ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಧರಣಿ ಕುಳಿತ ಗ್ರಾಮಸ್ಥರು

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ತೊನಸನಳ್ಳಿ(ಎಸ್) ಗ್ರಾಮಕ್ಕೆ ಹೋಗುವ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಬೆಳಗ್ಗೆಯಿಂದ ರಸ್ತೆಯ ಮಧ್ಯೆ ಟೆಂಟ್‌ ಹಾಕಿಕೊಂಡು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಶಹಾಬಾದ್‌ನಿಂದ ಜೇವರ್ಗಿಗೆ ಹೋಗುವ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ದಿನನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ನಿರ್ಲಕ್ಷಿಸಿದ್ದಾರೆ. ರಸ್ತೆ ನಿರ್ಮಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳೇ ನೇರ ಹೊಣೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆಯಿಂದ […]

Continue Reading

ಟ್ಯಾಂಕರ್– ಕ್ರೂಸರ್ ಡಿಕ್ಕಿ, ಐವರು ಸ್ಥಳದಲ್ಲೇ ಸಾವು

ಸುದ್ದಿ ಸಂಗ್ರಹ ಚಿತ್ತಾಪುರಟ್ಯಾಂಕರ್- ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಭೀಕರ‌ ಅಪಘಾತದಲ್ಲಿ ಐವರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ತಾಲೂಕಿನ ಲಾಡ್ಲಾಪುರ- ಹಲಕರ್ಟಿ ಮಧ್ಯೆ ಶನಿವಾರ ಬೆಳಗಿನ ಜಾವ ಈ‌ ಅಪಘಾತ ಸಂಭವಿದೆ. ವಾಡಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-150ರ ಮೇಲೆ ಈ‌ ಅಪಘಾತ ಜರುಗಿದ್ದು ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ಮತ್ತು ವಾಡಿಯಿಂದ ಯಾದಗಿರಿಗೆ ತೆರಳುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಂಗಳಗಿ ಗ್ರಾಮದ ಐದು ಜನ ಮೃತಪಟ್ಟಿದ್ದು ಎಲ್ಲರೂ ಪರಸ್ಪರ ಸಂಬಂಧಿಕರಾಗಿದ್ದಾರೆ. […]

Continue Reading

ಕಲಬುರಗಿಯ ನೂತನ ಮೃಗಾಲಯ ಲೋಕಾರ್ಪಣೆ: ಬನ್ನೇರುಘಟ್ಟದಿಂದ ಬಂದ ಸಿಂಹಗಳೆ ಆಕರ್ಷಣೆ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಮಾಡಬೂಳ ಗ್ರಾಮದ ವ್ಯಾಪ್ತಿಯಲ್ಲಿ ಅಂದಾಜಯ 35 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಲಬುರಗಿ ‌ಮೃಗಾಲಯವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ಕಲಬುರಗಿ ನಗರದಲ್ಲಿ 1988ರಲ್ಲಿ ಸ್ಥಾಪಿಸಿದ್ದ‌ ಕಿರು ಮೃಗಾಲಯವನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸೆಕ್ಷನ್ 38(1) ಅಡಿಯಲ್ಲಿ ಮೃಗಾಲಯ ಸ್ಥಾಪನೆಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ರಾಜ್ಯ ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಅನುಮತಿಯೊಂದಿಗೆ ದೊಡ್ಡ ‌ಪ್ರಮಾಣದಲ್ಲಿ ಉನ್ನತೀಕರಿಸಿ ಮತ್ತು ವಿಸ್ತರಿಸಲಾಗಿದೆ. ಹೊಸ ಮೃಗಾಲಯದಲ್ಲಿ […]

Continue Reading

ಸೇಡಂ: ಸಿಡಿಲಿಗೆ ಮತ್ತೊಬ್ಬ ವ್ಯಕ್ತಿ, ಎತ್ತು ಬಲಿ

ಸುದ್ದಿ ಸಂಗ್ರಹ ಸೇಡಂತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸುರಿದ ಗುಡುಗು, ಸಿಡಿಲು ಮಿಶ್ರಿತ ಮಳೆಗೆ ಮತ್ತೊಬ್ಬ ವ್ಯಕ್ತಿ ಮತ್ತು ಒಂದು ಎತ್ತು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಜಾಕನಪಲ್ಲಿ ಗ್ರಾಮದ ಆಶಪ್ಪ ಕಂಪಿನ್‌ (60) ಮೃತರು. ಅವರು ಹೊಲದಲ್ಲಿನ ಕಸ-ಕಟ್ಟಿಗೆ ಸುಡಲು ಹೋಗಿದ್ದರು. ಆ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಅಲ್ಲದೆ ಗ್ರಾಮದ ದೂರದಲ್ಲಿರುವ ದೊಡ್ಡಿಯಲ್ಲಿ ಕಟ್ಟಿದ ಎತ್ತೊಂದು ಸಿಡಿಲು ಬಡಿದು ಮೃತಪಟ್ಟಿದೆ. ಚಂದ್ರಪ್ಪ ಪುಲಮೋ‌ ಅವರಿಗೆ ಸೇರಿದ ಎತ್ತು ಇದಾಗಿದೆ. ಜಾಕನಪಲ್ಲಿ ಗ್ರಾಮಕ್ಕೆ […]

Continue Reading

ಮುಗಳನಾಗಾವಿ: ಪುಣ್ಯ ಸ್ಮರಣೋತ್ಸವ, ಮಹಾರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಮುಗಳನಾಗಾವಿ ಕಟ್ಟಿಮನಿ ಸಂಸ್ಥಾನ ಹಿರೇಮಠದಲ್ಲಿ ಮೇ 2ರಂದು ಶ್ರೀ ಗುರು ನಿಜಲಿಂಗೈಕ್ಯ ಸಿದ್ಧಲಿಂಗ ಶಿವಯೋಗಿಗಳ 77ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಮಠದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು. ಜಾತ್ರೆ ನಿಮಿತ್ತ ಬೆಳಗ್ಗೆ ಸಿದ್ಧಲಿಂಗ ಶಿವಯೋಗಿಗಳ ವಿಶೇಷ ಪೂಜೆ, ನಿತ್ಯ ಅಲಂಕಾರ ಪೂಜೆ ಜರುಗಲಿದೆ. ಸಂಜೆ ಗುರು ಸಿದ್ಧಲಿಂಗ ಶಿವಯೋಗಿಗಳ ಮಹಾಪುರಾಣ, ಸಂಗೀತ ಕಾರ್ಯಕ್ರಮ ನಿತ್ಯ ರಾತ್ರಿ 8ರಿಂದ 10ಗಂಟೆಯವರೆಗೆ ನಡೆಯುತ್ತಿದೆ. ಮೇ.1ರಂದು ಬೆಳಗ್ಗೆ ಪೂಜ್ಯ ಮರುಳಸಿದ್ದ […]

Continue Reading

ಸಾಧನೆಗೆ ಪ್ರೋತ್ಸಾಹಿಸುವುದು ಅಗತ್ಯ: ಕೋಳ್ಕೂರ

ಸುದ್ದಿ ಸಂಗ್ರಹ ಕಲಬುರಗಿಯಾವುದೆ ಕ್ಷೇತ್ರದಲ್ಲಿ ಸಾಧನೆ ಮಾಡಲಿ, ಅವರಿಗೆ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ. ಇದರಿಂದ ಸಾಧನೆಗೆ ಮತ್ತಷ್ಟು ಸ್ಪೂರ್ತಿ ನೀಡಿದಂತಾಗುತ್ತದೆ ಎಂದು ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳ್ಕೂರ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜರುಗಿದ ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮಬಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಎಲ್ಲಾ ಮೂಲಭೂತ […]

Continue Reading

ವಾಡಿಯಲ್ಲಿ ಜನಸಂಪರ್ಕ ಸಭೆ ನಡೆಸಲು ಒತ್ತಾಯ

ಸುದ್ದಿ ಸುದ್ದಿ ಸಂಗ್ರಹ ವಾಡಿ ಪಟ್ಟಣದ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಅರಿತು ಬಗೆಹರಿಸಲು ಜಿಲ್ಲಾಧಿಕಾರಿಗಳು ಪಟ್ಟಣದಲ್ಲಿ ಜನಸಂಪರ್ಕ ಸಭೆ ನಡೆಸಲು ಸಮಯ ನೀಡಬೇಕು ಎಂದು ಸ್ಥಳೀಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಾಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರಿಗೆ ಪತ್ರ ಬರೆದಿರುವ ಅವರು, ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬೃಹತ್ ಸಿಮೆಂಟ್ ಕಂಪನಿ ಹಾಗೂ ಜಂಕ್ಷನ್ ರೈಲ್ವೆ ನಿಲ್ದಾಣ ಇರುವ ದೊಡ್ಡ ನಗರವಾಗಿದೆ. ಅಷ್ಟೆ ದೊಡ್ಡ ಪ್ರಮಾಣದಲ್ಲಿ ಜನರು ವಿವಿಧ ಸಮಸ್ಯೆಗಳಿಂದ […]

Continue Reading

ಲಿಂ.ಗೌರಮ್ಮ ತಾಯಿಯವರ ಪುಣ್ಯಸ್ಮರಣೋತ್ಸವ: ಉಚಿತ ನೇತ್ರ ತಪಾಸಣೆ, ಮಾತೋಶ್ರೀ ಪ್ರಶಸ್ತಿ ಪ್ರದಾನ

ಸುದ್ದಿ ಸಂಗ್ರಹ ಚಿತ್ತಾಪುರನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಅನ್ನಪೂರ್ಣೇಶ್ವರಿಯಂದೆ ಗೌರವಿಸಲ್ಪಡುತ್ತಿದ್ದ, ಪ್ರಸ್ತುತ ಪೀಠಾಧಿಪತಿ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಾತೆ ಲಿಂ.ಗೌರಮ್ಮ ತಾಯಿಯವರ ಪುಣ್ಯಸ್ಮರಣೋತ್ಸವ ಹಾಗೂ ಮಾತೋಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮಾ.26ರಂದು ಗುರುವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಮಾಜಿ ಮಂತ್ರಿಗಳು, ಶರಣತತ್ವ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಹಿರಿಯ ಮುತ್ಸದ್ಧಿ ಲೀಲಾದೇವಿ ಆರ್ ಪ್ರಸಾದ್ ಅವರಿಗೆ ಪ್ರಸಕ್ತ […]

Continue Reading

ಗಿಡ-ಮರಗಳು ನೆಟ್ಟು, ಸಂರಕ್ಷಿಸುವುದು ಎಲ್ಲರ ಹೊಣೆ

ಸುದ್ದಿ ಸಂಗ್ರಹ ಚಿತ್ತಾಪುರಗಿಡ-ಮರಗಳು ನೆಡುವುದು, ಅರಣ್ಯನಾಶ ತಡೆಯುವುದು, ಕಾಗದದ ಮಿತ ಬಳಕೆ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಪ್ರತಿಯೊಬ್ಬ ನಾಗರಿಕನು ಅರಣ್ಯ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಉಪವಲಯ ಅರಣ್ಯ ಅಧಿಕಾರಿ ಜಟ್ಟೆಪ್ಪ ನಾವಿ ಹೇಳಿದರು. ಸಮೀಪದ ಮಾಡಬೂಳ ಗ್ರಾಮದ ಪ್ರಾದೇಶಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ ಪ್ರಾದೇಶಿಕ ಅರಣ್ಯ ವಲಯ ಮತ್ತು ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಗಿಡ-ಮರಗಳು ಪರಿಸರ […]

Continue Reading

ಸ್ತ್ರೀ ಕುಲಕ್ಕೆ ಮಾದರಿ ಹೇಮರೆಡ್ಡಿ ಮಲ್ಲಮ್ಮ: ಜೇಮಸಿಂಗ್ ಮಹಾರಾಜ

ಸುದ್ದಿ ಸಂಗ್ರಹ ಶಹಾಬಾದ್ಸ್ತ್ರೀ ಕುಲಕ್ಕೆ ಮಾದರಿಯಾಗಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರ ಮೂರ್ತಿಯಾಗಿರುವ ಮಲ್ಲಮ್ಮಳ ಜೀವನ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದು ಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಹೇಳಿದರು. ತಾಲೂಕಿನ ಮಹಾನಗರ ಯಲ್ಲಾಲಿಂಗ ಪುಣ್ಯಾಶ್ರಮದಲ್ಲಿ 35ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ’ರ ಪುರಾಣ ಪ್ರವಚನ ಶ್ರೀಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸದ್ಗುರುಗಳ ಕೃಪೆಯಿಂದ ಭಕ್ತಿ ಮತ್ತು ಧರ್ಮದ ಹಾದಿಯಲ್ಲಿ ನಡೆಯುವುದು ಜೀವನದ ಮುಖ್ಯ ಉದ್ದೇಶವಾಗಬೇಕು ಎಂದರು. […]

Continue Reading