ವಿಶ್ವದ ಅಭಿವೃದ್ಧಿಗೆ ರೆಡ್‌ಕ್ರಾಸ್‌ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜಮುಖಿ ಕಾರ್ಯಗಳನ್ನು ಕಳೆದ ಅನೇಕ ವರ್ಷಗಳಿಂದ ಮಾಡುವ ಮೂಲಕ ರೆಡ್’ಕ್ರಾಸ್ ಸಂಸ್ಥೆಯು ವಿಶ್ವದ ಅಭಿವೃದ್ಧಿಗೆ ತನ್ನದೆಯಾದ ಅಪಾರ ಕೊಡುಗೆ ನೀಡುತ್ತಿದೆ ಎಂದು ಕಿರಿಯ ರೆಡ್’ಕ್ರಾಸ್ ಘಟಕದ ಕೌನ್ಸಲರ್ ಎಚ್.ಬಿ ಪಾಟೀಲ ಹೇಳಿದರು . ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾಲೇಜಿನ ಕಿರಿಯ ರೆಡ್ ಕ್ರಾಸ್ ಘಟಕದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ವಿಶ್ವ ರೆಡ್‌ಕ್ರಾಸ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೈಸರ್ಗಿಕ ವಿಪತ್ತು ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ರಕ್ತದಾನ, ಪ್ರವಾಹ, ಸಂಕಷ್ಟದಲ್ಲಿರುವ ಜನರಿಗೆ […]

Continue Reading

ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಎಂದು ಬರೆಯಿಸಲು ಬಂಜಾರ ಸಮಾಜ ಮನವಿ

ಚಿತ್ತಾಪುರ: ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿಪ್ರತಿಯೊಂದು ಕುಟುಂಬ ಭಾಗವಹಿಸುವ ಮೂಲಕಲಂಬಾಣಿ ಎಂದು ಬರೆಯಿಸಬೇಕು ಎಂದು ಬಂಜಾರಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಮತ್ತು ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಮನವಿ ಮಾಡಿದ್ದಾರೆ. 1 ಜುಲೈ 2024 ರಂದು ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ.5 ರಿಂದ 17 […]

Continue Reading

ಚಿತ್ತಾಪುರ: ವಿದ್ಯಾನಿಕೇತನ ಪ್ರೌಢ ಶಾಲೆಗೆ ಸಹನಾ ಬಳ್ಳಾ ಟಾಪರ್

ಚಿತ್ತಾಪುರ: ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಹನಾ ಬಳ್ಳಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 611 ಅಂಕ ಪಡೆದಿದ್ದಾಳೆ. ಸಂಧ್ಯಾಕಾಲ ಪತ್ರಿಕೆಯ ವರದಿಗಾರ ಚಂದ್ರಶೇಖರ ಬಳ್ಳಾ ಅವರ ಪುತ್ರಿ ಸಹನಾ ಬಳ್ಳಾ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 611 (ಶೇ.97.76) ಅಂಕ ಪಡೆಯುವ ಮೂಲಕ ವಿದ್ಯಾನಿಕೇತನ ಪ್ರೌಢ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಮಗಳು ಸಹನಾಗೆ ಸಿಹಿ ತಿನ್ನಿಸಿ ಪೋಷಕರು ಸಂಭ್ರಮಿಸಿದ್ದಾರೆ. 2024-25ನೇ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 20 ವಿದ್ಯಾರ್ಥಿಗಳು […]

Continue Reading

ಚಿತ್ತಾಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ: ಎಸ್ಪಿ ಭೇಟಿ, ಪರಿಶೀಲನೆ

ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರುಗಡೆಯ ಲಕ್ಷ್ಮಿ ಅಟೋ ಮೊಬೈಲ್ ಅಂಗಡಿ ಸಮೀಪ ಅಪರಿಚಿತ ವ್ಯಕ್ತಿಯ ಕೊಲೆಯಾದ ವಿಷಯ ತಿಳಿಯುತ್ತಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಡಿಶನಲ್ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು. ಘಟನೆಯ ಬಗ್ಗೆ ತಿಳಿಯುತ್ತಲೇ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ, ಲಾಡ್ಡಿಂಗ್ ಕ್ರಾಸ್ ಸಮೀಪದ ಎಲ್ಲಾ ಸಿಸಿ […]

Continue Reading

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ದಿಗ್ಗಾಂವ ಶ್ರೀ

ಚಿತ್ತಾಪುರ: ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲ ಗುರು ಹೀಗಾಗಿ ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ, ಪರಂಪರೆ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಬೇಕು. ಸಂಸ್ಕಾರ ಎಂಬ ಆಹಾರ ನೀಡಿ ಬೆಳೆಯುವಂತೆ ಮಾಡಬೇಕು ಎಂದು ದಿಗ್ಗಾಂವ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರು ಹೇಳಿದರು. ತಾಲೂಕಿನ ಸನ್ನತಿ ಗ್ರಾಮದಲ್ಲಿ ಶ್ರೀ ಗುರು ಸೋಮೇಶ್ವರ ವೈದಿಕ ಜ್ಯೋತಿ ಗುರುಕುಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂಗಮ ವಟುಗಳಿಗೆ ಬೇಸಿಗೆ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆ, ಸಂಸ್ಕೃತಿ, ಆಚಾರ-ವಿಚಾರದ […]

Continue Reading

ರಾವೂರ: ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ

ಕಲಬುರಗಿ: ಶಹಾಬಾದ ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವವು ಇಂದು ಹೇಮರೆಡ್ಡಿ ಮಲ್ಲಮ್ಮ ಪುರಾಣದೊಂದಿಗೆ ಪ್ರಾರಂಭವಾಗಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ಹೇಳಿದರು. ಏಪ್ರಿಲ್ 12 ರಿಂದ 20ರ ವರೆಗೆ ಪ್ರತಿದಿನ ಸಂಜೆ 7.30ಕ್ಕೆ ಯೋಗಿರಾಜ್ ಖಾನಾಪುರ ಅವರಿಂದ ಪುರಾಣ ನಡೆಯಲಿದೆ. ಶ್ರೀಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಪ್ರತಿದಿನ ನಾಡಿನ ವಿವಿಧ ಪೂಜ್ಯರು, ಗಣ್ಯರು, ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 17 ರಂದು ಪ್ರತಿಭಾ ಪುರಸ್ಕಾರ, 18 ರಂದು ಮುತೈದೆಯರಿಗೆ ಉಡಿ […]

Continue Reading

ಸಮಾಜದ ಸೌಖ್ಯತೆಗೆ ಪೂಜೆ, ದಾಸೋಹ ಮುಖ್ಯ: ನಾಲವಾರ ಶ್ರೀಗಳು

ಜೇವರ್ಗಿ: ಸಮಾಜದಲ್ಲಿನ ಜನರು ಅಹಂ ಅನ್ನು ತೊರೆದು ಪ್ರೀತಿ, ವಿಶ್ವಾಸ, ಭಕ್ತಿಯಿಂದ ಪೂಜೆ ಮತ್ತು ದಾಸೋಹ ಪರಂಪರೆಯನ್ನು ದಿನವಿಡಿ ನಡೆಸಿದರೆ ಬದುಕಿಗೆ ಬೆಲೆ ಬರುತ್ತದೆ. ಮಾಡುವ ಕಾರ್ಯದಲ್ಲಿ ಸ್ವಾರ್ಥ ಮತ್ತು ಅಹಂ ಅನ್ನು ಮುಕ್ತಗೊಳಿಸಿ ನಿಸ್ವಾರ್ಥ ಸೇವೆ ಸಲ್ಲಿಸುವದು ತುಂಬಾ ಮುಖ್ಯ ಎಂದು ನಾಲವಾರ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಡಾ. ಸಿದ್ದತೋಟೆಂದ್ರ ಮಹಾಸ್ವಾಮಿಗಳು ನುಡಿದರು. ತಾಲೂಕಿನ ಕಟ್ಟಿ ಸಂಗಾವಿ ಭೀಮಾ ಬ್ರಿಜ್ ಪ್ರಭು ಬಸಯ್ಯ ತಾತನವರ ಜಾತ್ರಾ ಮಹೋತ್ಸವದ ಅಂಗವಾಗಿ ನೆರವೇರಿದ ರಥೋತ್ಸವದ ನಂತರ ನಡೆದ ಧರ್ಮ […]

Continue Reading

ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನುಡಿ ನಮನ ನಾಳೆ

ಚಿತ್ತಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ವತಿಯಿಂದ ಏಪ್ರಿಲ್ 8 ರಂದು ಮಂಗಳವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ತಿಳಿಸಿದ್ದಾರೆ.‌ ಆತ್ಮೀಯ ಸ್ನೇಹಿತರು, ಮಾರ್ಗದರ್ಶಕರು,‌ ಪ್ರೋತ್ಸಾಹದಾಯಕರು, ಸಾಹಿತಿಗಳು, ಲೇಖಕರು, ಶಿಕ್ಷಣ ಪ್ರೇಮಿಗಳು, ಪತ್ರಕರ್ತರಾಗಿದ್ದ ದಿ.ನಾಗಯ್ಯ ಸ್ವಾಮಿ ಅಲ್ಲೂರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಸಲ್ಲಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ […]

Continue Reading

ನಾಗಯ್ಯಸ್ವಾಮಿ ಅಲ್ಲೂರ ನಿವಾಸಕ್ಕೆ ಭೇಟಿ: ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಅನಾರೋಗ್ಯದಿಂದ ಮೊನ್ನೆ ನಿಧನರಾದ ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರು ಅವರ ಕುಟುಂಬದ ಸದಸ್ಯರನ್ನು ಅಲ್ಲೂರು ಗ್ರಾಮದ ಮನೆಯಲ್ಲಿ ಭೇಟಿ ಮಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವಾನ ಹೇಳಿದರು. ನಾಗಯ್ಯಸ್ವಾಮಿ ಅವರ ಸಹೋದರ, ಅವರ ಪುತ್ರಿ ಮತ್ತು ಪುತ್ರನ ಜೊತೆ ಮಾತನಾಡಿದ ಸಚಿವರು ಸಾಂತ್ವನ ಹೇಳಿ ಅವರ ವಿದ್ಯಾಭ್ಯಾಸದ ಬಗ್ಗೆ ವಿಚಾರಿಸಿದರು. ಹಿರಿಯ ಪತ್ರಕರ್ತರಾಗಿದ್ದ ನಾಗಯ್ಯಸ್ವಾಮಿ ಅವರು ಪತ್ರಿಕೋದ್ಯಮ ವೃತ್ತಿಯ ಜೊತೆಗೆ ಸಾಹಿತ್ಯಿಕ ಚಟುವಟಿಕೆಯಲ್ಲಿ ತಮ್ಮನ್ನು […]

Continue Reading

ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನಿಧನ

ಚಿತ್ತಾಪುರ: ತಾಲೂಕಿನ ಅಲ್ಲೂರ (ಬಿ) ಗ್ರಾಮದ ನಿವಾಸಿ ಹಿರಿಯ ಪತ್ರಕರ್ತ, ಲೇಖಕ ನಾಗಯ್ಯಸ್ವಾಮಿ ಅಲ್ಲೂರು (55) ಶನಿವಾರ ಸಂಜೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಚಿತ್ತಾಪುರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಹೋದರ ರಾಚಯ್ಯಸ್ವಾಮಿ ಅಲ್ಲೂರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಅಲ್ಲೂರ (ಬಿ) ಗ್ರಾಮದ ಸ್ವಂತ ಜಮೀನಿನಲ್ಲಿ ರವಿವಾರ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲೂಕು […]

Continue Reading