಲ್ಲಿ ಸಗಣಿ ಎಸೆಯುವವರಿಂದ ಜನರು ಎಚ್ಚರವಿರಬೇಕು. ತಮ್ಮ ಸ್ವಾರ್ಥಕ್ಕೆ ಸಮಾಜ ಒಡೆಯುವುದು, ಸಂಘಟನೆಗೆ ಮತ್ತು ಒಗ್ಗಟ್ಟಿಗೆ ಧಕ್ಕೆಯುಂಟು ಮಾಡುವುದು ಅಕ್ಷಮ್ಯ. ಅದು ಯಾರೇ ಮಾಡಿದರೂ ಸಮಾಜದ ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ ಹೇಳಿದರು. ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಶನಿವಾರ ತಾಲೂಕು ಕೋಲಿ ಸಮಾಜದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸನ್ಮಾನ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಚಿತ್ತಾಪುರ ಕೋಲಿ ಸಮಾಜದ […]

Continue Reading

ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಬೆಳೆಸುವ ಕೆಲಸ ರಾವೂರ ಸಂಸ್ಥೆ ಯಶಸ್ವಿಯಾಗಿ ಮಾಡುತ್ತಿದೆ: ಕೋಟೇಶ್ವರರಾವ

ರಾವೂರ: ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡಿ ಬೆಳೆಸುವ ಕೆಲಸ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಯಶಸ್ವಿಯಾಗಿ ಮಾಡುತ್ತಿದೆ ಎಂದು ಎಸಿಸಿಯ ಸಿ ಎಸ್ ಆರ್ ಕ್ಲಸ್ಟರ್ ಹೆಡ್ ಕೋಟೇಶ್ವರರಾವ ಹೇಳಿದರು. ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 42ನೇ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಸಂಸ್ಕಾರ ಮನೆಯಲ್ಲಿ ಮತ್ತು ಶಾಲೆಗಳಲ್ಲಿ ಸಿಗದೆ ವಿಚಿತ್ರ ಪೀಳಿಗೆ ಹುಟ್ಟುತ್ತಿದೆ. ಸಮಾಜದಲ್ಲಿ ಇಂತಹ ಪೀಳಿಗೆ ಸಮಾಜಘಾತುಕ ಚಟುವಟಿಕೆ ಮಾಡುತ್ತಿವೆ. ಸಂಸ್ಕಾರದ ಕೊರತೆಯಾದಲ್ಲಿ […]

Continue Reading