ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಾತ್ಮಕತೆ ಹೆಚ್ಚಿಸುತ್ತವೆ: ಸಿಸ್ಟರ್ ಸಿಂಪ್ರೋಜ್

ಚಿತ್ತಾಪುರ: ಮಕ್ಕಳಿಗೆ ಶಿಕ್ಷಣದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ. ವಸ್ತು ಪ್ರದರ್ಶನಗಳು ಮಕ್ಕಳಲ್ಲಿರುವ ಸೃಜನಾತ್ಮಕತೆಯನ್ನು ಹೆಚ್ಚಿಸುತ್ತವೆ ಎಂದು ಶಿಶುವಿಹಾರ ಪ್ರಾಥಮಿಕ ಶಾಲೆಯ ಮುಖ್ಯಗುರು ಸಿಸ್ಟರ್ ಸಿಂಪ್ರೋಜ್ ಹೇಳಿದ್ದಾರೆ. ಪಟ್ಟಣದ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ನಡೆಯುವ ಘಟನೆಗಳ ಮೂಲಕ ಮಕ್ಕಳು ಅನೇಕ ವಿಷಯಗಳು ಕಲಿಯುತ್ತಾರೆ. ಮಕ್ಕಳಲ್ಲಿ ಅನೇಕ ಪ್ರತಿಭೆ ಇರುತ್ತವೆ. ಅಂತಹ ಪ್ರತಿಭೆಯನ್ನು ಹೊರತರುವ ಕೆಲಸ ಶಿಕ್ಷಕರು ಮಾಡಬೇಕು. ಶಿಕ್ಷಕರಿಗೆ ಪಾಲಕರು ಪ್ರೋತ್ಸಾಹಿಸುವ ಮೂಲಕ […]

Continue Reading

ಮಹಾದೇವಿ ಭೀಮನಹಳ್ಳಿ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ

ಚಿತ್ತಾಪುರ: ತಾಲೂಕಿನ ಭೀಮನಹಳ್ಳಿ ಗ್ರಾಮದ ಜಾನಪದ ಕಲಾವಿದೆ ಮಹಾದೇವಿ ಶರಣಪ್ಪ ಹೊಸಮನಿ ಅವರು ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ತಿಳಿಸಿದ್ದಾರೆ. ಜನವರಿ 11 ಮತ್ತು 12 ರಂದು ಬೀದರ್’ನಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ವಿಭಾಗ ಮಟ್ಟದ ತತ್ವಪದ ಸಮಾವೇಶ ಹಾಗೂ ಭಜನಾ ಸ್ಪರ್ಧೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

Continue Reading

ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ, ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ

ಚಿತ್ತಾಪುರ: ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ ನೀಡಿ ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ ಮಾಡಿದರು. ತಾಲೂಕಿನಲ್ಲಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ, ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಧರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ತಹಸೀಲ್ದಾರ ನಾಗಯ್ಯ ಹಿರೇಮಠ ಮತ್ತು ಆಯಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕೋಲಿ ಸಮಾಜದ ಒಗ್ಗಟ್ಟು ಒಡೆಯಬೇಡಿ: ಭೀಮಣ್ಣ ಸಾಲಿ

ಚಿತ್ತಾಪುರ: ಜಿಲ್ಲೆಯಲ್ಲಿ ಕೋಲಿ ಸಮಾಜದ ಸ್ವಯಂ ಘೋಷಿತ ಅಧ್ಯಕ್ಷರು ಬಹಳ ಜನರಿದ್ದಾರೆ. ಎಲ್ಲರೂ ಒಗ್ಗೂಡಿ ಸಮಾಜದ ಸಂಘಟನೆಗೆ ಶಕ್ತಿ ತುಂಬಬೇಕು. ಸಮಾಜದ ಒಗ್ಗಟ್ಟಿಗೆ ಧಕ್ಕೆಯುಂಟು ಮಾಡಿ ಸಮಾಜ ಒಡೆಯುವ ಕೆಲಸ ಯಾರೂ ಮಾಡಬಾರದು ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕೋಲಿ ಸಮಾಜದ ತಾಲೂಕು ಘಟಕ ಮತ್ತು ನಗರ ಘಟಕದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯರಾದವರು ಸಮಾಜದವರನ್ನು […]

Continue Reading

ತೊಟ್ನಳ್ಳಿ: ದುರ್ಗಾದೇವಿ ಜಾತ್ರಾ ಮಹೋತ್ಸವದ ಕರಪತ್ರ ಬಿಡುಗಡೆ

ಸೇಡಂ: ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಜ.12, 13 ರಂದು ದುರ್ಗಾದೇವಿ ಜಾತ್ರಾ ಮಹೋತ್ಸವ ಜರುಗುವದು. ಪ್ರಯುಕ್ತ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠದ ಡಾ. ತ್ರಿಮೂರ್ತಿ ಶಿವಾಚಾರ್ಯರು ಮತ್ತು ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಕರಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ತೊಟ್ನಳ್ಳಿ ಗ್ರಾಮದ ಕಲಾವಿದರು ಹಾಗೂ ಪತ್ರಿಕಾ ಸೇವೆ ದಾಸೋಹಿ ವಿಶ್ವನಾಥ ತೊಟ್ನಳ್ಳಿ, ಚಂದ್ರಕಾಂತ ಮುದಕನಳ್ಳಿ, ತೋಟಪ್ಪ ಪೂಜಾರಿ, ಹಣಮಂತ ಹಡಪದ, ರವಿರಾಜ ಹುಣಚಿಹಳ್ಳಿ, ದೇವಿಂದ್ರಪ್ಪ ಹುಳಗೇರಿ, ಉಮೇಶ ಮಠಪತಿ, […]

Continue Reading

ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಶಿವುಕುಮಾರ ಯಾಗಾಪೂರ ಆಯ್ಕೆ

ಚಿತ್ತಾಪುರ: ಕೋಲಿ ಸಮಾಜದ ಹಿರಿಯ ಮುಖಂಡರ ಹಾಗೂ ಯುವಕರ ಒಪ್ಪಿಗೆ ಮೇರೆಗೆ ಸಮಾಜದ ಸಂಘಟನೆಯ ದೃಷ್ಟಿಯಿಂದ ಶಿವುಕುಮಾರ ಯಾಗಾಪೂರ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಮಾಜಿ ನಿರ್ದೇಶಕ ಮತ್ತು ಕೋಲಿ ಸಮಾಜದ ಮುಖಂಡ ಶರಣಪ್ಪ ನಾಟೀಕಾರ ಹೇಳಿದರು‌. ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಹಾಗೂ ಕೋಲಿ ಸಮಾಜದ ರಾಜ್ಯ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಆದೇಶದಂತೆ […]

Continue Reading

ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆ

ಚಿತ್ತಾಪುರ: ಸಚ್ಚಿದಾನಂದ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಶರಣು ತಂದೆ ಮಹಿಂದ್ರಾ (10ನೇ) ಮತ್ತು ಉಲ್ಲಾಸ್ ತಂದೆ ಸುನೀಲ (9ನೇ) ರಾಷ್ಟ್ರೀಯ ಮತದಾರ ದಿನದ ಅಂಗವಾಗಿ ಕಲಬುರಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಗಳಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. […]

Continue Reading

ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ನಿಂಗಣ್ಣಾ ಹೆಗಲೇರಿ ಆಯ್ಕೆ

ಚಿತ್ತಾಪುರ: ತಾಲೂಕು ಕೋಲಿ ಸಮಾಜದ ಸಂಘಟನೆ, ಒಗ್ಗಟ್ಟು, ಐಕ್ಯತೆಯಿಂದ ಸಮಾಜದ ಎಲ್ಲರೂ ಸಾಮೂಹಿಕವಾಗಿ ಸಮಾಜಪರ ಕೆಲಸ ಮಾಡುವ ಹಾಗೂ ಸಮಾಜದಲ್ಲಿ ಸಾಮರಸ್ಯೆ ಮೂಡಿಸುವ ದೃಷ್ಟಿಯಿಂದ ಅಧ್ಯಕ್ಷರ ಮೂರು ವರ್ಷದ ಅಧಿಕಾರ ಅವಧಿಯನ್ನು ಇಬ್ಬರು ಆಕಾಂಕ್ಷಿಗಳಿಗೆ ಹಂಚಿಕೆ ಮಾಡಲು ನಿರ್ಣಯಿಸಿ ಮೊದಲ 18 ತಿಂಗಳ ಅವಧಿಗಾಗಿ ಡೋಣಗಾಂವ ಗ್ರಾಮದ ನಿಂಗಣ್ಣಾ‌ ದೇವಿಂದ್ರಪ್ಪಾ ಹೆಗಲೇರಿ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಇನ್ನುಳಿದ 18 ತಿಂಗಳ ಅಧಿಕಾರ ಅವಧಿಯನ್ನು ಕಾಟಮ್ಮದೇವರಹಳ್ಳಿ ಗ್ರಾಮದ ಶಿವಕುಮಾರ ಸಿದ್ರಾಮಪ್ಪ ಯಾಗಾಪೂರ ಅವರಿಗೆಂದು ಈ ಮೂಲಕ […]

Continue Reading

ಚಿತ್ತಾಪುರ: ಎಕ್ಸಲೆಂಟ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಣೆ

ಚಿತ್ತಾಪುರ: ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಆಚರಿಸಲಾಯಿತು. ಪಟ್ಟಣದ ಗುರುಬಸವ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಎಕ್ಸಲೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ನಿಮಿತ್ಯ ಗಣಿತ ಪ್ರದರ್ಶನ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಎಸಿಸಿ ಪ್ಲಾಂಟ್ ಹೆಡ್ ರವೀಂದ್ರ ಲಿಂಗಪ್ಪ ಬೊಮ್ಮನಳ್ಳಿ ಮಾತನಾಡಿ, ರಾಮಾನುಜನ್ ಅವರ ಸ್ಮರಣ ಶಕ್ತಿ, ಸಹನೆ, ಗಣಿಸುವ ಸಾಮರ್ಥ್ಯಗಳೊಂದಿಗೆ ಸಾರ್ವತ್ರಿಕರಣ ಶಕ್ತಿ, ಸ್ವರೂಪ ಜ್ಞಾನ, ಆಧಾರ ಭಾವನೆಗಳನ್ನು ಕ್ಷಿಪ್ರವಾಗಿ ಬದಲಾಯಿಸುವ ಚಾಕಚಕ್ಯತೆ ಅನೇಕ […]

Continue Reading

ಡಿ.20 ರಂದು ಕೋಲಿ ಸಮಾಜದ ಪದಾಧಿಕಾರಿಗಳ ಆಯ್ಕೆ

ಚಿತ್ತಾಪುರ: ಕೋಲಿ ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ನೂತನ ಅದ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ತಿಳಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ತಾಲೂಕು ಘಟಕ ಹಾಗೂ ನಗರ ಘಟಕದ ಅದ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಯಾರು ಸಮರ್ಥರು ಎಂಬುದರ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಲಾಗುತ್ತದೆ. ಸಮಾಜದ […]

Continue Reading