ಧಾರಾಕಾರ ಮಳೆಗೆ ಮನೆ ನೆಲಸಮ: ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

ಚಿತ್ತಾಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದು ಸಂಪೂರ್ಣವಾಗಿ ನೆಲಕ್ಕುರುಳಿದ ಘಟನೆ ತಾಲೂಕಿನ ಸುಗೂರ (ಎನ್) ಗ್ರಾಮದಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸೆ.22 ರಂದು ಸೋಮುವಾರ ತಡರಾತ್ರಿ ಸುರಿದ ಭಾರಿ ಮಳೆಯ ಪರಿಣಾಮ ಉಮಾದೇವಿ ಗುರಯ್ಯಾಸ್ವಾಮಿ ಮಠಪತಿ ಅವರ ಮನೆಯ ಒಂದು ಕೋಣೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ತಾಯಿ ಮತ್ತು ಇಬ್ಬರು ಮಕ್ಕಳು ಮನೆಯ ಇನ್ನೊಂದು ಕೋಣೆಯಲ್ಲಿ ಮಲಗಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸುದ್ದಿ ತಿಳಿಯುತ್ತಲೆ ಊರಿನ ಗ್ರಾಮಸ್ಥರು ಭೇಟಿ ನೀಡಿ ಧೈರ್ಯ ಹೇಳಿದರು. […]

Continue Reading

ಕಾಗಿಣಾದಲ್ಲಿ ತಗ್ಗಿದ ಪ್ರವಾಹ: ದಂಡೋತಿ ಸೇತುವೆ ಸಂಚಾರಕ್ಕೆ ಮುಕ್ತ

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಹತ್ತಿರಹರಿಯುತ್ತಿರುವ ಕಾಗಿಣಾ ನದಿಯಲ್ಲಿ ಮಂಗಳವಾರ ಬೆಳಿಗ್ಗೆಪ್ರವಾಹ ಕಡಿಮೆಯಾಗಿ ಕಳೆದ 30 ಗಂಟೆಗಳ ಕಾಲಮುಳುಗಡೆಯಾಗಿದ್ದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಸೇತುವೆ ಮೇಲೆ ದುರಸ್ತಿ ಮಾಡಿದ್ದ ರಸ್ತೆ ಅಲ್ಲಲ್ಲಿ ಪ್ರವಾಹದ ರಭಸಕ್ಕೆ ಕಿತ್ತು ಹೋಗಿದೆ. ವಾಹನಗಳ ಸಂಚಾರ ಇನ್ನೂ ಪ್ರಾರಂಭವಾಗಿಲ್ಲ. ಬೈಕ್, ಕಾರು, ಜೀಪು ಸಂಚಾರಕ್ಕೆ ಸಮಸ್ಯೆಯಿಲ್ಲ. ಸೇತುವೆ ಮೇಲೆಯೆ ಸಿಮೆಂಟ್ ಕಂಬಗಳ ಹತ್ತಿರ ಅಳವಡಿಸಿದ್ದ ಮೊಬೈಲ್ ನೆಟವರ್ಕ್ ಕೇಬಲ್ ವೈ‌ರ್ ಕಿತ್ತು ಹೋಗಿದೆ. ಬಸ್‌ ಸಂಚಾರ ಪ್ರಾರಂಭವಾಗದ ಕಾರಣ ನದಿಯ ಆಚೆಗಿರುವ ಗ್ರಾಮಗಳ […]

Continue Reading

ಚಿತ್ತಾಪುರ: ಗುಂಡಗುರ್ತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ, ಪರಿಶೀಲನೆ

ಚಿತ್ತಾಪುರ: ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಗುಂಡಗುರ್ತಿ ಗ್ರಾಮದ ಮನೆಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ದವಸ ಧಾನ್ಯ ಸೇರಿದಂತೆ ಇನ್ನಿತರ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮದ ಪ್ರಮುಖ ರಸ್ತೆ ಸೇರಿದಂತೆ ಮನೆಗಳಲ್ಲಿನೀರು ನುಗ್ಗಿ ಅನಾಹುತ ಸಂಭವಿಸಿದ ಪ್ರತಿಯೊಬ್ಬರ ಮನೆಗೆ ಭೇಟಿ ನೀಡಿ, ಏನೆಲ್ಲ ಸಮಸ್ಯೆಗಳಾಗಿವೆ ಎನ್ನುವುದರ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಹಳ್ಳದ ನಾಲಾ ಸ್ವಚ್ಛತೆ ಕೈಗೊಳ್ಳಲು ಸ್ಥಳದಲ್ಲೇ […]

Continue Reading

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಬಸವರಾಜ ಅವಂಟಿ

ಚಿತ್ತಾಪುರ: ಅಜ್ಞಾನದ ಅಂಧಕಾರ ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಾಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ಬಸವರಾಜ ಅವಂಟಿ ಹೇಳಿದರು. ಪಟ್ಟಣದ ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ವಿದ್ಯಮಾನದಲ್ಲಿ ಶಿಕ್ಷಕರು ಪಠ್ಯಕ್ಕೆ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ […]

Continue Reading

ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6 ಮತ್ತು ಅಲೆಮಾರಿ ಸಮುದಾಯಕ್ಕೆ ಶೇ.1 ರಷ್ಟು ಮೀಸಲು ನೀಡಲು ಆಗ್ರಹ

ಚಿತ್ತಾಪುರ: ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ.6, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡುವಂತೆ ಆಗ್ರಹಿಸಿ ಬಂಜಾರ, ಭೋವಿ, ಕೊರಚಾ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಚಂದು ಜಾಧವ ಮಾತನಾಡಿ, ಒಳ ಮೀಸಲಾತಿ ಕುರಿತು ನಾಗಮೋಹನ್‌ದಾಸ್ ಆಯೋಗವು ಮಾಡಿರುವ ಶಿಫಾರಸ್ಸು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಮತ್ತು ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 2022ರ ಸೆಕ್ಷನ್ (1)ರ […]

Continue Reading

ವಿದ್ಯಾರ್ಥಿ ಸ್ನೇಹಿ ಶಿಕ್ಷಕರು ಹೆಚ್ಚಾಗಲಿ

ಕಾಳಗಿ: ವಿದ್ಯಾರ್ಥಿಗಳು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ, ಅವರಿಗೆ ಜ್ಞಾನ, ಬುದ್ಧಿ, ಕೌಶಲಗಳನ್ನು ನೀಡಿ, ದೇಶದ ಅಮೂಲ್ಯ ಸಂಪತ್ತನ್ನಾಗಿಸುವ ವಿದ್ಯಾರ್ಥಿ ಸ್ನೇಹಿ ಶಿಕ್ಷಕರ ಸಂಖ್ಯೆ ಹೆಚ್ಚಾಗಬೇಕು ಎಂದು ಮುಖ್ಯ ಶಿಕ್ಷಕ ಹಾಗೂ ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ‌ ಮತ್ತು ಕಾಳಗಿ ಕನ್ನಡ ಸಾಹಿತ್ಯ ಪರಿಷತ್’ನ ತಾಲೂಕಾ ಘಟಕ ಇವುಗಳು ಜಂಟಿಯಾಗಿ ಶುಕ್ರವಾರ ಏರ್ಪಡಿಸಿದ್ದ ‘63ನೇ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ : ಶಿಕ್ಷಕರಿಗೆ […]

Continue Reading

ಶಿಕ್ಷಕರ ಕೈಯಲ್ಲಿ ಮಕ್ಕಳ ಭವಿಷ್ಯವಿದೆ: ಡಾ. ಚಂದ್ರಕಾಂತ ಕೆಳಮನಿ

ಸುದ್ದಿ ಸಂಗ್ರಹ ಚಿತ್ತಾಪುರ ಶಿಕ್ಷಕ ಕೇವಲ ವ್ಯಕ್ತಿಯಲ್ಲ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಚಂದ್ರಕಾಂತ ಕೆಳಮನಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಲ್ಲಿ ನಕಾರಾತ್ಮಕ ಭಾವನೆಗಳು ತುಂಬದೆ ನಿಮ್ಮಿoದ ಎಲ್ಲವೂ ಸಾಧ್ಯವೆಂಬ ಸಕಾರಾತ್ಮಕ ಭಾವನೆ ತುಂಬುವ ಕೆಲಸ ಮಾಡಬೇಕು. ಶಿಕ್ಷಕ […]

Continue Reading

ಅತಿಯಾದ ಮಳೆಯಿಂದ ಬಳವಡಗಿ ಗ್ರಾಮ ಜಲಾವೃತ: ಅಗ್ನಿಶಾಮಕ ಸಿಬ್ಬಂದಿಯಿಂದ 20 ಜನರ ರಕ್ಷಣೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಾದ ಪರಿಣಾಮ ಗ್ರಾಮದ ಕೆಲಭಾಗ ಜಲಾವೃತಗೊಂಡಿತ್ತು, ಕೂಡಲೇ ಕಲಬುರಗಿ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 20 ಜನರ ರಕ್ಷಣೆ ಮಾಡಿದರು. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ನೇತೃತ್ವದಲ್ಲಿ ಎಸ್‌ಎಸ್‌ಓ ಆಂಜನೇಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಾದ ಸತೀಶ ಎಲ್.ಎಫ್, ನೈಮೋದಿನ್, ಗಬ್ಬರ್ ಸಿಂಗ್, ಶಂಕರ ಲಿಂಗ, ಮಲ್ಲಪ್ಪ, ಅಮಿತ, ಬಸವರಾಜ, ಶಂಭುಲಿಂಗಪ್ಪ ಮತ್ತು ರಾಮಾಜಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದರು. […]

Continue Reading

ನಿಜಶರಣ ಅಂಬಿಗರ ಚೌಡಯ್ಯನವರ ಬಗ್ಗೆ ನಾಯಕ ಸಮುದಾಯದವರ ಅವಹೇಳನಕಾರಿ ಮಾತು ಖಂಡನೀಯ

ಚಿತ್ತಾಪುರ: ಕೋಲಿ ಸಮಾಜದ ಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಬಗ್ಗೆ ನಾಯಕ ಸಮುದಾಯದವರು ಅವಹೇಳನಕಾರಿ ಮಾತನಾಡಿರುವುದು ತಾಲೂಕು ಕೋಲಿ ಸಮಾಜ ಖಂಡಿಸುತ್ತದೆ ಎಂದು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಮತ್ತು ಗೌರವಾಧ್ಯಕ್ಷ ರಾಮಲಿಂಗ ಬಾನರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೌಡಯ್ಯನವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಗ್ಗೆ ದಾಖಲಾಗಿರುವ ಪ್ರಕರಣದಡಿ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಮತ್ತು ರಾಜ್ಯದಿಂದ ಗಡಿಪಾರು‌ ಮಾಡಬೇಕು ಎಂದು ಕೋಲಿ ಸಮಾಜ ಒತ್ತಾಯಿಸುತ್ತದೆ ಎಂದರು. ಈ ಘಟನೆಯನ್ನು ಖಂಡಿಸಿ ಮತ್ತು […]

Continue Reading

ಚಿತ್ತಾಪುರ: ಭಂಕಲಗಾ ಗ್ರಾಮದಲ್ಲಿ ಕೊಟ್ಟಿಗೆ ಕುಸಿದು 40 ಮೇಕೆಗಳು ಸಾವು

ಚಿತ್ತಾಪುರ: ಧಾರಾಕಾರ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಕೊಟ್ಟಿಗೆಯಲ್ಲಿದ್ದ ನಲವತ್ತು ಮೇಕೆಗಳು ಮೃತಪಟ್ಟಿರುವ ಘಟನೆ ತಾಲೂಕಿನ ಭಂಕಲಗಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಮಾಳಪ್ಪಾ ಧೂಳಪ್ಪಾ ಪೂಜಾರಿ ಅವರಿಗೆ ಸೇರಿದಮೇಕೆಗಳು ಕೊಟ್ಟಿಗೆಯ ಮಾಳಿಗೆ ಮತ್ತು ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿವೆ. ಮೇಕೆಗಳ ಸಾವಿನಿಂದ ಮಾಳಪ್ಪಾ ಅವರು ಲಕ್ಷಾಂತರ ರೂ ನಷ್ಟ ಅನುಭವಿಸಿದ್ದಾರೆ. ಘಟನೆಯ ಸುದ್ದಿ ತಿಳಿದು ಕಂದಾಯ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿ ಮೃತಪಟ್ಟಿರುವ ಆಡುಗಳ […]

Continue Reading